Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...