Homeಕ್ರೀಡೆಒಲಂಪಿಕ್ಏಷ್ಯನ್ ಗೇಮ್ಸ್‌: ಚಿನ್ನ ಗೆದ್ದ ಕನ್ನಡಿಗ ಭೋಪಣ್ಣ-ರುತುಜಾ ಜೋಡಿ

ಏಷ್ಯನ್ ಗೇಮ್ಸ್‌: ಚಿನ್ನ ಗೆದ್ದ ಕನ್ನಡಿಗ ಭೋಪಣ್ಣ-ರುತುಜಾ ಜೋಡಿ

- Advertisement -
- Advertisement -

ಚೈನಾದಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಟೆನ್ನಿಸ್ ಮಿಶ್ರ ಡಬಲ್ಸ್‌ನಲ್ಲಿ ಕನ್ನಡಿಗ ರೋಹನ್‌ ಭೋಪಣ್ಣ ಮತ್ತು ರುತುಜಾ ಬೋಸಲೆ ಜೋಡಿ ಚಿನ್ನದ ಪದಕಕ್ಕೆ ಮುತ್ತಿಟ್ಟುಕೊಂಡಿದೆ.

ಹ್ಯಾಂಗ್‌ಝೌ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಫೈನಲ್‌ನಲ್ಲಿ ಭಾರತೀಯ ಜೋಡಿಯು 2-6, 6-3, 10-4 ಅಂಕಗಳೊಂದಿಗೆ ತೈವಾನ್ ಜೋಡಿಯಾದ ತ್ಸುಂಗ್-ಹಾವೊ ಹುವಾಂಗ್ ಮತ್ತು ಎನ್-ಶುವೊ ಲಿಯಾಂಗ್ ಅವರನ್ನು ಸೋಲಿಸಿದೆ.

ಮೊದಲ ಸೆಟ್‌ನ್ನು 2-6 ರಲ್ಲಿ ಕಳೆದುಕೊಂಡ ನಂತರ ಭಾರತ ತಂಡವು ಪ್ರಭಾವಶಾಲಿ ಪುನರಾಗಮನವನ್ನು ಪಡೆದುಕೊಂಡಿತು. 1 ಗಂಟೆ 14 ನಿಮಿಷಗಳ ರೋಚಕ ಸ್ಪರ್ಧೆಯಲ್ಲಿ ಭಾರತದ ಜೋಡಿ ಟೈ ಬ್ರೇಕರ್‌ನಲ್ಲಿ ಪ್ರಾಬಲ್ಯ ಮೆರೆದರು. ಅಂತಿಮವಾಗಿ 10-4ರಲ್ಲಿ ಗೆದ್ದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ರಾಮ್‌ಕುಮಾರ್ ರಾಮನಾಥನ್ ಮತ್ತು ಸಾಕೇತ್ ಮೈನೇನಿ ಜೋಡಿಯು ಚೈನೀಸ್ ತೈಪೆ ಜೋಡಿಯಾದ ಜೇಸನ್ ಜಂಗ್ ಮತ್ತು ಯು-ಹಸಿಯು ವಿರುದ್ಧ ಫೈನಲ್‌ನಲ್ಲಿ ಸೋತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರಿಂದ ಇದು ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಎರಡನೇ ಟೆನಿಸ್ ಪದಕವಾಗಿದೆ.

ಏಷ್ಯನ್ ಗೇಮ್ಸ್‌ನ ಮಿಶ್ರ ಡಬಲ್ಸ್‌ನಲ್ಲಿ ಭಾರತ ಪಡೆದ ಮೂರನೇ ಚಿನ್ನದ ಪದಕ ಇದಾಗಿದೆ. ಹಿಂದೆ ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಜಾ ಅವರ ಜೋಡಿ ದೋಹಾದಲ್ಲಿ 2006ರಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರು. ಇದಲ್ಲದೆ  ಸಾನಿಯಾ ಮಿರ್ಜಾ-ಸಾಕೇತ್ ಮೈನೆನಿ ಜೋಡಿ 2014 ರಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದರು.

ಇದನ್ನು ಓದಿ: ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಲು ಪತ್ರಿಕೆ ಬಳಕೆ ನಿಲ್ಲಿಸುವಂತೆ FSSAI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...