Homeಕ್ರೀಡೆಒಲಂಪಿಕ್ಏಷ್ಯನ್ ಗೇಮ್ಸ್‌: ಚಿನ್ನ ಗೆದ್ದ ಕನ್ನಡಿಗ ಭೋಪಣ್ಣ-ರುತುಜಾ ಜೋಡಿ

ಏಷ್ಯನ್ ಗೇಮ್ಸ್‌: ಚಿನ್ನ ಗೆದ್ದ ಕನ್ನಡಿಗ ಭೋಪಣ್ಣ-ರುತುಜಾ ಜೋಡಿ

- Advertisement -
- Advertisement -

ಚೈನಾದಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಟೆನ್ನಿಸ್ ಮಿಶ್ರ ಡಬಲ್ಸ್‌ನಲ್ಲಿ ಕನ್ನಡಿಗ ರೋಹನ್‌ ಭೋಪಣ್ಣ ಮತ್ತು ರುತುಜಾ ಬೋಸಲೆ ಜೋಡಿ ಚಿನ್ನದ ಪದಕಕ್ಕೆ ಮುತ್ತಿಟ್ಟುಕೊಂಡಿದೆ.

ಹ್ಯಾಂಗ್‌ಝೌ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಫೈನಲ್‌ನಲ್ಲಿ ಭಾರತೀಯ ಜೋಡಿಯು 2-6, 6-3, 10-4 ಅಂಕಗಳೊಂದಿಗೆ ತೈವಾನ್ ಜೋಡಿಯಾದ ತ್ಸುಂಗ್-ಹಾವೊ ಹುವಾಂಗ್ ಮತ್ತು ಎನ್-ಶುವೊ ಲಿಯಾಂಗ್ ಅವರನ್ನು ಸೋಲಿಸಿದೆ.

ಮೊದಲ ಸೆಟ್‌ನ್ನು 2-6 ರಲ್ಲಿ ಕಳೆದುಕೊಂಡ ನಂತರ ಭಾರತ ತಂಡವು ಪ್ರಭಾವಶಾಲಿ ಪುನರಾಗಮನವನ್ನು ಪಡೆದುಕೊಂಡಿತು. 1 ಗಂಟೆ 14 ನಿಮಿಷಗಳ ರೋಚಕ ಸ್ಪರ್ಧೆಯಲ್ಲಿ ಭಾರತದ ಜೋಡಿ ಟೈ ಬ್ರೇಕರ್‌ನಲ್ಲಿ ಪ್ರಾಬಲ್ಯ ಮೆರೆದರು. ಅಂತಿಮವಾಗಿ 10-4ರಲ್ಲಿ ಗೆದ್ದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ರಾಮ್‌ಕುಮಾರ್ ರಾಮನಾಥನ್ ಮತ್ತು ಸಾಕೇತ್ ಮೈನೇನಿ ಜೋಡಿಯು ಚೈನೀಸ್ ತೈಪೆ ಜೋಡಿಯಾದ ಜೇಸನ್ ಜಂಗ್ ಮತ್ತು ಯು-ಹಸಿಯು ವಿರುದ್ಧ ಫೈನಲ್‌ನಲ್ಲಿ ಸೋತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರಿಂದ ಇದು ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಎರಡನೇ ಟೆನಿಸ್ ಪದಕವಾಗಿದೆ.

ಏಷ್ಯನ್ ಗೇಮ್ಸ್‌ನ ಮಿಶ್ರ ಡಬಲ್ಸ್‌ನಲ್ಲಿ ಭಾರತ ಪಡೆದ ಮೂರನೇ ಚಿನ್ನದ ಪದಕ ಇದಾಗಿದೆ. ಹಿಂದೆ ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಜಾ ಅವರ ಜೋಡಿ ದೋಹಾದಲ್ಲಿ 2006ರಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರು. ಇದಲ್ಲದೆ  ಸಾನಿಯಾ ಮಿರ್ಜಾ-ಸಾಕೇತ್ ಮೈನೆನಿ ಜೋಡಿ 2014 ರಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದರು.

ಇದನ್ನು ಓದಿ: ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಲು ಪತ್ರಿಕೆ ಬಳಕೆ ನಿಲ್ಲಿಸುವಂತೆ FSSAI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...

ವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

ಬಾಂಗ್ಲಾದೇಶದಲ್ಲಿ ಇಂದು (ಫೆ. 12, 2026) ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯುತ್ತಿದೆ. ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7:30ಕ್ಕೆ ಆರಂಭವಾದ ಮತದಾನವು...

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...