Homeಕ್ರೀಡೆಒಲಂಪಿಕ್ಏಷ್ಯನ್ ಗೇಮ್ಸ್‌: ಚಿನ್ನ ಗೆದ್ದ ಕನ್ನಡಿಗ ಭೋಪಣ್ಣ-ರುತುಜಾ ಜೋಡಿ

ಏಷ್ಯನ್ ಗೇಮ್ಸ್‌: ಚಿನ್ನ ಗೆದ್ದ ಕನ್ನಡಿಗ ಭೋಪಣ್ಣ-ರುತುಜಾ ಜೋಡಿ

- Advertisement -
- Advertisement -

ಚೈನಾದಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಟೆನ್ನಿಸ್ ಮಿಶ್ರ ಡಬಲ್ಸ್‌ನಲ್ಲಿ ಕನ್ನಡಿಗ ರೋಹನ್‌ ಭೋಪಣ್ಣ ಮತ್ತು ರುತುಜಾ ಬೋಸಲೆ ಜೋಡಿ ಚಿನ್ನದ ಪದಕಕ್ಕೆ ಮುತ್ತಿಟ್ಟುಕೊಂಡಿದೆ.

ಹ್ಯಾಂಗ್‌ಝೌ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಫೈನಲ್‌ನಲ್ಲಿ ಭಾರತೀಯ ಜೋಡಿಯು 2-6, 6-3, 10-4 ಅಂಕಗಳೊಂದಿಗೆ ತೈವಾನ್ ಜೋಡಿಯಾದ ತ್ಸುಂಗ್-ಹಾವೊ ಹುವಾಂಗ್ ಮತ್ತು ಎನ್-ಶುವೊ ಲಿಯಾಂಗ್ ಅವರನ್ನು ಸೋಲಿಸಿದೆ.

ಮೊದಲ ಸೆಟ್‌ನ್ನು 2-6 ರಲ್ಲಿ ಕಳೆದುಕೊಂಡ ನಂತರ ಭಾರತ ತಂಡವು ಪ್ರಭಾವಶಾಲಿ ಪುನರಾಗಮನವನ್ನು ಪಡೆದುಕೊಂಡಿತು. 1 ಗಂಟೆ 14 ನಿಮಿಷಗಳ ರೋಚಕ ಸ್ಪರ್ಧೆಯಲ್ಲಿ ಭಾರತದ ಜೋಡಿ ಟೈ ಬ್ರೇಕರ್‌ನಲ್ಲಿ ಪ್ರಾಬಲ್ಯ ಮೆರೆದರು. ಅಂತಿಮವಾಗಿ 10-4ರಲ್ಲಿ ಗೆದ್ದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ರಾಮ್‌ಕುಮಾರ್ ರಾಮನಾಥನ್ ಮತ್ತು ಸಾಕೇತ್ ಮೈನೇನಿ ಜೋಡಿಯು ಚೈನೀಸ್ ತೈಪೆ ಜೋಡಿಯಾದ ಜೇಸನ್ ಜಂಗ್ ಮತ್ತು ಯು-ಹಸಿಯು ವಿರುದ್ಧ ಫೈನಲ್‌ನಲ್ಲಿ ಸೋತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರಿಂದ ಇದು ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಎರಡನೇ ಟೆನಿಸ್ ಪದಕವಾಗಿದೆ.

ಏಷ್ಯನ್ ಗೇಮ್ಸ್‌ನ ಮಿಶ್ರ ಡಬಲ್ಸ್‌ನಲ್ಲಿ ಭಾರತ ಪಡೆದ ಮೂರನೇ ಚಿನ್ನದ ಪದಕ ಇದಾಗಿದೆ. ಹಿಂದೆ ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಜಾ ಅವರ ಜೋಡಿ ದೋಹಾದಲ್ಲಿ 2006ರಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರು. ಇದಲ್ಲದೆ  ಸಾನಿಯಾ ಮಿರ್ಜಾ-ಸಾಕೇತ್ ಮೈನೆನಿ ಜೋಡಿ 2014 ರಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದರು.

ಇದನ್ನು ಓದಿ: ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಲು ಪತ್ರಿಕೆ ಬಳಕೆ ನಿಲ್ಲಿಸುವಂತೆ FSSAI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...