Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

ಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಮತ್ತುಷ್ಟು ಪಾತಾಳಕ್ಕೆ ತಳ್ಳಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಲಕ್ಷಾಂತರ ಕಂಪನಿಗಳು ತನ್ನ ನೌಕರರನ್ನು ಕೆಲಸದಿಂದ ಕಿತ್ತೆಸೆದಿವೆ. ಇನ್ನಷ್ಟು ಕಂಪನಿಗಳು ಸಂಬಳ ನಿಲ್ಲಿಸಿವೆ ಅಥವಾ ಸಂಬಳ ಕಡಿತ ಮಾಡಿವೆ. ಆದರೆ ಏಷ್ಯನ್‌ ಪೇಂಟ್ಸ್‌ ಕಂಪನಿ ಮಾತ್ರ ಕಷ್ಟಕರ ಸಂದರ್ಭದಲ್ಲಿಯೂ ತನ್ನ ನೌಕರರ ಸಂಬಳ ಹೆಚ್ಚಿಸಿ ಅವರಿಗೆ ಮನೋಸ್ಥೈರ್ಯ ತುಂಬುವ ಮಾದರಿ ಕೆಲಸ ಮಾಡಿದೆ.

ಭಾರತದ ದೊಡ್ಡ ಮತ್ತು ಬ್ರಾಂಡ್‌ ಕಂಪನಿಯಾದ ಏಷ್ಯನ್‌ ಪೇಂಟ್ಸ್‌ ಪ್ರವಾಹದ ವಿರುದ್ಧ ಈಜಲು ಹೊರಟಿದೆ. ಕೆಲಸ ಕಳೆದುಕೊಂಡು ಭವಿಷ್ಯದ ಬಗ್ಗೆ ಚಿಂತಿತರಾಗಿರುವ ಕೋಟ್ಯಾಂತರ ನೌಕರರ ನಡುವೆ ಅದು ತನ್ನ ನೌಕರರಿಗೆ ನಾನಿದ್ದೇನೆ ಭಯಪಡಬೇಡಿ ಎಂಬ ಭರವಸೆ ನೀಡಿದೆ.

ಕಂಪನಿಯ ತನ್ನ ಎಲ್ಲಾ ನೌಕರರ ವಾರ್ಷಿಕ ಸಂಬಳವನ್ನು ಹೆಚ್ಚಿಸಿದೆ. ಎಲ್ಲರಿಗು ಉಚಿತ ವೈದ್ಯಕೀಯ ವಿಮೆ ಮಾಡಿಸಲು ಮುಂದಾಗಿದೆ. ತನ್ನ ಅಂಗಡಿಗಳ ನೈರ್ಮಲ್ಯೀಕರಣ ಜವಾಬ್ದಾರಿ ಹೊತ್ತಿದೆ. ಈಗಾಗಲೇ ತನ್ನ ಗುತ್ತಿಗೆದಾರರ ಖಾತೆಗೆ 40 ಕೋಟಿ ರೂಗಳನ್ನು ವರ್ಗಾಹಿಸಿದೆ. ಅಲ್ಲದೇ ಕಂಪನಿಯಿಂದ ಪಾವತಿಗಳಿಗೆ 45 ದಿನಗಳ ವಿಸ್ತರಣೆ ಮತ್ತು 45 ದಿನಗಳಲ್ಲಿ ಪಾವತಿ ಮಾಡಿದರೆ 2 ಪ್ರತಿಶತ ರಿಯಾಯಿತಿಯನ್ನು ಘೋಷಿಸಿದೆ.

ನಮ್ಮದು ಉತ್ತಮ ನಾಯಕತ್ವ ಹೊಂದಿರುವ ಮತ್ತು ನಮ್ಮ ಎಲ್ಲಾ ಪಾಲುದಾರರನ್ನು ನೋಡಿಕೊಳ್ಳುವ ಮಾದರಿ ಸಂಸ್ಥೆಯಾಗಿರಬೇಕು. ಇಂತಹ ಎಲ್ಲಾ ಉಪಕ್ರಮಗಳ ಬಗ್ಗೆ ನಾನು ನಿಯಮಿತವಾಗಿ ಮಂಡಳಿಯೊಂದಿಗೆ ಚರ್ಚಿಸಿ ಅವರ ಅನುಮೋದನೆಯನ್ನು ಪಡೆದುಕೊಂಡಿದ್ದೇನೆ. “ನಮ್ಮ ಪ್ರತಿಯೊಬ್ಬ ಉದ್ಯೋಗಿಯೊಂದಿಗೆ ಹೆಜ್ಜೆ ಹಾಕಲು, ಸಂವಹನ ನಡೆಸಲು ಮತ್ತು ಅನಿಶ್ಚಿತ ಮಾರುಕಟ್ಟೆಯಲ್ಲಿ ಅವರ ಕಳವಳಗಳನ್ನು ಹೋಗಲಾಡಿಸಲು ಇದು ಒಂದು ದೊಡ್ಡ ಅವಕಾಶವೆಂದು ನಾನು ನೋಡುತ್ತೇನೆ. ಪ್ರಬುದ್ಧ ಬ್ರಾಂಡ್ ಆಗಿ ಕೆಲಸಕ್ಕೆ ತೆಗೆದುಕೊಳ್ಳುವ/ಕೈಬಿಡುವುದು (Hire and Fire) ಏಷ್ಯನ್ ಪೇಂಟ್ಸ್ ಸಂಸ್ಕೃತಿಯಲ್ಲ. ಬದಲಿಗೆ ಉದ್ಯೋಗಿಗಳಿಗೆ ಭರವಸೆ ನೀಡಿದ್ದೇವೆ” ಎಂದು ಕಂಪನಿಯ ಸಿಇಒ ಅಮಿತ್ ಸಿಂಗಲ್ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟು ಮಾತ್ರವಲ್ಲದೇ ಕಂಪನಿಯೂ ಕೋವಿಡ್‌ ಪರಿಹಾರ ನಿಧಿಗೆ (ಮಹಾರಾಷ್ಟ್ರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ) 35 ಕೋಟಿ ರೂಗಳ ದೇಣಿಗೆ ನೀಡಿದೆ. ಹ್ಯಾಂಡ್‌ ಸ್ಯಾನಿಟೈಸರ್‌ ತಯಾರಿಸಿ ವಿತರಿಸಿದೆ.

ಏಷ್ಯನ್‌ ಪೇಂಟ್ಸ್‌ ಕಂಪನಿಯ ಮೊದಲ ತ್ರೈಮಾಸಿಕದ ಸಮಯದಲ್ಲಿ ಯಾವುದೇ ಲಾಭ ದೊರೆಯುವುದಿಲ್ಲ ಎಂದು ಕಂಪನಿಗೆ ನಿಚ್ಚಳವಾಗಿ ತಿಳಿದಿದೆ. ಆದರು ಅದು ತತ್‌ಕ್ಷಣದ ಲಾಭ ನಷ್ಟದ ಬಗ್ಗೆ ಯೋಚಿಸದೇ ದೂರಗಾಮಿ ಪರಿಣಾಮಗಳ ಬಗ್ಗೆ ಚಿಂತಿಸುತ್ತಿದೆ.

ಈ ಹಂತಗಳು ಕಂಪನಿಗೆ ತಕ್ಷಣದ ಹಣಕಾಸಿನ ಪ್ರಯೋಜನಗಳಿಗೆ ಕಾರಣವಾಗದಿದ್ದರೂ, ಉದ್ಯೋಗಿಗಳು ಮತ್ತು ಪಾಲುದಾರರಂತಹ ಪ್ರಮುಖ ಪಾಲುದಾರರೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಅವು ಖಂಡಿತವಾಗಿಯೂ ಕಂಪನಿಗೆ ಒಳ್ಳೆಯ ಹೆಸರು ತಂದುಕೊಡುವುದರ ಜೊತೆಗೆ ತನ್ನ ನೌಕರರು ಮತ್ತು ಗುತ್ತಿಗೆದಾರರಲ್ಲಿ ಮಾತ್ರವಲ್ಲದೇ ಗ್ರಾಹಕರಲ್ಲಿಯೂ ಸಹ ನಂಬಿಕೆಯನ್ನು ಹುಟ್ಟಿಸುತ್ತದೆ.

ಒಟ್ಟಿನಲ್ಲಿ ಕಂಪನಿ ನಷ್ಟದಲ್ಲಿದೆ ಎಂದು ಹಲವಾರು ಉದ್ಯಮಿಗಳು ತನ್ನ ಉದ್ಯೋಗಿಗಳನ್ನು ಕ್ಷಣಮಾತ್ರದಲ್ಲಿ ಕಿತ್ತೊಗೆಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರವು ಅವರ ಪರ ನಿಲ್ಲಬೇಕು. ಇದಕ್ಕೆ ಏಷ್ಯನ್‌ ಪೇಂಟ್ಸ್‌ ಉತ್ತಮ ಮಾದರಿಯಾಗಿದೆ.


ಇದನ್ನೂ ಓದಿ: ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಏಶಿಯನ್ ಪೆಯಿಂಟ್ಸ್ ಮಾಲೀಕರಿಗೊಂದು ಸಲಾಂ. ಇವರ ನೀತಿ ಅನುಕರಣೆಗೆ ಅರ್ಹವಾಗಿದೆ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...