Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

ಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಮತ್ತುಷ್ಟು ಪಾತಾಳಕ್ಕೆ ತಳ್ಳಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಲಕ್ಷಾಂತರ ಕಂಪನಿಗಳು ತನ್ನ ನೌಕರರನ್ನು ಕೆಲಸದಿಂದ ಕಿತ್ತೆಸೆದಿವೆ. ಇನ್ನಷ್ಟು ಕಂಪನಿಗಳು ಸಂಬಳ ನಿಲ್ಲಿಸಿವೆ ಅಥವಾ ಸಂಬಳ ಕಡಿತ ಮಾಡಿವೆ. ಆದರೆ ಏಷ್ಯನ್‌ ಪೇಂಟ್ಸ್‌ ಕಂಪನಿ ಮಾತ್ರ ಕಷ್ಟಕರ ಸಂದರ್ಭದಲ್ಲಿಯೂ ತನ್ನ ನೌಕರರ ಸಂಬಳ ಹೆಚ್ಚಿಸಿ ಅವರಿಗೆ ಮನೋಸ್ಥೈರ್ಯ ತುಂಬುವ ಮಾದರಿ ಕೆಲಸ ಮಾಡಿದೆ.

ಭಾರತದ ದೊಡ್ಡ ಮತ್ತು ಬ್ರಾಂಡ್‌ ಕಂಪನಿಯಾದ ಏಷ್ಯನ್‌ ಪೇಂಟ್ಸ್‌ ಪ್ರವಾಹದ ವಿರುದ್ಧ ಈಜಲು ಹೊರಟಿದೆ. ಕೆಲಸ ಕಳೆದುಕೊಂಡು ಭವಿಷ್ಯದ ಬಗ್ಗೆ ಚಿಂತಿತರಾಗಿರುವ ಕೋಟ್ಯಾಂತರ ನೌಕರರ ನಡುವೆ ಅದು ತನ್ನ ನೌಕರರಿಗೆ ನಾನಿದ್ದೇನೆ ಭಯಪಡಬೇಡಿ ಎಂಬ ಭರವಸೆ ನೀಡಿದೆ.

ಕಂಪನಿಯ ತನ್ನ ಎಲ್ಲಾ ನೌಕರರ ವಾರ್ಷಿಕ ಸಂಬಳವನ್ನು ಹೆಚ್ಚಿಸಿದೆ. ಎಲ್ಲರಿಗು ಉಚಿತ ವೈದ್ಯಕೀಯ ವಿಮೆ ಮಾಡಿಸಲು ಮುಂದಾಗಿದೆ. ತನ್ನ ಅಂಗಡಿಗಳ ನೈರ್ಮಲ್ಯೀಕರಣ ಜವಾಬ್ದಾರಿ ಹೊತ್ತಿದೆ. ಈಗಾಗಲೇ ತನ್ನ ಗುತ್ತಿಗೆದಾರರ ಖಾತೆಗೆ 40 ಕೋಟಿ ರೂಗಳನ್ನು ವರ್ಗಾಹಿಸಿದೆ. ಅಲ್ಲದೇ ಕಂಪನಿಯಿಂದ ಪಾವತಿಗಳಿಗೆ 45 ದಿನಗಳ ವಿಸ್ತರಣೆ ಮತ್ತು 45 ದಿನಗಳಲ್ಲಿ ಪಾವತಿ ಮಾಡಿದರೆ 2 ಪ್ರತಿಶತ ರಿಯಾಯಿತಿಯನ್ನು ಘೋಷಿಸಿದೆ.

ನಮ್ಮದು ಉತ್ತಮ ನಾಯಕತ್ವ ಹೊಂದಿರುವ ಮತ್ತು ನಮ್ಮ ಎಲ್ಲಾ ಪಾಲುದಾರರನ್ನು ನೋಡಿಕೊಳ್ಳುವ ಮಾದರಿ ಸಂಸ್ಥೆಯಾಗಿರಬೇಕು. ಇಂತಹ ಎಲ್ಲಾ ಉಪಕ್ರಮಗಳ ಬಗ್ಗೆ ನಾನು ನಿಯಮಿತವಾಗಿ ಮಂಡಳಿಯೊಂದಿಗೆ ಚರ್ಚಿಸಿ ಅವರ ಅನುಮೋದನೆಯನ್ನು ಪಡೆದುಕೊಂಡಿದ್ದೇನೆ. “ನಮ್ಮ ಪ್ರತಿಯೊಬ್ಬ ಉದ್ಯೋಗಿಯೊಂದಿಗೆ ಹೆಜ್ಜೆ ಹಾಕಲು, ಸಂವಹನ ನಡೆಸಲು ಮತ್ತು ಅನಿಶ್ಚಿತ ಮಾರುಕಟ್ಟೆಯಲ್ಲಿ ಅವರ ಕಳವಳಗಳನ್ನು ಹೋಗಲಾಡಿಸಲು ಇದು ಒಂದು ದೊಡ್ಡ ಅವಕಾಶವೆಂದು ನಾನು ನೋಡುತ್ತೇನೆ. ಪ್ರಬುದ್ಧ ಬ್ರಾಂಡ್ ಆಗಿ ಕೆಲಸಕ್ಕೆ ತೆಗೆದುಕೊಳ್ಳುವ/ಕೈಬಿಡುವುದು (Hire and Fire) ಏಷ್ಯನ್ ಪೇಂಟ್ಸ್ ಸಂಸ್ಕೃತಿಯಲ್ಲ. ಬದಲಿಗೆ ಉದ್ಯೋಗಿಗಳಿಗೆ ಭರವಸೆ ನೀಡಿದ್ದೇವೆ” ಎಂದು ಕಂಪನಿಯ ಸಿಇಒ ಅಮಿತ್ ಸಿಂಗಲ್ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟು ಮಾತ್ರವಲ್ಲದೇ ಕಂಪನಿಯೂ ಕೋವಿಡ್‌ ಪರಿಹಾರ ನಿಧಿಗೆ (ಮಹಾರಾಷ್ಟ್ರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ) 35 ಕೋಟಿ ರೂಗಳ ದೇಣಿಗೆ ನೀಡಿದೆ. ಹ್ಯಾಂಡ್‌ ಸ್ಯಾನಿಟೈಸರ್‌ ತಯಾರಿಸಿ ವಿತರಿಸಿದೆ.

ಏಷ್ಯನ್‌ ಪೇಂಟ್ಸ್‌ ಕಂಪನಿಯ ಮೊದಲ ತ್ರೈಮಾಸಿಕದ ಸಮಯದಲ್ಲಿ ಯಾವುದೇ ಲಾಭ ದೊರೆಯುವುದಿಲ್ಲ ಎಂದು ಕಂಪನಿಗೆ ನಿಚ್ಚಳವಾಗಿ ತಿಳಿದಿದೆ. ಆದರು ಅದು ತತ್‌ಕ್ಷಣದ ಲಾಭ ನಷ್ಟದ ಬಗ್ಗೆ ಯೋಚಿಸದೇ ದೂರಗಾಮಿ ಪರಿಣಾಮಗಳ ಬಗ್ಗೆ ಚಿಂತಿಸುತ್ತಿದೆ.

ಈ ಹಂತಗಳು ಕಂಪನಿಗೆ ತಕ್ಷಣದ ಹಣಕಾಸಿನ ಪ್ರಯೋಜನಗಳಿಗೆ ಕಾರಣವಾಗದಿದ್ದರೂ, ಉದ್ಯೋಗಿಗಳು ಮತ್ತು ಪಾಲುದಾರರಂತಹ ಪ್ರಮುಖ ಪಾಲುದಾರರೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಅವು ಖಂಡಿತವಾಗಿಯೂ ಕಂಪನಿಗೆ ಒಳ್ಳೆಯ ಹೆಸರು ತಂದುಕೊಡುವುದರ ಜೊತೆಗೆ ತನ್ನ ನೌಕರರು ಮತ್ತು ಗುತ್ತಿಗೆದಾರರಲ್ಲಿ ಮಾತ್ರವಲ್ಲದೇ ಗ್ರಾಹಕರಲ್ಲಿಯೂ ಸಹ ನಂಬಿಕೆಯನ್ನು ಹುಟ್ಟಿಸುತ್ತದೆ.

ಒಟ್ಟಿನಲ್ಲಿ ಕಂಪನಿ ನಷ್ಟದಲ್ಲಿದೆ ಎಂದು ಹಲವಾರು ಉದ್ಯಮಿಗಳು ತನ್ನ ಉದ್ಯೋಗಿಗಳನ್ನು ಕ್ಷಣಮಾತ್ರದಲ್ಲಿ ಕಿತ್ತೊಗೆಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರವು ಅವರ ಪರ ನಿಲ್ಲಬೇಕು. ಇದಕ್ಕೆ ಏಷ್ಯನ್‌ ಪೇಂಟ್ಸ್‌ ಉತ್ತಮ ಮಾದರಿಯಾಗಿದೆ.


ಇದನ್ನೂ ಓದಿ: ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಏಶಿಯನ್ ಪೆಯಿಂಟ್ಸ್ ಮಾಲೀಕರಿಗೊಂದು ಸಲಾಂ. ಇವರ ನೀತಿ ಅನುಕರಣೆಗೆ ಅರ್ಹವಾಗಿದೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...