Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

ಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಮತ್ತುಷ್ಟು ಪಾತಾಳಕ್ಕೆ ತಳ್ಳಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಲಕ್ಷಾಂತರ ಕಂಪನಿಗಳು ತನ್ನ ನೌಕರರನ್ನು ಕೆಲಸದಿಂದ ಕಿತ್ತೆಸೆದಿವೆ. ಇನ್ನಷ್ಟು ಕಂಪನಿಗಳು ಸಂಬಳ ನಿಲ್ಲಿಸಿವೆ ಅಥವಾ ಸಂಬಳ ಕಡಿತ ಮಾಡಿವೆ. ಆದರೆ ಏಷ್ಯನ್‌ ಪೇಂಟ್ಸ್‌ ಕಂಪನಿ ಮಾತ್ರ ಕಷ್ಟಕರ ಸಂದರ್ಭದಲ್ಲಿಯೂ ತನ್ನ ನೌಕರರ ಸಂಬಳ ಹೆಚ್ಚಿಸಿ ಅವರಿಗೆ ಮನೋಸ್ಥೈರ್ಯ ತುಂಬುವ ಮಾದರಿ ಕೆಲಸ ಮಾಡಿದೆ.

ಭಾರತದ ದೊಡ್ಡ ಮತ್ತು ಬ್ರಾಂಡ್‌ ಕಂಪನಿಯಾದ ಏಷ್ಯನ್‌ ಪೇಂಟ್ಸ್‌ ಪ್ರವಾಹದ ವಿರುದ್ಧ ಈಜಲು ಹೊರಟಿದೆ. ಕೆಲಸ ಕಳೆದುಕೊಂಡು ಭವಿಷ್ಯದ ಬಗ್ಗೆ ಚಿಂತಿತರಾಗಿರುವ ಕೋಟ್ಯಾಂತರ ನೌಕರರ ನಡುವೆ ಅದು ತನ್ನ ನೌಕರರಿಗೆ ನಾನಿದ್ದೇನೆ ಭಯಪಡಬೇಡಿ ಎಂಬ ಭರವಸೆ ನೀಡಿದೆ.

ಕಂಪನಿಯ ತನ್ನ ಎಲ್ಲಾ ನೌಕರರ ವಾರ್ಷಿಕ ಸಂಬಳವನ್ನು ಹೆಚ್ಚಿಸಿದೆ. ಎಲ್ಲರಿಗು ಉಚಿತ ವೈದ್ಯಕೀಯ ವಿಮೆ ಮಾಡಿಸಲು ಮುಂದಾಗಿದೆ. ತನ್ನ ಅಂಗಡಿಗಳ ನೈರ್ಮಲ್ಯೀಕರಣ ಜವಾಬ್ದಾರಿ ಹೊತ್ತಿದೆ. ಈಗಾಗಲೇ ತನ್ನ ಗುತ್ತಿಗೆದಾರರ ಖಾತೆಗೆ 40 ಕೋಟಿ ರೂಗಳನ್ನು ವರ್ಗಾಹಿಸಿದೆ. ಅಲ್ಲದೇ ಕಂಪನಿಯಿಂದ ಪಾವತಿಗಳಿಗೆ 45 ದಿನಗಳ ವಿಸ್ತರಣೆ ಮತ್ತು 45 ದಿನಗಳಲ್ಲಿ ಪಾವತಿ ಮಾಡಿದರೆ 2 ಪ್ರತಿಶತ ರಿಯಾಯಿತಿಯನ್ನು ಘೋಷಿಸಿದೆ.

ನಮ್ಮದು ಉತ್ತಮ ನಾಯಕತ್ವ ಹೊಂದಿರುವ ಮತ್ತು ನಮ್ಮ ಎಲ್ಲಾ ಪಾಲುದಾರರನ್ನು ನೋಡಿಕೊಳ್ಳುವ ಮಾದರಿ ಸಂಸ್ಥೆಯಾಗಿರಬೇಕು. ಇಂತಹ ಎಲ್ಲಾ ಉಪಕ್ರಮಗಳ ಬಗ್ಗೆ ನಾನು ನಿಯಮಿತವಾಗಿ ಮಂಡಳಿಯೊಂದಿಗೆ ಚರ್ಚಿಸಿ ಅವರ ಅನುಮೋದನೆಯನ್ನು ಪಡೆದುಕೊಂಡಿದ್ದೇನೆ. “ನಮ್ಮ ಪ್ರತಿಯೊಬ್ಬ ಉದ್ಯೋಗಿಯೊಂದಿಗೆ ಹೆಜ್ಜೆ ಹಾಕಲು, ಸಂವಹನ ನಡೆಸಲು ಮತ್ತು ಅನಿಶ್ಚಿತ ಮಾರುಕಟ್ಟೆಯಲ್ಲಿ ಅವರ ಕಳವಳಗಳನ್ನು ಹೋಗಲಾಡಿಸಲು ಇದು ಒಂದು ದೊಡ್ಡ ಅವಕಾಶವೆಂದು ನಾನು ನೋಡುತ್ತೇನೆ. ಪ್ರಬುದ್ಧ ಬ್ರಾಂಡ್ ಆಗಿ ಕೆಲಸಕ್ಕೆ ತೆಗೆದುಕೊಳ್ಳುವ/ಕೈಬಿಡುವುದು (Hire and Fire) ಏಷ್ಯನ್ ಪೇಂಟ್ಸ್ ಸಂಸ್ಕೃತಿಯಲ್ಲ. ಬದಲಿಗೆ ಉದ್ಯೋಗಿಗಳಿಗೆ ಭರವಸೆ ನೀಡಿದ್ದೇವೆ” ಎಂದು ಕಂಪನಿಯ ಸಿಇಒ ಅಮಿತ್ ಸಿಂಗಲ್ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟು ಮಾತ್ರವಲ್ಲದೇ ಕಂಪನಿಯೂ ಕೋವಿಡ್‌ ಪರಿಹಾರ ನಿಧಿಗೆ (ಮಹಾರಾಷ್ಟ್ರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ) 35 ಕೋಟಿ ರೂಗಳ ದೇಣಿಗೆ ನೀಡಿದೆ. ಹ್ಯಾಂಡ್‌ ಸ್ಯಾನಿಟೈಸರ್‌ ತಯಾರಿಸಿ ವಿತರಿಸಿದೆ.

ಏಷ್ಯನ್‌ ಪೇಂಟ್ಸ್‌ ಕಂಪನಿಯ ಮೊದಲ ತ್ರೈಮಾಸಿಕದ ಸಮಯದಲ್ಲಿ ಯಾವುದೇ ಲಾಭ ದೊರೆಯುವುದಿಲ್ಲ ಎಂದು ಕಂಪನಿಗೆ ನಿಚ್ಚಳವಾಗಿ ತಿಳಿದಿದೆ. ಆದರು ಅದು ತತ್‌ಕ್ಷಣದ ಲಾಭ ನಷ್ಟದ ಬಗ್ಗೆ ಯೋಚಿಸದೇ ದೂರಗಾಮಿ ಪರಿಣಾಮಗಳ ಬಗ್ಗೆ ಚಿಂತಿಸುತ್ತಿದೆ.

ಈ ಹಂತಗಳು ಕಂಪನಿಗೆ ತಕ್ಷಣದ ಹಣಕಾಸಿನ ಪ್ರಯೋಜನಗಳಿಗೆ ಕಾರಣವಾಗದಿದ್ದರೂ, ಉದ್ಯೋಗಿಗಳು ಮತ್ತು ಪಾಲುದಾರರಂತಹ ಪ್ರಮುಖ ಪಾಲುದಾರರೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಅವು ಖಂಡಿತವಾಗಿಯೂ ಕಂಪನಿಗೆ ಒಳ್ಳೆಯ ಹೆಸರು ತಂದುಕೊಡುವುದರ ಜೊತೆಗೆ ತನ್ನ ನೌಕರರು ಮತ್ತು ಗುತ್ತಿಗೆದಾರರಲ್ಲಿ ಮಾತ್ರವಲ್ಲದೇ ಗ್ರಾಹಕರಲ್ಲಿಯೂ ಸಹ ನಂಬಿಕೆಯನ್ನು ಹುಟ್ಟಿಸುತ್ತದೆ.

ಒಟ್ಟಿನಲ್ಲಿ ಕಂಪನಿ ನಷ್ಟದಲ್ಲಿದೆ ಎಂದು ಹಲವಾರು ಉದ್ಯಮಿಗಳು ತನ್ನ ಉದ್ಯೋಗಿಗಳನ್ನು ಕ್ಷಣಮಾತ್ರದಲ್ಲಿ ಕಿತ್ತೊಗೆಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರವು ಅವರ ಪರ ನಿಲ್ಲಬೇಕು. ಇದಕ್ಕೆ ಏಷ್ಯನ್‌ ಪೇಂಟ್ಸ್‌ ಉತ್ತಮ ಮಾದರಿಯಾಗಿದೆ.


ಇದನ್ನೂ ಓದಿ: ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಏಶಿಯನ್ ಪೆಯಿಂಟ್ಸ್ ಮಾಲೀಕರಿಗೊಂದು ಸಲಾಂ. ಇವರ ನೀತಿ ಅನುಕರಣೆಗೆ ಅರ್ಹವಾಗಿದೆ.

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...