Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

ಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಮತ್ತುಷ್ಟು ಪಾತಾಳಕ್ಕೆ ತಳ್ಳಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಲಕ್ಷಾಂತರ ಕಂಪನಿಗಳು ತನ್ನ ನೌಕರರನ್ನು ಕೆಲಸದಿಂದ ಕಿತ್ತೆಸೆದಿವೆ. ಇನ್ನಷ್ಟು ಕಂಪನಿಗಳು ಸಂಬಳ ನಿಲ್ಲಿಸಿವೆ ಅಥವಾ ಸಂಬಳ ಕಡಿತ ಮಾಡಿವೆ. ಆದರೆ ಏಷ್ಯನ್‌ ಪೇಂಟ್ಸ್‌ ಕಂಪನಿ ಮಾತ್ರ ಕಷ್ಟಕರ ಸಂದರ್ಭದಲ್ಲಿಯೂ ತನ್ನ ನೌಕರರ ಸಂಬಳ ಹೆಚ್ಚಿಸಿ ಅವರಿಗೆ ಮನೋಸ್ಥೈರ್ಯ ತುಂಬುವ ಮಾದರಿ ಕೆಲಸ ಮಾಡಿದೆ.

ಭಾರತದ ದೊಡ್ಡ ಮತ್ತು ಬ್ರಾಂಡ್‌ ಕಂಪನಿಯಾದ ಏಷ್ಯನ್‌ ಪೇಂಟ್ಸ್‌ ಪ್ರವಾಹದ ವಿರುದ್ಧ ಈಜಲು ಹೊರಟಿದೆ. ಕೆಲಸ ಕಳೆದುಕೊಂಡು ಭವಿಷ್ಯದ ಬಗ್ಗೆ ಚಿಂತಿತರಾಗಿರುವ ಕೋಟ್ಯಾಂತರ ನೌಕರರ ನಡುವೆ ಅದು ತನ್ನ ನೌಕರರಿಗೆ ನಾನಿದ್ದೇನೆ ಭಯಪಡಬೇಡಿ ಎಂಬ ಭರವಸೆ ನೀಡಿದೆ.

ಕಂಪನಿಯ ತನ್ನ ಎಲ್ಲಾ ನೌಕರರ ವಾರ್ಷಿಕ ಸಂಬಳವನ್ನು ಹೆಚ್ಚಿಸಿದೆ. ಎಲ್ಲರಿಗು ಉಚಿತ ವೈದ್ಯಕೀಯ ವಿಮೆ ಮಾಡಿಸಲು ಮುಂದಾಗಿದೆ. ತನ್ನ ಅಂಗಡಿಗಳ ನೈರ್ಮಲ್ಯೀಕರಣ ಜವಾಬ್ದಾರಿ ಹೊತ್ತಿದೆ. ಈಗಾಗಲೇ ತನ್ನ ಗುತ್ತಿಗೆದಾರರ ಖಾತೆಗೆ 40 ಕೋಟಿ ರೂಗಳನ್ನು ವರ್ಗಾಹಿಸಿದೆ. ಅಲ್ಲದೇ ಕಂಪನಿಯಿಂದ ಪಾವತಿಗಳಿಗೆ 45 ದಿನಗಳ ವಿಸ್ತರಣೆ ಮತ್ತು 45 ದಿನಗಳಲ್ಲಿ ಪಾವತಿ ಮಾಡಿದರೆ 2 ಪ್ರತಿಶತ ರಿಯಾಯಿತಿಯನ್ನು ಘೋಷಿಸಿದೆ.

ನಮ್ಮದು ಉತ್ತಮ ನಾಯಕತ್ವ ಹೊಂದಿರುವ ಮತ್ತು ನಮ್ಮ ಎಲ್ಲಾ ಪಾಲುದಾರರನ್ನು ನೋಡಿಕೊಳ್ಳುವ ಮಾದರಿ ಸಂಸ್ಥೆಯಾಗಿರಬೇಕು. ಇಂತಹ ಎಲ್ಲಾ ಉಪಕ್ರಮಗಳ ಬಗ್ಗೆ ನಾನು ನಿಯಮಿತವಾಗಿ ಮಂಡಳಿಯೊಂದಿಗೆ ಚರ್ಚಿಸಿ ಅವರ ಅನುಮೋದನೆಯನ್ನು ಪಡೆದುಕೊಂಡಿದ್ದೇನೆ. “ನಮ್ಮ ಪ್ರತಿಯೊಬ್ಬ ಉದ್ಯೋಗಿಯೊಂದಿಗೆ ಹೆಜ್ಜೆ ಹಾಕಲು, ಸಂವಹನ ನಡೆಸಲು ಮತ್ತು ಅನಿಶ್ಚಿತ ಮಾರುಕಟ್ಟೆಯಲ್ಲಿ ಅವರ ಕಳವಳಗಳನ್ನು ಹೋಗಲಾಡಿಸಲು ಇದು ಒಂದು ದೊಡ್ಡ ಅವಕಾಶವೆಂದು ನಾನು ನೋಡುತ್ತೇನೆ. ಪ್ರಬುದ್ಧ ಬ್ರಾಂಡ್ ಆಗಿ ಕೆಲಸಕ್ಕೆ ತೆಗೆದುಕೊಳ್ಳುವ/ಕೈಬಿಡುವುದು (Hire and Fire) ಏಷ್ಯನ್ ಪೇಂಟ್ಸ್ ಸಂಸ್ಕೃತಿಯಲ್ಲ. ಬದಲಿಗೆ ಉದ್ಯೋಗಿಗಳಿಗೆ ಭರವಸೆ ನೀಡಿದ್ದೇವೆ” ಎಂದು ಕಂಪನಿಯ ಸಿಇಒ ಅಮಿತ್ ಸಿಂಗಲ್ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟು ಮಾತ್ರವಲ್ಲದೇ ಕಂಪನಿಯೂ ಕೋವಿಡ್‌ ಪರಿಹಾರ ನಿಧಿಗೆ (ಮಹಾರಾಷ್ಟ್ರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ) 35 ಕೋಟಿ ರೂಗಳ ದೇಣಿಗೆ ನೀಡಿದೆ. ಹ್ಯಾಂಡ್‌ ಸ್ಯಾನಿಟೈಸರ್‌ ತಯಾರಿಸಿ ವಿತರಿಸಿದೆ.

ಏಷ್ಯನ್‌ ಪೇಂಟ್ಸ್‌ ಕಂಪನಿಯ ಮೊದಲ ತ್ರೈಮಾಸಿಕದ ಸಮಯದಲ್ಲಿ ಯಾವುದೇ ಲಾಭ ದೊರೆಯುವುದಿಲ್ಲ ಎಂದು ಕಂಪನಿಗೆ ನಿಚ್ಚಳವಾಗಿ ತಿಳಿದಿದೆ. ಆದರು ಅದು ತತ್‌ಕ್ಷಣದ ಲಾಭ ನಷ್ಟದ ಬಗ್ಗೆ ಯೋಚಿಸದೇ ದೂರಗಾಮಿ ಪರಿಣಾಮಗಳ ಬಗ್ಗೆ ಚಿಂತಿಸುತ್ತಿದೆ.

ಈ ಹಂತಗಳು ಕಂಪನಿಗೆ ತಕ್ಷಣದ ಹಣಕಾಸಿನ ಪ್ರಯೋಜನಗಳಿಗೆ ಕಾರಣವಾಗದಿದ್ದರೂ, ಉದ್ಯೋಗಿಗಳು ಮತ್ತು ಪಾಲುದಾರರಂತಹ ಪ್ರಮುಖ ಪಾಲುದಾರರೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಅವು ಖಂಡಿತವಾಗಿಯೂ ಕಂಪನಿಗೆ ಒಳ್ಳೆಯ ಹೆಸರು ತಂದುಕೊಡುವುದರ ಜೊತೆಗೆ ತನ್ನ ನೌಕರರು ಮತ್ತು ಗುತ್ತಿಗೆದಾರರಲ್ಲಿ ಮಾತ್ರವಲ್ಲದೇ ಗ್ರಾಹಕರಲ್ಲಿಯೂ ಸಹ ನಂಬಿಕೆಯನ್ನು ಹುಟ್ಟಿಸುತ್ತದೆ.

ಒಟ್ಟಿನಲ್ಲಿ ಕಂಪನಿ ನಷ್ಟದಲ್ಲಿದೆ ಎಂದು ಹಲವಾರು ಉದ್ಯಮಿಗಳು ತನ್ನ ಉದ್ಯೋಗಿಗಳನ್ನು ಕ್ಷಣಮಾತ್ರದಲ್ಲಿ ಕಿತ್ತೊಗೆಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರವು ಅವರ ಪರ ನಿಲ್ಲಬೇಕು. ಇದಕ್ಕೆ ಏಷ್ಯನ್‌ ಪೇಂಟ್ಸ್‌ ಉತ್ತಮ ಮಾದರಿಯಾಗಿದೆ.


ಇದನ್ನೂ ಓದಿ: ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಏಶಿಯನ್ ಪೆಯಿಂಟ್ಸ್ ಮಾಲೀಕರಿಗೊಂದು ಸಲಾಂ. ಇವರ ನೀತಿ ಅನುಕರಣೆಗೆ ಅರ್ಹವಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...