Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

ಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಮತ್ತುಷ್ಟು ಪಾತಾಳಕ್ಕೆ ತಳ್ಳಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಲಕ್ಷಾಂತರ ಕಂಪನಿಗಳು ತನ್ನ ನೌಕರರನ್ನು ಕೆಲಸದಿಂದ ಕಿತ್ತೆಸೆದಿವೆ. ಇನ್ನಷ್ಟು ಕಂಪನಿಗಳು ಸಂಬಳ ನಿಲ್ಲಿಸಿವೆ ಅಥವಾ ಸಂಬಳ ಕಡಿತ ಮಾಡಿವೆ. ಆದರೆ ಏಷ್ಯನ್‌ ಪೇಂಟ್ಸ್‌ ಕಂಪನಿ ಮಾತ್ರ ಕಷ್ಟಕರ ಸಂದರ್ಭದಲ್ಲಿಯೂ ತನ್ನ ನೌಕರರ ಸಂಬಳ ಹೆಚ್ಚಿಸಿ ಅವರಿಗೆ ಮನೋಸ್ಥೈರ್ಯ ತುಂಬುವ ಮಾದರಿ ಕೆಲಸ ಮಾಡಿದೆ.

ಭಾರತದ ದೊಡ್ಡ ಮತ್ತು ಬ್ರಾಂಡ್‌ ಕಂಪನಿಯಾದ ಏಷ್ಯನ್‌ ಪೇಂಟ್ಸ್‌ ಪ್ರವಾಹದ ವಿರುದ್ಧ ಈಜಲು ಹೊರಟಿದೆ. ಕೆಲಸ ಕಳೆದುಕೊಂಡು ಭವಿಷ್ಯದ ಬಗ್ಗೆ ಚಿಂತಿತರಾಗಿರುವ ಕೋಟ್ಯಾಂತರ ನೌಕರರ ನಡುವೆ ಅದು ತನ್ನ ನೌಕರರಿಗೆ ನಾನಿದ್ದೇನೆ ಭಯಪಡಬೇಡಿ ಎಂಬ ಭರವಸೆ ನೀಡಿದೆ.

ಕಂಪನಿಯ ತನ್ನ ಎಲ್ಲಾ ನೌಕರರ ವಾರ್ಷಿಕ ಸಂಬಳವನ್ನು ಹೆಚ್ಚಿಸಿದೆ. ಎಲ್ಲರಿಗು ಉಚಿತ ವೈದ್ಯಕೀಯ ವಿಮೆ ಮಾಡಿಸಲು ಮುಂದಾಗಿದೆ. ತನ್ನ ಅಂಗಡಿಗಳ ನೈರ್ಮಲ್ಯೀಕರಣ ಜವಾಬ್ದಾರಿ ಹೊತ್ತಿದೆ. ಈಗಾಗಲೇ ತನ್ನ ಗುತ್ತಿಗೆದಾರರ ಖಾತೆಗೆ 40 ಕೋಟಿ ರೂಗಳನ್ನು ವರ್ಗಾಹಿಸಿದೆ. ಅಲ್ಲದೇ ಕಂಪನಿಯಿಂದ ಪಾವತಿಗಳಿಗೆ 45 ದಿನಗಳ ವಿಸ್ತರಣೆ ಮತ್ತು 45 ದಿನಗಳಲ್ಲಿ ಪಾವತಿ ಮಾಡಿದರೆ 2 ಪ್ರತಿಶತ ರಿಯಾಯಿತಿಯನ್ನು ಘೋಷಿಸಿದೆ.

ನಮ್ಮದು ಉತ್ತಮ ನಾಯಕತ್ವ ಹೊಂದಿರುವ ಮತ್ತು ನಮ್ಮ ಎಲ್ಲಾ ಪಾಲುದಾರರನ್ನು ನೋಡಿಕೊಳ್ಳುವ ಮಾದರಿ ಸಂಸ್ಥೆಯಾಗಿರಬೇಕು. ಇಂತಹ ಎಲ್ಲಾ ಉಪಕ್ರಮಗಳ ಬಗ್ಗೆ ನಾನು ನಿಯಮಿತವಾಗಿ ಮಂಡಳಿಯೊಂದಿಗೆ ಚರ್ಚಿಸಿ ಅವರ ಅನುಮೋದನೆಯನ್ನು ಪಡೆದುಕೊಂಡಿದ್ದೇನೆ. “ನಮ್ಮ ಪ್ರತಿಯೊಬ್ಬ ಉದ್ಯೋಗಿಯೊಂದಿಗೆ ಹೆಜ್ಜೆ ಹಾಕಲು, ಸಂವಹನ ನಡೆಸಲು ಮತ್ತು ಅನಿಶ್ಚಿತ ಮಾರುಕಟ್ಟೆಯಲ್ಲಿ ಅವರ ಕಳವಳಗಳನ್ನು ಹೋಗಲಾಡಿಸಲು ಇದು ಒಂದು ದೊಡ್ಡ ಅವಕಾಶವೆಂದು ನಾನು ನೋಡುತ್ತೇನೆ. ಪ್ರಬುದ್ಧ ಬ್ರಾಂಡ್ ಆಗಿ ಕೆಲಸಕ್ಕೆ ತೆಗೆದುಕೊಳ್ಳುವ/ಕೈಬಿಡುವುದು (Hire and Fire) ಏಷ್ಯನ್ ಪೇಂಟ್ಸ್ ಸಂಸ್ಕೃತಿಯಲ್ಲ. ಬದಲಿಗೆ ಉದ್ಯೋಗಿಗಳಿಗೆ ಭರವಸೆ ನೀಡಿದ್ದೇವೆ” ಎಂದು ಕಂಪನಿಯ ಸಿಇಒ ಅಮಿತ್ ಸಿಂಗಲ್ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟು ಮಾತ್ರವಲ್ಲದೇ ಕಂಪನಿಯೂ ಕೋವಿಡ್‌ ಪರಿಹಾರ ನಿಧಿಗೆ (ಮಹಾರಾಷ್ಟ್ರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ) 35 ಕೋಟಿ ರೂಗಳ ದೇಣಿಗೆ ನೀಡಿದೆ. ಹ್ಯಾಂಡ್‌ ಸ್ಯಾನಿಟೈಸರ್‌ ತಯಾರಿಸಿ ವಿತರಿಸಿದೆ.

ಏಷ್ಯನ್‌ ಪೇಂಟ್ಸ್‌ ಕಂಪನಿಯ ಮೊದಲ ತ್ರೈಮಾಸಿಕದ ಸಮಯದಲ್ಲಿ ಯಾವುದೇ ಲಾಭ ದೊರೆಯುವುದಿಲ್ಲ ಎಂದು ಕಂಪನಿಗೆ ನಿಚ್ಚಳವಾಗಿ ತಿಳಿದಿದೆ. ಆದರು ಅದು ತತ್‌ಕ್ಷಣದ ಲಾಭ ನಷ್ಟದ ಬಗ್ಗೆ ಯೋಚಿಸದೇ ದೂರಗಾಮಿ ಪರಿಣಾಮಗಳ ಬಗ್ಗೆ ಚಿಂತಿಸುತ್ತಿದೆ.

ಈ ಹಂತಗಳು ಕಂಪನಿಗೆ ತಕ್ಷಣದ ಹಣಕಾಸಿನ ಪ್ರಯೋಜನಗಳಿಗೆ ಕಾರಣವಾಗದಿದ್ದರೂ, ಉದ್ಯೋಗಿಗಳು ಮತ್ತು ಪಾಲುದಾರರಂತಹ ಪ್ರಮುಖ ಪಾಲುದಾರರೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಅವು ಖಂಡಿತವಾಗಿಯೂ ಕಂಪನಿಗೆ ಒಳ್ಳೆಯ ಹೆಸರು ತಂದುಕೊಡುವುದರ ಜೊತೆಗೆ ತನ್ನ ನೌಕರರು ಮತ್ತು ಗುತ್ತಿಗೆದಾರರಲ್ಲಿ ಮಾತ್ರವಲ್ಲದೇ ಗ್ರಾಹಕರಲ್ಲಿಯೂ ಸಹ ನಂಬಿಕೆಯನ್ನು ಹುಟ್ಟಿಸುತ್ತದೆ.

ಒಟ್ಟಿನಲ್ಲಿ ಕಂಪನಿ ನಷ್ಟದಲ್ಲಿದೆ ಎಂದು ಹಲವಾರು ಉದ್ಯಮಿಗಳು ತನ್ನ ಉದ್ಯೋಗಿಗಳನ್ನು ಕ್ಷಣಮಾತ್ರದಲ್ಲಿ ಕಿತ್ತೊಗೆಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರವು ಅವರ ಪರ ನಿಲ್ಲಬೇಕು. ಇದಕ್ಕೆ ಏಷ್ಯನ್‌ ಪೇಂಟ್ಸ್‌ ಉತ್ತಮ ಮಾದರಿಯಾಗಿದೆ.


ಇದನ್ನೂ ಓದಿ: ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಏಶಿಯನ್ ಪೆಯಿಂಟ್ಸ್ ಮಾಲೀಕರಿಗೊಂದು ಸಲಾಂ. ಇವರ ನೀತಿ ಅನುಕರಣೆಗೆ ಅರ್ಹವಾಗಿದೆ.

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...