Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

ಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಮತ್ತುಷ್ಟು ಪಾತಾಳಕ್ಕೆ ತಳ್ಳಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಲಕ್ಷಾಂತರ ಕಂಪನಿಗಳು ತನ್ನ ನೌಕರರನ್ನು ಕೆಲಸದಿಂದ ಕಿತ್ತೆಸೆದಿವೆ. ಇನ್ನಷ್ಟು ಕಂಪನಿಗಳು ಸಂಬಳ ನಿಲ್ಲಿಸಿವೆ ಅಥವಾ ಸಂಬಳ ಕಡಿತ ಮಾಡಿವೆ. ಆದರೆ ಏಷ್ಯನ್‌ ಪೇಂಟ್ಸ್‌ ಕಂಪನಿ ಮಾತ್ರ ಕಷ್ಟಕರ ಸಂದರ್ಭದಲ್ಲಿಯೂ ತನ್ನ ನೌಕರರ ಸಂಬಳ ಹೆಚ್ಚಿಸಿ ಅವರಿಗೆ ಮನೋಸ್ಥೈರ್ಯ ತುಂಬುವ ಮಾದರಿ ಕೆಲಸ ಮಾಡಿದೆ.

ಭಾರತದ ದೊಡ್ಡ ಮತ್ತು ಬ್ರಾಂಡ್‌ ಕಂಪನಿಯಾದ ಏಷ್ಯನ್‌ ಪೇಂಟ್ಸ್‌ ಪ್ರವಾಹದ ವಿರುದ್ಧ ಈಜಲು ಹೊರಟಿದೆ. ಕೆಲಸ ಕಳೆದುಕೊಂಡು ಭವಿಷ್ಯದ ಬಗ್ಗೆ ಚಿಂತಿತರಾಗಿರುವ ಕೋಟ್ಯಾಂತರ ನೌಕರರ ನಡುವೆ ಅದು ತನ್ನ ನೌಕರರಿಗೆ ನಾನಿದ್ದೇನೆ ಭಯಪಡಬೇಡಿ ಎಂಬ ಭರವಸೆ ನೀಡಿದೆ.

ಕಂಪನಿಯ ತನ್ನ ಎಲ್ಲಾ ನೌಕರರ ವಾರ್ಷಿಕ ಸಂಬಳವನ್ನು ಹೆಚ್ಚಿಸಿದೆ. ಎಲ್ಲರಿಗು ಉಚಿತ ವೈದ್ಯಕೀಯ ವಿಮೆ ಮಾಡಿಸಲು ಮುಂದಾಗಿದೆ. ತನ್ನ ಅಂಗಡಿಗಳ ನೈರ್ಮಲ್ಯೀಕರಣ ಜವಾಬ್ದಾರಿ ಹೊತ್ತಿದೆ. ಈಗಾಗಲೇ ತನ್ನ ಗುತ್ತಿಗೆದಾರರ ಖಾತೆಗೆ 40 ಕೋಟಿ ರೂಗಳನ್ನು ವರ್ಗಾಹಿಸಿದೆ. ಅಲ್ಲದೇ ಕಂಪನಿಯಿಂದ ಪಾವತಿಗಳಿಗೆ 45 ದಿನಗಳ ವಿಸ್ತರಣೆ ಮತ್ತು 45 ದಿನಗಳಲ್ಲಿ ಪಾವತಿ ಮಾಡಿದರೆ 2 ಪ್ರತಿಶತ ರಿಯಾಯಿತಿಯನ್ನು ಘೋಷಿಸಿದೆ.

ನಮ್ಮದು ಉತ್ತಮ ನಾಯಕತ್ವ ಹೊಂದಿರುವ ಮತ್ತು ನಮ್ಮ ಎಲ್ಲಾ ಪಾಲುದಾರರನ್ನು ನೋಡಿಕೊಳ್ಳುವ ಮಾದರಿ ಸಂಸ್ಥೆಯಾಗಿರಬೇಕು. ಇಂತಹ ಎಲ್ಲಾ ಉಪಕ್ರಮಗಳ ಬಗ್ಗೆ ನಾನು ನಿಯಮಿತವಾಗಿ ಮಂಡಳಿಯೊಂದಿಗೆ ಚರ್ಚಿಸಿ ಅವರ ಅನುಮೋದನೆಯನ್ನು ಪಡೆದುಕೊಂಡಿದ್ದೇನೆ. “ನಮ್ಮ ಪ್ರತಿಯೊಬ್ಬ ಉದ್ಯೋಗಿಯೊಂದಿಗೆ ಹೆಜ್ಜೆ ಹಾಕಲು, ಸಂವಹನ ನಡೆಸಲು ಮತ್ತು ಅನಿಶ್ಚಿತ ಮಾರುಕಟ್ಟೆಯಲ್ಲಿ ಅವರ ಕಳವಳಗಳನ್ನು ಹೋಗಲಾಡಿಸಲು ಇದು ಒಂದು ದೊಡ್ಡ ಅವಕಾಶವೆಂದು ನಾನು ನೋಡುತ್ತೇನೆ. ಪ್ರಬುದ್ಧ ಬ್ರಾಂಡ್ ಆಗಿ ಕೆಲಸಕ್ಕೆ ತೆಗೆದುಕೊಳ್ಳುವ/ಕೈಬಿಡುವುದು (Hire and Fire) ಏಷ್ಯನ್ ಪೇಂಟ್ಸ್ ಸಂಸ್ಕೃತಿಯಲ್ಲ. ಬದಲಿಗೆ ಉದ್ಯೋಗಿಗಳಿಗೆ ಭರವಸೆ ನೀಡಿದ್ದೇವೆ” ಎಂದು ಕಂಪನಿಯ ಸಿಇಒ ಅಮಿತ್ ಸಿಂಗಲ್ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟು ಮಾತ್ರವಲ್ಲದೇ ಕಂಪನಿಯೂ ಕೋವಿಡ್‌ ಪರಿಹಾರ ನಿಧಿಗೆ (ಮಹಾರಾಷ್ಟ್ರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ) 35 ಕೋಟಿ ರೂಗಳ ದೇಣಿಗೆ ನೀಡಿದೆ. ಹ್ಯಾಂಡ್‌ ಸ್ಯಾನಿಟೈಸರ್‌ ತಯಾರಿಸಿ ವಿತರಿಸಿದೆ.

ಏಷ್ಯನ್‌ ಪೇಂಟ್ಸ್‌ ಕಂಪನಿಯ ಮೊದಲ ತ್ರೈಮಾಸಿಕದ ಸಮಯದಲ್ಲಿ ಯಾವುದೇ ಲಾಭ ದೊರೆಯುವುದಿಲ್ಲ ಎಂದು ಕಂಪನಿಗೆ ನಿಚ್ಚಳವಾಗಿ ತಿಳಿದಿದೆ. ಆದರು ಅದು ತತ್‌ಕ್ಷಣದ ಲಾಭ ನಷ್ಟದ ಬಗ್ಗೆ ಯೋಚಿಸದೇ ದೂರಗಾಮಿ ಪರಿಣಾಮಗಳ ಬಗ್ಗೆ ಚಿಂತಿಸುತ್ತಿದೆ.

ಈ ಹಂತಗಳು ಕಂಪನಿಗೆ ತಕ್ಷಣದ ಹಣಕಾಸಿನ ಪ್ರಯೋಜನಗಳಿಗೆ ಕಾರಣವಾಗದಿದ್ದರೂ, ಉದ್ಯೋಗಿಗಳು ಮತ್ತು ಪಾಲುದಾರರಂತಹ ಪ್ರಮುಖ ಪಾಲುದಾರರೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಅವು ಖಂಡಿತವಾಗಿಯೂ ಕಂಪನಿಗೆ ಒಳ್ಳೆಯ ಹೆಸರು ತಂದುಕೊಡುವುದರ ಜೊತೆಗೆ ತನ್ನ ನೌಕರರು ಮತ್ತು ಗುತ್ತಿಗೆದಾರರಲ್ಲಿ ಮಾತ್ರವಲ್ಲದೇ ಗ್ರಾಹಕರಲ್ಲಿಯೂ ಸಹ ನಂಬಿಕೆಯನ್ನು ಹುಟ್ಟಿಸುತ್ತದೆ.

ಒಟ್ಟಿನಲ್ಲಿ ಕಂಪನಿ ನಷ್ಟದಲ್ಲಿದೆ ಎಂದು ಹಲವಾರು ಉದ್ಯಮಿಗಳು ತನ್ನ ಉದ್ಯೋಗಿಗಳನ್ನು ಕ್ಷಣಮಾತ್ರದಲ್ಲಿ ಕಿತ್ತೊಗೆಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರವು ಅವರ ಪರ ನಿಲ್ಲಬೇಕು. ಇದಕ್ಕೆ ಏಷ್ಯನ್‌ ಪೇಂಟ್ಸ್‌ ಉತ್ತಮ ಮಾದರಿಯಾಗಿದೆ.


ಇದನ್ನೂ ಓದಿ: ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಏಶಿಯನ್ ಪೆಯಿಂಟ್ಸ್ ಮಾಲೀಕರಿಗೊಂದು ಸಲಾಂ. ಇವರ ನೀತಿ ಅನುಕರಣೆಗೆ ಅರ್ಹವಾಗಿದೆ.

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...