Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

ಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಮತ್ತುಷ್ಟು ಪಾತಾಳಕ್ಕೆ ತಳ್ಳಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಲಕ್ಷಾಂತರ ಕಂಪನಿಗಳು ತನ್ನ ನೌಕರರನ್ನು ಕೆಲಸದಿಂದ ಕಿತ್ತೆಸೆದಿವೆ. ಇನ್ನಷ್ಟು ಕಂಪನಿಗಳು ಸಂಬಳ ನಿಲ್ಲಿಸಿವೆ ಅಥವಾ ಸಂಬಳ ಕಡಿತ ಮಾಡಿವೆ. ಆದರೆ ಏಷ್ಯನ್‌ ಪೇಂಟ್ಸ್‌ ಕಂಪನಿ ಮಾತ್ರ ಕಷ್ಟಕರ ಸಂದರ್ಭದಲ್ಲಿಯೂ ತನ್ನ ನೌಕರರ ಸಂಬಳ ಹೆಚ್ಚಿಸಿ ಅವರಿಗೆ ಮನೋಸ್ಥೈರ್ಯ ತುಂಬುವ ಮಾದರಿ ಕೆಲಸ ಮಾಡಿದೆ.

ಭಾರತದ ದೊಡ್ಡ ಮತ್ತು ಬ್ರಾಂಡ್‌ ಕಂಪನಿಯಾದ ಏಷ್ಯನ್‌ ಪೇಂಟ್ಸ್‌ ಪ್ರವಾಹದ ವಿರುದ್ಧ ಈಜಲು ಹೊರಟಿದೆ. ಕೆಲಸ ಕಳೆದುಕೊಂಡು ಭವಿಷ್ಯದ ಬಗ್ಗೆ ಚಿಂತಿತರಾಗಿರುವ ಕೋಟ್ಯಾಂತರ ನೌಕರರ ನಡುವೆ ಅದು ತನ್ನ ನೌಕರರಿಗೆ ನಾನಿದ್ದೇನೆ ಭಯಪಡಬೇಡಿ ಎಂಬ ಭರವಸೆ ನೀಡಿದೆ.

ಕಂಪನಿಯ ತನ್ನ ಎಲ್ಲಾ ನೌಕರರ ವಾರ್ಷಿಕ ಸಂಬಳವನ್ನು ಹೆಚ್ಚಿಸಿದೆ. ಎಲ್ಲರಿಗು ಉಚಿತ ವೈದ್ಯಕೀಯ ವಿಮೆ ಮಾಡಿಸಲು ಮುಂದಾಗಿದೆ. ತನ್ನ ಅಂಗಡಿಗಳ ನೈರ್ಮಲ್ಯೀಕರಣ ಜವಾಬ್ದಾರಿ ಹೊತ್ತಿದೆ. ಈಗಾಗಲೇ ತನ್ನ ಗುತ್ತಿಗೆದಾರರ ಖಾತೆಗೆ 40 ಕೋಟಿ ರೂಗಳನ್ನು ವರ್ಗಾಹಿಸಿದೆ. ಅಲ್ಲದೇ ಕಂಪನಿಯಿಂದ ಪಾವತಿಗಳಿಗೆ 45 ದಿನಗಳ ವಿಸ್ತರಣೆ ಮತ್ತು 45 ದಿನಗಳಲ್ಲಿ ಪಾವತಿ ಮಾಡಿದರೆ 2 ಪ್ರತಿಶತ ರಿಯಾಯಿತಿಯನ್ನು ಘೋಷಿಸಿದೆ.

ನಮ್ಮದು ಉತ್ತಮ ನಾಯಕತ್ವ ಹೊಂದಿರುವ ಮತ್ತು ನಮ್ಮ ಎಲ್ಲಾ ಪಾಲುದಾರರನ್ನು ನೋಡಿಕೊಳ್ಳುವ ಮಾದರಿ ಸಂಸ್ಥೆಯಾಗಿರಬೇಕು. ಇಂತಹ ಎಲ್ಲಾ ಉಪಕ್ರಮಗಳ ಬಗ್ಗೆ ನಾನು ನಿಯಮಿತವಾಗಿ ಮಂಡಳಿಯೊಂದಿಗೆ ಚರ್ಚಿಸಿ ಅವರ ಅನುಮೋದನೆಯನ್ನು ಪಡೆದುಕೊಂಡಿದ್ದೇನೆ. “ನಮ್ಮ ಪ್ರತಿಯೊಬ್ಬ ಉದ್ಯೋಗಿಯೊಂದಿಗೆ ಹೆಜ್ಜೆ ಹಾಕಲು, ಸಂವಹನ ನಡೆಸಲು ಮತ್ತು ಅನಿಶ್ಚಿತ ಮಾರುಕಟ್ಟೆಯಲ್ಲಿ ಅವರ ಕಳವಳಗಳನ್ನು ಹೋಗಲಾಡಿಸಲು ಇದು ಒಂದು ದೊಡ್ಡ ಅವಕಾಶವೆಂದು ನಾನು ನೋಡುತ್ತೇನೆ. ಪ್ರಬುದ್ಧ ಬ್ರಾಂಡ್ ಆಗಿ ಕೆಲಸಕ್ಕೆ ತೆಗೆದುಕೊಳ್ಳುವ/ಕೈಬಿಡುವುದು (Hire and Fire) ಏಷ್ಯನ್ ಪೇಂಟ್ಸ್ ಸಂಸ್ಕೃತಿಯಲ್ಲ. ಬದಲಿಗೆ ಉದ್ಯೋಗಿಗಳಿಗೆ ಭರವಸೆ ನೀಡಿದ್ದೇವೆ” ಎಂದು ಕಂಪನಿಯ ಸಿಇಒ ಅಮಿತ್ ಸಿಂಗಲ್ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟು ಮಾತ್ರವಲ್ಲದೇ ಕಂಪನಿಯೂ ಕೋವಿಡ್‌ ಪರಿಹಾರ ನಿಧಿಗೆ (ಮಹಾರಾಷ್ಟ್ರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ) 35 ಕೋಟಿ ರೂಗಳ ದೇಣಿಗೆ ನೀಡಿದೆ. ಹ್ಯಾಂಡ್‌ ಸ್ಯಾನಿಟೈಸರ್‌ ತಯಾರಿಸಿ ವಿತರಿಸಿದೆ.

ಏಷ್ಯನ್‌ ಪೇಂಟ್ಸ್‌ ಕಂಪನಿಯ ಮೊದಲ ತ್ರೈಮಾಸಿಕದ ಸಮಯದಲ್ಲಿ ಯಾವುದೇ ಲಾಭ ದೊರೆಯುವುದಿಲ್ಲ ಎಂದು ಕಂಪನಿಗೆ ನಿಚ್ಚಳವಾಗಿ ತಿಳಿದಿದೆ. ಆದರು ಅದು ತತ್‌ಕ್ಷಣದ ಲಾಭ ನಷ್ಟದ ಬಗ್ಗೆ ಯೋಚಿಸದೇ ದೂರಗಾಮಿ ಪರಿಣಾಮಗಳ ಬಗ್ಗೆ ಚಿಂತಿಸುತ್ತಿದೆ.

ಈ ಹಂತಗಳು ಕಂಪನಿಗೆ ತಕ್ಷಣದ ಹಣಕಾಸಿನ ಪ್ರಯೋಜನಗಳಿಗೆ ಕಾರಣವಾಗದಿದ್ದರೂ, ಉದ್ಯೋಗಿಗಳು ಮತ್ತು ಪಾಲುದಾರರಂತಹ ಪ್ರಮುಖ ಪಾಲುದಾರರೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಅವು ಖಂಡಿತವಾಗಿಯೂ ಕಂಪನಿಗೆ ಒಳ್ಳೆಯ ಹೆಸರು ತಂದುಕೊಡುವುದರ ಜೊತೆಗೆ ತನ್ನ ನೌಕರರು ಮತ್ತು ಗುತ್ತಿಗೆದಾರರಲ್ಲಿ ಮಾತ್ರವಲ್ಲದೇ ಗ್ರಾಹಕರಲ್ಲಿಯೂ ಸಹ ನಂಬಿಕೆಯನ್ನು ಹುಟ್ಟಿಸುತ್ತದೆ.

ಒಟ್ಟಿನಲ್ಲಿ ಕಂಪನಿ ನಷ್ಟದಲ್ಲಿದೆ ಎಂದು ಹಲವಾರು ಉದ್ಯಮಿಗಳು ತನ್ನ ಉದ್ಯೋಗಿಗಳನ್ನು ಕ್ಷಣಮಾತ್ರದಲ್ಲಿ ಕಿತ್ತೊಗೆಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರವು ಅವರ ಪರ ನಿಲ್ಲಬೇಕು. ಇದಕ್ಕೆ ಏಷ್ಯನ್‌ ಪೇಂಟ್ಸ್‌ ಉತ್ತಮ ಮಾದರಿಯಾಗಿದೆ.


ಇದನ್ನೂ ಓದಿ: ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಏಶಿಯನ್ ಪೆಯಿಂಟ್ಸ್ ಮಾಲೀಕರಿಗೊಂದು ಸಲಾಂ. ಇವರ ನೀತಿ ಅನುಕರಣೆಗೆ ಅರ್ಹವಾಗಿದೆ.

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...