Homeಸಿನಿಮಾಕ್ರೀಡೆಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಜರ್ಮನಿ ಮಣಿಸಿದ ಜಪಾನ್, ಅರ್ಜೆಂಟೀನಾ ಮಣಿಸಿದ ಸೌದಿ - ಮುಂದೇನು?

- Advertisement -
- Advertisement -

ಬಹುನಿರೀಕ್ಷಿತ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿ ಕತಾರ್‌ನಲ್ಲಿ ಆರಂಭಗೊಂಡಿದೆ. ಈ ಬಾರಿ ಏಷ್ಯಾ ದೇಶಗಳು ಲೀಗ್ ಹಂತದಲ್ಲಿ ಗೆಲುವಿನ ಖಾತೆ ತೆರೆಯುವ ಮೂಲಕ ಸಾಧನೆಗೈದಿವೆ. ಸೌದಿ ಅರೇಬಿಯಾ ದೇಶವು (2-1) ಎರಡು ಬಾರಿ ವಿಶ್ವಕಪ್ ಗೆದ್ದಿರುವ ಅರ್ಜೆಂಟೀನಾ ತಂಡವನ್ನು ಮಣಿಸಿದರೆ, ಜಪಾನ್ ದೇಶವು (2-1) ನಾಲ್ಕು ಬಾರಿ ಚಾಂಪಿಯನ್ ಜರ್ಮಿನಿಯನ್ನು ಸೋಲಿಸಿ ಸಂಭ್ರಮಿಸಿದೆ. ಆದರೆ ಫೈನಲ್‌ವರೆಗೆ ಸಾಗಬೇಕಾದ ದಾರಿ ಬಹಳ ದೂರವಿದೆ. ಹಾಗಾಗಿ ವಿಶ್ವಕಪ್ ಪುಟ್ಬಾಲ್ ಟೂರ್ನಿಯ ವಿವಿಧ ಹಂತಗಳ ಬಗ್ಗೆ ತಿಳಿಯೋಣ.

ಪ್ರಶಸ್ತಿಗಾಗಿ ಸೆಣಸಲಿರುವ 32 ದೇಶಗಳು

ವಿಶ್ವದಾದ್ಯಂತ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಪುಟ್ಬಾಲ್ ಕ್ರೀಡೆಯಲ್ಲಿ ವಿಶ್ವಕಪ್ ಅತಿ ದೊಡ್ಡ ಟೂರ್ನಿಯಾಗಿದೆ. ಹಲವು ದೇಶಗಳು ಈ ಟೂರ್ನಿಯಲ್ಲಿ ಆಡಲು ಬಯಸಿದರೂ ಅಂತಿಮ ಸುತ್ತಿಗೆ ಕೇವಲ 32 ದೇಶಗಳಿಗೆ ಮಾತ್ರ ಅವಕಾಶವಿರುತ್ತದೆ. ಅದಕ್ಕೂ ಮೊದಲು ಮೂರು ವರ್ಷಗಳ ಕಾಲ ವಿಶ್ವದ ಎಲ್ಲಾ ಭಾಗಗಳ ಅರ್ಹತಾ ಸುತ್ತಿನ  ಪಂದ್ಯಗಳಲ್ಲಿ ಗೆದ್ದು ಅರ್ಹತೆ ಪಡೆದವರನ್ನು ಮಾತ್ರ ಅಂತಿಮ ಸುತ್ತಿನಲ್ಲಿ ಆಡಿಸಲಾಗುತ್ತದೆ. ಆತಿಥ್ಯ ವಹಿಸುವ ದೇಶಗಳು ಸಹಜವಾಗಿ ಅರ್ಹತೆ ಪಡೆಯುತ್ತವೆ.

ಲೀಗ್ ಹಂತ

ಅಧಿಕೃತ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಲೀಗ್ ಹಂತದಲ್ಲಿ 32 ತಂಡಗಳನ್ನು ತಲಾ ನಾಲ್ಕು ತಂಡಗಳಂತೆ 8 (ಎ ಯಿಂದ ಹೆಚ್ ವರೆಗೆ) ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿದ್ದು ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಕ್ಕೂ ಮೂರು ಪಂದ್ಯಗಳನ್ನು ಆಡುವ ಅವಕಾಶವಿರುತ್ತದೆ. ಈ ಹಂತದಲ್ಲಿ ಪ್ರತಿ ಗೆಲುವಿಗೆ 3 ಅಂಕ, ಡ್ರಾ ಆದರೆ ಎರಡು ತಂಡಕ್ಕೆ ತಲಾ ಒಂದು ಅಂಕ ಮತ್ತು ಸೋಲಿಗೆ 0 ಅಂಕ ಇರುತ್ತದೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಪಡೆದ ಎರಡು ತಂಡಗಳನ್ನು ಮುಂದಿನ ನಾಕೌಟ್ ಹಂತಕ್ಕೆ (16ರ ಹಂತ) ಅರ್ಹತೆ ಪಡೆಯುತ್ತವೆ. ಪ್ರತಿ ಗುಂಪಿನಿಂದ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಲಾ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಒಂದು ವೇಳೆ ಯಾವುದೇ ಗುಂಪಿನ ಅಂಕ ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದ ತಂಡಗಳು ಸಮಾನ ಅಂಕ ಪಡೆದರೆ (ಡ್ರಾ ಸಂದರ್ಭಗಳಲ್ಲಿ ಇದರ ಸಾಧ್ಯತೆ ಹೆಚ್ಚು) ಗುಂಪು ಹಂತದಲ್ಲಿ ತಂಡಗಳ ಗೆಲುವಿನ ಗೋಲಿನ ಅಂತರ ಅಥವಾ ಅತಿ ಹೆಚ್ಚು ಗೋಲು ಗಳಿಸಿದ ತಂಡ ಅಥವಾ ಆ ಎರಡು ತಂಡಗಳ ನಡುವಿನ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆದ್ದಿರುವ ತಂಡ 16ರ ಹಂತಕ್ಕೆ ಅರ್ಹತೆ ಗಿಟ್ಟಿಸುತ್ತದೆ.

ನಾಕೌಟ್ (16ರ ಹಂತ)

16ರ ಹಂತದಲ್ಲಿ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. ಒಂದು ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತೊಂದು ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಸ್ಪರ್ಧಿಸುತ್ತದೆ. ಗೆದ್ದವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಪಂದ್ಯ ಡ್ರಾ ಆದರೆ ವಿಜೇತ ತಂಡವನ್ನು ಗುರುತಿಸಲು ಹೆಚ್ಚಿನ ಸಮಯ ನೀಡಲಾಗುತ್ತದೆ ಅಥವಾ ಪೆನಾಲ್ಟಿ ಶೂಟೌಟ್ ನಡೆಸಲಾಗುತ್ತದೆ. ಹೀಗೆ 4 ಗುಂಪಿನಿಂದ 8 ತಂಡಗಳು ಕ್ವಾರ್ಟರ್ ಫೈನಲ್ ತಲುಪುತ್ತವೆ.

ಕ್ವಾರ್ಟರ್ ಫೈನಲ್

ಇಲ್ಲಿಯೂ ಸಹ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. 8 ತಂಡಗಳಿಗೆ ನಾಲ್ಕು ಪಂದ್ಯಗಳು ನಡೆದು ಗೆದ್ದವರು ಸೆಮಿಫೈನಲ್ ತಲುಪುತ್ತಾರೆ. ಸೋತ ತಂಡ ಹೊರನಡೆಯುತ್ತದೆ.

ಸೆಮಿಫೈನಲ್

ನಾಲ್ಕು ತಂಡಗಳ ಎರಡು ಸೆಮಿಫೈನಲ್ ಪಂದ್ಯಗಳು ನಡೆಯುತ್ತವೆ. ಗೆದ್ದ ಎರಡು ತಂಡ ನೇರವಾಗಿ ಫೈನಲ್ ಪ್ರವೇಶ ಪಡೆಯುತ್ತವೆ. ಸೋತ ತಂಡಗಳ ನಡುವೆ ಮೂರನೇ ಸ್ಥಾನಕ್ಕಾಗಿ ಒಂದು ಪಂದ್ಯ ನಡೆಯುತ್ತದೆ.

ಫೈನಲ್

ಅಂತಿಮವಾಗಿ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತದೆ. ಪ್ರಸ್ತುತ ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಡಿಸೆಂಬರ್ 18 ರಂದು ನಡೆಯಲಿದೆ.

ಇದುವರೆಗೂ ನಡೆದ 21 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಬ್ರೆಜಿಲ್ ದೇಶವು ಎಲ್ಲಾ ವಿಶ್ವಕಪ್‌ಗಳಲ್ಲಿಯೂ ಅರ್ಹತೆ ಪಡೆದು ಆಡಿದೆ. ಅಲ್ಲದೆ 5 ಬಾರಿ ಚಾಂಪಿಯನ್ ಆಗುವ ಮೂಲಕ ದಾಖಲೆ ನಿರ್ಮಿಸಿದೆ. ಉಳಿದಂತೆ ಜರ್ಮನಿ ಮತ್ತು ಇಟಲಿ ತಂಡಗಳು ತಲಾ ನಾಲ್ಕು ಬಾರಿ ಚಾಂಪಿಯನ್ ಆಗಿವೆ. ಹಾಲಿ ಚಾಂಪಿಯನ್ ಫ್ರಾನ್ಸ್, ಅರ್ಜೆಂಟೀನಾ ಮತ್ತು ಉರುಗ್ವೆ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಇಂಗ್ಲೆಂಡ್ ಮತ್ತು ಸ್ಪೇನ್ ತಲಾ ಒಮ್ಮೆ ಟ್ರೋಫಿ ಎತ್ತಿ ಹಿಡಿದಿವೆ.

ಇದನ್ನೂ ಓದಿ: ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...