Homeಸಿನಿಮಾಕ್ರೀಡೆಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಜರ್ಮನಿ ಮಣಿಸಿದ ಜಪಾನ್, ಅರ್ಜೆಂಟೀನಾ ಮಣಿಸಿದ ಸೌದಿ - ಮುಂದೇನು?

- Advertisement -
- Advertisement -

ಬಹುನಿರೀಕ್ಷಿತ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿ ಕತಾರ್‌ನಲ್ಲಿ ಆರಂಭಗೊಂಡಿದೆ. ಈ ಬಾರಿ ಏಷ್ಯಾ ದೇಶಗಳು ಲೀಗ್ ಹಂತದಲ್ಲಿ ಗೆಲುವಿನ ಖಾತೆ ತೆರೆಯುವ ಮೂಲಕ ಸಾಧನೆಗೈದಿವೆ. ಸೌದಿ ಅರೇಬಿಯಾ ದೇಶವು (2-1) ಎರಡು ಬಾರಿ ವಿಶ್ವಕಪ್ ಗೆದ್ದಿರುವ ಅರ್ಜೆಂಟೀನಾ ತಂಡವನ್ನು ಮಣಿಸಿದರೆ, ಜಪಾನ್ ದೇಶವು (2-1) ನಾಲ್ಕು ಬಾರಿ ಚಾಂಪಿಯನ್ ಜರ್ಮಿನಿಯನ್ನು ಸೋಲಿಸಿ ಸಂಭ್ರಮಿಸಿದೆ. ಆದರೆ ಫೈನಲ್‌ವರೆಗೆ ಸಾಗಬೇಕಾದ ದಾರಿ ಬಹಳ ದೂರವಿದೆ. ಹಾಗಾಗಿ ವಿಶ್ವಕಪ್ ಪುಟ್ಬಾಲ್ ಟೂರ್ನಿಯ ವಿವಿಧ ಹಂತಗಳ ಬಗ್ಗೆ ತಿಳಿಯೋಣ.

ಪ್ರಶಸ್ತಿಗಾಗಿ ಸೆಣಸಲಿರುವ 32 ದೇಶಗಳು

ವಿಶ್ವದಾದ್ಯಂತ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಪುಟ್ಬಾಲ್ ಕ್ರೀಡೆಯಲ್ಲಿ ವಿಶ್ವಕಪ್ ಅತಿ ದೊಡ್ಡ ಟೂರ್ನಿಯಾಗಿದೆ. ಹಲವು ದೇಶಗಳು ಈ ಟೂರ್ನಿಯಲ್ಲಿ ಆಡಲು ಬಯಸಿದರೂ ಅಂತಿಮ ಸುತ್ತಿಗೆ ಕೇವಲ 32 ದೇಶಗಳಿಗೆ ಮಾತ್ರ ಅವಕಾಶವಿರುತ್ತದೆ. ಅದಕ್ಕೂ ಮೊದಲು ಮೂರು ವರ್ಷಗಳ ಕಾಲ ವಿಶ್ವದ ಎಲ್ಲಾ ಭಾಗಗಳ ಅರ್ಹತಾ ಸುತ್ತಿನ  ಪಂದ್ಯಗಳಲ್ಲಿ ಗೆದ್ದು ಅರ್ಹತೆ ಪಡೆದವರನ್ನು ಮಾತ್ರ ಅಂತಿಮ ಸುತ್ತಿನಲ್ಲಿ ಆಡಿಸಲಾಗುತ್ತದೆ. ಆತಿಥ್ಯ ವಹಿಸುವ ದೇಶಗಳು ಸಹಜವಾಗಿ ಅರ್ಹತೆ ಪಡೆಯುತ್ತವೆ.

ಲೀಗ್ ಹಂತ

ಅಧಿಕೃತ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಲೀಗ್ ಹಂತದಲ್ಲಿ 32 ತಂಡಗಳನ್ನು ತಲಾ ನಾಲ್ಕು ತಂಡಗಳಂತೆ 8 (ಎ ಯಿಂದ ಹೆಚ್ ವರೆಗೆ) ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿದ್ದು ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಕ್ಕೂ ಮೂರು ಪಂದ್ಯಗಳನ್ನು ಆಡುವ ಅವಕಾಶವಿರುತ್ತದೆ. ಈ ಹಂತದಲ್ಲಿ ಪ್ರತಿ ಗೆಲುವಿಗೆ 3 ಅಂಕ, ಡ್ರಾ ಆದರೆ ಎರಡು ತಂಡಕ್ಕೆ ತಲಾ ಒಂದು ಅಂಕ ಮತ್ತು ಸೋಲಿಗೆ 0 ಅಂಕ ಇರುತ್ತದೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಪಡೆದ ಎರಡು ತಂಡಗಳನ್ನು ಮುಂದಿನ ನಾಕೌಟ್ ಹಂತಕ್ಕೆ (16ರ ಹಂತ) ಅರ್ಹತೆ ಪಡೆಯುತ್ತವೆ. ಪ್ರತಿ ಗುಂಪಿನಿಂದ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಲಾ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಒಂದು ವೇಳೆ ಯಾವುದೇ ಗುಂಪಿನ ಅಂಕ ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದ ತಂಡಗಳು ಸಮಾನ ಅಂಕ ಪಡೆದರೆ (ಡ್ರಾ ಸಂದರ್ಭಗಳಲ್ಲಿ ಇದರ ಸಾಧ್ಯತೆ ಹೆಚ್ಚು) ಗುಂಪು ಹಂತದಲ್ಲಿ ತಂಡಗಳ ಗೆಲುವಿನ ಗೋಲಿನ ಅಂತರ ಅಥವಾ ಅತಿ ಹೆಚ್ಚು ಗೋಲು ಗಳಿಸಿದ ತಂಡ ಅಥವಾ ಆ ಎರಡು ತಂಡಗಳ ನಡುವಿನ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆದ್ದಿರುವ ತಂಡ 16ರ ಹಂತಕ್ಕೆ ಅರ್ಹತೆ ಗಿಟ್ಟಿಸುತ್ತದೆ.

ನಾಕೌಟ್ (16ರ ಹಂತ)

16ರ ಹಂತದಲ್ಲಿ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. ಒಂದು ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತೊಂದು ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಸ್ಪರ್ಧಿಸುತ್ತದೆ. ಗೆದ್ದವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಪಂದ್ಯ ಡ್ರಾ ಆದರೆ ವಿಜೇತ ತಂಡವನ್ನು ಗುರುತಿಸಲು ಹೆಚ್ಚಿನ ಸಮಯ ನೀಡಲಾಗುತ್ತದೆ ಅಥವಾ ಪೆನಾಲ್ಟಿ ಶೂಟೌಟ್ ನಡೆಸಲಾಗುತ್ತದೆ. ಹೀಗೆ 4 ಗುಂಪಿನಿಂದ 8 ತಂಡಗಳು ಕ್ವಾರ್ಟರ್ ಫೈನಲ್ ತಲುಪುತ್ತವೆ.

ಕ್ವಾರ್ಟರ್ ಫೈನಲ್

ಇಲ್ಲಿಯೂ ಸಹ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. 8 ತಂಡಗಳಿಗೆ ನಾಲ್ಕು ಪಂದ್ಯಗಳು ನಡೆದು ಗೆದ್ದವರು ಸೆಮಿಫೈನಲ್ ತಲುಪುತ್ತಾರೆ. ಸೋತ ತಂಡ ಹೊರನಡೆಯುತ್ತದೆ.

ಸೆಮಿಫೈನಲ್

ನಾಲ್ಕು ತಂಡಗಳ ಎರಡು ಸೆಮಿಫೈನಲ್ ಪಂದ್ಯಗಳು ನಡೆಯುತ್ತವೆ. ಗೆದ್ದ ಎರಡು ತಂಡ ನೇರವಾಗಿ ಫೈನಲ್ ಪ್ರವೇಶ ಪಡೆಯುತ್ತವೆ. ಸೋತ ತಂಡಗಳ ನಡುವೆ ಮೂರನೇ ಸ್ಥಾನಕ್ಕಾಗಿ ಒಂದು ಪಂದ್ಯ ನಡೆಯುತ್ತದೆ.

ಫೈನಲ್

ಅಂತಿಮವಾಗಿ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತದೆ. ಪ್ರಸ್ತುತ ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಡಿಸೆಂಬರ್ 18 ರಂದು ನಡೆಯಲಿದೆ.

ಇದುವರೆಗೂ ನಡೆದ 21 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಬ್ರೆಜಿಲ್ ದೇಶವು ಎಲ್ಲಾ ವಿಶ್ವಕಪ್‌ಗಳಲ್ಲಿಯೂ ಅರ್ಹತೆ ಪಡೆದು ಆಡಿದೆ. ಅಲ್ಲದೆ 5 ಬಾರಿ ಚಾಂಪಿಯನ್ ಆಗುವ ಮೂಲಕ ದಾಖಲೆ ನಿರ್ಮಿಸಿದೆ. ಉಳಿದಂತೆ ಜರ್ಮನಿ ಮತ್ತು ಇಟಲಿ ತಂಡಗಳು ತಲಾ ನಾಲ್ಕು ಬಾರಿ ಚಾಂಪಿಯನ್ ಆಗಿವೆ. ಹಾಲಿ ಚಾಂಪಿಯನ್ ಫ್ರಾನ್ಸ್, ಅರ್ಜೆಂಟೀನಾ ಮತ್ತು ಉರುಗ್ವೆ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಇಂಗ್ಲೆಂಡ್ ಮತ್ತು ಸ್ಪೇನ್ ತಲಾ ಒಮ್ಮೆ ಟ್ರೋಫಿ ಎತ್ತಿ ಹಿಡಿದಿವೆ.

ಇದನ್ನೂ ಓದಿ: ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...