Homeಸಿನಿಮಾಕ್ರೀಡೆಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಜರ್ಮನಿ ಮಣಿಸಿದ ಜಪಾನ್, ಅರ್ಜೆಂಟೀನಾ ಮಣಿಸಿದ ಸೌದಿ - ಮುಂದೇನು?

- Advertisement -
- Advertisement -

ಬಹುನಿರೀಕ್ಷಿತ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿ ಕತಾರ್‌ನಲ್ಲಿ ಆರಂಭಗೊಂಡಿದೆ. ಈ ಬಾರಿ ಏಷ್ಯಾ ದೇಶಗಳು ಲೀಗ್ ಹಂತದಲ್ಲಿ ಗೆಲುವಿನ ಖಾತೆ ತೆರೆಯುವ ಮೂಲಕ ಸಾಧನೆಗೈದಿವೆ. ಸೌದಿ ಅರೇಬಿಯಾ ದೇಶವು (2-1) ಎರಡು ಬಾರಿ ವಿಶ್ವಕಪ್ ಗೆದ್ದಿರುವ ಅರ್ಜೆಂಟೀನಾ ತಂಡವನ್ನು ಮಣಿಸಿದರೆ, ಜಪಾನ್ ದೇಶವು (2-1) ನಾಲ್ಕು ಬಾರಿ ಚಾಂಪಿಯನ್ ಜರ್ಮಿನಿಯನ್ನು ಸೋಲಿಸಿ ಸಂಭ್ರಮಿಸಿದೆ. ಆದರೆ ಫೈನಲ್‌ವರೆಗೆ ಸಾಗಬೇಕಾದ ದಾರಿ ಬಹಳ ದೂರವಿದೆ. ಹಾಗಾಗಿ ವಿಶ್ವಕಪ್ ಪುಟ್ಬಾಲ್ ಟೂರ್ನಿಯ ವಿವಿಧ ಹಂತಗಳ ಬಗ್ಗೆ ತಿಳಿಯೋಣ.

ಪ್ರಶಸ್ತಿಗಾಗಿ ಸೆಣಸಲಿರುವ 32 ದೇಶಗಳು

ವಿಶ್ವದಾದ್ಯಂತ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಪುಟ್ಬಾಲ್ ಕ್ರೀಡೆಯಲ್ಲಿ ವಿಶ್ವಕಪ್ ಅತಿ ದೊಡ್ಡ ಟೂರ್ನಿಯಾಗಿದೆ. ಹಲವು ದೇಶಗಳು ಈ ಟೂರ್ನಿಯಲ್ಲಿ ಆಡಲು ಬಯಸಿದರೂ ಅಂತಿಮ ಸುತ್ತಿಗೆ ಕೇವಲ 32 ದೇಶಗಳಿಗೆ ಮಾತ್ರ ಅವಕಾಶವಿರುತ್ತದೆ. ಅದಕ್ಕೂ ಮೊದಲು ಮೂರು ವರ್ಷಗಳ ಕಾಲ ವಿಶ್ವದ ಎಲ್ಲಾ ಭಾಗಗಳ ಅರ್ಹತಾ ಸುತ್ತಿನ  ಪಂದ್ಯಗಳಲ್ಲಿ ಗೆದ್ದು ಅರ್ಹತೆ ಪಡೆದವರನ್ನು ಮಾತ್ರ ಅಂತಿಮ ಸುತ್ತಿನಲ್ಲಿ ಆಡಿಸಲಾಗುತ್ತದೆ. ಆತಿಥ್ಯ ವಹಿಸುವ ದೇಶಗಳು ಸಹಜವಾಗಿ ಅರ್ಹತೆ ಪಡೆಯುತ್ತವೆ.

ಲೀಗ್ ಹಂತ

ಅಧಿಕೃತ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಲೀಗ್ ಹಂತದಲ್ಲಿ 32 ತಂಡಗಳನ್ನು ತಲಾ ನಾಲ್ಕು ತಂಡಗಳಂತೆ 8 (ಎ ಯಿಂದ ಹೆಚ್ ವರೆಗೆ) ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿದ್ದು ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಕ್ಕೂ ಮೂರು ಪಂದ್ಯಗಳನ್ನು ಆಡುವ ಅವಕಾಶವಿರುತ್ತದೆ. ಈ ಹಂತದಲ್ಲಿ ಪ್ರತಿ ಗೆಲುವಿಗೆ 3 ಅಂಕ, ಡ್ರಾ ಆದರೆ ಎರಡು ತಂಡಕ್ಕೆ ತಲಾ ಒಂದು ಅಂಕ ಮತ್ತು ಸೋಲಿಗೆ 0 ಅಂಕ ಇರುತ್ತದೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಪಡೆದ ಎರಡು ತಂಡಗಳನ್ನು ಮುಂದಿನ ನಾಕೌಟ್ ಹಂತಕ್ಕೆ (16ರ ಹಂತ) ಅರ್ಹತೆ ಪಡೆಯುತ್ತವೆ. ಪ್ರತಿ ಗುಂಪಿನಿಂದ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಲಾ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಒಂದು ವೇಳೆ ಯಾವುದೇ ಗುಂಪಿನ ಅಂಕ ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದ ತಂಡಗಳು ಸಮಾನ ಅಂಕ ಪಡೆದರೆ (ಡ್ರಾ ಸಂದರ್ಭಗಳಲ್ಲಿ ಇದರ ಸಾಧ್ಯತೆ ಹೆಚ್ಚು) ಗುಂಪು ಹಂತದಲ್ಲಿ ತಂಡಗಳ ಗೆಲುವಿನ ಗೋಲಿನ ಅಂತರ ಅಥವಾ ಅತಿ ಹೆಚ್ಚು ಗೋಲು ಗಳಿಸಿದ ತಂಡ ಅಥವಾ ಆ ಎರಡು ತಂಡಗಳ ನಡುವಿನ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆದ್ದಿರುವ ತಂಡ 16ರ ಹಂತಕ್ಕೆ ಅರ್ಹತೆ ಗಿಟ್ಟಿಸುತ್ತದೆ.

ನಾಕೌಟ್ (16ರ ಹಂತ)

16ರ ಹಂತದಲ್ಲಿ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. ಒಂದು ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತೊಂದು ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಸ್ಪರ್ಧಿಸುತ್ತದೆ. ಗೆದ್ದವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಪಂದ್ಯ ಡ್ರಾ ಆದರೆ ವಿಜೇತ ತಂಡವನ್ನು ಗುರುತಿಸಲು ಹೆಚ್ಚಿನ ಸಮಯ ನೀಡಲಾಗುತ್ತದೆ ಅಥವಾ ಪೆನಾಲ್ಟಿ ಶೂಟೌಟ್ ನಡೆಸಲಾಗುತ್ತದೆ. ಹೀಗೆ 4 ಗುಂಪಿನಿಂದ 8 ತಂಡಗಳು ಕ್ವಾರ್ಟರ್ ಫೈನಲ್ ತಲುಪುತ್ತವೆ.

ಕ್ವಾರ್ಟರ್ ಫೈನಲ್

ಇಲ್ಲಿಯೂ ಸಹ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. 8 ತಂಡಗಳಿಗೆ ನಾಲ್ಕು ಪಂದ್ಯಗಳು ನಡೆದು ಗೆದ್ದವರು ಸೆಮಿಫೈನಲ್ ತಲುಪುತ್ತಾರೆ. ಸೋತ ತಂಡ ಹೊರನಡೆಯುತ್ತದೆ.

ಸೆಮಿಫೈನಲ್

ನಾಲ್ಕು ತಂಡಗಳ ಎರಡು ಸೆಮಿಫೈನಲ್ ಪಂದ್ಯಗಳು ನಡೆಯುತ್ತವೆ. ಗೆದ್ದ ಎರಡು ತಂಡ ನೇರವಾಗಿ ಫೈನಲ್ ಪ್ರವೇಶ ಪಡೆಯುತ್ತವೆ. ಸೋತ ತಂಡಗಳ ನಡುವೆ ಮೂರನೇ ಸ್ಥಾನಕ್ಕಾಗಿ ಒಂದು ಪಂದ್ಯ ನಡೆಯುತ್ತದೆ.

ಫೈನಲ್

ಅಂತಿಮವಾಗಿ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತದೆ. ಪ್ರಸ್ತುತ ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಡಿಸೆಂಬರ್ 18 ರಂದು ನಡೆಯಲಿದೆ.

ಇದುವರೆಗೂ ನಡೆದ 21 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಬ್ರೆಜಿಲ್ ದೇಶವು ಎಲ್ಲಾ ವಿಶ್ವಕಪ್‌ಗಳಲ್ಲಿಯೂ ಅರ್ಹತೆ ಪಡೆದು ಆಡಿದೆ. ಅಲ್ಲದೆ 5 ಬಾರಿ ಚಾಂಪಿಯನ್ ಆಗುವ ಮೂಲಕ ದಾಖಲೆ ನಿರ್ಮಿಸಿದೆ. ಉಳಿದಂತೆ ಜರ್ಮನಿ ಮತ್ತು ಇಟಲಿ ತಂಡಗಳು ತಲಾ ನಾಲ್ಕು ಬಾರಿ ಚಾಂಪಿಯನ್ ಆಗಿವೆ. ಹಾಲಿ ಚಾಂಪಿಯನ್ ಫ್ರಾನ್ಸ್, ಅರ್ಜೆಂಟೀನಾ ಮತ್ತು ಉರುಗ್ವೆ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಇಂಗ್ಲೆಂಡ್ ಮತ್ತು ಸ್ಪೇನ್ ತಲಾ ಒಮ್ಮೆ ಟ್ರೋಫಿ ಎತ್ತಿ ಹಿಡಿದಿವೆ.

ಇದನ್ನೂ ಓದಿ: ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...