Homeಮುಖಪುಟ'ಪ್ರತಿದಿನ ಇನ್ಸುಲಿನ್ ಕೇಳುತ್ತಿದ್ದೇನೆ..'; ಜೈಲು ಅಧಿಕಾರಿಗಳಿಗೆ ಅರವಿಂದ್ ಕೇಜ್ರಿವಾಲ್ ಪತ್ರ

‘ಪ್ರತಿದಿನ ಇನ್ಸುಲಿನ್ ಕೇಳುತ್ತಿದ್ದೇನೆ..’; ಜೈಲು ಅಧಿಕಾರಿಗಳಿಗೆ ಅರವಿಂದ್ ಕೇಜ್ರಿವಾಲ್ ಪತ್ರ

- Advertisement -
- Advertisement -

ಮಧುಮೇಹ ರೋಗಿಯಾಗಿರುವ ನನಗೆ ತಿಹಾರ್ ಜೈಲಿನ ಅಧಿಕಾರಿಗಳು 31 ದಿನಗಳ ಕಾಲ ಇನ್ಸುಲಿನ್ ಪೂರೈಕೆಯನ್ನು ತಡೆಹಿಡಿದಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಲಯಕ್ಕೆ ಹೋಗಿದ್ದಾರೆ. “ಅಧಿಕಾರಿಗಳು ಆಡಳಿತಾರೂಢ ಭಾರತೀಯ ಜನತಾ ಪಕ್ಷದಿಂದ ರಾಜಕೀಯ ಒತ್ತಡದಲ್ಲಿ ಸುಳ್ಳು ಹೇಳಿದ್ದಾರೆ” ಎಂದು ಹೇಳಿದ್ದಾರೆ.

ಆಪಾದಿತ ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಅವರನ್ನು ಬಂಧಿಸಿದಾಗಿನಿಂದ ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ, ಜೈಲಿನಲ್ಲಿ ವೈದ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಏರ್ಪಡಿಸಿದ ನಂತರ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್‌ಗೆ ಟಿಪ್ಪಣಿ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಕೇಜ್ರಿವಾಲ್ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ವೈದ್ಯರು ಭರವಸೆ ನೀಡಿದ್ದಾರೆ; ಶಿಫಾರಸು ಮಾಡಲಾದ ಔಷಧಿಗಳನ್ನು ನಿಯಮಿತವಾಗಿ ಮುಂದುವರಿಸಲು ಅವರಿಗೆ ಸಲಹೆ ನೀಡಿದರು” ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದರು.

ಆದರೆ, ಕೇಜ್ರಿವಾಲ್ ಅವರು ಈ ವಿಷಯದಲ್ಲಿ ವಿಭಿನ್ನವಾದ ಅಭಿಪ್ರಾಯವನ್ನು ಹೊಂದಿದ್ದಾರೆ. “ನಾನು ಪತ್ರಿಕೆಯಲ್ಲಿ ತಿಹಾರ್ ಆಡಳಿತದ ಹೇಳಿಕೆಯನ್ನು ಓದಿದ್ದೇನೆ … ಹೇಳಿಕೆಗಳನ್ನು ಓದಿ ಬೇಸರವಾಯಿತು. ತಿಹಾರ್ ಜೈಲಿನ ಎರಡೂ ಹೇಳಿಕೆಗಳು ಸುಳ್ಳು. ನಾನು ಪ್ರತಿದಿನ ಇನ್ಸುಲಿನ್ ಕೇಳುತ್ತಿದ್ದೇನೆ… ನಾನು ಗ್ಲುಕೋಮೀಟರ್ ರೀಡಿಂಗ್‌ಗಳನ್ನು ತೋರಿಸಿದೆ (ದಿನಕ್ಕೆ ಮೂರು ಬಾರಿ) ಮತ್ತು ನನಗೆ ಸಕ್ಕರೆಯ ಮಟ್ಟವು ಹೆಚ್ಚಿದೆ” ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಅವರ ಪ್ರಕಾರ, ಅವರ ದೇಹದಲ್ಲಿ ಸಕ್ಕರೆಯ ಪ್ರಮಾಣವು 250 ಮತ್ತು 320 mg/dl ನಡುವೆ ಇದೆ. “ಬಹುತೇಕ ಪ್ರತಿದಿನ, ನಾನು ಇನ್ಸುಲಿನ್‌ಗೆ ಬೇಡಿಕೆಯಿಟ್ಟಿದ್ದೇನೆ. ಹಾಗಾದರೆ ನಾನು ಇನ್ಸುಲಿನ್ ಸಮಸ್ಯೆಯನ್ನು ಎಂದಿಗೂ ಪ್ರಸ್ತಾಪಿಸದಂತಹ ಹೇಳಿಕೆಯನ್ನು ನೀವು ಹೇಗೆ ನೀಡುತ್ತೀರಿ” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, “ಸಾಮಾನ್ಯ ಉಪವಾಸದ ರಕ್ತದಲ್ಲಿನ ಗ್ಲೂಕೋಸ್ ಸಾಂದ್ರತೆಯ ನಿರೀಕ್ಷಿತ ಮೌಲ್ಯಗಳು 70 ಮತ್ತು 100 mg/dL (ಅಥವಾ ಪ್ರತಿ ಡೆಸಿಲೀಟರ್‌ಗೆ ಮಿಲಿಗ್ರಾಂ) ಇರಬೇಕು. ಏಮ್ಸ್ ವೈದ್ಯರು ಆತಂಕಪಡುವ ಅಗತ್ಯವಿಲ್ಲ ಎಂದು ಎಂದಿಗೂ ಹೇಳಲಿಲ್ಲ … ಅವರು (ವೈದ್ಯಕೀಯ) ಡೇಟಾ ಮತ್ತು (ರೋಗಿಯ) ಇತಿಹಾಸವನ್ನು ನೋಡಿದ ನಂತರ ಪ್ರತಿಕ್ರಿಯಿಸುತ್ತೇವೆ ಎಂದು ಹೇಳಿದರು” ಎಂದು ಅವರು ಬರೆದಿದ್ದಾರೆ.

“ತಿಹಾರ್ ಆಡಳಿತವು ರಾಜಕೀಯ ಒತ್ತಡದಲ್ಲಿ ಸುಳ್ಳು ಹೇಳುತ್ತಿದೆ” ಎಂದು ಅವರು ಜೈಲು ಮುಖ್ಯಸ್ಥರಿಗೆ ಹೇಳಿದ್ದು, ‘ಇದು ರಾಜಕೀಯ ಸೇಡು’ ಎಂದು ಅವರು ಆರೋಪಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಳ್ ಅವರನ್ನು ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ದೆಹಲಿ ಮದ್ಯ ಹಗರಣದ ಪ್ರಕರಣದಲ್ಲಿ ಬಂಧಿಸಿದೆ. ಜೀವರಕ್ಷಕ ಔಷಧವನ್ನು ಪೂರೈಸಲು ನಿರ್ದೇಶನಗಳನ್ನು ನೀಡುವಂತೆ ಕೋರಿ ಅವರು ಕಳೆದ ವಾರ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ; ಲೋಕಸಭಾ ಚುನಾವಣೆ 2024: ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...