Homeರಾಷ್ಟ್ರೀಯವಿವಾಹಿತ ಮಹಿಳೆ ಜೊತೆಗೆ ಮನೆಗೆಲಸ ಮಾಡುವಂತೆ ಕೇಳುವುದು ಕ್ರೌರ್ಯವಲ್ಲ: ಬಾಂಬೆ ಹೈಕೋರ್ಟ್

ವಿವಾಹಿತ ಮಹಿಳೆ ಜೊತೆಗೆ ಮನೆಗೆಲಸ ಮಾಡುವಂತೆ ಕೇಳುವುದು ಕ್ರೌರ್ಯವಲ್ಲ: ಬಾಂಬೆ ಹೈಕೋರ್ಟ್

- Advertisement -
- Advertisement -

ವಿವಾಹಿತ ಮಹಿಳೆಯಗೆ ಕುಟುಂಬಕ್ಕಾಗಿ ಮನೆಕೆಲಸ ಮಾಡುವಂತೆ ಕೇಳುವುದನ್ನು ಕ್ರೌರ್ಯ ಎಂದು ಕರೆಯಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ಇತ್ತೀಚೆಗೆ ತೀರ್ಪು ನೀಡಿದೆ. ವಿಚ್ಛೇದಿತ ಪತಿ ಮತ್ತು ಅತ್ತೆಯ ವಿರುದ್ಧ ಕೌಟುಂಬಿಕ ದೌರ್ಜನ್ಯದ ಆರೋಪ ಹೊರಿಸಿ ಮಹಿಳೆಯೊಬ್ಬರು ದಾಖಲಿಸಿದ್ದ ಪ್ರಕರಣವನ್ನು ನ್ಯಾಯಮೂರ್ತಿಗಳಾದ ವಿಭಾ ಕಂಕಣವಾಡಿ ಮತ್ತು ರಾಜೇಶ್ ಪಾಟೀಲ್ ಅವರ ಪೀಠ ರದ್ದುಗೊಳಿಸಿದೆ.

ಮಹಿಳೆ ನೀಡಿದ ದೂರಿನಲ್ಲಿ, ಪತಿ ಸೇರಿದಂತೆ ಅತ್ತೆ-ಮಾವಂದಿರು ಮದುವೆಯಾದ ಒಂದು ತಿಂಗಳವರೆಗೆ ತನ್ನನ್ನು ಚೆನ್ನಾಗಿ ನಡೆಸಿಕೊಂಡರು, ಆದರೆ ನಂತರ ಅವರು ತನ್ನನ್ನು “ಸೇವಕಿ” ಎಂದು ಪರಿಗಣಿಸಲು ಪ್ರಾರಂಭಿಸಿದರು ಎಂದು ಆರೋಪಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮದುವೆಯಾದ ಒಂದು ತಿಂಗಳ ನಂತರ ತನ್ನ ಪತಿ ಮತ್ತು ಅವನ ಪೋಷಕರು ಕಾರು ಖರೀದಿಸಲು 4 ಲಕ್ಷ ರೂ.ಗೆ ಬೇಡಿಕೆಯಿಡಲು ಪ್ರಾರಂಭಿಸಿದರು ಎಂದು ಅವರು ಹೇಳಿದ್ದಾರೆ. ಈ ಬೇಡಿಕೆಯ ಮೇರೆಗೆ ಪತಿಯಿಂದ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಲಾಯಿತು ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಸವರ್ಣೀಯ ಮಹಿಳೆಯನ್ನು ದಿಟ್ಟಿಸಿದ ಆರೋಪದ ಮೇಲೆ ಗುಂಡು ಹಾರಿಸಿ ದಲಿತ ಯುವಕನ ಕುಟುಂಬದ ಮೂವರ ಹತ್ಯೆ

ಅರ್ಜಿದಾರ ಮಹಿಳೆಯು ತನಗೆ ಕಿರುಕುಳ ನೀಡಿರುವುದಾಗಿ ಹೇಳಿದ್ದಾರೆ, ಆದರೆ ತನ್ನ ದೂರಿನಲ್ಲಿ ಅಂತಹ ಯಾವುದೇ ಕ್ರಮವನ್ನು ಸೂಚಿಸಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

“ವಿವಾಹಿತ ಹೆಂಗಸನ್ನು ಕುಟುಂಬದ ಉದ್ದೇಶಕ್ಕಾಗಿ ಮನೆಕೆಲಸ ಮಾಡಲು ಕೇಳಿದರೆ, ಅದನ್ನು ಸೇವಕಿ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಅವರು ತನ್ನ ಮನೆಯ ಚಟುವಟಿಕೆಗಳನ್ನು ಮಾಡಲು ಬಯಸದಿದ್ದರೆ, ಅದನ್ನು ಮದುವೆಗೂ ಮೊದಲೇ ಹೇಳಬೇಕಾಗಿತ್ತು. ಹೀಗೆ ಹೇಳಿದ್ದರೆ ಮದುವೆಯ ಬಗ್ಗೆ ವರನು ಮರುಚಿಂತನೆ ಮಾಡಬಹುದಿತ್ತು ಅಥವಾ ಒಂದು ವೇಳೆ ಅದು ಮದುವೆಯ ನಂತರ ಆಗಿದ್ದರೆ, ಅಂತಹ ಸಮಸ್ಯೆಯನ್ನು ಮೊದಲೇ ಪರಿಹರಿಸಬೇಕಾಗಿತ್ತು” ಎಂದು ನ್ಯಾಯಾಲಯ ಹೇಳಿದೆ.

“ನಿರ್ದಿಷ್ಠ ಕೃತ್ಯಗಳನ್ನು ವಿವರಿಸದ ಹೊರತು, ಆ ಕೃತ್ಯಗಳು ಕಿರುಕುಳ ಆಗುತ್ತದೆಯೆ ಅಥವಾ ವ್ಯಕ್ತಿಯನ್ನು ಕ್ರೌರ್ಯಕ್ಕೆ ಒಳಪಡಿಸುತ್ತವೆಯೇ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಆದೇಶ ಹೇಳಿದೆ.

ಇದನ್ನೂ ಓದಿ: ಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

ಪತ್ನಿ ಮಾಡಿದ ಆರೋಪಗಳು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498A ಅಡಿಯಲ್ಲಿ ಪ್ರಕರಣ ದಾಖಲಿಸಲು ಆಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪತಿ ಮತ್ತು ಆತನ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಅದು ಮಾನ್ಯ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...