Homeರಾಷ್ಟ್ರೀಯವಿವಾಹಿತ ಮಹಿಳೆ ಜೊತೆಗೆ ಮನೆಗೆಲಸ ಮಾಡುವಂತೆ ಕೇಳುವುದು ಕ್ರೌರ್ಯವಲ್ಲ: ಬಾಂಬೆ ಹೈಕೋರ್ಟ್

ವಿವಾಹಿತ ಮಹಿಳೆ ಜೊತೆಗೆ ಮನೆಗೆಲಸ ಮಾಡುವಂತೆ ಕೇಳುವುದು ಕ್ರೌರ್ಯವಲ್ಲ: ಬಾಂಬೆ ಹೈಕೋರ್ಟ್

- Advertisement -
- Advertisement -

ವಿವಾಹಿತ ಮಹಿಳೆಯಗೆ ಕುಟುಂಬಕ್ಕಾಗಿ ಮನೆಕೆಲಸ ಮಾಡುವಂತೆ ಕೇಳುವುದನ್ನು ಕ್ರೌರ್ಯ ಎಂದು ಕರೆಯಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ಇತ್ತೀಚೆಗೆ ತೀರ್ಪು ನೀಡಿದೆ. ವಿಚ್ಛೇದಿತ ಪತಿ ಮತ್ತು ಅತ್ತೆಯ ವಿರುದ್ಧ ಕೌಟುಂಬಿಕ ದೌರ್ಜನ್ಯದ ಆರೋಪ ಹೊರಿಸಿ ಮಹಿಳೆಯೊಬ್ಬರು ದಾಖಲಿಸಿದ್ದ ಪ್ರಕರಣವನ್ನು ನ್ಯಾಯಮೂರ್ತಿಗಳಾದ ವಿಭಾ ಕಂಕಣವಾಡಿ ಮತ್ತು ರಾಜೇಶ್ ಪಾಟೀಲ್ ಅವರ ಪೀಠ ರದ್ದುಗೊಳಿಸಿದೆ.

ಮಹಿಳೆ ನೀಡಿದ ದೂರಿನಲ್ಲಿ, ಪತಿ ಸೇರಿದಂತೆ ಅತ್ತೆ-ಮಾವಂದಿರು ಮದುವೆಯಾದ ಒಂದು ತಿಂಗಳವರೆಗೆ ತನ್ನನ್ನು ಚೆನ್ನಾಗಿ ನಡೆಸಿಕೊಂಡರು, ಆದರೆ ನಂತರ ಅವರು ತನ್ನನ್ನು “ಸೇವಕಿ” ಎಂದು ಪರಿಗಣಿಸಲು ಪ್ರಾರಂಭಿಸಿದರು ಎಂದು ಆರೋಪಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮದುವೆಯಾದ ಒಂದು ತಿಂಗಳ ನಂತರ ತನ್ನ ಪತಿ ಮತ್ತು ಅವನ ಪೋಷಕರು ಕಾರು ಖರೀದಿಸಲು 4 ಲಕ್ಷ ರೂ.ಗೆ ಬೇಡಿಕೆಯಿಡಲು ಪ್ರಾರಂಭಿಸಿದರು ಎಂದು ಅವರು ಹೇಳಿದ್ದಾರೆ. ಈ ಬೇಡಿಕೆಯ ಮೇರೆಗೆ ಪತಿಯಿಂದ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಲಾಯಿತು ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಸವರ್ಣೀಯ ಮಹಿಳೆಯನ್ನು ದಿಟ್ಟಿಸಿದ ಆರೋಪದ ಮೇಲೆ ಗುಂಡು ಹಾರಿಸಿ ದಲಿತ ಯುವಕನ ಕುಟುಂಬದ ಮೂವರ ಹತ್ಯೆ

ಅರ್ಜಿದಾರ ಮಹಿಳೆಯು ತನಗೆ ಕಿರುಕುಳ ನೀಡಿರುವುದಾಗಿ ಹೇಳಿದ್ದಾರೆ, ಆದರೆ ತನ್ನ ದೂರಿನಲ್ಲಿ ಅಂತಹ ಯಾವುದೇ ಕ್ರಮವನ್ನು ಸೂಚಿಸಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

“ವಿವಾಹಿತ ಹೆಂಗಸನ್ನು ಕುಟುಂಬದ ಉದ್ದೇಶಕ್ಕಾಗಿ ಮನೆಕೆಲಸ ಮಾಡಲು ಕೇಳಿದರೆ, ಅದನ್ನು ಸೇವಕಿ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಅವರು ತನ್ನ ಮನೆಯ ಚಟುವಟಿಕೆಗಳನ್ನು ಮಾಡಲು ಬಯಸದಿದ್ದರೆ, ಅದನ್ನು ಮದುವೆಗೂ ಮೊದಲೇ ಹೇಳಬೇಕಾಗಿತ್ತು. ಹೀಗೆ ಹೇಳಿದ್ದರೆ ಮದುವೆಯ ಬಗ್ಗೆ ವರನು ಮರುಚಿಂತನೆ ಮಾಡಬಹುದಿತ್ತು ಅಥವಾ ಒಂದು ವೇಳೆ ಅದು ಮದುವೆಯ ನಂತರ ಆಗಿದ್ದರೆ, ಅಂತಹ ಸಮಸ್ಯೆಯನ್ನು ಮೊದಲೇ ಪರಿಹರಿಸಬೇಕಾಗಿತ್ತು” ಎಂದು ನ್ಯಾಯಾಲಯ ಹೇಳಿದೆ.

“ನಿರ್ದಿಷ್ಠ ಕೃತ್ಯಗಳನ್ನು ವಿವರಿಸದ ಹೊರತು, ಆ ಕೃತ್ಯಗಳು ಕಿರುಕುಳ ಆಗುತ್ತದೆಯೆ ಅಥವಾ ವ್ಯಕ್ತಿಯನ್ನು ಕ್ರೌರ್ಯಕ್ಕೆ ಒಳಪಡಿಸುತ್ತವೆಯೇ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಆದೇಶ ಹೇಳಿದೆ.

ಇದನ್ನೂ ಓದಿ: ಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

ಪತ್ನಿ ಮಾಡಿದ ಆರೋಪಗಳು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498A ಅಡಿಯಲ್ಲಿ ಪ್ರಕರಣ ದಾಖಲಿಸಲು ಆಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪತಿ ಮತ್ತು ಆತನ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಅದು ಮಾನ್ಯ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...