Homeಕರ್ನಾಟಕದಸರಾ ಉತ್ಸವದಲ್ಲಿ ಕಮಿಷನ್‌ ಕಾಟ: ಸರೋದ್‌ ವಾದಕ ಪಂ.ರಾಜೀವ್‌ ಬಳಿ ಪರ್ಸೆಂಟೇಜ್‌ಗೆ ಬೇಡಿಕೆ

ದಸರಾ ಉತ್ಸವದಲ್ಲಿ ಕಮಿಷನ್‌ ಕಾಟ: ಸರೋದ್‌ ವಾದಕ ಪಂ.ರಾಜೀವ್‌ ಬಳಿ ಪರ್ಸೆಂಟೇಜ್‌ಗೆ ಬೇಡಿಕೆ

- Advertisement -
- Advertisement -

ನಾಡಹಬ್ಬ ದಸರಾ ಸಾಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು  ಅಂತಾರಾಷ್ಟ್ರೀಯ ಖ್ಯಾತೀಯ ಸರೋದ್‌ ವಾದಕ ಪಂ.ರಾಜೀವ ತಾರನಾಥ್‌ ಅವರನ್ನು ಆಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್‌ಗೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಇದೆ ಕಾರಣಕ್ಕೆ ದಸರಾದಲ್ಲಿ ಅವರ ಕಾರ್ಯಕ್ರಮಕ್ಕೆ ಕತ್ತರಿ ಬಿದ್ದಿದೆ ಎಂದು ಹೇಳಲಾಗುತ್ತಿದೆ.

ದಸರಾ ಅರಮನೆ ವೇದಿಕೆಯಲ್ಲಿ ಕಾರ್ಯಕ್ರಮ ನೀಡಲು ಆಹ್ವಾನಿಸಿದ ಅಧಿಕಾರಿಗಳು ಬಳಿಕ ಕಮಿಷನ್‌ಗೆ ಬೇಡಿಕೆ ಮುಂದಿಟ್ಟಿದ್ದರು ಎಂದು ಸ್ವತಃ ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರು ಆರೋಪಿಸಿದ್ದರು.

ದಸರಾ ಅರಮನೆ ವೇದಿಕೆಯಲ್ಲಿ ಕಾರ್ಯಕ್ರಮ ನೀಡಲು ಅಧಿಕಾರಿಗಳು ತಾರನಾಥ್‌ ಅವರ ಮನೆಗೆ ಭೇಟಿ ನೀಡಿ ಆಗ್ರಹಿಸಿದ್ದರು ಎನ್ನಲಾಗಿದೆ. ಆ ಬಳಿಕ ನಾವು ಸಾಂಸ್ಕೃತಿಕ ಉಪ ಸಮಿತಿಯವರು ಎಂದು ತಾರಾನಾಥರನ್ನು ಸಂಪರ್ಕಿಸಿದ್ದ ಇಬ್ಬರು, ಕಾರ್ಯಕ್ರಮಕ್ಕೆ 8 ಲಕ್ಷ ಕೇಳಿ ಸಾರ್, ಐದು ನೀವಿಟ್ಕೊಳಿ, 3 ನಮಗೆ ಕೊಡಿ ಎಂದು ಹೇಳಿದ್ದರು. ಇದಕ್ಕೆ ಒಪ್ಪದ ತಾರಾನಾಥರು ತಮ್ಮನ್ನು ಸಂಪರ್ಕಿಸಿದ್ದವರನ್ನು ಬೈದು ಕಳುಹಿಸಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಪಂ.ರಾಜೀವ ತಾರನಾಥ್‌, ಕಮಿಷನ್‌ ಚಟುವಟಿಕೆಯ ಮೂಲಕ ಕಲಾವಿದರನ್ನು ಶೋಷಣೆ ಮಾಡಲಾಗುತ್ತಿದೆ. ಕಾರ್ಯಕ್ರಮ ನೀಡದಿದ್ದರೂ ಪರವಾಗಿಲ್ಲ ಎಂದು ನಾನು ಇಂತಹ ಕೃತ್ಯಗಳನ್ನು ಪ್ರೋತ್ಸಾಹಿಸಿಲ್ಲ. ಬೇರೆ ರಾಜ್ಯಗಳಲ್ಲಿ ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸುವ ವಾಡಿಕೆ ಇದೆ. ಆದರೆ ನಮ್ಮಲ್ಲಿ ಅದಕ್ಕೆ ವಿರುದ್ಧವಾದ ವಾತಾವರಣ ಇದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಹೆಚ್‌ ಸಿ ಮಹದೇವಪ್ಪ, ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಿರುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೈಸೂರು: ಪೊಲೀಸ್ ಭದ್ರತೆ ನಡುವೆ ‘ಮಹಿಷ ದಸರಾ ಉತ್ಸವ’ಕ್ಕೆ ವಿಜೃಂಭಣೆಯ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...