Homeಎಲೆಮರೆಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

- Advertisement -
- Advertisement -

ತೆಲಂಗಾಣದಿಂದ 27 ಕಿಮೀ ದೂರದ ಸೇಡಂ ತಾಲೂಕಿನ ತೆಲುಗು ಭಾಷಿಕರೇ ಹೆಚ್ಚಿರುವ ಜಾಕನಪಲ್ಲಿ ಎಂಬ ಹಳ್ಳಿಯ ಹೈಸ್ಕೂಲ್ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ತನ್ನೂರ ದೊಡ್ಡಾಟ ಶೈಲಿಯ `ಬಲಲಲ ಬಲಿಯೇ’ ನಾಟಕ ಪ್ರದರ್ಶಿಸಿ ತೃತೀಯ ಬಹುಮಾನ ಪಡೆಯುತ್ತಾರೆ. `ಮಣ್ಣು ರೈತನ ಕಣ್ಣು’ ಎನ್ನುವ ನಾಟಕವನ್ನು ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆ ತಾಲೂಕಿನ ಹೊಸಳ್ಳಿ ಗ್ರಾಮವನ್ನು ಒಳಗೊಂಡಂತೆ, ಹೆಗ್ಗೋಡು, ಬೆಂಗಳೂರು, ಬಿಜಾಪುರ, ಚಿತ್ರದುರ್ಗದಲ್ಲಿ ಅಭಿನಯಿಸಿ ಬೆರಗು ಮೂಡಿಸುತ್ತಾರೆ. ಹೀಗೆ ಕರ್ನಾಟಕದ ಅಂಚಿನ ಹಳ್ಳಿಯೊಂದರ ಮಕ್ಕಳು ರಾಜ್ಯದ ಇನ್ನೊಂದು ಅಂಚನ್ನು ತಲುಪಿ ನಾಟಕ ಪ್ರದರ್ಶನ ಮಾಡುವಂತೆ ಮಕ್ಕಳನ್ನು ರೂಪಿಸಿದವರು ರಂಗ ಶಿಕ್ಷಕ ಅಶೋಕ ತೋಟ್ನಳ್ಳಿ.

ಚಿತ್ತಾಪುರ ತಾಲೂಕಿನ ಗದ್ದಿಗೆ ಅಳ್ಳೊಳ್ಳಿ ಎನ್ನುವ ಗ್ರಾಮದ ಅಶೋಕ್ ಅವರು ಪದವಿ ನಂತರ ಶರಣಬಸವೇಶ್ವರ ಆರ್ಟ್ಸ್ ಕಾಲೇಜಿನಲ್ಲಿ ಎಂ.ಎ ಫೈನ್ ಆರ್ಟ್ಸ ಮುಗಿಸಿ,2006-07ರಲ್ಲಿ ನೀನಾಸಂನಲ್ಲಿ ನಾಟಕ ಡಿಪ್ಲೊಮಾ ಮಾಡುತ್ತಾರೆ. 2008ಅಕ್ಟೋಬರ್ 30ಕ್ಕೆ ನಾಟಕ ಶಿಕ್ಷಕರಾಗಿ ಜಾಕನಪಲ್ಲಿಯ ಪ್ರೌಢಶಾಲೆಗೆ ಬರುತ್ತಾರೆ.

ಜಡಗೊಂಡಿದ್ದ ಶಾಲೆಯನ್ನು ತನ್ನೊಳಗಿನ ಕ್ರಿಯಾಶೀಲ ‘ಕಲಾವಿದ’ನ ನೆರವಿಂದ ನಿಧಾನಕ್ಕೆ ಜೀವಂತಗೊಳಿಸಲು ಶುರುಮಾಡುತ್ತಾರೆ. ಶಾಲೆಯ ಕಡೆಗೆ ಊರಿನ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. 2009 ರಲ್ಲಿ ‘ಹಮದ ಮೊಚಿ’ ನಾಟಕವನ್ನು ಒಳಗೊಂಡಂತೆ ಗಡಿನಾಡ ಸಮ್ಮೇಳನದಲ್ಲಿ ಮಕ್ಕಳಿಂದ ಮೂರು ನಾಟಕಗಳನ್ನು ಮಾಡಿಸಿ ಗಮನ ಸೆಳೆಯುತ್ತಾರೆ. ಆಗ ಶಾಲೆಯ ಚಟುವಟಿಕೆಯ ಜೊತೆ ಊರನ್ನು ಬೆಸೆಯಲು ೨೦೧೦ ರಲ್ಲಿ `ತಿಂಗಳ ಸಂಜೆ’ ಎನ್ನುವ ವೇದಿಕೆಯೊಂದನ್ನು ಹುಟ್ಟುಹಾಕುತ್ತಾರೆ. ಇದರ ಚಟುವಟಿಕೆಗಳಿಗೆ ಪೂರಕವಾಗಿ ಶಾಲೆಯಲ್ಲಿ `ನಾನು-ನನ್ನೂರು’ ಎನ್ನುವ ಮಕ್ಕಳ ವೇದಿಕೆಯನ್ನು ಶುರುಮಾಡುತ್ತಾರೆ. ತಿಂಗಳು ಪೂರ್ತಿ ಕಲಿತ ಮಕ್ಕಳ ನಾಟಕ, ಅಭಿನಯಗಳು ಈ ತಿಂಗಳ ಸಂಜೆಯಲ್ಲಿ ಪ್ರದರ್ಶನವಾಗುವಂತೆಯೂ, ಹಳ್ಳಿಯ ಜನರೆಲ್ಲರೂ ಈ ಸಂಜೆಯಲ್ಲಿ ತಮ್ಮದೇ ಮಕ್ಕಳ ಅಭಿನಯವನ್ನು ಸವಿಯುವಂತೆ ಮಾಡಲಾಗುತ್ತದೆ.

ನಂತರ ಊರಿನ ಹಿರಿಯರಲ್ಲಿರುವ ಜನಪದ ಕಲೆಯನ್ನು ಶಾಲೆಯ ಮಕ್ಕಳಲ್ಲಿ ಕಸಿ ಮಾಡುವ ಪ್ರಯತ್ನ ಶುರುಮಾಡುತ್ತಾರೆ. ಜಾಕನಪಲ್ಲಿಯಲ್ಲಿ ಮರೆವಿಗೆ ಸರಿದಿದ್ದ ದೊಡ್ಡಾಟಕ್ಕೆ ಜೀವ ತುಂಬುತ್ತಾರೆ. ಊರಲ್ಲಿನ ದೊಡ್ಡಾಟದ ಕಲಾವಿದರನ್ನು ಶಾಲೆಗೆ ಕರೆಸಿ ಮಕ್ಕಳಿಗೆ ತರಬೇತಿ ಕೊಡಿಸುತ್ತಾರೆ. ಅಜ್ಜ ಅಜ್ಜಿಯರ ಕರೆಸಿ ಜನಪದ ಕಥೆಗಳನ್ನು ಹೇಳಿಸುತ್ತಾರೆ. ಇದಕ್ಕೆ ಬೆಂಗಳೂರಿನ ಫೋಕ್ ಆರ್ಟ್ ಫೌಂಡೇಷನ್ ಕಲಿ-ಕಲಿಸು ಯೋಜನೆಯಡಿಯಲ್ಲಿ ಸಹಾಯ ಮಾಡುತ್ತದೆ. ಹೀಗೆ ನಿಧಾನಕ್ಕೆ ಶಾಲೆಗೆ ಸರಕಾರ ನೇಮಿಸಿದ ಶಿಕ್ಷಕರಲ್ಲದೆ ಊರಿನ ಹಿರಿಯ ಕಲಾವಿದರೂ ಶಿಕ್ಷಕರಾಗಿ ರೂಪಾಂತರ ಹೊಂದುತ್ತಾರೆ.

ಈಚಿನ `ಒಂದು ರಾತ್ರಿ’ ನಾಟಕವನ್ನು ಒಳಗೊಂಡಂತೆ ಮಕ್ಕಳಿಗಾಗಿ ಅಶೋಕ್ ಈ ತನಕ 28 ನಾಟಕಗಳನ್ನು ನಿರ್ದೇಶಿಸಿದ್ದಾರೆ. ಶಾಲಾ ಪಠ್ಯಗಳಲ್ಲಿ ಕೆಲವನ್ನು ಆಶು ಅಭಿನಯವಾಗಿ ರೂಪಾಂತರಗೊಳಿಸುತ್ತಾರೆ. ಶಿಲ್ಪ ಮತ್ತು ಚಿತ್ರ ಕಲಾವಿದರ ಕಲಾಕೃತಿಗಳ ಪ್ರದರ್ಶನವನ್ನು ಏರ್ಪಡಿಸಿ, ಸಾಂಜಿ ಕಲೆಯ ಕಾರ್ಯಾಗಾರ ನಡೆಸಿ ಮಕ್ಕಳಿಗೆ ಶಿಲ್ಪ ಮತ್ತು ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸುತ್ತಾರೆ. ಮಕ್ಕಳಿಂದ ಪತ್ರಿಕೆಗಳಲ್ಲಿ ಬಂದ ವ್ಯಂಗ್ಯಚಿತ್ರಗಳನ್ನು ಆಧರಿಸಿ ಕಥೆ ಬರೆಸುವ ಸ್ಪರ್ಧೆ ಏರ್ಪಡಿಸಿ, ವ್ಯಂಗ್ಯಚಿತ್ರ ಪ್ರದರ್ಶನ ಮಾಡಿಸಿದ್ದಾರೆ. ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಶಾಲಾ ಮಕ್ಕಳಿಂದ ಮಣ್ಣೆತ್ತು ಮಾಡಿಸಿ, ಮಣ್ಣಿನ ಗಣೇಶನ ಮಾಡಿಸುವ ಸ್ಪರ್ಧೆಗಳಲ್ಲಿ ಮಕ್ಕಳನ್ನು ಕಲೆಯತ್ತ ಸೆಳೆದಿದ್ದಾರೆ.

‘ಗ್ರಾಮೀಣ ನಾಟಕೋತ್ಸವ’ ಏರ್ಪಡಿಸಿ ಹಳ್ಳಿಗಳಲ್ಲಿ ಮಕ್ಕಳ ನಾಟಕದ ಅಭಿರುಚಿ ಹೆಚ್ಚಿಸಿ, ಸ್ಥಳೀಯ ಸಾಹಿತಿಗಳಿಂದ ಕಥೆ, ಕವಿತಾ ವಾಚನ ಮಾಡಿಸಿ ಸಾಹಿತ್ಯದ ಅಭಿರುಚಿ ಮೂಡಿಸಿದ್ದಾರೆ. ಗಾಂಧಿ ಜಯಂತಿಯಲ್ಲಿ `ಕುಡಿಯೋದ ಬಿಡ್ರಿ, ಒಳ್ಳೇದಲ್ಲ’ ಎಂದು ಜಾಗೃತಿ ಮೂಡಿಸುತ್ತಲೇ, ವಿಶ್ವರಂಗಭೂಮಿ ದಿನ ಊರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ ಮಕ್ಕಳಿಂದ ನಾಟಕ ಆಡಿಸುತ್ತಾರೆ. `ಸರಕಾರಿ ಶಾಲೆಗಳೆ ನಮ್ಮ ಜೀವಾಳ’ ಎನ್ನುವ ಅಭಿಯಾನವನ್ನು ದೊಡ್ಡಾಟದ ವೇಷ ಧರಿಸಿ ಮಕ್ಕಳು ಸರಕಾರಿ ಶಾಲೆಯ ಮಹತ್ವವನ್ನು ಸಾರುತ್ತಾರೆ.

‘ಪ್ರತಿಭಾ ಕಾರಂಜಿಗೆಂದು ತಯಾರು ಮಾಡಿದ ನಾಟಕಗಳನ್ನು ಮಕ್ಕಳು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅಭಿನಯಿಸುತ್ತಾರೆ. ಹೀಗೆ ಹಳ್ಳಿಗಳಲ್ಲಿ ಮಕ್ಕಳು ನಾಟಕ ಆಡಿದಾಗ, ನಾಟಕ ಮೆಚ್ಚಿ ಊರಿನವರು ಆಯರ್ ಮಾಡುತ್ತಾರೆ. ಹೀಗೆ ಆಯರ್ ಮಾಡಿದ ಹಣವನ್ನು ಸಂಗ್ರಹಿಸಿ, ಅದಕ್ಕೆ ನಾವು ಒಂದಷ್ಟು ಹಣ ಹಾಕಿ ಟ್ರಾವೆಲ್ ಖರ್ಚು ತೆಗೆದು, ಉಳಿದ ಹಣದಲ್ಲಿ ಮಕ್ಕಳಿಗೆ ಟ್ರಾವೆಲಿಂಗ್ ಬ್ಯಾಗ್ ತಂದು ಕೊಟ್ಟಿದೀವಿ. ಮೈಸೂರು ಬೆಂಗಳೂರಿಗೆ ಪ್ರತಿಭಾ ಕಾರಂಜಿಗೆ ಹೋದಾಗ ಅದರ ಖೂನ ಇರಲಿ ಅಂತ ಮಕ್ಕಳಿಗೆ ಸ್ಟಡಿ ಚೇರು, ಸ್ಟಡಿ ಲ್ಯಾಂಪು ತಂದಿದ್ದೀವಿ’ ಎನ್ನುತ್ತಾರೆ.

ಮುಂದುವರಿದು `ಮೇಕಪ್, ಲೈಟಿಂಗ್, ಸೌಂಡ್ ಸಿಸ್ಟಮ್ ಎಲ್ಲವನ್ನು ಮಕ್ಕಳೆ ಮಾಡುತ್ತಾರೆ. ನನ್ನ ಸಂಬಳದಲ್ಲಿ ಕೊಂಡ ಎರಡುವರೆ ಲಕ್ಷದ ಪ್ರಾಪರ್ಟಿ ಇದೆ. ತುಂಬಾ ಅಗತ್ಯವಾದ ರಂಗಪರಿಕರಗಳು ನಮ್ಮಲ್ಲಿವೆ. ನಮ್ಮ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ನಮ್ಮ ಹೈಸ್ಕೂಲ್ ಕಾರ್ಯಕ್ರಮಗಳಿಗೆ ಜೊತೆಯಾಗುತ್ತಾರೆ. ನಮ್ಮ ಕೈಲಿ ದುಡ್ಡು ಹಾಕಿ ಮಕ್ಕಳನ್ನು ಪ್ರತಿಭಾ ಕಾರಂಜಿಗೆ ದೂರ ದೂರ ಕರಕೊಂಡು ಹೋಗಿ ಎರಡು ವರ್ಷ ಆದ್ರೂನು ಟ್ರಾವೆಲ್ ಬಿಲ್ ಬರೋದಿಲ್ಲ, ಆದ್ರೂ ಉತ್ಸಾಹ ಕಳಕೊಳ್ಳಂಗಿಲ್ಲ’ ಎಂದು ಅಶೋಕ್ ತಮ್ಮ ಬಿಕ್ಕಟ್ಟನ್ನೂ ಹೇಳುತ್ತಾರೆ.

ಮಕ್ಕಳೊಂದಿಗೆ ಅಶೋಕ ತೋಟ್ನಳ್ಳಿಯವರು

ಅಶೋಕ ತೋಟ್ನಳ್ಳಿಯವರು ಕಲಾವಿದರೂ, ನಾಟಕಕಾರರೂ ಆದ ಕಾರಣ ತಮಗೆ ಲಭ್ಯವಿರುವ ವಸ್ತುಗಳನ್ನೆ ನಾಟಕದ ಪರಿಕರಗಳನ್ನಾಗಿ ಪರಿವರ್ತಿಸುತ್ತಾರೆ. ಊರಿನ ಜನಪದ ವಸ್ತುಗಳನ್ನು ಸೇರಿಸಿ, ಅವುಗಳನ್ನು ಬಣ್ಣದಿಂದ ಸಿಂಗರಿಸಿದ್ದಾರೆ. ಹಾಗಾಗಿ ಶಾಲೆಯೆ ಒಂದು ಆರ್ಟ್ಗ್ಯಾಲರಿಯಂತಿದೆ. ಹೀಗೆ ಒಬ್ಬ ರಂಗಭೂಮಿ ಶಿಕ್ಷಕ ತನ್ನೊಳಗಿನ ಕಲಾವಿದನನ್ನು ಕ್ರಿಯಾಶೀಲಗೊಳಿಸಿ ಇಡೀ ಊರನ್ನೇ ರಂಗಭೂಮಿಯನ್ನಾಗಿ ರೂಪಾಂತರಿಸಿದ ಶ್ರಮ ಮತ್ತು ಬದ್ಧತೆ ನಿಜಕ್ಕೂ ಮೆಚ್ಚುವಂಥದ್ದು. ಊರಿನ ಜನರು, ಮಕ್ಕಳ ಸಹಕಾರ ಮರೆಯುವಂತಿಲ್ಲ ಎನ್ನುವ ಅಶೋಕ ಅವರು ಮತ್ತಷ್ಟು ಮಾದರಿ ಕೆಲಸಗಳಲ್ಲಿ ತೊಡಗಿಕೊಳ್ಳಲೆಂದು ಪತ್ರಿಕೆ ಶುಭಕೋರುತ್ತದೆ.

ಅಶೋಕ ತೋಟ್ನಳ್ಳಿಯವರ ಯೂಟೂಬ್ ಚಾನಲ್‌ಗೆ ಇಲ್ಲಿ ಕ್ಲಿಕ್ ಮಾಡಿ

ಅವರ ಫೇಸ್‌ಬುಕ್ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...