Homeಎಲೆಮರೆಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

- Advertisement -
- Advertisement -

ತೆಲಂಗಾಣದಿಂದ 27 ಕಿಮೀ ದೂರದ ಸೇಡಂ ತಾಲೂಕಿನ ತೆಲುಗು ಭಾಷಿಕರೇ ಹೆಚ್ಚಿರುವ ಜಾಕನಪಲ್ಲಿ ಎಂಬ ಹಳ್ಳಿಯ ಹೈಸ್ಕೂಲ್ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ತನ್ನೂರ ದೊಡ್ಡಾಟ ಶೈಲಿಯ `ಬಲಲಲ ಬಲಿಯೇ’ ನಾಟಕ ಪ್ರದರ್ಶಿಸಿ ತೃತೀಯ ಬಹುಮಾನ ಪಡೆಯುತ್ತಾರೆ. `ಮಣ್ಣು ರೈತನ ಕಣ್ಣು’ ಎನ್ನುವ ನಾಟಕವನ್ನು ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆ ತಾಲೂಕಿನ ಹೊಸಳ್ಳಿ ಗ್ರಾಮವನ್ನು ಒಳಗೊಂಡಂತೆ, ಹೆಗ್ಗೋಡು, ಬೆಂಗಳೂರು, ಬಿಜಾಪುರ, ಚಿತ್ರದುರ್ಗದಲ್ಲಿ ಅಭಿನಯಿಸಿ ಬೆರಗು ಮೂಡಿಸುತ್ತಾರೆ. ಹೀಗೆ ಕರ್ನಾಟಕದ ಅಂಚಿನ ಹಳ್ಳಿಯೊಂದರ ಮಕ್ಕಳು ರಾಜ್ಯದ ಇನ್ನೊಂದು ಅಂಚನ್ನು ತಲುಪಿ ನಾಟಕ ಪ್ರದರ್ಶನ ಮಾಡುವಂತೆ ಮಕ್ಕಳನ್ನು ರೂಪಿಸಿದವರು ರಂಗ ಶಿಕ್ಷಕ ಅಶೋಕ ತೋಟ್ನಳ್ಳಿ.

ಚಿತ್ತಾಪುರ ತಾಲೂಕಿನ ಗದ್ದಿಗೆ ಅಳ್ಳೊಳ್ಳಿ ಎನ್ನುವ ಗ್ರಾಮದ ಅಶೋಕ್ ಅವರು ಪದವಿ ನಂತರ ಶರಣಬಸವೇಶ್ವರ ಆರ್ಟ್ಸ್ ಕಾಲೇಜಿನಲ್ಲಿ ಎಂ.ಎ ಫೈನ್ ಆರ್ಟ್ಸ ಮುಗಿಸಿ,2006-07ರಲ್ಲಿ ನೀನಾಸಂನಲ್ಲಿ ನಾಟಕ ಡಿಪ್ಲೊಮಾ ಮಾಡುತ್ತಾರೆ. 2008ಅಕ್ಟೋಬರ್ 30ಕ್ಕೆ ನಾಟಕ ಶಿಕ್ಷಕರಾಗಿ ಜಾಕನಪಲ್ಲಿಯ ಪ್ರೌಢಶಾಲೆಗೆ ಬರುತ್ತಾರೆ.

ಜಡಗೊಂಡಿದ್ದ ಶಾಲೆಯನ್ನು ತನ್ನೊಳಗಿನ ಕ್ರಿಯಾಶೀಲ ‘ಕಲಾವಿದ’ನ ನೆರವಿಂದ ನಿಧಾನಕ್ಕೆ ಜೀವಂತಗೊಳಿಸಲು ಶುರುಮಾಡುತ್ತಾರೆ. ಶಾಲೆಯ ಕಡೆಗೆ ಊರಿನ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. 2009 ರಲ್ಲಿ ‘ಹಮದ ಮೊಚಿ’ ನಾಟಕವನ್ನು ಒಳಗೊಂಡಂತೆ ಗಡಿನಾಡ ಸಮ್ಮೇಳನದಲ್ಲಿ ಮಕ್ಕಳಿಂದ ಮೂರು ನಾಟಕಗಳನ್ನು ಮಾಡಿಸಿ ಗಮನ ಸೆಳೆಯುತ್ತಾರೆ. ಆಗ ಶಾಲೆಯ ಚಟುವಟಿಕೆಯ ಜೊತೆ ಊರನ್ನು ಬೆಸೆಯಲು ೨೦೧೦ ರಲ್ಲಿ `ತಿಂಗಳ ಸಂಜೆ’ ಎನ್ನುವ ವೇದಿಕೆಯೊಂದನ್ನು ಹುಟ್ಟುಹಾಕುತ್ತಾರೆ. ಇದರ ಚಟುವಟಿಕೆಗಳಿಗೆ ಪೂರಕವಾಗಿ ಶಾಲೆಯಲ್ಲಿ `ನಾನು-ನನ್ನೂರು’ ಎನ್ನುವ ಮಕ್ಕಳ ವೇದಿಕೆಯನ್ನು ಶುರುಮಾಡುತ್ತಾರೆ. ತಿಂಗಳು ಪೂರ್ತಿ ಕಲಿತ ಮಕ್ಕಳ ನಾಟಕ, ಅಭಿನಯಗಳು ಈ ತಿಂಗಳ ಸಂಜೆಯಲ್ಲಿ ಪ್ರದರ್ಶನವಾಗುವಂತೆಯೂ, ಹಳ್ಳಿಯ ಜನರೆಲ್ಲರೂ ಈ ಸಂಜೆಯಲ್ಲಿ ತಮ್ಮದೇ ಮಕ್ಕಳ ಅಭಿನಯವನ್ನು ಸವಿಯುವಂತೆ ಮಾಡಲಾಗುತ್ತದೆ.

ನಂತರ ಊರಿನ ಹಿರಿಯರಲ್ಲಿರುವ ಜನಪದ ಕಲೆಯನ್ನು ಶಾಲೆಯ ಮಕ್ಕಳಲ್ಲಿ ಕಸಿ ಮಾಡುವ ಪ್ರಯತ್ನ ಶುರುಮಾಡುತ್ತಾರೆ. ಜಾಕನಪಲ್ಲಿಯಲ್ಲಿ ಮರೆವಿಗೆ ಸರಿದಿದ್ದ ದೊಡ್ಡಾಟಕ್ಕೆ ಜೀವ ತುಂಬುತ್ತಾರೆ. ಊರಲ್ಲಿನ ದೊಡ್ಡಾಟದ ಕಲಾವಿದರನ್ನು ಶಾಲೆಗೆ ಕರೆಸಿ ಮಕ್ಕಳಿಗೆ ತರಬೇತಿ ಕೊಡಿಸುತ್ತಾರೆ. ಅಜ್ಜ ಅಜ್ಜಿಯರ ಕರೆಸಿ ಜನಪದ ಕಥೆಗಳನ್ನು ಹೇಳಿಸುತ್ತಾರೆ. ಇದಕ್ಕೆ ಬೆಂಗಳೂರಿನ ಫೋಕ್ ಆರ್ಟ್ ಫೌಂಡೇಷನ್ ಕಲಿ-ಕಲಿಸು ಯೋಜನೆಯಡಿಯಲ್ಲಿ ಸಹಾಯ ಮಾಡುತ್ತದೆ. ಹೀಗೆ ನಿಧಾನಕ್ಕೆ ಶಾಲೆಗೆ ಸರಕಾರ ನೇಮಿಸಿದ ಶಿಕ್ಷಕರಲ್ಲದೆ ಊರಿನ ಹಿರಿಯ ಕಲಾವಿದರೂ ಶಿಕ್ಷಕರಾಗಿ ರೂಪಾಂತರ ಹೊಂದುತ್ತಾರೆ.

ಈಚಿನ `ಒಂದು ರಾತ್ರಿ’ ನಾಟಕವನ್ನು ಒಳಗೊಂಡಂತೆ ಮಕ್ಕಳಿಗಾಗಿ ಅಶೋಕ್ ಈ ತನಕ 28 ನಾಟಕಗಳನ್ನು ನಿರ್ದೇಶಿಸಿದ್ದಾರೆ. ಶಾಲಾ ಪಠ್ಯಗಳಲ್ಲಿ ಕೆಲವನ್ನು ಆಶು ಅಭಿನಯವಾಗಿ ರೂಪಾಂತರಗೊಳಿಸುತ್ತಾರೆ. ಶಿಲ್ಪ ಮತ್ತು ಚಿತ್ರ ಕಲಾವಿದರ ಕಲಾಕೃತಿಗಳ ಪ್ರದರ್ಶನವನ್ನು ಏರ್ಪಡಿಸಿ, ಸಾಂಜಿ ಕಲೆಯ ಕಾರ್ಯಾಗಾರ ನಡೆಸಿ ಮಕ್ಕಳಿಗೆ ಶಿಲ್ಪ ಮತ್ತು ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸುತ್ತಾರೆ. ಮಕ್ಕಳಿಂದ ಪತ್ರಿಕೆಗಳಲ್ಲಿ ಬಂದ ವ್ಯಂಗ್ಯಚಿತ್ರಗಳನ್ನು ಆಧರಿಸಿ ಕಥೆ ಬರೆಸುವ ಸ್ಪರ್ಧೆ ಏರ್ಪಡಿಸಿ, ವ್ಯಂಗ್ಯಚಿತ್ರ ಪ್ರದರ್ಶನ ಮಾಡಿಸಿದ್ದಾರೆ. ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಶಾಲಾ ಮಕ್ಕಳಿಂದ ಮಣ್ಣೆತ್ತು ಮಾಡಿಸಿ, ಮಣ್ಣಿನ ಗಣೇಶನ ಮಾಡಿಸುವ ಸ್ಪರ್ಧೆಗಳಲ್ಲಿ ಮಕ್ಕಳನ್ನು ಕಲೆಯತ್ತ ಸೆಳೆದಿದ್ದಾರೆ.

‘ಗ್ರಾಮೀಣ ನಾಟಕೋತ್ಸವ’ ಏರ್ಪಡಿಸಿ ಹಳ್ಳಿಗಳಲ್ಲಿ ಮಕ್ಕಳ ನಾಟಕದ ಅಭಿರುಚಿ ಹೆಚ್ಚಿಸಿ, ಸ್ಥಳೀಯ ಸಾಹಿತಿಗಳಿಂದ ಕಥೆ, ಕವಿತಾ ವಾಚನ ಮಾಡಿಸಿ ಸಾಹಿತ್ಯದ ಅಭಿರುಚಿ ಮೂಡಿಸಿದ್ದಾರೆ. ಗಾಂಧಿ ಜಯಂತಿಯಲ್ಲಿ `ಕುಡಿಯೋದ ಬಿಡ್ರಿ, ಒಳ್ಳೇದಲ್ಲ’ ಎಂದು ಜಾಗೃತಿ ಮೂಡಿಸುತ್ತಲೇ, ವಿಶ್ವರಂಗಭೂಮಿ ದಿನ ಊರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ ಮಕ್ಕಳಿಂದ ನಾಟಕ ಆಡಿಸುತ್ತಾರೆ. `ಸರಕಾರಿ ಶಾಲೆಗಳೆ ನಮ್ಮ ಜೀವಾಳ’ ಎನ್ನುವ ಅಭಿಯಾನವನ್ನು ದೊಡ್ಡಾಟದ ವೇಷ ಧರಿಸಿ ಮಕ್ಕಳು ಸರಕಾರಿ ಶಾಲೆಯ ಮಹತ್ವವನ್ನು ಸಾರುತ್ತಾರೆ.

‘ಪ್ರತಿಭಾ ಕಾರಂಜಿಗೆಂದು ತಯಾರು ಮಾಡಿದ ನಾಟಕಗಳನ್ನು ಮಕ್ಕಳು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅಭಿನಯಿಸುತ್ತಾರೆ. ಹೀಗೆ ಹಳ್ಳಿಗಳಲ್ಲಿ ಮಕ್ಕಳು ನಾಟಕ ಆಡಿದಾಗ, ನಾಟಕ ಮೆಚ್ಚಿ ಊರಿನವರು ಆಯರ್ ಮಾಡುತ್ತಾರೆ. ಹೀಗೆ ಆಯರ್ ಮಾಡಿದ ಹಣವನ್ನು ಸಂಗ್ರಹಿಸಿ, ಅದಕ್ಕೆ ನಾವು ಒಂದಷ್ಟು ಹಣ ಹಾಕಿ ಟ್ರಾವೆಲ್ ಖರ್ಚು ತೆಗೆದು, ಉಳಿದ ಹಣದಲ್ಲಿ ಮಕ್ಕಳಿಗೆ ಟ್ರಾವೆಲಿಂಗ್ ಬ್ಯಾಗ್ ತಂದು ಕೊಟ್ಟಿದೀವಿ. ಮೈಸೂರು ಬೆಂಗಳೂರಿಗೆ ಪ್ರತಿಭಾ ಕಾರಂಜಿಗೆ ಹೋದಾಗ ಅದರ ಖೂನ ಇರಲಿ ಅಂತ ಮಕ್ಕಳಿಗೆ ಸ್ಟಡಿ ಚೇರು, ಸ್ಟಡಿ ಲ್ಯಾಂಪು ತಂದಿದ್ದೀವಿ’ ಎನ್ನುತ್ತಾರೆ.

ಮುಂದುವರಿದು `ಮೇಕಪ್, ಲೈಟಿಂಗ್, ಸೌಂಡ್ ಸಿಸ್ಟಮ್ ಎಲ್ಲವನ್ನು ಮಕ್ಕಳೆ ಮಾಡುತ್ತಾರೆ. ನನ್ನ ಸಂಬಳದಲ್ಲಿ ಕೊಂಡ ಎರಡುವರೆ ಲಕ್ಷದ ಪ್ರಾಪರ್ಟಿ ಇದೆ. ತುಂಬಾ ಅಗತ್ಯವಾದ ರಂಗಪರಿಕರಗಳು ನಮ್ಮಲ್ಲಿವೆ. ನಮ್ಮ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ನಮ್ಮ ಹೈಸ್ಕೂಲ್ ಕಾರ್ಯಕ್ರಮಗಳಿಗೆ ಜೊತೆಯಾಗುತ್ತಾರೆ. ನಮ್ಮ ಕೈಲಿ ದುಡ್ಡು ಹಾಕಿ ಮಕ್ಕಳನ್ನು ಪ್ರತಿಭಾ ಕಾರಂಜಿಗೆ ದೂರ ದೂರ ಕರಕೊಂಡು ಹೋಗಿ ಎರಡು ವರ್ಷ ಆದ್ರೂನು ಟ್ರಾವೆಲ್ ಬಿಲ್ ಬರೋದಿಲ್ಲ, ಆದ್ರೂ ಉತ್ಸಾಹ ಕಳಕೊಳ್ಳಂಗಿಲ್ಲ’ ಎಂದು ಅಶೋಕ್ ತಮ್ಮ ಬಿಕ್ಕಟ್ಟನ್ನೂ ಹೇಳುತ್ತಾರೆ.

ಮಕ್ಕಳೊಂದಿಗೆ ಅಶೋಕ ತೋಟ್ನಳ್ಳಿಯವರು

ಅಶೋಕ ತೋಟ್ನಳ್ಳಿಯವರು ಕಲಾವಿದರೂ, ನಾಟಕಕಾರರೂ ಆದ ಕಾರಣ ತಮಗೆ ಲಭ್ಯವಿರುವ ವಸ್ತುಗಳನ್ನೆ ನಾಟಕದ ಪರಿಕರಗಳನ್ನಾಗಿ ಪರಿವರ್ತಿಸುತ್ತಾರೆ. ಊರಿನ ಜನಪದ ವಸ್ತುಗಳನ್ನು ಸೇರಿಸಿ, ಅವುಗಳನ್ನು ಬಣ್ಣದಿಂದ ಸಿಂಗರಿಸಿದ್ದಾರೆ. ಹಾಗಾಗಿ ಶಾಲೆಯೆ ಒಂದು ಆರ್ಟ್ಗ್ಯಾಲರಿಯಂತಿದೆ. ಹೀಗೆ ಒಬ್ಬ ರಂಗಭೂಮಿ ಶಿಕ್ಷಕ ತನ್ನೊಳಗಿನ ಕಲಾವಿದನನ್ನು ಕ್ರಿಯಾಶೀಲಗೊಳಿಸಿ ಇಡೀ ಊರನ್ನೇ ರಂಗಭೂಮಿಯನ್ನಾಗಿ ರೂಪಾಂತರಿಸಿದ ಶ್ರಮ ಮತ್ತು ಬದ್ಧತೆ ನಿಜಕ್ಕೂ ಮೆಚ್ಚುವಂಥದ್ದು. ಊರಿನ ಜನರು, ಮಕ್ಕಳ ಸಹಕಾರ ಮರೆಯುವಂತಿಲ್ಲ ಎನ್ನುವ ಅಶೋಕ ಅವರು ಮತ್ತಷ್ಟು ಮಾದರಿ ಕೆಲಸಗಳಲ್ಲಿ ತೊಡಗಿಕೊಳ್ಳಲೆಂದು ಪತ್ರಿಕೆ ಶುಭಕೋರುತ್ತದೆ.

ಅಶೋಕ ತೋಟ್ನಳ್ಳಿಯವರ ಯೂಟೂಬ್ ಚಾನಲ್‌ಗೆ ಇಲ್ಲಿ ಕ್ಲಿಕ್ ಮಾಡಿ

ಅವರ ಫೇಸ್‌ಬುಕ್ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...