Homeಎಲೆಮರೆಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

- Advertisement -
- Advertisement -

ತೆಲಂಗಾಣದಿಂದ 27 ಕಿಮೀ ದೂರದ ಸೇಡಂ ತಾಲೂಕಿನ ತೆಲುಗು ಭಾಷಿಕರೇ ಹೆಚ್ಚಿರುವ ಜಾಕನಪಲ್ಲಿ ಎಂಬ ಹಳ್ಳಿಯ ಹೈಸ್ಕೂಲ್ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ತನ್ನೂರ ದೊಡ್ಡಾಟ ಶೈಲಿಯ `ಬಲಲಲ ಬಲಿಯೇ’ ನಾಟಕ ಪ್ರದರ್ಶಿಸಿ ತೃತೀಯ ಬಹುಮಾನ ಪಡೆಯುತ್ತಾರೆ. `ಮಣ್ಣು ರೈತನ ಕಣ್ಣು’ ಎನ್ನುವ ನಾಟಕವನ್ನು ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆ ತಾಲೂಕಿನ ಹೊಸಳ್ಳಿ ಗ್ರಾಮವನ್ನು ಒಳಗೊಂಡಂತೆ, ಹೆಗ್ಗೋಡು, ಬೆಂಗಳೂರು, ಬಿಜಾಪುರ, ಚಿತ್ರದುರ್ಗದಲ್ಲಿ ಅಭಿನಯಿಸಿ ಬೆರಗು ಮೂಡಿಸುತ್ತಾರೆ. ಹೀಗೆ ಕರ್ನಾಟಕದ ಅಂಚಿನ ಹಳ್ಳಿಯೊಂದರ ಮಕ್ಕಳು ರಾಜ್ಯದ ಇನ್ನೊಂದು ಅಂಚನ್ನು ತಲುಪಿ ನಾಟಕ ಪ್ರದರ್ಶನ ಮಾಡುವಂತೆ ಮಕ್ಕಳನ್ನು ರೂಪಿಸಿದವರು ರಂಗ ಶಿಕ್ಷಕ ಅಶೋಕ ತೋಟ್ನಳ್ಳಿ.

ಚಿತ್ತಾಪುರ ತಾಲೂಕಿನ ಗದ್ದಿಗೆ ಅಳ್ಳೊಳ್ಳಿ ಎನ್ನುವ ಗ್ರಾಮದ ಅಶೋಕ್ ಅವರು ಪದವಿ ನಂತರ ಶರಣಬಸವೇಶ್ವರ ಆರ್ಟ್ಸ್ ಕಾಲೇಜಿನಲ್ಲಿ ಎಂ.ಎ ಫೈನ್ ಆರ್ಟ್ಸ ಮುಗಿಸಿ,2006-07ರಲ್ಲಿ ನೀನಾಸಂನಲ್ಲಿ ನಾಟಕ ಡಿಪ್ಲೊಮಾ ಮಾಡುತ್ತಾರೆ. 2008ಅಕ್ಟೋಬರ್ 30ಕ್ಕೆ ನಾಟಕ ಶಿಕ್ಷಕರಾಗಿ ಜಾಕನಪಲ್ಲಿಯ ಪ್ರೌಢಶಾಲೆಗೆ ಬರುತ್ತಾರೆ.

ಜಡಗೊಂಡಿದ್ದ ಶಾಲೆಯನ್ನು ತನ್ನೊಳಗಿನ ಕ್ರಿಯಾಶೀಲ ‘ಕಲಾವಿದ’ನ ನೆರವಿಂದ ನಿಧಾನಕ್ಕೆ ಜೀವಂತಗೊಳಿಸಲು ಶುರುಮಾಡುತ್ತಾರೆ. ಶಾಲೆಯ ಕಡೆಗೆ ಊರಿನ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. 2009 ರಲ್ಲಿ ‘ಹಮದ ಮೊಚಿ’ ನಾಟಕವನ್ನು ಒಳಗೊಂಡಂತೆ ಗಡಿನಾಡ ಸಮ್ಮೇಳನದಲ್ಲಿ ಮಕ್ಕಳಿಂದ ಮೂರು ನಾಟಕಗಳನ್ನು ಮಾಡಿಸಿ ಗಮನ ಸೆಳೆಯುತ್ತಾರೆ. ಆಗ ಶಾಲೆಯ ಚಟುವಟಿಕೆಯ ಜೊತೆ ಊರನ್ನು ಬೆಸೆಯಲು ೨೦೧೦ ರಲ್ಲಿ `ತಿಂಗಳ ಸಂಜೆ’ ಎನ್ನುವ ವೇದಿಕೆಯೊಂದನ್ನು ಹುಟ್ಟುಹಾಕುತ್ತಾರೆ. ಇದರ ಚಟುವಟಿಕೆಗಳಿಗೆ ಪೂರಕವಾಗಿ ಶಾಲೆಯಲ್ಲಿ `ನಾನು-ನನ್ನೂರು’ ಎನ್ನುವ ಮಕ್ಕಳ ವೇದಿಕೆಯನ್ನು ಶುರುಮಾಡುತ್ತಾರೆ. ತಿಂಗಳು ಪೂರ್ತಿ ಕಲಿತ ಮಕ್ಕಳ ನಾಟಕ, ಅಭಿನಯಗಳು ಈ ತಿಂಗಳ ಸಂಜೆಯಲ್ಲಿ ಪ್ರದರ್ಶನವಾಗುವಂತೆಯೂ, ಹಳ್ಳಿಯ ಜನರೆಲ್ಲರೂ ಈ ಸಂಜೆಯಲ್ಲಿ ತಮ್ಮದೇ ಮಕ್ಕಳ ಅಭಿನಯವನ್ನು ಸವಿಯುವಂತೆ ಮಾಡಲಾಗುತ್ತದೆ.

ನಂತರ ಊರಿನ ಹಿರಿಯರಲ್ಲಿರುವ ಜನಪದ ಕಲೆಯನ್ನು ಶಾಲೆಯ ಮಕ್ಕಳಲ್ಲಿ ಕಸಿ ಮಾಡುವ ಪ್ರಯತ್ನ ಶುರುಮಾಡುತ್ತಾರೆ. ಜಾಕನಪಲ್ಲಿಯಲ್ಲಿ ಮರೆವಿಗೆ ಸರಿದಿದ್ದ ದೊಡ್ಡಾಟಕ್ಕೆ ಜೀವ ತುಂಬುತ್ತಾರೆ. ಊರಲ್ಲಿನ ದೊಡ್ಡಾಟದ ಕಲಾವಿದರನ್ನು ಶಾಲೆಗೆ ಕರೆಸಿ ಮಕ್ಕಳಿಗೆ ತರಬೇತಿ ಕೊಡಿಸುತ್ತಾರೆ. ಅಜ್ಜ ಅಜ್ಜಿಯರ ಕರೆಸಿ ಜನಪದ ಕಥೆಗಳನ್ನು ಹೇಳಿಸುತ್ತಾರೆ. ಇದಕ್ಕೆ ಬೆಂಗಳೂರಿನ ಫೋಕ್ ಆರ್ಟ್ ಫೌಂಡೇಷನ್ ಕಲಿ-ಕಲಿಸು ಯೋಜನೆಯಡಿಯಲ್ಲಿ ಸಹಾಯ ಮಾಡುತ್ತದೆ. ಹೀಗೆ ನಿಧಾನಕ್ಕೆ ಶಾಲೆಗೆ ಸರಕಾರ ನೇಮಿಸಿದ ಶಿಕ್ಷಕರಲ್ಲದೆ ಊರಿನ ಹಿರಿಯ ಕಲಾವಿದರೂ ಶಿಕ್ಷಕರಾಗಿ ರೂಪಾಂತರ ಹೊಂದುತ್ತಾರೆ.

ಈಚಿನ `ಒಂದು ರಾತ್ರಿ’ ನಾಟಕವನ್ನು ಒಳಗೊಂಡಂತೆ ಮಕ್ಕಳಿಗಾಗಿ ಅಶೋಕ್ ಈ ತನಕ 28 ನಾಟಕಗಳನ್ನು ನಿರ್ದೇಶಿಸಿದ್ದಾರೆ. ಶಾಲಾ ಪಠ್ಯಗಳಲ್ಲಿ ಕೆಲವನ್ನು ಆಶು ಅಭಿನಯವಾಗಿ ರೂಪಾಂತರಗೊಳಿಸುತ್ತಾರೆ. ಶಿಲ್ಪ ಮತ್ತು ಚಿತ್ರ ಕಲಾವಿದರ ಕಲಾಕೃತಿಗಳ ಪ್ರದರ್ಶನವನ್ನು ಏರ್ಪಡಿಸಿ, ಸಾಂಜಿ ಕಲೆಯ ಕಾರ್ಯಾಗಾರ ನಡೆಸಿ ಮಕ್ಕಳಿಗೆ ಶಿಲ್ಪ ಮತ್ತು ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸುತ್ತಾರೆ. ಮಕ್ಕಳಿಂದ ಪತ್ರಿಕೆಗಳಲ್ಲಿ ಬಂದ ವ್ಯಂಗ್ಯಚಿತ್ರಗಳನ್ನು ಆಧರಿಸಿ ಕಥೆ ಬರೆಸುವ ಸ್ಪರ್ಧೆ ಏರ್ಪಡಿಸಿ, ವ್ಯಂಗ್ಯಚಿತ್ರ ಪ್ರದರ್ಶನ ಮಾಡಿಸಿದ್ದಾರೆ. ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಶಾಲಾ ಮಕ್ಕಳಿಂದ ಮಣ್ಣೆತ್ತು ಮಾಡಿಸಿ, ಮಣ್ಣಿನ ಗಣೇಶನ ಮಾಡಿಸುವ ಸ್ಪರ್ಧೆಗಳಲ್ಲಿ ಮಕ್ಕಳನ್ನು ಕಲೆಯತ್ತ ಸೆಳೆದಿದ್ದಾರೆ.

‘ಗ್ರಾಮೀಣ ನಾಟಕೋತ್ಸವ’ ಏರ್ಪಡಿಸಿ ಹಳ್ಳಿಗಳಲ್ಲಿ ಮಕ್ಕಳ ನಾಟಕದ ಅಭಿರುಚಿ ಹೆಚ್ಚಿಸಿ, ಸ್ಥಳೀಯ ಸಾಹಿತಿಗಳಿಂದ ಕಥೆ, ಕವಿತಾ ವಾಚನ ಮಾಡಿಸಿ ಸಾಹಿತ್ಯದ ಅಭಿರುಚಿ ಮೂಡಿಸಿದ್ದಾರೆ. ಗಾಂಧಿ ಜಯಂತಿಯಲ್ಲಿ `ಕುಡಿಯೋದ ಬಿಡ್ರಿ, ಒಳ್ಳೇದಲ್ಲ’ ಎಂದು ಜಾಗೃತಿ ಮೂಡಿಸುತ್ತಲೇ, ವಿಶ್ವರಂಗಭೂಮಿ ದಿನ ಊರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ ಮಕ್ಕಳಿಂದ ನಾಟಕ ಆಡಿಸುತ್ತಾರೆ. `ಸರಕಾರಿ ಶಾಲೆಗಳೆ ನಮ್ಮ ಜೀವಾಳ’ ಎನ್ನುವ ಅಭಿಯಾನವನ್ನು ದೊಡ್ಡಾಟದ ವೇಷ ಧರಿಸಿ ಮಕ್ಕಳು ಸರಕಾರಿ ಶಾಲೆಯ ಮಹತ್ವವನ್ನು ಸಾರುತ್ತಾರೆ.

‘ಪ್ರತಿಭಾ ಕಾರಂಜಿಗೆಂದು ತಯಾರು ಮಾಡಿದ ನಾಟಕಗಳನ್ನು ಮಕ್ಕಳು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅಭಿನಯಿಸುತ್ತಾರೆ. ಹೀಗೆ ಹಳ್ಳಿಗಳಲ್ಲಿ ಮಕ್ಕಳು ನಾಟಕ ಆಡಿದಾಗ, ನಾಟಕ ಮೆಚ್ಚಿ ಊರಿನವರು ಆಯರ್ ಮಾಡುತ್ತಾರೆ. ಹೀಗೆ ಆಯರ್ ಮಾಡಿದ ಹಣವನ್ನು ಸಂಗ್ರಹಿಸಿ, ಅದಕ್ಕೆ ನಾವು ಒಂದಷ್ಟು ಹಣ ಹಾಕಿ ಟ್ರಾವೆಲ್ ಖರ್ಚು ತೆಗೆದು, ಉಳಿದ ಹಣದಲ್ಲಿ ಮಕ್ಕಳಿಗೆ ಟ್ರಾವೆಲಿಂಗ್ ಬ್ಯಾಗ್ ತಂದು ಕೊಟ್ಟಿದೀವಿ. ಮೈಸೂರು ಬೆಂಗಳೂರಿಗೆ ಪ್ರತಿಭಾ ಕಾರಂಜಿಗೆ ಹೋದಾಗ ಅದರ ಖೂನ ಇರಲಿ ಅಂತ ಮಕ್ಕಳಿಗೆ ಸ್ಟಡಿ ಚೇರು, ಸ್ಟಡಿ ಲ್ಯಾಂಪು ತಂದಿದ್ದೀವಿ’ ಎನ್ನುತ್ತಾರೆ.

ಮುಂದುವರಿದು `ಮೇಕಪ್, ಲೈಟಿಂಗ್, ಸೌಂಡ್ ಸಿಸ್ಟಮ್ ಎಲ್ಲವನ್ನು ಮಕ್ಕಳೆ ಮಾಡುತ್ತಾರೆ. ನನ್ನ ಸಂಬಳದಲ್ಲಿ ಕೊಂಡ ಎರಡುವರೆ ಲಕ್ಷದ ಪ್ರಾಪರ್ಟಿ ಇದೆ. ತುಂಬಾ ಅಗತ್ಯವಾದ ರಂಗಪರಿಕರಗಳು ನಮ್ಮಲ್ಲಿವೆ. ನಮ್ಮ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ನಮ್ಮ ಹೈಸ್ಕೂಲ್ ಕಾರ್ಯಕ್ರಮಗಳಿಗೆ ಜೊತೆಯಾಗುತ್ತಾರೆ. ನಮ್ಮ ಕೈಲಿ ದುಡ್ಡು ಹಾಕಿ ಮಕ್ಕಳನ್ನು ಪ್ರತಿಭಾ ಕಾರಂಜಿಗೆ ದೂರ ದೂರ ಕರಕೊಂಡು ಹೋಗಿ ಎರಡು ವರ್ಷ ಆದ್ರೂನು ಟ್ರಾವೆಲ್ ಬಿಲ್ ಬರೋದಿಲ್ಲ, ಆದ್ರೂ ಉತ್ಸಾಹ ಕಳಕೊಳ್ಳಂಗಿಲ್ಲ’ ಎಂದು ಅಶೋಕ್ ತಮ್ಮ ಬಿಕ್ಕಟ್ಟನ್ನೂ ಹೇಳುತ್ತಾರೆ.

ಮಕ್ಕಳೊಂದಿಗೆ ಅಶೋಕ ತೋಟ್ನಳ್ಳಿಯವರು

ಅಶೋಕ ತೋಟ್ನಳ್ಳಿಯವರು ಕಲಾವಿದರೂ, ನಾಟಕಕಾರರೂ ಆದ ಕಾರಣ ತಮಗೆ ಲಭ್ಯವಿರುವ ವಸ್ತುಗಳನ್ನೆ ನಾಟಕದ ಪರಿಕರಗಳನ್ನಾಗಿ ಪರಿವರ್ತಿಸುತ್ತಾರೆ. ಊರಿನ ಜನಪದ ವಸ್ತುಗಳನ್ನು ಸೇರಿಸಿ, ಅವುಗಳನ್ನು ಬಣ್ಣದಿಂದ ಸಿಂಗರಿಸಿದ್ದಾರೆ. ಹಾಗಾಗಿ ಶಾಲೆಯೆ ಒಂದು ಆರ್ಟ್ಗ್ಯಾಲರಿಯಂತಿದೆ. ಹೀಗೆ ಒಬ್ಬ ರಂಗಭೂಮಿ ಶಿಕ್ಷಕ ತನ್ನೊಳಗಿನ ಕಲಾವಿದನನ್ನು ಕ್ರಿಯಾಶೀಲಗೊಳಿಸಿ ಇಡೀ ಊರನ್ನೇ ರಂಗಭೂಮಿಯನ್ನಾಗಿ ರೂಪಾಂತರಿಸಿದ ಶ್ರಮ ಮತ್ತು ಬದ್ಧತೆ ನಿಜಕ್ಕೂ ಮೆಚ್ಚುವಂಥದ್ದು. ಊರಿನ ಜನರು, ಮಕ್ಕಳ ಸಹಕಾರ ಮರೆಯುವಂತಿಲ್ಲ ಎನ್ನುವ ಅಶೋಕ ಅವರು ಮತ್ತಷ್ಟು ಮಾದರಿ ಕೆಲಸಗಳಲ್ಲಿ ತೊಡಗಿಕೊಳ್ಳಲೆಂದು ಪತ್ರಿಕೆ ಶುಭಕೋರುತ್ತದೆ.

ಅಶೋಕ ತೋಟ್ನಳ್ಳಿಯವರ ಯೂಟೂಬ್ ಚಾನಲ್‌ಗೆ ಇಲ್ಲಿ ಕ್ಲಿಕ್ ಮಾಡಿ

ಅವರ ಫೇಸ್‌ಬುಕ್ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...