Homeಎಲೆಮರೆಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

- Advertisement -
- Advertisement -

ತೆಲಂಗಾಣದಿಂದ 27 ಕಿಮೀ ದೂರದ ಸೇಡಂ ತಾಲೂಕಿನ ತೆಲುಗು ಭಾಷಿಕರೇ ಹೆಚ್ಚಿರುವ ಜಾಕನಪಲ್ಲಿ ಎಂಬ ಹಳ್ಳಿಯ ಹೈಸ್ಕೂಲ್ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ತನ್ನೂರ ದೊಡ್ಡಾಟ ಶೈಲಿಯ `ಬಲಲಲ ಬಲಿಯೇ’ ನಾಟಕ ಪ್ರದರ್ಶಿಸಿ ತೃತೀಯ ಬಹುಮಾನ ಪಡೆಯುತ್ತಾರೆ. `ಮಣ್ಣು ರೈತನ ಕಣ್ಣು’ ಎನ್ನುವ ನಾಟಕವನ್ನು ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆ ತಾಲೂಕಿನ ಹೊಸಳ್ಳಿ ಗ್ರಾಮವನ್ನು ಒಳಗೊಂಡಂತೆ, ಹೆಗ್ಗೋಡು, ಬೆಂಗಳೂರು, ಬಿಜಾಪುರ, ಚಿತ್ರದುರ್ಗದಲ್ಲಿ ಅಭಿನಯಿಸಿ ಬೆರಗು ಮೂಡಿಸುತ್ತಾರೆ. ಹೀಗೆ ಕರ್ನಾಟಕದ ಅಂಚಿನ ಹಳ್ಳಿಯೊಂದರ ಮಕ್ಕಳು ರಾಜ್ಯದ ಇನ್ನೊಂದು ಅಂಚನ್ನು ತಲುಪಿ ನಾಟಕ ಪ್ರದರ್ಶನ ಮಾಡುವಂತೆ ಮಕ್ಕಳನ್ನು ರೂಪಿಸಿದವರು ರಂಗ ಶಿಕ್ಷಕ ಅಶೋಕ ತೋಟ್ನಳ್ಳಿ.

ಚಿತ್ತಾಪುರ ತಾಲೂಕಿನ ಗದ್ದಿಗೆ ಅಳ್ಳೊಳ್ಳಿ ಎನ್ನುವ ಗ್ರಾಮದ ಅಶೋಕ್ ಅವರು ಪದವಿ ನಂತರ ಶರಣಬಸವೇಶ್ವರ ಆರ್ಟ್ಸ್ ಕಾಲೇಜಿನಲ್ಲಿ ಎಂ.ಎ ಫೈನ್ ಆರ್ಟ್ಸ ಮುಗಿಸಿ,2006-07ರಲ್ಲಿ ನೀನಾಸಂನಲ್ಲಿ ನಾಟಕ ಡಿಪ್ಲೊಮಾ ಮಾಡುತ್ತಾರೆ. 2008ಅಕ್ಟೋಬರ್ 30ಕ್ಕೆ ನಾಟಕ ಶಿಕ್ಷಕರಾಗಿ ಜಾಕನಪಲ್ಲಿಯ ಪ್ರೌಢಶಾಲೆಗೆ ಬರುತ್ತಾರೆ.

ಜಡಗೊಂಡಿದ್ದ ಶಾಲೆಯನ್ನು ತನ್ನೊಳಗಿನ ಕ್ರಿಯಾಶೀಲ ‘ಕಲಾವಿದ’ನ ನೆರವಿಂದ ನಿಧಾನಕ್ಕೆ ಜೀವಂತಗೊಳಿಸಲು ಶುರುಮಾಡುತ್ತಾರೆ. ಶಾಲೆಯ ಕಡೆಗೆ ಊರಿನ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. 2009 ರಲ್ಲಿ ‘ಹಮದ ಮೊಚಿ’ ನಾಟಕವನ್ನು ಒಳಗೊಂಡಂತೆ ಗಡಿನಾಡ ಸಮ್ಮೇಳನದಲ್ಲಿ ಮಕ್ಕಳಿಂದ ಮೂರು ನಾಟಕಗಳನ್ನು ಮಾಡಿಸಿ ಗಮನ ಸೆಳೆಯುತ್ತಾರೆ. ಆಗ ಶಾಲೆಯ ಚಟುವಟಿಕೆಯ ಜೊತೆ ಊರನ್ನು ಬೆಸೆಯಲು ೨೦೧೦ ರಲ್ಲಿ `ತಿಂಗಳ ಸಂಜೆ’ ಎನ್ನುವ ವೇದಿಕೆಯೊಂದನ್ನು ಹುಟ್ಟುಹಾಕುತ್ತಾರೆ. ಇದರ ಚಟುವಟಿಕೆಗಳಿಗೆ ಪೂರಕವಾಗಿ ಶಾಲೆಯಲ್ಲಿ `ನಾನು-ನನ್ನೂರು’ ಎನ್ನುವ ಮಕ್ಕಳ ವೇದಿಕೆಯನ್ನು ಶುರುಮಾಡುತ್ತಾರೆ. ತಿಂಗಳು ಪೂರ್ತಿ ಕಲಿತ ಮಕ್ಕಳ ನಾಟಕ, ಅಭಿನಯಗಳು ಈ ತಿಂಗಳ ಸಂಜೆಯಲ್ಲಿ ಪ್ರದರ್ಶನವಾಗುವಂತೆಯೂ, ಹಳ್ಳಿಯ ಜನರೆಲ್ಲರೂ ಈ ಸಂಜೆಯಲ್ಲಿ ತಮ್ಮದೇ ಮಕ್ಕಳ ಅಭಿನಯವನ್ನು ಸವಿಯುವಂತೆ ಮಾಡಲಾಗುತ್ತದೆ.

ನಂತರ ಊರಿನ ಹಿರಿಯರಲ್ಲಿರುವ ಜನಪದ ಕಲೆಯನ್ನು ಶಾಲೆಯ ಮಕ್ಕಳಲ್ಲಿ ಕಸಿ ಮಾಡುವ ಪ್ರಯತ್ನ ಶುರುಮಾಡುತ್ತಾರೆ. ಜಾಕನಪಲ್ಲಿಯಲ್ಲಿ ಮರೆವಿಗೆ ಸರಿದಿದ್ದ ದೊಡ್ಡಾಟಕ್ಕೆ ಜೀವ ತುಂಬುತ್ತಾರೆ. ಊರಲ್ಲಿನ ದೊಡ್ಡಾಟದ ಕಲಾವಿದರನ್ನು ಶಾಲೆಗೆ ಕರೆಸಿ ಮಕ್ಕಳಿಗೆ ತರಬೇತಿ ಕೊಡಿಸುತ್ತಾರೆ. ಅಜ್ಜ ಅಜ್ಜಿಯರ ಕರೆಸಿ ಜನಪದ ಕಥೆಗಳನ್ನು ಹೇಳಿಸುತ್ತಾರೆ. ಇದಕ್ಕೆ ಬೆಂಗಳೂರಿನ ಫೋಕ್ ಆರ್ಟ್ ಫೌಂಡೇಷನ್ ಕಲಿ-ಕಲಿಸು ಯೋಜನೆಯಡಿಯಲ್ಲಿ ಸಹಾಯ ಮಾಡುತ್ತದೆ. ಹೀಗೆ ನಿಧಾನಕ್ಕೆ ಶಾಲೆಗೆ ಸರಕಾರ ನೇಮಿಸಿದ ಶಿಕ್ಷಕರಲ್ಲದೆ ಊರಿನ ಹಿರಿಯ ಕಲಾವಿದರೂ ಶಿಕ್ಷಕರಾಗಿ ರೂಪಾಂತರ ಹೊಂದುತ್ತಾರೆ.

ಈಚಿನ `ಒಂದು ರಾತ್ರಿ’ ನಾಟಕವನ್ನು ಒಳಗೊಂಡಂತೆ ಮಕ್ಕಳಿಗಾಗಿ ಅಶೋಕ್ ಈ ತನಕ 28 ನಾಟಕಗಳನ್ನು ನಿರ್ದೇಶಿಸಿದ್ದಾರೆ. ಶಾಲಾ ಪಠ್ಯಗಳಲ್ಲಿ ಕೆಲವನ್ನು ಆಶು ಅಭಿನಯವಾಗಿ ರೂಪಾಂತರಗೊಳಿಸುತ್ತಾರೆ. ಶಿಲ್ಪ ಮತ್ತು ಚಿತ್ರ ಕಲಾವಿದರ ಕಲಾಕೃತಿಗಳ ಪ್ರದರ್ಶನವನ್ನು ಏರ್ಪಡಿಸಿ, ಸಾಂಜಿ ಕಲೆಯ ಕಾರ್ಯಾಗಾರ ನಡೆಸಿ ಮಕ್ಕಳಿಗೆ ಶಿಲ್ಪ ಮತ್ತು ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸುತ್ತಾರೆ. ಮಕ್ಕಳಿಂದ ಪತ್ರಿಕೆಗಳಲ್ಲಿ ಬಂದ ವ್ಯಂಗ್ಯಚಿತ್ರಗಳನ್ನು ಆಧರಿಸಿ ಕಥೆ ಬರೆಸುವ ಸ್ಪರ್ಧೆ ಏರ್ಪಡಿಸಿ, ವ್ಯಂಗ್ಯಚಿತ್ರ ಪ್ರದರ್ಶನ ಮಾಡಿಸಿದ್ದಾರೆ. ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಶಾಲಾ ಮಕ್ಕಳಿಂದ ಮಣ್ಣೆತ್ತು ಮಾಡಿಸಿ, ಮಣ್ಣಿನ ಗಣೇಶನ ಮಾಡಿಸುವ ಸ್ಪರ್ಧೆಗಳಲ್ಲಿ ಮಕ್ಕಳನ್ನು ಕಲೆಯತ್ತ ಸೆಳೆದಿದ್ದಾರೆ.

‘ಗ್ರಾಮೀಣ ನಾಟಕೋತ್ಸವ’ ಏರ್ಪಡಿಸಿ ಹಳ್ಳಿಗಳಲ್ಲಿ ಮಕ್ಕಳ ನಾಟಕದ ಅಭಿರುಚಿ ಹೆಚ್ಚಿಸಿ, ಸ್ಥಳೀಯ ಸಾಹಿತಿಗಳಿಂದ ಕಥೆ, ಕವಿತಾ ವಾಚನ ಮಾಡಿಸಿ ಸಾಹಿತ್ಯದ ಅಭಿರುಚಿ ಮೂಡಿಸಿದ್ದಾರೆ. ಗಾಂಧಿ ಜಯಂತಿಯಲ್ಲಿ `ಕುಡಿಯೋದ ಬಿಡ್ರಿ, ಒಳ್ಳೇದಲ್ಲ’ ಎಂದು ಜಾಗೃತಿ ಮೂಡಿಸುತ್ತಲೇ, ವಿಶ್ವರಂಗಭೂಮಿ ದಿನ ಊರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ ಮಕ್ಕಳಿಂದ ನಾಟಕ ಆಡಿಸುತ್ತಾರೆ. `ಸರಕಾರಿ ಶಾಲೆಗಳೆ ನಮ್ಮ ಜೀವಾಳ’ ಎನ್ನುವ ಅಭಿಯಾನವನ್ನು ದೊಡ್ಡಾಟದ ವೇಷ ಧರಿಸಿ ಮಕ್ಕಳು ಸರಕಾರಿ ಶಾಲೆಯ ಮಹತ್ವವನ್ನು ಸಾರುತ್ತಾರೆ.

‘ಪ್ರತಿಭಾ ಕಾರಂಜಿಗೆಂದು ತಯಾರು ಮಾಡಿದ ನಾಟಕಗಳನ್ನು ಮಕ್ಕಳು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅಭಿನಯಿಸುತ್ತಾರೆ. ಹೀಗೆ ಹಳ್ಳಿಗಳಲ್ಲಿ ಮಕ್ಕಳು ನಾಟಕ ಆಡಿದಾಗ, ನಾಟಕ ಮೆಚ್ಚಿ ಊರಿನವರು ಆಯರ್ ಮಾಡುತ್ತಾರೆ. ಹೀಗೆ ಆಯರ್ ಮಾಡಿದ ಹಣವನ್ನು ಸಂಗ್ರಹಿಸಿ, ಅದಕ್ಕೆ ನಾವು ಒಂದಷ್ಟು ಹಣ ಹಾಕಿ ಟ್ರಾವೆಲ್ ಖರ್ಚು ತೆಗೆದು, ಉಳಿದ ಹಣದಲ್ಲಿ ಮಕ್ಕಳಿಗೆ ಟ್ರಾವೆಲಿಂಗ್ ಬ್ಯಾಗ್ ತಂದು ಕೊಟ್ಟಿದೀವಿ. ಮೈಸೂರು ಬೆಂಗಳೂರಿಗೆ ಪ್ರತಿಭಾ ಕಾರಂಜಿಗೆ ಹೋದಾಗ ಅದರ ಖೂನ ಇರಲಿ ಅಂತ ಮಕ್ಕಳಿಗೆ ಸ್ಟಡಿ ಚೇರು, ಸ್ಟಡಿ ಲ್ಯಾಂಪು ತಂದಿದ್ದೀವಿ’ ಎನ್ನುತ್ತಾರೆ.

ಮುಂದುವರಿದು `ಮೇಕಪ್, ಲೈಟಿಂಗ್, ಸೌಂಡ್ ಸಿಸ್ಟಮ್ ಎಲ್ಲವನ್ನು ಮಕ್ಕಳೆ ಮಾಡುತ್ತಾರೆ. ನನ್ನ ಸಂಬಳದಲ್ಲಿ ಕೊಂಡ ಎರಡುವರೆ ಲಕ್ಷದ ಪ್ರಾಪರ್ಟಿ ಇದೆ. ತುಂಬಾ ಅಗತ್ಯವಾದ ರಂಗಪರಿಕರಗಳು ನಮ್ಮಲ್ಲಿವೆ. ನಮ್ಮ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ನಮ್ಮ ಹೈಸ್ಕೂಲ್ ಕಾರ್ಯಕ್ರಮಗಳಿಗೆ ಜೊತೆಯಾಗುತ್ತಾರೆ. ನಮ್ಮ ಕೈಲಿ ದುಡ್ಡು ಹಾಕಿ ಮಕ್ಕಳನ್ನು ಪ್ರತಿಭಾ ಕಾರಂಜಿಗೆ ದೂರ ದೂರ ಕರಕೊಂಡು ಹೋಗಿ ಎರಡು ವರ್ಷ ಆದ್ರೂನು ಟ್ರಾವೆಲ್ ಬಿಲ್ ಬರೋದಿಲ್ಲ, ಆದ್ರೂ ಉತ್ಸಾಹ ಕಳಕೊಳ್ಳಂಗಿಲ್ಲ’ ಎಂದು ಅಶೋಕ್ ತಮ್ಮ ಬಿಕ್ಕಟ್ಟನ್ನೂ ಹೇಳುತ್ತಾರೆ.

ಮಕ್ಕಳೊಂದಿಗೆ ಅಶೋಕ ತೋಟ್ನಳ್ಳಿಯವರು

ಅಶೋಕ ತೋಟ್ನಳ್ಳಿಯವರು ಕಲಾವಿದರೂ, ನಾಟಕಕಾರರೂ ಆದ ಕಾರಣ ತಮಗೆ ಲಭ್ಯವಿರುವ ವಸ್ತುಗಳನ್ನೆ ನಾಟಕದ ಪರಿಕರಗಳನ್ನಾಗಿ ಪರಿವರ್ತಿಸುತ್ತಾರೆ. ಊರಿನ ಜನಪದ ವಸ್ತುಗಳನ್ನು ಸೇರಿಸಿ, ಅವುಗಳನ್ನು ಬಣ್ಣದಿಂದ ಸಿಂಗರಿಸಿದ್ದಾರೆ. ಹಾಗಾಗಿ ಶಾಲೆಯೆ ಒಂದು ಆರ್ಟ್ಗ್ಯಾಲರಿಯಂತಿದೆ. ಹೀಗೆ ಒಬ್ಬ ರಂಗಭೂಮಿ ಶಿಕ್ಷಕ ತನ್ನೊಳಗಿನ ಕಲಾವಿದನನ್ನು ಕ್ರಿಯಾಶೀಲಗೊಳಿಸಿ ಇಡೀ ಊರನ್ನೇ ರಂಗಭೂಮಿಯನ್ನಾಗಿ ರೂಪಾಂತರಿಸಿದ ಶ್ರಮ ಮತ್ತು ಬದ್ಧತೆ ನಿಜಕ್ಕೂ ಮೆಚ್ಚುವಂಥದ್ದು. ಊರಿನ ಜನರು, ಮಕ್ಕಳ ಸಹಕಾರ ಮರೆಯುವಂತಿಲ್ಲ ಎನ್ನುವ ಅಶೋಕ ಅವರು ಮತ್ತಷ್ಟು ಮಾದರಿ ಕೆಲಸಗಳಲ್ಲಿ ತೊಡಗಿಕೊಳ್ಳಲೆಂದು ಪತ್ರಿಕೆ ಶುಭಕೋರುತ್ತದೆ.

ಅಶೋಕ ತೋಟ್ನಳ್ಳಿಯವರ ಯೂಟೂಬ್ ಚಾನಲ್‌ಗೆ ಇಲ್ಲಿ ಕ್ಲಿಕ್ ಮಾಡಿ

ಅವರ ಫೇಸ್‌ಬುಕ್ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...