Homeಮುಖಪುಟಅಸ್ಸಾಂ: ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟ 4 ಸಾವಿರ ಮಕ್ಕಳು!

ಅಸ್ಸಾಂ: ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟ 4 ಸಾವಿರ ಮಕ್ಕಳು!

"ಇಲ್ಲಿನ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಗಾಗಿ ತಯಾರಿಸುವ ಪ್ರಣಾಳಿಕೆಗಳಲ್ಲಿ ನಮ್ಮ ಬೇಡಿಕೆಗಳನ್ನು ಸೇರಿಸುವಂತೆ ಒತ್ತಾಯಿಸಿ, ಈ ಪ್ರಣಾಳಿಕೆಯ ಮೂಲಕ ಶಿಫಾರಸ್ಸುಗಳನ್ನು ಮಾಡುತ್ತಿದ್ದೇವೆ..."

- Advertisement -
- Advertisement -

ಅಸ್ಸಾಂನ 17 ಜಿಲ್ಲೆಯ ಸುಮಾರು 4 ಸಾವಿರ ಮಕ್ಕಳು ಸೇರಿ ಅಲ್ಲಿನ ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟಿದ್ದು, ಅದರಲ್ಲಿ “ಉಚಿತ ಮತ್ತು ಖಡ್ಡಾಯ ಶಿಕ್ಷಣ, ಹಿಂಸಾಚಾರ ಮುಕ್ತ ಮತ್ತು ಲಿಂಗ ಸಮಾನತೆಯಂತಹ ಭರವಸೆಗಳ ಬೇಡಿಕೆಯನ್ನು” ಇಟ್ಟಿದ್ದಾರೆ. 2021 ರಲ್ಲಿ ಅಸ್ಸಾಂ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ನಿನ್ನೆ ವಿಶ್ವ ಮಕ್ಕಳ ದಿನದ ಅಂಗವಾಗಿ ಗೌಹಾತಿ ಪತ್ರಿಕಾ ಭವನದಲ್ಲಿ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. 

ಇಲ್ಲಿ, ಮಜುಲಿ ಜಿಲ್ಲೆಯ 16 ವರ್ಷದ ಕುಲದೀಪ್ ನಾರಾಯಣ್ ಬೋರಾ ಮಾತನಾಡಿ, “ಇಲ್ಲಿನ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಗಾಗಿ ತಯಾರಿಸುವ ಪ್ರಣಾಳಿಕೆಗಳಲ್ಲಿ ನಮ್ಮ ಬೇಡಿಕೆಗಳನ್ನು ಸೇರಿಸುವಂತೆ ಒತ್ತಾಯಿಸಿ, ಈ ಪ್ರಣಾಳಿಕೆಯ ಮೂಲಕ ಶಿಫಾರಸ್ಸುಗಳನ್ನು ಮಾಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

ಈ ಪ್ರಣಾಳಿಕೆಯ ಮೇಲುಸ್ತುವಾರಿಯನ್ನು ರಾಷ್ಟ್ರೀಯ ಮಟ್ಟದ ಎನ್‌ಜಿಓ ‘ಪ್ರತ್ಯೇಕ್’ ವಹಿಸಿಕೊಂಡಿದ್ದು, ಇದಕ್ಕೆ ಯುನಿಸೆಫ್ ತಾಂತ್ರಿಕ ಸಹಕಾರವನ್ನು ನೀಡಿ, “ರಿ-ಇಮ್ಯಾಜಿನ್” ಟ್ವಿಟ್ಟರ್‌ ಅಭಿಯಾನವನ್ನು ಪ್ರಾರಂಭಿಸಿ ಕೊರೊನೋತ್ತರದ ಜಗತ್ತನ್ನು ಸೃಜನಾತ್ಮಕವಾಗಿ ನಿರ್ಮಿಸಲು ಕರೆ ನೀಡಿದೆ.

ಸಾಂಕ್ರಾಮಿಕ ರೋಗದ ನಂತರದ ಜಗತ್ತನ್ನು ಕಟ್ಟುವ ಪ್ರಯತ್ನಗಳಿಗೆ ಮತ್ತು ಶಿಕ್ಷಣದ ರೂಪವನ್ನು ಉನ್ನತೀಕರಿಸಲು ಮಕ್ಕಳು ಮತ್ತು ಯುವಜನರು ಸಹಕರಿಸಬೇಕೆಂದು ರಿ-ಇಮ್ಯಾಜಿನ್ ಅಭಿಯಾನವು ವಿಶ್ವ ಮಕ್ಕಳ ದಿನಾಚರಣೆಯಂದು ಕರೆ ನೀಡಿದೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ಮಕ್ಕಳೇ ರಚಿಸಿರುವ ಈ ಪ್ರಣಾಳಿಕೆಯನ್ನು ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಪ್ರತಿಪಕ್ಷದ ನಾಯಕ ಮತ್ತು ಅಸ್ಸಾಂನ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರುಗಳಿಗೆ ನೀಡಲಾಗುವುದು.

ಈ ಪ್ರಣಾಳಿಕೆ ತಯಾರಿಕೆಗಾಗಿ, ಆನ್‌ಲೈನ್ ಮತ್ತು ಆಫ್‌ಲೈನ್ ಸ್ಕೋರ್‌ಕಾರ್ಡ್‌ಗಳನ್ನು ಬಳಸಿಕೊಂಡು ಒಂದು ಸಮೀಕ್ಷೆಯನ್ನು ನಡೆಸಲಾಯಿತು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ವಿವಿಧ ಸಂಸ್ಥೆಗಳ ಕ್ಷೇತ್ರ ಸಂಯೋಜಕರು, ಮಕ್ಕಳು ಮತ್ತು ಯುವಜನರನ್ನು ತಲುಪಿ ಕೆಲವು ಸಂದರ್ಭಗಳಲ್ಲಿ ನೇರ ಮುಖಾಮುಖಿಯಾಗಿ ಮಾಹಿತಿ ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ನಾನು ಅಸ್ಸಾಂನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ: ಮಾಜಿ ಸಿಜೆಐ ರಂಜನ್ ಗೊಗೊಯ್

ಈ ಸಮೀಕ್ಷೆಯ ಫಲಿತಾಂಶಗಳ ಪ್ರಕಾರ, ಶೇಕಡಾ 70 ರಷ್ಟು ಮಕ್ಕಳು ವೃತ್ತಿಪರ ತರಬೇತಿ ಮತ್ತು ವೃತ್ತಿ ಸಮಾಲೋಚನೆಯ ಅಗತ್ಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಶೇಕಡ 70 ರಷ್ಟು ಮಕ್ಕಳು ಮಾನಸಿಕ ಆರೋಗ್ಯವನ್ನು ತಮ್ಮ ಪಠ್ಯಕ್ರಮದಲ್ಲಿ ಸೇರಿಸಿಕೊಳ್ಳಬೇಕೆಂದು ಬಯಸುತ್ತಾರೆ. ಶೇಕಡಾ 92 ರಷ್ಟು ಜನರು ಲಿಂಗ ಸಂವೇದನೆಯ ಕುರಿತು ಪಠ್ಯದಲ್ಲಿ ಸೇರಿಸಲು ಬಯಸಿದ್ದು, ಜೊತೆಗೆ ಲೈಂಗಿಕತೆ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಬಗ್ಗೆಯೂ ವಿಷಯಗಳನ್ನ ಸೇರಿಸುವಂತೆ ಅಭಿಪ್ರಾಯಪಟ್ಟಿದ್ದಾರೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಿಗೆ ಕೈಗೆಟುಕುವ ಆರೋಗ್ಯ ಸೇವೆ ಮತ್ತು ಪೌಷ್ಠಿಕ ಆಹಾರದ ಲಭ್ಯತೆಯಿಲ್ಲ ಎಂದೂ ಮಕ್ಕಳು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯಲ್ಲಿ 85 ಶೇಕಡಾ ಮಕ್ಕಳು ನಾಯಕರು ಮಕ್ಕಳೊಂದಿಗೆ ಮಾತನಾಡಬೇಕು ಮತ್ತು ಪರಿಸರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಾಗ ಅವರ ಅನುಭವಗಳು ಮತ್ತು ಆಲೋಚನೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಮಾದಕ ದ್ರವ್ಯ ಸೇವನೆ, ಮಕ್ಕಳ ಕಳ್ಳಸಾಗಣೆ, ಮಾನವ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪ್ರಚಾರದ ವಿಷಯಗಳಿಗೂ ಸಹ ಈ ಸಮೀಕ್ಷೆಯಲ್ಲಿ ಪ್ರಮುಖ ಆದ್ಯತೆಯಿದೆ.

ಇದನ್ನೂ ಓದಿ: 2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ಮಕ್ಕಳ ಪ್ರಣಾಳಿಕೆಯಲ್ಲಿನ ಶಿಫಾರಸುಗಳು:

  • ಎಲ್ಲಾ ರೀತಿಯ ಹಿಂಸಾಚಾರದಿಂದ ರಕ್ಷಣೆ.
  • ಕೈಗೆಟುಕುವ ಆರೋಗ್ಯ ಸೇವೆ ಮತ್ತು ಪೌಷ್ಠಿಕ ಆಹಾರದ ಲಭ್ಯತೆ.
  • ವರ್ಗ, ಜಾತಿ, ಲಿಂಗ, ಧರ್ಮ ಅಥವಾ ಯಾವುದೇ ಆಧಾರದ ಮೇಲೆ ಯಾವುದೇ ತಾರತಮ್ಯವಿರಬಾರದು.
  • ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ.
  • ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳುವುದು.
  • ಅಸ್ಸಾಂನಾದ್ಯಂತ ಎಲ್ಲಾ ಕುಟುಂಬಗಳಿಗೆ ಸುರಕ್ಷಿತ ಕುಡಿಯುವ ನೀರು ಮತ್ತು ನೈರ್ಮಲ್ಯತೆಯ ವ್ಯವಸ್ಥೆ.
  • ಆಟವಾಡಲು, ಬೆಳೆಯಲು ಮಕ್ಕಳಿಗೆ ಸುರಕ್ಷಿತ ಸ್ಥಳಗಳು.
  • ಗೌರವಯುತ ಜೀವನವನ್ನು ನಡೆಸಲು ಅವರಿಗೆ ಸಾಕಷ್ಟು ಪುನರ್ವಸತಿ ಮತ್ತು ಸಾಮಾಜಿಕ ಬೆಂಬಲವನ್ನು ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ವಿಭಿನ್ನ ಕ್ರಮಗಳನ್ನು ತೆಗೆದುಕೊಳ್ಳುವುದು.

ಹೀಗೆ ಇನ್ನೂ ಹತ್ತಾರು ಅಂಶಗಳನ್ನು ಮಕ್ಕಳು ಬೇಡಿಕೆಯ ರೂಪದ ಈ ಪ್ರನಾಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಭಾರತ ಒಕ್ಕೂಟ ವ್ಯವಸ್ಥೆ ಎಂಬ ಒಂದು ಅಣಕು ಪ್ರಹಸನ: ಬಿ.ಶ್ರೀಪಾದ್ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...