Homeಮುಖಪುಟಅಸ್ಸಾಂ: ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟ 4 ಸಾವಿರ ಮಕ್ಕಳು!

ಅಸ್ಸಾಂ: ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟ 4 ಸಾವಿರ ಮಕ್ಕಳು!

"ಇಲ್ಲಿನ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಗಾಗಿ ತಯಾರಿಸುವ ಪ್ರಣಾಳಿಕೆಗಳಲ್ಲಿ ನಮ್ಮ ಬೇಡಿಕೆಗಳನ್ನು ಸೇರಿಸುವಂತೆ ಒತ್ತಾಯಿಸಿ, ಈ ಪ್ರಣಾಳಿಕೆಯ ಮೂಲಕ ಶಿಫಾರಸ್ಸುಗಳನ್ನು ಮಾಡುತ್ತಿದ್ದೇವೆ..."

- Advertisement -
- Advertisement -

ಅಸ್ಸಾಂನ 17 ಜಿಲ್ಲೆಯ ಸುಮಾರು 4 ಸಾವಿರ ಮಕ್ಕಳು ಸೇರಿ ಅಲ್ಲಿನ ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟಿದ್ದು, ಅದರಲ್ಲಿ “ಉಚಿತ ಮತ್ತು ಖಡ್ಡಾಯ ಶಿಕ್ಷಣ, ಹಿಂಸಾಚಾರ ಮುಕ್ತ ಮತ್ತು ಲಿಂಗ ಸಮಾನತೆಯಂತಹ ಭರವಸೆಗಳ ಬೇಡಿಕೆಯನ್ನು” ಇಟ್ಟಿದ್ದಾರೆ. 2021 ರಲ್ಲಿ ಅಸ್ಸಾಂ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ನಿನ್ನೆ ವಿಶ್ವ ಮಕ್ಕಳ ದಿನದ ಅಂಗವಾಗಿ ಗೌಹಾತಿ ಪತ್ರಿಕಾ ಭವನದಲ್ಲಿ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. 

ಇಲ್ಲಿ, ಮಜುಲಿ ಜಿಲ್ಲೆಯ 16 ವರ್ಷದ ಕುಲದೀಪ್ ನಾರಾಯಣ್ ಬೋರಾ ಮಾತನಾಡಿ, “ಇಲ್ಲಿನ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಗಾಗಿ ತಯಾರಿಸುವ ಪ್ರಣಾಳಿಕೆಗಳಲ್ಲಿ ನಮ್ಮ ಬೇಡಿಕೆಗಳನ್ನು ಸೇರಿಸುವಂತೆ ಒತ್ತಾಯಿಸಿ, ಈ ಪ್ರಣಾಳಿಕೆಯ ಮೂಲಕ ಶಿಫಾರಸ್ಸುಗಳನ್ನು ಮಾಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

ಈ ಪ್ರಣಾಳಿಕೆಯ ಮೇಲುಸ್ತುವಾರಿಯನ್ನು ರಾಷ್ಟ್ರೀಯ ಮಟ್ಟದ ಎನ್‌ಜಿಓ ‘ಪ್ರತ್ಯೇಕ್’ ವಹಿಸಿಕೊಂಡಿದ್ದು, ಇದಕ್ಕೆ ಯುನಿಸೆಫ್ ತಾಂತ್ರಿಕ ಸಹಕಾರವನ್ನು ನೀಡಿ, “ರಿ-ಇಮ್ಯಾಜಿನ್” ಟ್ವಿಟ್ಟರ್‌ ಅಭಿಯಾನವನ್ನು ಪ್ರಾರಂಭಿಸಿ ಕೊರೊನೋತ್ತರದ ಜಗತ್ತನ್ನು ಸೃಜನಾತ್ಮಕವಾಗಿ ನಿರ್ಮಿಸಲು ಕರೆ ನೀಡಿದೆ.

ಸಾಂಕ್ರಾಮಿಕ ರೋಗದ ನಂತರದ ಜಗತ್ತನ್ನು ಕಟ್ಟುವ ಪ್ರಯತ್ನಗಳಿಗೆ ಮತ್ತು ಶಿಕ್ಷಣದ ರೂಪವನ್ನು ಉನ್ನತೀಕರಿಸಲು ಮಕ್ಕಳು ಮತ್ತು ಯುವಜನರು ಸಹಕರಿಸಬೇಕೆಂದು ರಿ-ಇಮ್ಯಾಜಿನ್ ಅಭಿಯಾನವು ವಿಶ್ವ ಮಕ್ಕಳ ದಿನಾಚರಣೆಯಂದು ಕರೆ ನೀಡಿದೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ಮಕ್ಕಳೇ ರಚಿಸಿರುವ ಈ ಪ್ರಣಾಳಿಕೆಯನ್ನು ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಪ್ರತಿಪಕ್ಷದ ನಾಯಕ ಮತ್ತು ಅಸ್ಸಾಂನ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರುಗಳಿಗೆ ನೀಡಲಾಗುವುದು.

ಈ ಪ್ರಣಾಳಿಕೆ ತಯಾರಿಕೆಗಾಗಿ, ಆನ್‌ಲೈನ್ ಮತ್ತು ಆಫ್‌ಲೈನ್ ಸ್ಕೋರ್‌ಕಾರ್ಡ್‌ಗಳನ್ನು ಬಳಸಿಕೊಂಡು ಒಂದು ಸಮೀಕ್ಷೆಯನ್ನು ನಡೆಸಲಾಯಿತು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ವಿವಿಧ ಸಂಸ್ಥೆಗಳ ಕ್ಷೇತ್ರ ಸಂಯೋಜಕರು, ಮಕ್ಕಳು ಮತ್ತು ಯುವಜನರನ್ನು ತಲುಪಿ ಕೆಲವು ಸಂದರ್ಭಗಳಲ್ಲಿ ನೇರ ಮುಖಾಮುಖಿಯಾಗಿ ಮಾಹಿತಿ ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ನಾನು ಅಸ್ಸಾಂನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ: ಮಾಜಿ ಸಿಜೆಐ ರಂಜನ್ ಗೊಗೊಯ್

ಈ ಸಮೀಕ್ಷೆಯ ಫಲಿತಾಂಶಗಳ ಪ್ರಕಾರ, ಶೇಕಡಾ 70 ರಷ್ಟು ಮಕ್ಕಳು ವೃತ್ತಿಪರ ತರಬೇತಿ ಮತ್ತು ವೃತ್ತಿ ಸಮಾಲೋಚನೆಯ ಅಗತ್ಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಶೇಕಡ 70 ರಷ್ಟು ಮಕ್ಕಳು ಮಾನಸಿಕ ಆರೋಗ್ಯವನ್ನು ತಮ್ಮ ಪಠ್ಯಕ್ರಮದಲ್ಲಿ ಸೇರಿಸಿಕೊಳ್ಳಬೇಕೆಂದು ಬಯಸುತ್ತಾರೆ. ಶೇಕಡಾ 92 ರಷ್ಟು ಜನರು ಲಿಂಗ ಸಂವೇದನೆಯ ಕುರಿತು ಪಠ್ಯದಲ್ಲಿ ಸೇರಿಸಲು ಬಯಸಿದ್ದು, ಜೊತೆಗೆ ಲೈಂಗಿಕತೆ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಬಗ್ಗೆಯೂ ವಿಷಯಗಳನ್ನ ಸೇರಿಸುವಂತೆ ಅಭಿಪ್ರಾಯಪಟ್ಟಿದ್ದಾರೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಿಗೆ ಕೈಗೆಟುಕುವ ಆರೋಗ್ಯ ಸೇವೆ ಮತ್ತು ಪೌಷ್ಠಿಕ ಆಹಾರದ ಲಭ್ಯತೆಯಿಲ್ಲ ಎಂದೂ ಮಕ್ಕಳು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯಲ್ಲಿ 85 ಶೇಕಡಾ ಮಕ್ಕಳು ನಾಯಕರು ಮಕ್ಕಳೊಂದಿಗೆ ಮಾತನಾಡಬೇಕು ಮತ್ತು ಪರಿಸರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಾಗ ಅವರ ಅನುಭವಗಳು ಮತ್ತು ಆಲೋಚನೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಮಾದಕ ದ್ರವ್ಯ ಸೇವನೆ, ಮಕ್ಕಳ ಕಳ್ಳಸಾಗಣೆ, ಮಾನವ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪ್ರಚಾರದ ವಿಷಯಗಳಿಗೂ ಸಹ ಈ ಸಮೀಕ್ಷೆಯಲ್ಲಿ ಪ್ರಮುಖ ಆದ್ಯತೆಯಿದೆ.

ಇದನ್ನೂ ಓದಿ: 2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ಮಕ್ಕಳ ಪ್ರಣಾಳಿಕೆಯಲ್ಲಿನ ಶಿಫಾರಸುಗಳು:

  • ಎಲ್ಲಾ ರೀತಿಯ ಹಿಂಸಾಚಾರದಿಂದ ರಕ್ಷಣೆ.
  • ಕೈಗೆಟುಕುವ ಆರೋಗ್ಯ ಸೇವೆ ಮತ್ತು ಪೌಷ್ಠಿಕ ಆಹಾರದ ಲಭ್ಯತೆ.
  • ವರ್ಗ, ಜಾತಿ, ಲಿಂಗ, ಧರ್ಮ ಅಥವಾ ಯಾವುದೇ ಆಧಾರದ ಮೇಲೆ ಯಾವುದೇ ತಾರತಮ್ಯವಿರಬಾರದು.
  • ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ.
  • ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳುವುದು.
  • ಅಸ್ಸಾಂನಾದ್ಯಂತ ಎಲ್ಲಾ ಕುಟುಂಬಗಳಿಗೆ ಸುರಕ್ಷಿತ ಕುಡಿಯುವ ನೀರು ಮತ್ತು ನೈರ್ಮಲ್ಯತೆಯ ವ್ಯವಸ್ಥೆ.
  • ಆಟವಾಡಲು, ಬೆಳೆಯಲು ಮಕ್ಕಳಿಗೆ ಸುರಕ್ಷಿತ ಸ್ಥಳಗಳು.
  • ಗೌರವಯುತ ಜೀವನವನ್ನು ನಡೆಸಲು ಅವರಿಗೆ ಸಾಕಷ್ಟು ಪುನರ್ವಸತಿ ಮತ್ತು ಸಾಮಾಜಿಕ ಬೆಂಬಲವನ್ನು ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ವಿಭಿನ್ನ ಕ್ರಮಗಳನ್ನು ತೆಗೆದುಕೊಳ್ಳುವುದು.

ಹೀಗೆ ಇನ್ನೂ ಹತ್ತಾರು ಅಂಶಗಳನ್ನು ಮಕ್ಕಳು ಬೇಡಿಕೆಯ ರೂಪದ ಈ ಪ್ರನಾಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಭಾರತ ಒಕ್ಕೂಟ ವ್ಯವಸ್ಥೆ ಎಂಬ ಒಂದು ಅಣಕು ಪ್ರಹಸನ: ಬಿ.ಶ್ರೀಪಾದ್ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...