Homeಮುಖಪುಟಅಸ್ಸಾಂ: ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟ 4 ಸಾವಿರ ಮಕ್ಕಳು!

ಅಸ್ಸಾಂ: ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟ 4 ಸಾವಿರ ಮಕ್ಕಳು!

"ಇಲ್ಲಿನ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಗಾಗಿ ತಯಾರಿಸುವ ಪ್ರಣಾಳಿಕೆಗಳಲ್ಲಿ ನಮ್ಮ ಬೇಡಿಕೆಗಳನ್ನು ಸೇರಿಸುವಂತೆ ಒತ್ತಾಯಿಸಿ, ಈ ಪ್ರಣಾಳಿಕೆಯ ಮೂಲಕ ಶಿಫಾರಸ್ಸುಗಳನ್ನು ಮಾಡುತ್ತಿದ್ದೇವೆ..."

- Advertisement -
- Advertisement -

ಅಸ್ಸಾಂನ 17 ಜಿಲ್ಲೆಯ ಸುಮಾರು 4 ಸಾವಿರ ಮಕ್ಕಳು ಸೇರಿ ಅಲ್ಲಿನ ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ರಚಿಸಿಕೊಟ್ಟಿದ್ದು, ಅದರಲ್ಲಿ “ಉಚಿತ ಮತ್ತು ಖಡ್ಡಾಯ ಶಿಕ್ಷಣ, ಹಿಂಸಾಚಾರ ಮುಕ್ತ ಮತ್ತು ಲಿಂಗ ಸಮಾನತೆಯಂತಹ ಭರವಸೆಗಳ ಬೇಡಿಕೆಯನ್ನು” ಇಟ್ಟಿದ್ದಾರೆ. 2021 ರಲ್ಲಿ ಅಸ್ಸಾಂ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ನಿನ್ನೆ ವಿಶ್ವ ಮಕ್ಕಳ ದಿನದ ಅಂಗವಾಗಿ ಗೌಹಾತಿ ಪತ್ರಿಕಾ ಭವನದಲ್ಲಿ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. 

ಇಲ್ಲಿ, ಮಜುಲಿ ಜಿಲ್ಲೆಯ 16 ವರ್ಷದ ಕುಲದೀಪ್ ನಾರಾಯಣ್ ಬೋರಾ ಮಾತನಾಡಿ, “ಇಲ್ಲಿನ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಗಾಗಿ ತಯಾರಿಸುವ ಪ್ರಣಾಳಿಕೆಗಳಲ್ಲಿ ನಮ್ಮ ಬೇಡಿಕೆಗಳನ್ನು ಸೇರಿಸುವಂತೆ ಒತ್ತಾಯಿಸಿ, ಈ ಪ್ರಣಾಳಿಕೆಯ ಮೂಲಕ ಶಿಫಾರಸ್ಸುಗಳನ್ನು ಮಾಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

ಈ ಪ್ರಣಾಳಿಕೆಯ ಮೇಲುಸ್ತುವಾರಿಯನ್ನು ರಾಷ್ಟ್ರೀಯ ಮಟ್ಟದ ಎನ್‌ಜಿಓ ‘ಪ್ರತ್ಯೇಕ್’ ವಹಿಸಿಕೊಂಡಿದ್ದು, ಇದಕ್ಕೆ ಯುನಿಸೆಫ್ ತಾಂತ್ರಿಕ ಸಹಕಾರವನ್ನು ನೀಡಿ, “ರಿ-ಇಮ್ಯಾಜಿನ್” ಟ್ವಿಟ್ಟರ್‌ ಅಭಿಯಾನವನ್ನು ಪ್ರಾರಂಭಿಸಿ ಕೊರೊನೋತ್ತರದ ಜಗತ್ತನ್ನು ಸೃಜನಾತ್ಮಕವಾಗಿ ನಿರ್ಮಿಸಲು ಕರೆ ನೀಡಿದೆ.

ಸಾಂಕ್ರಾಮಿಕ ರೋಗದ ನಂತರದ ಜಗತ್ತನ್ನು ಕಟ್ಟುವ ಪ್ರಯತ್ನಗಳಿಗೆ ಮತ್ತು ಶಿಕ್ಷಣದ ರೂಪವನ್ನು ಉನ್ನತೀಕರಿಸಲು ಮಕ್ಕಳು ಮತ್ತು ಯುವಜನರು ಸಹಕರಿಸಬೇಕೆಂದು ರಿ-ಇಮ್ಯಾಜಿನ್ ಅಭಿಯಾನವು ವಿಶ್ವ ಮಕ್ಕಳ ದಿನಾಚರಣೆಯಂದು ಕರೆ ನೀಡಿದೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ಮಕ್ಕಳೇ ರಚಿಸಿರುವ ಈ ಪ್ರಣಾಳಿಕೆಯನ್ನು ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಪ್ರತಿಪಕ್ಷದ ನಾಯಕ ಮತ್ತು ಅಸ್ಸಾಂನ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರುಗಳಿಗೆ ನೀಡಲಾಗುವುದು.

ಈ ಪ್ರಣಾಳಿಕೆ ತಯಾರಿಕೆಗಾಗಿ, ಆನ್‌ಲೈನ್ ಮತ್ತು ಆಫ್‌ಲೈನ್ ಸ್ಕೋರ್‌ಕಾರ್ಡ್‌ಗಳನ್ನು ಬಳಸಿಕೊಂಡು ಒಂದು ಸಮೀಕ್ಷೆಯನ್ನು ನಡೆಸಲಾಯಿತು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ವಿವಿಧ ಸಂಸ್ಥೆಗಳ ಕ್ಷೇತ್ರ ಸಂಯೋಜಕರು, ಮಕ್ಕಳು ಮತ್ತು ಯುವಜನರನ್ನು ತಲುಪಿ ಕೆಲವು ಸಂದರ್ಭಗಳಲ್ಲಿ ನೇರ ಮುಖಾಮುಖಿಯಾಗಿ ಮಾಹಿತಿ ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ನಾನು ಅಸ್ಸಾಂನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ: ಮಾಜಿ ಸಿಜೆಐ ರಂಜನ್ ಗೊಗೊಯ್

ಈ ಸಮೀಕ್ಷೆಯ ಫಲಿತಾಂಶಗಳ ಪ್ರಕಾರ, ಶೇಕಡಾ 70 ರಷ್ಟು ಮಕ್ಕಳು ವೃತ್ತಿಪರ ತರಬೇತಿ ಮತ್ತು ವೃತ್ತಿ ಸಮಾಲೋಚನೆಯ ಅಗತ್ಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಶೇಕಡ 70 ರಷ್ಟು ಮಕ್ಕಳು ಮಾನಸಿಕ ಆರೋಗ್ಯವನ್ನು ತಮ್ಮ ಪಠ್ಯಕ್ರಮದಲ್ಲಿ ಸೇರಿಸಿಕೊಳ್ಳಬೇಕೆಂದು ಬಯಸುತ್ತಾರೆ. ಶೇಕಡಾ 92 ರಷ್ಟು ಜನರು ಲಿಂಗ ಸಂವೇದನೆಯ ಕುರಿತು ಪಠ್ಯದಲ್ಲಿ ಸೇರಿಸಲು ಬಯಸಿದ್ದು, ಜೊತೆಗೆ ಲೈಂಗಿಕತೆ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಬಗ್ಗೆಯೂ ವಿಷಯಗಳನ್ನ ಸೇರಿಸುವಂತೆ ಅಭಿಪ್ರಾಯಪಟ್ಟಿದ್ದಾರೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಿಗೆ ಕೈಗೆಟುಕುವ ಆರೋಗ್ಯ ಸೇವೆ ಮತ್ತು ಪೌಷ್ಠಿಕ ಆಹಾರದ ಲಭ್ಯತೆಯಿಲ್ಲ ಎಂದೂ ಮಕ್ಕಳು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯಲ್ಲಿ 85 ಶೇಕಡಾ ಮಕ್ಕಳು ನಾಯಕರು ಮಕ್ಕಳೊಂದಿಗೆ ಮಾತನಾಡಬೇಕು ಮತ್ತು ಪರಿಸರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಾಗ ಅವರ ಅನುಭವಗಳು ಮತ್ತು ಆಲೋಚನೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಮಾದಕ ದ್ರವ್ಯ ಸೇವನೆ, ಮಕ್ಕಳ ಕಳ್ಳಸಾಗಣೆ, ಮಾನವ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪ್ರಚಾರದ ವಿಷಯಗಳಿಗೂ ಸಹ ಈ ಸಮೀಕ್ಷೆಯಲ್ಲಿ ಪ್ರಮುಖ ಆದ್ಯತೆಯಿದೆ.

ಇದನ್ನೂ ಓದಿ: 2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ಮಕ್ಕಳ ಪ್ರಣಾಳಿಕೆಯಲ್ಲಿನ ಶಿಫಾರಸುಗಳು:

  • ಎಲ್ಲಾ ರೀತಿಯ ಹಿಂಸಾಚಾರದಿಂದ ರಕ್ಷಣೆ.
  • ಕೈಗೆಟುಕುವ ಆರೋಗ್ಯ ಸೇವೆ ಮತ್ತು ಪೌಷ್ಠಿಕ ಆಹಾರದ ಲಭ್ಯತೆ.
  • ವರ್ಗ, ಜಾತಿ, ಲಿಂಗ, ಧರ್ಮ ಅಥವಾ ಯಾವುದೇ ಆಧಾರದ ಮೇಲೆ ಯಾವುದೇ ತಾರತಮ್ಯವಿರಬಾರದು.
  • ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ.
  • ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳುವುದು.
  • ಅಸ್ಸಾಂನಾದ್ಯಂತ ಎಲ್ಲಾ ಕುಟುಂಬಗಳಿಗೆ ಸುರಕ್ಷಿತ ಕುಡಿಯುವ ನೀರು ಮತ್ತು ನೈರ್ಮಲ್ಯತೆಯ ವ್ಯವಸ್ಥೆ.
  • ಆಟವಾಡಲು, ಬೆಳೆಯಲು ಮಕ್ಕಳಿಗೆ ಸುರಕ್ಷಿತ ಸ್ಥಳಗಳು.
  • ಗೌರವಯುತ ಜೀವನವನ್ನು ನಡೆಸಲು ಅವರಿಗೆ ಸಾಕಷ್ಟು ಪುನರ್ವಸತಿ ಮತ್ತು ಸಾಮಾಜಿಕ ಬೆಂಬಲವನ್ನು ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ವಿಭಿನ್ನ ಕ್ರಮಗಳನ್ನು ತೆಗೆದುಕೊಳ್ಳುವುದು.

ಹೀಗೆ ಇನ್ನೂ ಹತ್ತಾರು ಅಂಶಗಳನ್ನು ಮಕ್ಕಳು ಬೇಡಿಕೆಯ ರೂಪದ ಈ ಪ್ರನಾಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಭಾರತ ಒಕ್ಕೂಟ ವ್ಯವಸ್ಥೆ ಎಂಬ ಒಂದು ಅಣಕು ಪ್ರಹಸನ: ಬಿ.ಶ್ರೀಪಾದ್ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...