Homeಮುಖಪುಟಅಸ್ಸಾಂ: ಇದ್ದದ್ದು 90 ಮತಗಳು, ಚಲಾವಣೆಯಾಗಿದ್ದು 181, ಪ್ರಕರಣದಲ್ಲಿ 6 ಅಧಿಕಾರಿಗಳ ಅಮಾನತು

ಅಸ್ಸಾಂ: ಇದ್ದದ್ದು 90 ಮತಗಳು, ಚಲಾವಣೆಯಾಗಿದ್ದು 181, ಪ್ರಕರಣದಲ್ಲಿ 6 ಅಧಿಕಾರಿಗಳ ಅಮಾನತು

- Advertisement -
- Advertisement -

ಕೇವಲ 90 ನೋಂದಾಯಿತ ಮತದಾರರನ್ನು ಹೊಂದಿರುವ ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಮತಗಟ್ಟೆ ಒಂದರಲ್ಲಿ 181 ಮತಗಳನ್ನು ಚಲಾಯಿಸಲಾಗಿದೆ. ಪ್ರಕರಣ ಬೆಳಕಿಗೆ ಬಂದ ನಂತರ ಚುನಾವಣಾ ಆಯೋಗ  ಮತಗಟ್ಟೆಯ 6 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಏಪ್ರಿಲ್ 1 ರಂದು ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ನಡೆಯಿತು. ಇಲ್ಲಿನ ಹಫ್ಲಾಂಗ್ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಂಖ್ಯೆ 107 (ಎ) ರಲ್ಲಿ ಈ ಘಟನೆ ನಡೆದಿದೆ. ಅಂದು ಶೇ 74ರಷ್ಟು ಮತದಾನವಾಗಿತ್ತು.  2016 ರಲ್ಲಿ ಬಿಜೆಪಿಯ ಬಿರ್ ಭದ್ರಾ ಹಗ್ಗರ್ ಇಲ್ಲಿಂದ ಗೆದ್ದಿದ್ದಾರೆ. ಮತದಾನದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಮುಖ್ಯ ಕೇಂದ್ರಕ್ಕೆ ಸಹಾಯಕ ಮತದಾನ ಕೇಂದ್ರವಾಗಿದ್ದ ಈ ಬೂತ್‌ಗೆ ಮರು-ಮತದಾನದ ಆದೇಶ ಹೊರಡಿಸಲು ಚುನಾವಣಾ ಆಯೋಗ ಯೋಚಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಅಧಿಕೃತ ಆದೇಶವನ್ನು ಇನ್ನೂ ಹೊರಡಿಸಬೇಕಿದೆ.

ಇದನ್ನೂ ಓದಿ: ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

“ಮುಖ್ಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಲು ಆಗದ ಮತದಾರರಿಗೆ ಸಹಾಯಕ ಮತಗಟ್ಟೆಯಲ್ಲಿ ಮತ ಚಲಾಯಿಸಲು ಅವಕಾಶ ನೀಡಿದ್ದಾಗಿ ಮತದಾನದ ಕೇಂದ್ರದ ಅಧ್ಯಕ್ಷ ಮತ್ತು ಅಧಿಕಾರಿ ತಮ್ಮ ಹೇಳಿಕೆಗಳಲ್ಲಿ ಒಪ್ಪಿಕೊಂಡಿದ್ದಾರೆ” ಎಂದು ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕರ್ತವ್ಯ ಲೋಪದ ಆರೋಪದಲ್ಲಿ ಸೀಖೋಸಿಯಮ್ ಲಾಂಗುಮ್ (ಸೆಕ್ಟರ್ ಆಫೀಸರ್), ಪ್ರಹ್ಲಾದ್ ಚ ರಾಯ್ (ಪ್ರೆಸಿಡಿಂಗ್ ಆಫೀಸರ್), ಪರಮೇಶ್ವರ ಚರಂಗ್ಸಾ (1 ನೇ ಮತಗಟ್ಟೆ ಅಧಿಕಾರಿ), ಸ್ವರಾಜ್ ಕಾಂತಿ ದಾಸ್ (2 ನೇ ಮತಗಟ್ಟೆ ಅಧಿಕಾರಿ) ಮತ್ತು ಲಾಲ್ಜಮ್ಲೊ ಥೀಕ್ (3 ನೇ ಮತಗಟ್ಟೆ ಅಧಿಕಾರಿ) ಅವರನ್ನು ಅಮಾನತುಗೊಳಿಸಲಾಗಿದೆ.

ಅಸ್ಸಾಂನಲ್ಲಿ ಮಾರ್ಚ್ 27 ರಂದು ಪ್ರಾರಂಭವಾದ ಮೂರು ಹಂತದ ವಿಧಾನಸಭಾ ಚುನಾವಣೆಯಲ್ಲಿ ಎರಡು ಹಂತಗಳು ಮಗಿದಿವೆ. ಮೂರನೇ ಮತ್ತು ಕೊನೆಯ ಹಂತದ ಮತದಾನ ಇಂದು (ಏಪ್ರಿಲ್ 6) ನಡೆಯುತ್ತಿದೆ.


ಇದನ್ನೂ ಓದಿ: ಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...