Homeಮುಖಪುಟಅಸ್ಸಾಂ: ಬುರ್ಖಾ ಧರಿಸಿಲ್ಲ ಎಂದು ಆಕ್ಷೇಪ: ಜೀನ್ಸ್ ಧರಿಸಿದ್ದ ಯುವತಿಯನ್ನು ಅಂಗಡಿಯಿಂದ ಹೊರದಬ್ಬಿದ ಮಾಲೀಕ

ಅಸ್ಸಾಂ: ಬುರ್ಖಾ ಧರಿಸಿಲ್ಲ ಎಂದು ಆಕ್ಷೇಪ: ಜೀನ್ಸ್ ಧರಿಸಿದ್ದ ಯುವತಿಯನ್ನು ಅಂಗಡಿಯಿಂದ ಹೊರದಬ್ಬಿದ ಮಾಲೀಕ

- Advertisement -
- Advertisement -

ಬುರ್ಖಾ ಧರಿಸಿಲ್ಲ ಎಂದು ಅಂಗಡಿ ಮಾಲೀಕರೊಬ್ಬರು ಆಕ್ಷೇಪ ವ್ಯಕ್ತಿ ಪಡಿಸಿ, ಜೀನ್ಸ್ ಧರಿಸಿದ್ದ ಕಾರಣಕ್ಕೆ  ಯುವತಿಗೆ ಅವಮಾನ ಮಾಡಿ ಅಂಗಡಿಯಿಂದ ಹೊರ ಹಾಕಿ ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಅಸ್ಸಾಂನ ಬಿಸ್ವನಾಥ್ ಜಿಲ್ಲೆಯಲ್ಲಿ ನಡೆದಿದೆ.

ಯುವತಿಯನ್ನು ಅವಮಾನ ಮಾಡಿದಕ್ಕೆ ಪ್ರತಿಭಟನೆ ನಡೆಸಲು ಹೋದ ಯುವತಿಯ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ಆರೋಪಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಗುವಾಹಟಿಯಿಂದ ಸುಮಾರು 230 ಕಿಮೀ ದೂರದಲ್ಲಿರುವ ಬಿಸ್ವನಾಥ್ ಚರಿಯಾಲಿಯಲ್ಲಿರುವ ಮೊಬೈಲ್ ಫೋನ್ ಅಂಗಡಿಯಲ್ಲಿ ಯುವತಿ ಇಯರ್‌ಫೋನ್ ಖರೀದಿಸಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

ಮೊಬೈಲ್ ಅಂಗಡಿಯ ಮಾಲೀಕ ನೂರುಲ್ ಅಮೀನ್ ಯುವತಿಗೆ ಇಯರ್‌ಪೋನ್‌ ನೀಡಲು ನಿರಾಕರಿಸಿದ್ದಲ್ಲದೆ, ಬುರ್ಖಾ ಬದಲಿಗೆ ಜೀನ್ಸ್ ಧರಿಸಿದ್ದಕ್ಕಾಗಿ ಹುಡುಗಿಯನ್ನು ಅವಮಾನಿಸಿದ್ದಾರೆ. ನಂತರ ಆಕೆಯನ್ನು ಅಂಗಡಿಯಿಂದ ಹೊರಗೆ ತಳ್ಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

“ಬುರ್ಖಾ ಬದಲಿಗೆ ಜೀನ್ಸ್ ಧರಿಸಿದ್ದಕ್ಕಾಗಿ ನನ್ನ ಮಗಳ ಜೊತೆಗೆ ಅನುಚಿತವಾಗಿ ವರ್ತಿಸಿ ನೂರುಲ್ ಅಂಗಡಿಯಿಂದ ಹೊರಹಾಕಲಾಗಿದೆ. ಈ ಜನರು ಅಸ್ಸಾಂನಲ್ಲಿ ತಾಲಿಬಾನ್ ವ್ಯವಸ್ಥೆಯನ್ನು ತರಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಹುಡುಗಿಯರನ್ನು ಬುರ್ಖಾ ಮತ್ತು ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ” ಎಂದು ಯುವತಿಯ ತಂದೆ ಹೇಳಿದ್ದಾರೆ.

“ನಾವು ಅಸ್ಸಾಂನಲ್ಲಿ ಹುಟ್ಟಿ ಬೆಳೆದಿದ್ದೇವೆ ಮತ್ತು ಅಸ್ಸಾಮಿ ಸಂಸ್ಕೃತಿಯನ್ನು ಅನುಸರಿಸುತ್ತಿದ್ದೇವೆ. ನನ್ನ ಮಗಳು BCA (ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್) ಓದುತ್ತಿದ್ದಾಳೆ. ಆಕೆ ಸರ್ಕಾರಿ ಶಾಲೆಯಲ್ಲಿ ಅಸ್ಸಾಮಿ ಸಂಸ್ಕೃತಿಯಲ್ಲಿ ಓದಿದ್ದಾಳೆ. ಆದರೆ, ಈಗ ಈ ಜನರು ಬುರ್ಖಾ ಮತ್ತು ಹಿಜಾಬ್ ಧರಿಸಿ ತಾಲಿಬಾನ್ ಶೈಲಿಯನ್ನು ಅನುಸರಿಸುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ,” ಎಂದು ಆರೋಪಿಸಿದ್ದಾರೆ.

“ಅಕ್ಟೋಬರ್ 25 ರಂದು ಘಟನೆ ನಡೆದಿದ್ದು, ಪ್ರಮುಖ ಆರೋಪಿಗಳಾದ ನೂರುಲ್ ಅಮೀನ್, ಸುಫಿಕುಲ್ ಇಸ್ಲಾಂ ಮತ್ತು ರಫೀಕುಲ್ ಇಸ್ಲಾಂ ಅವರನ್ನು ಬಂಧಿಸಿ ಜೈಲಿಗೆ ಕಳಿಸಿದ್ದೇವೆ. ಯುವತಿಯ ಕುಟುಂಬ ಸದಸ್ಯರು ಬಿಸ್ವನಾಥ್ ಚರಿಯಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ದೂರಿನ ಮೇರೆಗೆ ನಾವು ಅವರನ್ನು ಬಂಧಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಜೇನ್ ಸಿಂಗ್ ತಿಳಿಸಿದ್ದಾರೆ.


ಇದನ್ನೂ ಓದಿ: ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ತಾಲಿಬಾನ್ ಮನಸ್ಥಿತಿಗಳನ್ನು ಮೊಳಕೆಯಲ್ಲೇ ಚಿವುಟಬೇಕು. ಇನ್ನೊಬ್ಬರ ಮೇಲೆ ಬುರ್ಖಾ ಹೇರಲು ಇವರಿಗೆ ಅಧಿಕಾರ ಕೊಟ್ಟವರಾರು ???

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...