Homeಮುಖಪುಟಅಸ್ಸಾಂ: ಕ್ರಿಸ್‌ಮಸ್ ಆಚರಣೆಗೆ ತಡೆಯೊಡ್ಡಿದ ಬಜರಂಗದಳ ಸದಸ್ಯರು

ಅಸ್ಸಾಂ: ಕ್ರಿಸ್‌ಮಸ್ ಆಚರಣೆಗೆ ತಡೆಯೊಡ್ಡಿದ ಬಜರಂಗದಳ ಸದಸ್ಯರು

- Advertisement -
- Advertisement -

ಕ್ರಿಶ್ಚಿಯನ್ನರು ಮಾತ್ರ ಕ್ರಿಸ್‌ಮಸ್ ಆಚರಿಸಬೇಕೆ ಹೊರತು ಹಿಂದೂಗಳು ಆಚರಿಸಬಾರದು ಎಂದು ಬಜರಂಗದಳ ಸದಸ್ಯರು ಚರ್ಚ್‌ಗೆ ನುಗ್ಗಿ, ದಾಂಧಲೆ ನಡೆಸಿ ಕ್ರಿಸ್‌ಮಸ್ ಆಚರಣೆಗೆ ತಡೆಯೊಡ್ಡಿರುವ ಅಹಿತಕರ ಘಟನೆ ಅಸ್ಸಾಂನ ಸಿಲ್ಚಾರ್‌ನಲ್ಲಿ ನಡೆದಿದೆ.

ನಾವು ಕ್ರಿಶ್ಚಿಯನ್ನರು ಕ್ರಿಸ್‌ಮಸ್ ಆಚರಿಸುವುದಕ್ಕೆ ವಿರೋಧಿಸುವುದಿಲ್ಲ. ಆದರೆ ಡಿಸೆಂಬರ್ 25 ಹಿಂದೂಗಳ ತುಳಸಿ ಹಬ್ಬ ಕೂಡ. ಆದರೆ ಹಿಂದೂಗಳು ಯಾರೂ ತುಳಸಿ ಹಬ್ಬ ಆಚರಿಸಿಲ್ಲ. ಇದು ನಮ್ಮ ಭಾವನೆಗಳಿಗೆ ಧಕ್ಕೆ ತಂದಿದೆ. ಹಿಂದೂ ಹುಡುಗ-ಹುಡುಗಿಯರು ಸಹ ಮೆರ್ರಿ ಕ್ರಿಸ್‌ಮಸ್ ಎಂದು ಹೇಳುತ್ತಾ ಹೊರಟರೆ ನಮ್ಮ ಧರ್ಮವನ್ನು ಉಳಿಸುವವರು ಯಾರು? ಇದು ನಮಗೆ ತುಂಬಾ ನೋವು ಮಾಡುತ್ತದೆ. ಹಾಗಾಗಿ ಹಿಂದೂಗಳು ಕ್ರಿಸ್‌ಮಸ್ ಆಚರಿಸುವುದನ್ನು ತಡೆಯುತ್ತಿದ್ದೇವೆ ಎಂದು ಯುವಕನೊಬ್ಬ ಹೇಳಿರುವುದು ವೈರಲ್ ವಿಡಿಯೋದಲ್ಲಿ ಸೆರೆಯಾಗಿದೆ.

ಚರ್ಚ್‌ನ ಬಾಗಿಲಿನಲ್ಲೇ ಜನರನ್ನು ತಡೆಯುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದದೆ. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ. ಸ್ವಯಂ ಪ್ರೇರಿತ ದೂರು ದಾಖಲಿಸುವಷ್ಟು ಗಂಭೀರ ಪ್ರಕರಣವಲ್ಲ ಎಂದು ಪೊಲೀಸರು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ವರ್ಷ ಸಹ ವಿಶ್ವ ಹಿಂದೂ ಪರಿಷತ್ ಮುಖಂಡನೊಬ್ಬ ಹಿಂದೂಗಳು ಕ್ರಿಸ್‌ಮಸ್ ಆಚರಿಸಲು ಚರ್ಚ್‌ಗೆ ತೆರಳಿದರೆ ಅವರ ಮೇಲೆ ಹಲ್ಲೆ ಮಾಡಲಾಗುವುದು ಎಂದು ಬೆದರಿಸಿದ್ದ.

ಇತ್ತೀಚೆಗೆ ಚರ್ಚ್‌ಗಳ ಮೇಲೆ ದಾಳಿ, ಶಾಲೆಗಳ ಮೇಲೆ ದಾಳಿ, ಕ್ರಿಸ್‌ಮಸ್‌ ಆಚರಣೆಗೆ ಬಲಪಂಥೀಯ ಶಕ್ತಿಗಳು ತಡೆಯೊಡ್ಡುವ ಕೆಲಸ ಆರಂಭಿಸಿದ್ದಾರೆ. ನಿನ್ನೆ ಬಲಪಂಥೀಯ ಗುಂಪು ಗುರ್ಗಾಂವ್‌ನ ಪಟೌಡಿ ಚರ್ಚ್ ಒಂದಕ್ಕೆ ನುಗ್ಗಿ ದಾಂಧಲೆ ನಡೆಸಿ, ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ.

ಈ ಕುರಿತು ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಲಪಂಥೀಯ ಕಾರ್ಯಕರ್ತರು ವೇದಿಕೆಗೆ ನುಗ್ಗಿ, ಅಲ್ಲಿದ್ದವರನ್ನು ಕೆಳಗೆ ತಳ್ಳಿ, ಮೈಕ್ ಕಿತ್ತುಕೊಂಡು ಜೈ ಶ್ರೀರಾಮ್ ಮತ್ತು ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಗಳನ್ನು ಕೂಗುವುದನ್ನು ನೋಡಬಹುದು.

ಅದೇ ರೀತಿಯ ರಾಜ್ಯದ ಮಂಡ್ಯ ಜಿಲ್ಲೆಯ ಪಾಂಡವಪುರದ ನಿರ್ಮಲ ಇಂಗ್ಲಿಷ್ ಶಾಲೆಯಲ್ಲಿ ವಿದ್ಯಾರ್ಥಿಗಳು ಕ್ರಿಸ್‌ಮಸ್ ಆಚರಣೆ ಮಾಡದಂತೆ ತಡೆದ ಘಟನೆ ಗುರುವಾರ ನಡೆದಿದೆ. ದುಷ್ಕರ್ಮಿಗಳ ಗುಂಪು ಬಲವಂತವಾಗಿ ಶಾಲೆಗೆ ನುಗ್ಗಿ ಶಾಲೆಯಲ್ಲಿರುವ ಶಿಕ್ಷಕರ ಜೊತೆಗೆ ವಾಗ್ವಾದ ನಡೆಸಿ ಬೆದರಿಕೆ ಹಾಕಿದ್ದಾರೆ.


ಇದನ್ನೂ ಓದಿ: ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...