Homeಮುಖಪುಟಅಸ್ಸಾಂ: ಉದ್ಯೋಗದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ

ಅಸ್ಸಾಂ: ಉದ್ಯೋಗದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯೂಎಸ್‌) ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ನೀಡಲಾಗಿರುವ 10% ಮೀಸಲಾತಿಯನ್ನು ರದ್ದುಗೊಳಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

“ಇಡಬ್ಲ್ಯೂಎಸ್‌ [ಆರ್ಥಿಕವಾಗಿ ದುರ್ಬಲ ವರ್ಗ] ಉದ್ಯೋಗ ಕೋಟಾದಲ್ಲಿನ ತಡೆಯು ಈಗಾಗಲೇ ಜಾಹೀರಾತು ಮಾಡಲಾದ ಹುದ್ದೆಗಳ ಮೇಲೆ ಪರಿಣಾಮ ಬೀರುವುದಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ಜಾರಿಯಲ್ಲಿರುತ್ತದೆ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಮೀಸಲಾತಿ ಸೌಲಭ್ಯವನ್ನು ಪಡೆಯದ ಸಮುದಾಯಗಳಿಗೆ ಇಡಬ್ಲ್ಯೂಎಸ್ ಮೀಸಲಾತಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿತು. ಜೊತೆಗೆ ಎಂಟು ಲಕ್ಷ ರೂ. ಆದಾಯ ಮಿತಿಯವರೆಗೂ ಈ ಕೋಟಾ ಅನ್ವಯವಾಗುತ್ತದೆ ಎಂದು ಕಾನೂನು ರೂಪಿಸಿ ಸಂವಿಧಾನ ತಿದ್ದುಪಡಿ ಮಾಡಲಾಯಿತು.

ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಅಥವಾ 1,000 ಚದರ ಅಡಿ ವಸತಿ ಭೂಮಿ ಹೊಂದಿರುವ ಕುಟುಂಬಗಳ ವ್ಯಕ್ತಿಗಳು ಈ ಕೋಟಾಕ್ಕೆ ಅರ್ಹರಾಗಿರುವುದಿಲ್ಲ. ಕೇಂದ್ರ ಸರ್ಕಾರ ವಿಧಿಸಿರುವ ಮಾನದಂಡಗಳು ಎಸ್.ಸಿ., ಎಸ್‌.ಟಿ., ಒಬಿಸಿ ವರ್ಗಗಳಲ್ಲಿನ ಅವಕಾಶ ವಂಚಿತ ಸಮುದಾಯಗಳನ್ನು ಅಣಕಿಸುವಂತಿವೆ ಎಂಬ ಟೀಕೆಗಳು ಸರ್ವೇಸಾಮಾನ್ಯವಾಗಿವೆ.

ಇಡಬ್ಲ್ಯೂಎಸ್ ಕೋಟಾ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಆದಾಗ್ಯೂ, ನವೆಂಬರ್ 7 ರಂದು ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು 3:2 ತೀರ್ಪು ನೀಡಿತು. 10% ಇಡಬ್ಲ್ಯೂಎಸ್‌ ಕೋಟಾವನ್ನು ಎತ್ತಿಹಿಡಿಯಿತು.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಉದ್ಯೋಗ ಮೀಸಲಾತಿಯನ್ನು ಜಾರಿಗೊಳಿಸಿದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ ಬಿಜೆಪಿ ಆಡಳಿತ ನಡೆಸುತ್ತಿರುವ ಅಸ್ಸಾಂ ಕೂಡ ಸೇರಿದೆ.

ಆಂಧ್ರ ಪ್ರದೇಶ, ದೆಹಲಿ, ಗೋವಾ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ, ಮಿಜೋರಾಂ, ತೆಲಂಗಾಣ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಇಡಬ್ಲ್ಯೂಎಸ್‌ ಜಾರಿಗೊಳಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಇಡಬ್ಲ್ಯೂಎಸ್‌ ಕೋಟಾಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಅಸ್ಸಾಂನಲ್ಲಿ ವಿರೋಧ ಪಕ್ಷಗಳು ಟೀಕಿಸಿವೆ. ಈ ನಿರ್ಧಾರವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

“ಇಡಬ್ಲ್ಯೂಎಸ್‌ ಬರುವ ಸಮುದಾಯಗಳಿಗೆ 10% ಉದ್ಯೋಗ ಕೋಟಾವನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರವನ್ನು ನಾವು ವಿರೋಧಿಸುತ್ತೇವೆ” ಎಂದು ತೃಣಮೂಲ ಕಾಂಗ್ರೆಸ್ ಅಸ್ಸಾಂ ಅಧ್ಯಕ್ಷ ರಿಪುನ್ ಬೋರಾ ಹೇಳಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಕಾಂಗ್ರೆಸ್ ಶಾಸಕ ಮತ್ತು ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಪ್ರತಿಕ್ರಿಯಿಸಿ, “ಅಸ್ಸಾಂ ಸರ್ಕಾರ ತಂದಿರುವ ಆರ್ಥಿಕ ಬಿಕ್ಕಟ್ಟಿನ ಕಾರಣ ವೆಚ್ಚ ಕಡಿತದ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...