Homeಮುಖಪುಟಅಸ್ಸಾಂ: ಉದ್ಯೋಗದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ

ಅಸ್ಸಾಂ: ಉದ್ಯೋಗದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯೂಎಸ್‌) ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ನೀಡಲಾಗಿರುವ 10% ಮೀಸಲಾತಿಯನ್ನು ರದ್ದುಗೊಳಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

“ಇಡಬ್ಲ್ಯೂಎಸ್‌ [ಆರ್ಥಿಕವಾಗಿ ದುರ್ಬಲ ವರ್ಗ] ಉದ್ಯೋಗ ಕೋಟಾದಲ್ಲಿನ ತಡೆಯು ಈಗಾಗಲೇ ಜಾಹೀರಾತು ಮಾಡಲಾದ ಹುದ್ದೆಗಳ ಮೇಲೆ ಪರಿಣಾಮ ಬೀರುವುದಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ಜಾರಿಯಲ್ಲಿರುತ್ತದೆ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಮೀಸಲಾತಿ ಸೌಲಭ್ಯವನ್ನು ಪಡೆಯದ ಸಮುದಾಯಗಳಿಗೆ ಇಡಬ್ಲ್ಯೂಎಸ್ ಮೀಸಲಾತಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿತು. ಜೊತೆಗೆ ಎಂಟು ಲಕ್ಷ ರೂ. ಆದಾಯ ಮಿತಿಯವರೆಗೂ ಈ ಕೋಟಾ ಅನ್ವಯವಾಗುತ್ತದೆ ಎಂದು ಕಾನೂನು ರೂಪಿಸಿ ಸಂವಿಧಾನ ತಿದ್ದುಪಡಿ ಮಾಡಲಾಯಿತು.

ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಅಥವಾ 1,000 ಚದರ ಅಡಿ ವಸತಿ ಭೂಮಿ ಹೊಂದಿರುವ ಕುಟುಂಬಗಳ ವ್ಯಕ್ತಿಗಳು ಈ ಕೋಟಾಕ್ಕೆ ಅರ್ಹರಾಗಿರುವುದಿಲ್ಲ. ಕೇಂದ್ರ ಸರ್ಕಾರ ವಿಧಿಸಿರುವ ಮಾನದಂಡಗಳು ಎಸ್.ಸಿ., ಎಸ್‌.ಟಿ., ಒಬಿಸಿ ವರ್ಗಗಳಲ್ಲಿನ ಅವಕಾಶ ವಂಚಿತ ಸಮುದಾಯಗಳನ್ನು ಅಣಕಿಸುವಂತಿವೆ ಎಂಬ ಟೀಕೆಗಳು ಸರ್ವೇಸಾಮಾನ್ಯವಾಗಿವೆ.

ಇಡಬ್ಲ್ಯೂಎಸ್ ಕೋಟಾ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಆದಾಗ್ಯೂ, ನವೆಂಬರ್ 7 ರಂದು ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು 3:2 ತೀರ್ಪು ನೀಡಿತು. 10% ಇಡಬ್ಲ್ಯೂಎಸ್‌ ಕೋಟಾವನ್ನು ಎತ್ತಿಹಿಡಿಯಿತು.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಉದ್ಯೋಗ ಮೀಸಲಾತಿಯನ್ನು ಜಾರಿಗೊಳಿಸಿದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ ಬಿಜೆಪಿ ಆಡಳಿತ ನಡೆಸುತ್ತಿರುವ ಅಸ್ಸಾಂ ಕೂಡ ಸೇರಿದೆ.

ಆಂಧ್ರ ಪ್ರದೇಶ, ದೆಹಲಿ, ಗೋವಾ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ, ಮಿಜೋರಾಂ, ತೆಲಂಗಾಣ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಇಡಬ್ಲ್ಯೂಎಸ್‌ ಜಾರಿಗೊಳಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಇಡಬ್ಲ್ಯೂಎಸ್‌ ಕೋಟಾಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಅಸ್ಸಾಂನಲ್ಲಿ ವಿರೋಧ ಪಕ್ಷಗಳು ಟೀಕಿಸಿವೆ. ಈ ನಿರ್ಧಾರವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

“ಇಡಬ್ಲ್ಯೂಎಸ್‌ ಬರುವ ಸಮುದಾಯಗಳಿಗೆ 10% ಉದ್ಯೋಗ ಕೋಟಾವನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರವನ್ನು ನಾವು ವಿರೋಧಿಸುತ್ತೇವೆ” ಎಂದು ತೃಣಮೂಲ ಕಾಂಗ್ರೆಸ್ ಅಸ್ಸಾಂ ಅಧ್ಯಕ್ಷ ರಿಪುನ್ ಬೋರಾ ಹೇಳಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಕಾಂಗ್ರೆಸ್ ಶಾಸಕ ಮತ್ತು ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಪ್ರತಿಕ್ರಿಯಿಸಿ, “ಅಸ್ಸಾಂ ಸರ್ಕಾರ ತಂದಿರುವ ಆರ್ಥಿಕ ಬಿಕ್ಕಟ್ಟಿನ ಕಾರಣ ವೆಚ್ಚ ಕಡಿತದ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...