Homeಮುಖಪುಟಅಸ್ಸಾಂ: ಉದ್ಯೋಗದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ

ಅಸ್ಸಾಂ: ಉದ್ಯೋಗದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯೂಎಸ್‌) ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ನೀಡಲಾಗಿರುವ 10% ಮೀಸಲಾತಿಯನ್ನು ರದ್ದುಗೊಳಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

“ಇಡಬ್ಲ್ಯೂಎಸ್‌ [ಆರ್ಥಿಕವಾಗಿ ದುರ್ಬಲ ವರ್ಗ] ಉದ್ಯೋಗ ಕೋಟಾದಲ್ಲಿನ ತಡೆಯು ಈಗಾಗಲೇ ಜಾಹೀರಾತು ಮಾಡಲಾದ ಹುದ್ದೆಗಳ ಮೇಲೆ ಪರಿಣಾಮ ಬೀರುವುದಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ಜಾರಿಯಲ್ಲಿರುತ್ತದೆ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಮೀಸಲಾತಿ ಸೌಲಭ್ಯವನ್ನು ಪಡೆಯದ ಸಮುದಾಯಗಳಿಗೆ ಇಡಬ್ಲ್ಯೂಎಸ್ ಮೀಸಲಾತಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿತು. ಜೊತೆಗೆ ಎಂಟು ಲಕ್ಷ ರೂ. ಆದಾಯ ಮಿತಿಯವರೆಗೂ ಈ ಕೋಟಾ ಅನ್ವಯವಾಗುತ್ತದೆ ಎಂದು ಕಾನೂನು ರೂಪಿಸಿ ಸಂವಿಧಾನ ತಿದ್ದುಪಡಿ ಮಾಡಲಾಯಿತು.

ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಅಥವಾ 1,000 ಚದರ ಅಡಿ ವಸತಿ ಭೂಮಿ ಹೊಂದಿರುವ ಕುಟುಂಬಗಳ ವ್ಯಕ್ತಿಗಳು ಈ ಕೋಟಾಕ್ಕೆ ಅರ್ಹರಾಗಿರುವುದಿಲ್ಲ. ಕೇಂದ್ರ ಸರ್ಕಾರ ವಿಧಿಸಿರುವ ಮಾನದಂಡಗಳು ಎಸ್.ಸಿ., ಎಸ್‌.ಟಿ., ಒಬಿಸಿ ವರ್ಗಗಳಲ್ಲಿನ ಅವಕಾಶ ವಂಚಿತ ಸಮುದಾಯಗಳನ್ನು ಅಣಕಿಸುವಂತಿವೆ ಎಂಬ ಟೀಕೆಗಳು ಸರ್ವೇಸಾಮಾನ್ಯವಾಗಿವೆ.

ಇಡಬ್ಲ್ಯೂಎಸ್ ಕೋಟಾ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಆದಾಗ್ಯೂ, ನವೆಂಬರ್ 7 ರಂದು ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು 3:2 ತೀರ್ಪು ನೀಡಿತು. 10% ಇಡಬ್ಲ್ಯೂಎಸ್‌ ಕೋಟಾವನ್ನು ಎತ್ತಿಹಿಡಿಯಿತು.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಉದ್ಯೋಗ ಮೀಸಲಾತಿಯನ್ನು ಜಾರಿಗೊಳಿಸಿದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ ಬಿಜೆಪಿ ಆಡಳಿತ ನಡೆಸುತ್ತಿರುವ ಅಸ್ಸಾಂ ಕೂಡ ಸೇರಿದೆ.

ಆಂಧ್ರ ಪ್ರದೇಶ, ದೆಹಲಿ, ಗೋವಾ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ, ಮಿಜೋರಾಂ, ತೆಲಂಗಾಣ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಇಡಬ್ಲ್ಯೂಎಸ್‌ ಜಾರಿಗೊಳಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಇಡಬ್ಲ್ಯೂಎಸ್‌ ಕೋಟಾಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಅಸ್ಸಾಂನಲ್ಲಿ ವಿರೋಧ ಪಕ್ಷಗಳು ಟೀಕಿಸಿವೆ. ಈ ನಿರ್ಧಾರವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

“ಇಡಬ್ಲ್ಯೂಎಸ್‌ ಬರುವ ಸಮುದಾಯಗಳಿಗೆ 10% ಉದ್ಯೋಗ ಕೋಟಾವನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರವನ್ನು ನಾವು ವಿರೋಧಿಸುತ್ತೇವೆ” ಎಂದು ತೃಣಮೂಲ ಕಾಂಗ್ರೆಸ್ ಅಸ್ಸಾಂ ಅಧ್ಯಕ್ಷ ರಿಪುನ್ ಬೋರಾ ಹೇಳಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಕಾಂಗ್ರೆಸ್ ಶಾಸಕ ಮತ್ತು ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಪ್ರತಿಕ್ರಿಯಿಸಿ, “ಅಸ್ಸಾಂ ಸರ್ಕಾರ ತಂದಿರುವ ಆರ್ಥಿಕ ಬಿಕ್ಕಟ್ಟಿನ ಕಾರಣ ವೆಚ್ಚ ಕಡಿತದ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...