Homeಮುಖಪುಟಅಸ್ಸಾಂ: ಉದ್ಯೋಗದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ

ಅಸ್ಸಾಂ: ಉದ್ಯೋಗದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯೂಎಸ್‌) ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ನೀಡಲಾಗಿರುವ 10% ಮೀಸಲಾತಿಯನ್ನು ರದ್ದುಗೊಳಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

“ಇಡಬ್ಲ್ಯೂಎಸ್‌ [ಆರ್ಥಿಕವಾಗಿ ದುರ್ಬಲ ವರ್ಗ] ಉದ್ಯೋಗ ಕೋಟಾದಲ್ಲಿನ ತಡೆಯು ಈಗಾಗಲೇ ಜಾಹೀರಾತು ಮಾಡಲಾದ ಹುದ್ದೆಗಳ ಮೇಲೆ ಪರಿಣಾಮ ಬೀರುವುದಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶದಲ್ಲಿ ಇಡಬ್ಲ್ಯೂಎಸ್‌ ಮೀಸಲಾತಿ ಜಾರಿಯಲ್ಲಿರುತ್ತದೆ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಮೀಸಲಾತಿ ಸೌಲಭ್ಯವನ್ನು ಪಡೆಯದ ಸಮುದಾಯಗಳಿಗೆ ಇಡಬ್ಲ್ಯೂಎಸ್ ಮೀಸಲಾತಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿತು. ಜೊತೆಗೆ ಎಂಟು ಲಕ್ಷ ರೂ. ಆದಾಯ ಮಿತಿಯವರೆಗೂ ಈ ಕೋಟಾ ಅನ್ವಯವಾಗುತ್ತದೆ ಎಂದು ಕಾನೂನು ರೂಪಿಸಿ ಸಂವಿಧಾನ ತಿದ್ದುಪಡಿ ಮಾಡಲಾಯಿತು.

ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಅಥವಾ 1,000 ಚದರ ಅಡಿ ವಸತಿ ಭೂಮಿ ಹೊಂದಿರುವ ಕುಟುಂಬಗಳ ವ್ಯಕ್ತಿಗಳು ಈ ಕೋಟಾಕ್ಕೆ ಅರ್ಹರಾಗಿರುವುದಿಲ್ಲ. ಕೇಂದ್ರ ಸರ್ಕಾರ ವಿಧಿಸಿರುವ ಮಾನದಂಡಗಳು ಎಸ್.ಸಿ., ಎಸ್‌.ಟಿ., ಒಬಿಸಿ ವರ್ಗಗಳಲ್ಲಿನ ಅವಕಾಶ ವಂಚಿತ ಸಮುದಾಯಗಳನ್ನು ಅಣಕಿಸುವಂತಿವೆ ಎಂಬ ಟೀಕೆಗಳು ಸರ್ವೇಸಾಮಾನ್ಯವಾಗಿವೆ.

ಇಡಬ್ಲ್ಯೂಎಸ್ ಕೋಟಾ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಆದಾಗ್ಯೂ, ನವೆಂಬರ್ 7 ರಂದು ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು 3:2 ತೀರ್ಪು ನೀಡಿತು. 10% ಇಡಬ್ಲ್ಯೂಎಸ್‌ ಕೋಟಾವನ್ನು ಎತ್ತಿಹಿಡಿಯಿತು.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಉದ್ಯೋಗ ಮೀಸಲಾತಿಯನ್ನು ಜಾರಿಗೊಳಿಸಿದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ ಬಿಜೆಪಿ ಆಡಳಿತ ನಡೆಸುತ್ತಿರುವ ಅಸ್ಸಾಂ ಕೂಡ ಸೇರಿದೆ.

ಆಂಧ್ರ ಪ್ರದೇಶ, ದೆಹಲಿ, ಗೋವಾ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ, ಮಿಜೋರಾಂ, ತೆಲಂಗಾಣ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಇಡಬ್ಲ್ಯೂಎಸ್‌ ಜಾರಿಗೊಳಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಇಡಬ್ಲ್ಯೂಎಸ್‌ ಕೋಟಾಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಅಸ್ಸಾಂನಲ್ಲಿ ವಿರೋಧ ಪಕ್ಷಗಳು ಟೀಕಿಸಿವೆ. ಈ ನಿರ್ಧಾರವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

“ಇಡಬ್ಲ್ಯೂಎಸ್‌ ಬರುವ ಸಮುದಾಯಗಳಿಗೆ 10% ಉದ್ಯೋಗ ಕೋಟಾವನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರವನ್ನು ನಾವು ವಿರೋಧಿಸುತ್ತೇವೆ” ಎಂದು ತೃಣಮೂಲ ಕಾಂಗ್ರೆಸ್ ಅಸ್ಸಾಂ ಅಧ್ಯಕ್ಷ ರಿಪುನ್ ಬೋರಾ ಹೇಳಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಕಾಂಗ್ರೆಸ್ ಶಾಸಕ ಮತ್ತು ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಪ್ರತಿಕ್ರಿಯಿಸಿ, “ಅಸ್ಸಾಂ ಸರ್ಕಾರ ತಂದಿರುವ ಆರ್ಥಿಕ ಬಿಕ್ಕಟ್ಟಿನ ಕಾರಣ ವೆಚ್ಚ ಕಡಿತದ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...