Homeಮುಖಪುಟ'ಇಸ್ಲಾಮೋಫೋಬಿಕ್' ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

- Advertisement -
- Advertisement -

ಬಿಜೆಪಿ ಅಸ್ಸಾಂ ಘಟಕ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ‘ಇಸ್ಲಾಮೋಫೋಬಿಕ್’ ವಿಡಿಯೋ ಒಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷವು ಮುಸ್ಲಿಮರನ್ನು ನಿಂದಿಸುತ್ತಿದೆ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

‘ಬಿಜೆಪಿ ಇಲ್ಲದ ಅಸ್ಸಾಂ’ ಎಂಬ ಶೀರ್ಷಿಕೆಯ ಈ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವಿಡಿಯೋದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿರುವ ಮುಸ್ಲಿಮರನ್ನು ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಅಕ್ರಮ ವಲಸಿಗರಂತೆ ಚಿತ್ರಿಸಲಾಗಿದೆ. ವಿಡಿಯೋದಲ್ಲಿ ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ರಾಹುಲ್ ಗಾಂಧಿ ಅವರನ್ನು ತೋರಿಸಿ, ಅವರಿಬ್ಬರು ‘ಪಾಕಿಸ್ತಾನದ ಜೊತೆ ಸಂಪರ್ಕ’ ಹೊಂದಿರುವಂತೆ ಬಿಂಬಿಸಲಾಗಿದೆ.

ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವಿಡಿಯೋ ಪ್ರಚೋದನಕಾರಿ ಎಂದು ಖಂಡಿಸಿದ್ದಾರೆ. ಇದು ಅಸ್ಸಾಂನಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

ಚುನಾವಣಾ ಆಯೋಗ ಈ ವಿಡಿಯೋ ಬಗ್ಗೆ ಗಮನಹರಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಒತ್ತಾಯಿಸಿದೆ. ಬಿಜೆಪಿ ವಿರುದ್ದ ದೂರು ದಾಖಲಿಸಲು ಯೋಜಿಸುತ್ತಿರುವುದಾಗಿ ತಿಳಿಸಿದೆ.

ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಮತ್ತು ಲೋಕಸಭೆಯ ವಿರೋಧ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಅವರು ವಿಡಿಯೋಗೆ ಖಂಡನೆ ವ್ಯಕ್ತಪಡಿಸಿದ್ದು, “ಇದು ಅಸ್ಸಾಮಿ ಸಮಾಜ ಮತ್ತು ಅದರ ಸಂಪ್ರದಾಯಗಳನ್ನು ತಪ್ಪಾಗಿ ಬಿಂಬಿಸುತ್ತದೆ” ಎಂದು ಹೇಳಿದ್ದಾರೆ.

ಬಿಜೆಪಿ ಐಟಿ ಸೆಲ್ ಸೃಷ್ಟಿಸುವ ಫೋಟೋ, ವಿಡಿಯೋ, ಮಾತು, ಕೃತಿ ಯಾವುದೂ ಕೂಡ ಅಸ್ಸಾಮಿ ಸಮಾಜದ ಮೇಲೆ ಹಾನಿ ಮಾಡುವ ಶಕ್ತಿ ಹೊಂದಿಲ್ಲ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಗೊಗೊಯ್ ತಿಳಿಸಿದ್ದಾರೆ.

“ಅಸ್ಸಾಂ ಅನ್ನು ಮಹಾಪುರುಷರಾದ ಶ್ರೀಮಂತ ಶಂಕರದೇವ, ಅಝಾನ್ ಪೀರ್, ಸ್ವರ್ಗದೇವ್ ಸಿಯುಕಾಫ, ಲಚಿತ್ ಬೋರ್ಫುಕನ್ ಮತ್ತು ಭೂಪೇನ್ ಹಝಾರಿಕಾ ಪೋಷಿಸಿದ್ದಾರೆ. ದನ, ಕಲ್ಲಿದ್ದಲು, ವೀಳ್ಯದೆಲೆ ಅಥವಾ ಮಾದಕವಸ್ತುಗಳ ಕಳ್ಳಸಾಗಣೆಗೆ ಸಂಬಂಧಿಸಿದ ಜನರು ಅಸ್ಸಾಮಿಗಳ ಮನಸ್ಸನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಹೆಮ್ಮೆಯ ಮತ್ತು ಶ್ರೇಷ್ಠ ರಾಜ್ಯವಾದ ಅಸ್ಸಾಂ, ತನ್ನ ಜನರು ಹೊಸ ಎತ್ತರವನ್ನು ತಲುಪಲು ಸಹಾಯ ಮಾಡುವ ರಾಜಕಾರಣಿಗಳಿಗೆ ಅರ್ಹವಾಗಿದೆ” ಎಂದು ಗೊಗೊಯ್ ಹೇಳಿದ್ದಾರೆ.

ವಿಡಿಯೋ ವಿರುದ್ದ ಕಾಂಗ್ರೆಸ್ ಪಕ್ಷವು ಗುವಾಹಟಿಯಲ್ಲಿ ಔಪಚಾರಿಕ ಪೊಲೀಸ್ ದೂರು ದಾಖಲಿಸಲಿದೆ ಎಂದು ಗೊಗೊಯ್ ತಿಳಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಗೊಗೊಯ್ ಅವರು ರಾಜ್ಯದ ಬಗ್ಗೆ ತಮ್ಮ ಪಕ್ಷದ ದೃಷ್ಟಿಕೋನವನ್ನು ವಿವರಿಸಿದ್ದಾರೆ: “ನಾವು ಪೈಲಟ್‌ಗಳು, ಇಂಜಿನಿಯರ್‌ಗಳು, ವೈದ್ಯರು, ಉದ್ಯಮಿಗಳು, ಬ್ಯಾಂಕರ್‌ಗಳು ಮತ್ತು ವ್ಯಾಪಾರ ಮಾಲೀಕರ ಸಮಾಜವನ್ನು ನಿರ್ಮಿಸಬೇಕೆಂದು ಬಯಸುತ್ತೇವೆ. ಕಠಿಣ ಪರಿಶ್ರಮವು ದ್ವೇಷವನ್ನು ಹಿಂದಿಕ್ಕುವ, ಸಭ್ಯತೆಯು ದುರಹಂಕಾರಕ್ಕಿಂತ ಮುಖ್ಯವಾದ, ಪ್ರಜಾಪ್ರಭುತ್ವವು ನಿರಂಕುಶಾಧಿಕಾರವನ್ನು ಹತ್ತಿಕ್ಕುವ ಮತ್ತು ಎಲ್ಲರನ್ನೂ ಗೌರವದಿಂದ ನಡೆಸಿಕೊಳ್ಳುವ ಅಸ್ಸಾಂ ಅನ್ನು ನಾವು ನೋಡಲು ಬಯಸುತ್ತೇವೆ” ಎಂದಿದ್ದಾರೆ.

ಅಸ್ಸಾಂನ ಮತ್ತೊಂದು ಪ್ರಮುಖ ವಿರೋಧ ಪಕ್ಷವಾದ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಕೂಡ ಬಿಜೆಪಿಯ ವಿಡಿಯೋವನ್ನು ಟೀಕಿಸಿದೆ.

“ಈ ಎಐ ವಿಡಿಯೋ ಮೂಲಕ ಅಸ್ಸಾಂ ಬಿಜೆಪಿ ಭಯದ ಭಾವನೆಯನ್ನು ಸೃಷ್ಟಿಸಲು ಬಯಸುತ್ತಿದೆ” ಎಂದು ಎಐಯುಡಿಎಫ್‌ನ ಶಾಸಕ ಮತ್ತು ಪ್ರಧಾನ ಕಾರ್ಯದರ್ಶಿ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

“ಬಿಜೆಪಿ ಅಧಿಕಾರದಲ್ಲಿ ಇಲ್ಲದಿದ್ದರೆ ಅಸ್ಸಾಂ ಸಂಪೂರ್ಣ ಮುಸ್ಲಿಂ ಸ್ವಾಧೀನವಾಗುತ್ತದೆ ಎಂಬ ಭಾವನೆಯನ್ನು ಬಹುಸಂಖ್ಯಾತ ಸಮುದಾಯದಲ್ಲಿ ಬಿತ್ತಲು ಅವರು ಬಯಸುತ್ತಿದ್ದಾರೆ. ಅವರು ಈ ಹಿಂದೆಯೂ ಇಂತಹ ನಿರೂಪಣೆಗಳನ್ನು ಮಂಡಿಸಿದ್ದಾರೆ. ಕೆಲವೊಮ್ಮೆ ‘ಲವ್ ಜಿಹಾದ್’ ಎಂದು ಕರೆಯಲ್ಪಡುವ ಮೂಲಕ, ಕೆಲವೊಮ್ಮೆ ‘ಬೌದ್ಧಿಕ ಜಿಹಾದ್’ ಮೂಲಕ ಮುಸ್ಲಿಮರನ್ನು ರಾಕ್ಷಸೀಕರಿಸಲು ಪ್ರಯತ್ನಿಸಿದ್ದಾರೆ. ಈ ವಿಡಿಯೋ ದ್ವೇಷ ಭಾಷಣದ ಒಂದು ರೂಪವಾಗಿದೆ. ಇದರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಬೇಕು ಮತ್ತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಲು ಯೋಜಿಸಿದ್ದೇವೆ” ಎಂದು ಅಮೀನುಲ್ ಇಸ್ಲಾಂ ತಿಳಿಸಿದ್ದಾರೆ.

ವಿಡಿಯೋಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಬಿಜೆಪಿ ಮುಸ್ಲಿಂ ಮುಕ್ತ ಭಾರತ’ದ ಗುರಿ ಹೊಂದಿದೆ ಎಂದಿದ್ದಾರೆ.

“ಬಿಜೆಪಿ ಇಲ್ಲದಿದ್ದರೆ ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಇರುತ್ತಿತ್ತು ಎಂದು ತೋರಿಸುವ ಅಸಹ್ಯಕರ ಕೃತಕ ಬುದ್ಧಿಮತ್ತೆಯ ವಿಡಿಯೋವನ್ನು ಬಿಜೆಪಿ ಅಸ್ಸಾಂ ಪೋಸ್ಟ್ ಮಾಡಿದೆ. ಅವರು ಕೇವಲ ಓಟಿಗಾಗಿ ಈ ಭಯ ಹುಟ್ಟಿಸುತ್ತಿಲ್ಲ, ಇದು ನಿಜ ರೂಪದಲ್ಲಿ ಅಸಹ್ಯಕರ ಹಿಂದುತ್ವ ಸಿದ್ಧಾಂತವಾಗಿದೆ”ಎಂದು ಓವೈಸಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ಕುರಿತ ಎಐ ವಿಡಿಯೋ ತೆಗೆದು ಹಾಕಲು ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದ್ದನ್ನು ನೆನಪಿಸಿದ ಓವೈಸಿ, “ಪ್ರತಿಯೊಬ್ಬರಿಗೂ ಅವರ ತಾಯಿ ಮೇಲೆ ದೊಡ್ಡ ಗೌರವವಿದೆ. ಅಸ್ಸಾಂ ಬಿಜೆಪಿಯ ಅಸಹ್ಯಕರ ವಿಡಿಯೋಗೂ ಅದೇ ತತ್ವವನ್ನು ಅನುಸರಿಸಬೇಕು. ಮುಸ್ಲಿಂ ನಾಗರಿಕರನ್ನು ಅಪಾಯಕಾರಿ ಎಂದು, ನಿರಂತರವಾಗಿ ದಮನಿಸಬೇಕಾದ ಗುಂಪು ಎಂದು ಚಿತ್ರಿಸುವುದು ಅವಹೇಳನಕಾರಿ ಮಾತ್ರವಲ್ಲ, ನರಮೇಧವೂ ಆಗಿದೆ” ಎಂದು ಓವೈಸಿ ಕಿಡಿಕಾರಿದ್ದಾರೆ.

“ಬಿಜೆಪಿ ಉದ್ದೇಶಪೂರ್ಕವಾಗಿ ಇದನ್ನು ಮಾಡುತ್ತಿದೆ. ಅಸ್ಸಾಂ ಬಿಜೆಪಿ ವಿಡಿಯೋ ಪೋಸ್ಟ್‌ ಮಾಡಿರುವುದು ಹೊಸ ವಿಷಯವೇನಲ್ಲ. ಎಲ್ಲೆಲ್ಲಿ ಚುನಾವಣೆಗಳು ಇರುತ್ತವೋ ಅಂತಹ ರಾಜ್ಯಗಳಲ್ಲಿ ಬಿಜೆಪಿ ಇದನ್ನು ಮಾಡುತ್ತವೆ. ನಿಮಗೆ ನೆನಪಿದ್ದರೆ, ಕರ್ನಾಟಕದಲ್ಲೂ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಇದೇ ರೀತಿ ಮಾಡಿತ್ತು. ಮುಂದೆ ಅಸ್ಸಾಂನಲ್ಲಿ ಚುನಾವಣೆ ಇದೆ. ಬಿಜೆಪಿಯ ಇಂತಹ ನಡೆಗಳು ಮುಸ್ಲಿಮರ ವಿರುದ್ದ ಹಿಂಸಾಚಾರವನ್ನು ಪ್ರಚೋದಿಸುತ್ತದೆ” ಎಂದಿದ್ದಾರೆ.

“ಕೋಮು ದ್ವೇಷವನ್ನು ಹುಟ್ಟುಹಾಕಲು ‘ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ’ ಎಂಬ ಎಐ ವಿಡಿಯೋ ಹಂಚಿಕೊಳ್ಳುವ ಮೂಲಕ ಅಸ್ಸಾಂ ಬಿಜೆಪಿ ಅತ್ಯಂತ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ. ಇದು ಸಾಮಾಜಿಕ ಸಾಮರಸ್ಯದ ಮೇಲಿನ ಉದ್ದೇಶಪೂರ್ವಕ ದಾಳಿಯಾಗಿದೆ. ನಮ್ಮ ಹಂಚಿಕೆಯ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. ನಿಮ್ಮ ವಿಷಕಾರಿ ಅಭಿಯಾನಕ್ಕೆ ಅಸ್ಸಾಂನ ಜನರು ಸರಿಯಾದ ಉತ್ತರವನ್ನು ನೀಡುತ್ತಾರೆ” ಎಂದು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಖಾನ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ವಿಡಿಯೋಗೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಬಿಜೆಪಿ ವಕ್ತಾರ ರೂಪಮ್ ಗೋಸ್ವಾಮಿ, ವಿಡಿಯೋವನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಡಿಟಿವಿ ಜೊತೆ ಮಾತನಾಡಿರುವ ಅವರು, “ಸ್ಥಳೀಯ ಸಮುದಾಯಗಳ ಜೀವನ, ಜೀವನೋಪಾಯ, ಭೂಮಿ ಮತ್ತು ಸಂಸ್ಕೃತಿಗೆ ಬೆದರಿಕೆಯೊಡ್ಡಿರುವ ಜನಸಂಖ್ಯಾ ಬದಲಾವಣೆಯನ್ನು ರಾಜ್ಯವು ಹೇಗೆ ಅನುಭವಿಸಿದೆ ಎಂಬುದರ ಕುರಿತು ಸತ್ಯವನ್ನು ಈ ವಿಡಿಯೋ ಪ್ರತಿಬಿಂಬಿಸುತ್ತದೆ ಎಂದು ಅಸ್ಸಾಂ ಬಿಜೆಪಿ ನಂಬುತ್ತದೆ” ಎಂದಿದ್ದಾರೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...