Homeಮುಖಪುಟ'ಇಸ್ಲಾಮೋಫೋಬಿಕ್' ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

- Advertisement -
- Advertisement -

ಬಿಜೆಪಿ ಅಸ್ಸಾಂ ಘಟಕ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ‘ಇಸ್ಲಾಮೋಫೋಬಿಕ್’ ವಿಡಿಯೋ ಒಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷವು ಮುಸ್ಲಿಮರನ್ನು ನಿಂದಿಸುತ್ತಿದೆ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

‘ಬಿಜೆಪಿ ಇಲ್ಲದ ಅಸ್ಸಾಂ’ ಎಂಬ ಶೀರ್ಷಿಕೆಯ ಈ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವಿಡಿಯೋದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿರುವ ಮುಸ್ಲಿಮರನ್ನು ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಅಕ್ರಮ ವಲಸಿಗರಂತೆ ಚಿತ್ರಿಸಲಾಗಿದೆ. ವಿಡಿಯೋದಲ್ಲಿ ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ರಾಹುಲ್ ಗಾಂಧಿ ಅವರನ್ನು ತೋರಿಸಿ, ಅವರಿಬ್ಬರು ‘ಪಾಕಿಸ್ತಾನದ ಜೊತೆ ಸಂಪರ್ಕ’ ಹೊಂದಿರುವಂತೆ ಬಿಂಬಿಸಲಾಗಿದೆ.

ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವಿಡಿಯೋ ಪ್ರಚೋದನಕಾರಿ ಎಂದು ಖಂಡಿಸಿದ್ದಾರೆ. ಇದು ಅಸ್ಸಾಂನಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

ಚುನಾವಣಾ ಆಯೋಗ ಈ ವಿಡಿಯೋ ಬಗ್ಗೆ ಗಮನಹರಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಒತ್ತಾಯಿಸಿದೆ. ಬಿಜೆಪಿ ವಿರುದ್ದ ದೂರು ದಾಖಲಿಸಲು ಯೋಜಿಸುತ್ತಿರುವುದಾಗಿ ತಿಳಿಸಿದೆ.

ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಮತ್ತು ಲೋಕಸಭೆಯ ವಿರೋಧ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಅವರು ವಿಡಿಯೋಗೆ ಖಂಡನೆ ವ್ಯಕ್ತಪಡಿಸಿದ್ದು, “ಇದು ಅಸ್ಸಾಮಿ ಸಮಾಜ ಮತ್ತು ಅದರ ಸಂಪ್ರದಾಯಗಳನ್ನು ತಪ್ಪಾಗಿ ಬಿಂಬಿಸುತ್ತದೆ” ಎಂದು ಹೇಳಿದ್ದಾರೆ.

ಬಿಜೆಪಿ ಐಟಿ ಸೆಲ್ ಸೃಷ್ಟಿಸುವ ಫೋಟೋ, ವಿಡಿಯೋ, ಮಾತು, ಕೃತಿ ಯಾವುದೂ ಕೂಡ ಅಸ್ಸಾಮಿ ಸಮಾಜದ ಮೇಲೆ ಹಾನಿ ಮಾಡುವ ಶಕ್ತಿ ಹೊಂದಿಲ್ಲ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಗೊಗೊಯ್ ತಿಳಿಸಿದ್ದಾರೆ.

“ಅಸ್ಸಾಂ ಅನ್ನು ಮಹಾಪುರುಷರಾದ ಶ್ರೀಮಂತ ಶಂಕರದೇವ, ಅಝಾನ್ ಪೀರ್, ಸ್ವರ್ಗದೇವ್ ಸಿಯುಕಾಫ, ಲಚಿತ್ ಬೋರ್ಫುಕನ್ ಮತ್ತು ಭೂಪೇನ್ ಹಝಾರಿಕಾ ಪೋಷಿಸಿದ್ದಾರೆ. ದನ, ಕಲ್ಲಿದ್ದಲು, ವೀಳ್ಯದೆಲೆ ಅಥವಾ ಮಾದಕವಸ್ತುಗಳ ಕಳ್ಳಸಾಗಣೆಗೆ ಸಂಬಂಧಿಸಿದ ಜನರು ಅಸ್ಸಾಮಿಗಳ ಮನಸ್ಸನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಹೆಮ್ಮೆಯ ಮತ್ತು ಶ್ರೇಷ್ಠ ರಾಜ್ಯವಾದ ಅಸ್ಸಾಂ, ತನ್ನ ಜನರು ಹೊಸ ಎತ್ತರವನ್ನು ತಲುಪಲು ಸಹಾಯ ಮಾಡುವ ರಾಜಕಾರಣಿಗಳಿಗೆ ಅರ್ಹವಾಗಿದೆ” ಎಂದು ಗೊಗೊಯ್ ಹೇಳಿದ್ದಾರೆ.

ವಿಡಿಯೋ ವಿರುದ್ದ ಕಾಂಗ್ರೆಸ್ ಪಕ್ಷವು ಗುವಾಹಟಿಯಲ್ಲಿ ಔಪಚಾರಿಕ ಪೊಲೀಸ್ ದೂರು ದಾಖಲಿಸಲಿದೆ ಎಂದು ಗೊಗೊಯ್ ತಿಳಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಗೊಗೊಯ್ ಅವರು ರಾಜ್ಯದ ಬಗ್ಗೆ ತಮ್ಮ ಪಕ್ಷದ ದೃಷ್ಟಿಕೋನವನ್ನು ವಿವರಿಸಿದ್ದಾರೆ: “ನಾವು ಪೈಲಟ್‌ಗಳು, ಇಂಜಿನಿಯರ್‌ಗಳು, ವೈದ್ಯರು, ಉದ್ಯಮಿಗಳು, ಬ್ಯಾಂಕರ್‌ಗಳು ಮತ್ತು ವ್ಯಾಪಾರ ಮಾಲೀಕರ ಸಮಾಜವನ್ನು ನಿರ್ಮಿಸಬೇಕೆಂದು ಬಯಸುತ್ತೇವೆ. ಕಠಿಣ ಪರಿಶ್ರಮವು ದ್ವೇಷವನ್ನು ಹಿಂದಿಕ್ಕುವ, ಸಭ್ಯತೆಯು ದುರಹಂಕಾರಕ್ಕಿಂತ ಮುಖ್ಯವಾದ, ಪ್ರಜಾಪ್ರಭುತ್ವವು ನಿರಂಕುಶಾಧಿಕಾರವನ್ನು ಹತ್ತಿಕ್ಕುವ ಮತ್ತು ಎಲ್ಲರನ್ನೂ ಗೌರವದಿಂದ ನಡೆಸಿಕೊಳ್ಳುವ ಅಸ್ಸಾಂ ಅನ್ನು ನಾವು ನೋಡಲು ಬಯಸುತ್ತೇವೆ” ಎಂದಿದ್ದಾರೆ.

ಅಸ್ಸಾಂನ ಮತ್ತೊಂದು ಪ್ರಮುಖ ವಿರೋಧ ಪಕ್ಷವಾದ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಕೂಡ ಬಿಜೆಪಿಯ ವಿಡಿಯೋವನ್ನು ಟೀಕಿಸಿದೆ.

“ಈ ಎಐ ವಿಡಿಯೋ ಮೂಲಕ ಅಸ್ಸಾಂ ಬಿಜೆಪಿ ಭಯದ ಭಾವನೆಯನ್ನು ಸೃಷ್ಟಿಸಲು ಬಯಸುತ್ತಿದೆ” ಎಂದು ಎಐಯುಡಿಎಫ್‌ನ ಶಾಸಕ ಮತ್ತು ಪ್ರಧಾನ ಕಾರ್ಯದರ್ಶಿ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

“ಬಿಜೆಪಿ ಅಧಿಕಾರದಲ್ಲಿ ಇಲ್ಲದಿದ್ದರೆ ಅಸ್ಸಾಂ ಸಂಪೂರ್ಣ ಮುಸ್ಲಿಂ ಸ್ವಾಧೀನವಾಗುತ್ತದೆ ಎಂಬ ಭಾವನೆಯನ್ನು ಬಹುಸಂಖ್ಯಾತ ಸಮುದಾಯದಲ್ಲಿ ಬಿತ್ತಲು ಅವರು ಬಯಸುತ್ತಿದ್ದಾರೆ. ಅವರು ಈ ಹಿಂದೆಯೂ ಇಂತಹ ನಿರೂಪಣೆಗಳನ್ನು ಮಂಡಿಸಿದ್ದಾರೆ. ಕೆಲವೊಮ್ಮೆ ‘ಲವ್ ಜಿಹಾದ್’ ಎಂದು ಕರೆಯಲ್ಪಡುವ ಮೂಲಕ, ಕೆಲವೊಮ್ಮೆ ‘ಬೌದ್ಧಿಕ ಜಿಹಾದ್’ ಮೂಲಕ ಮುಸ್ಲಿಮರನ್ನು ರಾಕ್ಷಸೀಕರಿಸಲು ಪ್ರಯತ್ನಿಸಿದ್ದಾರೆ. ಈ ವಿಡಿಯೋ ದ್ವೇಷ ಭಾಷಣದ ಒಂದು ರೂಪವಾಗಿದೆ. ಇದರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಬೇಕು ಮತ್ತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಲು ಯೋಜಿಸಿದ್ದೇವೆ” ಎಂದು ಅಮೀನುಲ್ ಇಸ್ಲಾಂ ತಿಳಿಸಿದ್ದಾರೆ.

ವಿಡಿಯೋಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಬಿಜೆಪಿ ಮುಸ್ಲಿಂ ಮುಕ್ತ ಭಾರತ’ದ ಗುರಿ ಹೊಂದಿದೆ ಎಂದಿದ್ದಾರೆ.

“ಬಿಜೆಪಿ ಇಲ್ಲದಿದ್ದರೆ ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಇರುತ್ತಿತ್ತು ಎಂದು ತೋರಿಸುವ ಅಸಹ್ಯಕರ ಕೃತಕ ಬುದ್ಧಿಮತ್ತೆಯ ವಿಡಿಯೋವನ್ನು ಬಿಜೆಪಿ ಅಸ್ಸಾಂ ಪೋಸ್ಟ್ ಮಾಡಿದೆ. ಅವರು ಕೇವಲ ಓಟಿಗಾಗಿ ಈ ಭಯ ಹುಟ್ಟಿಸುತ್ತಿಲ್ಲ, ಇದು ನಿಜ ರೂಪದಲ್ಲಿ ಅಸಹ್ಯಕರ ಹಿಂದುತ್ವ ಸಿದ್ಧಾಂತವಾಗಿದೆ”ಎಂದು ಓವೈಸಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ಕುರಿತ ಎಐ ವಿಡಿಯೋ ತೆಗೆದು ಹಾಕಲು ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದ್ದನ್ನು ನೆನಪಿಸಿದ ಓವೈಸಿ, “ಪ್ರತಿಯೊಬ್ಬರಿಗೂ ಅವರ ತಾಯಿ ಮೇಲೆ ದೊಡ್ಡ ಗೌರವವಿದೆ. ಅಸ್ಸಾಂ ಬಿಜೆಪಿಯ ಅಸಹ್ಯಕರ ವಿಡಿಯೋಗೂ ಅದೇ ತತ್ವವನ್ನು ಅನುಸರಿಸಬೇಕು. ಮುಸ್ಲಿಂ ನಾಗರಿಕರನ್ನು ಅಪಾಯಕಾರಿ ಎಂದು, ನಿರಂತರವಾಗಿ ದಮನಿಸಬೇಕಾದ ಗುಂಪು ಎಂದು ಚಿತ್ರಿಸುವುದು ಅವಹೇಳನಕಾರಿ ಮಾತ್ರವಲ್ಲ, ನರಮೇಧವೂ ಆಗಿದೆ” ಎಂದು ಓವೈಸಿ ಕಿಡಿಕಾರಿದ್ದಾರೆ.

“ಬಿಜೆಪಿ ಉದ್ದೇಶಪೂರ್ಕವಾಗಿ ಇದನ್ನು ಮಾಡುತ್ತಿದೆ. ಅಸ್ಸಾಂ ಬಿಜೆಪಿ ವಿಡಿಯೋ ಪೋಸ್ಟ್‌ ಮಾಡಿರುವುದು ಹೊಸ ವಿಷಯವೇನಲ್ಲ. ಎಲ್ಲೆಲ್ಲಿ ಚುನಾವಣೆಗಳು ಇರುತ್ತವೋ ಅಂತಹ ರಾಜ್ಯಗಳಲ್ಲಿ ಬಿಜೆಪಿ ಇದನ್ನು ಮಾಡುತ್ತವೆ. ನಿಮಗೆ ನೆನಪಿದ್ದರೆ, ಕರ್ನಾಟಕದಲ್ಲೂ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಇದೇ ರೀತಿ ಮಾಡಿತ್ತು. ಮುಂದೆ ಅಸ್ಸಾಂನಲ್ಲಿ ಚುನಾವಣೆ ಇದೆ. ಬಿಜೆಪಿಯ ಇಂತಹ ನಡೆಗಳು ಮುಸ್ಲಿಮರ ವಿರುದ್ದ ಹಿಂಸಾಚಾರವನ್ನು ಪ್ರಚೋದಿಸುತ್ತದೆ” ಎಂದಿದ್ದಾರೆ.

“ಕೋಮು ದ್ವೇಷವನ್ನು ಹುಟ್ಟುಹಾಕಲು ‘ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ’ ಎಂಬ ಎಐ ವಿಡಿಯೋ ಹಂಚಿಕೊಳ್ಳುವ ಮೂಲಕ ಅಸ್ಸಾಂ ಬಿಜೆಪಿ ಅತ್ಯಂತ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ. ಇದು ಸಾಮಾಜಿಕ ಸಾಮರಸ್ಯದ ಮೇಲಿನ ಉದ್ದೇಶಪೂರ್ವಕ ದಾಳಿಯಾಗಿದೆ. ನಮ್ಮ ಹಂಚಿಕೆಯ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. ನಿಮ್ಮ ವಿಷಕಾರಿ ಅಭಿಯಾನಕ್ಕೆ ಅಸ್ಸಾಂನ ಜನರು ಸರಿಯಾದ ಉತ್ತರವನ್ನು ನೀಡುತ್ತಾರೆ” ಎಂದು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಖಾನ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ವಿಡಿಯೋಗೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಬಿಜೆಪಿ ವಕ್ತಾರ ರೂಪಮ್ ಗೋಸ್ವಾಮಿ, ವಿಡಿಯೋವನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಡಿಟಿವಿ ಜೊತೆ ಮಾತನಾಡಿರುವ ಅವರು, “ಸ್ಥಳೀಯ ಸಮುದಾಯಗಳ ಜೀವನ, ಜೀವನೋಪಾಯ, ಭೂಮಿ ಮತ್ತು ಸಂಸ್ಕೃತಿಗೆ ಬೆದರಿಕೆಯೊಡ್ಡಿರುವ ಜನಸಂಖ್ಯಾ ಬದಲಾವಣೆಯನ್ನು ರಾಜ್ಯವು ಹೇಗೆ ಅನುಭವಿಸಿದೆ ಎಂಬುದರ ಕುರಿತು ಸತ್ಯವನ್ನು ಈ ವಿಡಿಯೋ ಪ್ರತಿಬಿಂಬಿಸುತ್ತದೆ ಎಂದು ಅಸ್ಸಾಂ ಬಿಜೆಪಿ ನಂಬುತ್ತದೆ” ಎಂದಿದ್ದಾರೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...