Homeಮುಖಪುಟ'ಇಸ್ಲಾಮೋಫೋಬಿಕ್' ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

- Advertisement -
- Advertisement -

ಬಿಜೆಪಿ ಅಸ್ಸಾಂ ಘಟಕ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ‘ಇಸ್ಲಾಮೋಫೋಬಿಕ್’ ವಿಡಿಯೋ ಒಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷವು ಮುಸ್ಲಿಮರನ್ನು ನಿಂದಿಸುತ್ತಿದೆ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

‘ಬಿಜೆಪಿ ಇಲ್ಲದ ಅಸ್ಸಾಂ’ ಎಂಬ ಶೀರ್ಷಿಕೆಯ ಈ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವಿಡಿಯೋದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿರುವ ಮುಸ್ಲಿಮರನ್ನು ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಅಕ್ರಮ ವಲಸಿಗರಂತೆ ಚಿತ್ರಿಸಲಾಗಿದೆ. ವಿಡಿಯೋದಲ್ಲಿ ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ರಾಹುಲ್ ಗಾಂಧಿ ಅವರನ್ನು ತೋರಿಸಿ, ಅವರಿಬ್ಬರು ‘ಪಾಕಿಸ್ತಾನದ ಜೊತೆ ಸಂಪರ್ಕ’ ಹೊಂದಿರುವಂತೆ ಬಿಂಬಿಸಲಾಗಿದೆ.

ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವಿಡಿಯೋ ಪ್ರಚೋದನಕಾರಿ ಎಂದು ಖಂಡಿಸಿದ್ದಾರೆ. ಇದು ಅಸ್ಸಾಂನಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

ಚುನಾವಣಾ ಆಯೋಗ ಈ ವಿಡಿಯೋ ಬಗ್ಗೆ ಗಮನಹರಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಒತ್ತಾಯಿಸಿದೆ. ಬಿಜೆಪಿ ವಿರುದ್ದ ದೂರು ದಾಖಲಿಸಲು ಯೋಜಿಸುತ್ತಿರುವುದಾಗಿ ತಿಳಿಸಿದೆ.

ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಮತ್ತು ಲೋಕಸಭೆಯ ವಿರೋಧ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಅವರು ವಿಡಿಯೋಗೆ ಖಂಡನೆ ವ್ಯಕ್ತಪಡಿಸಿದ್ದು, “ಇದು ಅಸ್ಸಾಮಿ ಸಮಾಜ ಮತ್ತು ಅದರ ಸಂಪ್ರದಾಯಗಳನ್ನು ತಪ್ಪಾಗಿ ಬಿಂಬಿಸುತ್ತದೆ” ಎಂದು ಹೇಳಿದ್ದಾರೆ.

ಬಿಜೆಪಿ ಐಟಿ ಸೆಲ್ ಸೃಷ್ಟಿಸುವ ಫೋಟೋ, ವಿಡಿಯೋ, ಮಾತು, ಕೃತಿ ಯಾವುದೂ ಕೂಡ ಅಸ್ಸಾಮಿ ಸಮಾಜದ ಮೇಲೆ ಹಾನಿ ಮಾಡುವ ಶಕ್ತಿ ಹೊಂದಿಲ್ಲ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಗೊಗೊಯ್ ತಿಳಿಸಿದ್ದಾರೆ.

“ಅಸ್ಸಾಂ ಅನ್ನು ಮಹಾಪುರುಷರಾದ ಶ್ರೀಮಂತ ಶಂಕರದೇವ, ಅಝಾನ್ ಪೀರ್, ಸ್ವರ್ಗದೇವ್ ಸಿಯುಕಾಫ, ಲಚಿತ್ ಬೋರ್ಫುಕನ್ ಮತ್ತು ಭೂಪೇನ್ ಹಝಾರಿಕಾ ಪೋಷಿಸಿದ್ದಾರೆ. ದನ, ಕಲ್ಲಿದ್ದಲು, ವೀಳ್ಯದೆಲೆ ಅಥವಾ ಮಾದಕವಸ್ತುಗಳ ಕಳ್ಳಸಾಗಣೆಗೆ ಸಂಬಂಧಿಸಿದ ಜನರು ಅಸ್ಸಾಮಿಗಳ ಮನಸ್ಸನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಹೆಮ್ಮೆಯ ಮತ್ತು ಶ್ರೇಷ್ಠ ರಾಜ್ಯವಾದ ಅಸ್ಸಾಂ, ತನ್ನ ಜನರು ಹೊಸ ಎತ್ತರವನ್ನು ತಲುಪಲು ಸಹಾಯ ಮಾಡುವ ರಾಜಕಾರಣಿಗಳಿಗೆ ಅರ್ಹವಾಗಿದೆ” ಎಂದು ಗೊಗೊಯ್ ಹೇಳಿದ್ದಾರೆ.

ವಿಡಿಯೋ ವಿರುದ್ದ ಕಾಂಗ್ರೆಸ್ ಪಕ್ಷವು ಗುವಾಹಟಿಯಲ್ಲಿ ಔಪಚಾರಿಕ ಪೊಲೀಸ್ ದೂರು ದಾಖಲಿಸಲಿದೆ ಎಂದು ಗೊಗೊಯ್ ತಿಳಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಗೊಗೊಯ್ ಅವರು ರಾಜ್ಯದ ಬಗ್ಗೆ ತಮ್ಮ ಪಕ್ಷದ ದೃಷ್ಟಿಕೋನವನ್ನು ವಿವರಿಸಿದ್ದಾರೆ: “ನಾವು ಪೈಲಟ್‌ಗಳು, ಇಂಜಿನಿಯರ್‌ಗಳು, ವೈದ್ಯರು, ಉದ್ಯಮಿಗಳು, ಬ್ಯಾಂಕರ್‌ಗಳು ಮತ್ತು ವ್ಯಾಪಾರ ಮಾಲೀಕರ ಸಮಾಜವನ್ನು ನಿರ್ಮಿಸಬೇಕೆಂದು ಬಯಸುತ್ತೇವೆ. ಕಠಿಣ ಪರಿಶ್ರಮವು ದ್ವೇಷವನ್ನು ಹಿಂದಿಕ್ಕುವ, ಸಭ್ಯತೆಯು ದುರಹಂಕಾರಕ್ಕಿಂತ ಮುಖ್ಯವಾದ, ಪ್ರಜಾಪ್ರಭುತ್ವವು ನಿರಂಕುಶಾಧಿಕಾರವನ್ನು ಹತ್ತಿಕ್ಕುವ ಮತ್ತು ಎಲ್ಲರನ್ನೂ ಗೌರವದಿಂದ ನಡೆಸಿಕೊಳ್ಳುವ ಅಸ್ಸಾಂ ಅನ್ನು ನಾವು ನೋಡಲು ಬಯಸುತ್ತೇವೆ” ಎಂದಿದ್ದಾರೆ.

ಅಸ್ಸಾಂನ ಮತ್ತೊಂದು ಪ್ರಮುಖ ವಿರೋಧ ಪಕ್ಷವಾದ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಕೂಡ ಬಿಜೆಪಿಯ ವಿಡಿಯೋವನ್ನು ಟೀಕಿಸಿದೆ.

“ಈ ಎಐ ವಿಡಿಯೋ ಮೂಲಕ ಅಸ್ಸಾಂ ಬಿಜೆಪಿ ಭಯದ ಭಾವನೆಯನ್ನು ಸೃಷ್ಟಿಸಲು ಬಯಸುತ್ತಿದೆ” ಎಂದು ಎಐಯುಡಿಎಫ್‌ನ ಶಾಸಕ ಮತ್ತು ಪ್ರಧಾನ ಕಾರ್ಯದರ್ಶಿ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

“ಬಿಜೆಪಿ ಅಧಿಕಾರದಲ್ಲಿ ಇಲ್ಲದಿದ್ದರೆ ಅಸ್ಸಾಂ ಸಂಪೂರ್ಣ ಮುಸ್ಲಿಂ ಸ್ವಾಧೀನವಾಗುತ್ತದೆ ಎಂಬ ಭಾವನೆಯನ್ನು ಬಹುಸಂಖ್ಯಾತ ಸಮುದಾಯದಲ್ಲಿ ಬಿತ್ತಲು ಅವರು ಬಯಸುತ್ತಿದ್ದಾರೆ. ಅವರು ಈ ಹಿಂದೆಯೂ ಇಂತಹ ನಿರೂಪಣೆಗಳನ್ನು ಮಂಡಿಸಿದ್ದಾರೆ. ಕೆಲವೊಮ್ಮೆ ‘ಲವ್ ಜಿಹಾದ್’ ಎಂದು ಕರೆಯಲ್ಪಡುವ ಮೂಲಕ, ಕೆಲವೊಮ್ಮೆ ‘ಬೌದ್ಧಿಕ ಜಿಹಾದ್’ ಮೂಲಕ ಮುಸ್ಲಿಮರನ್ನು ರಾಕ್ಷಸೀಕರಿಸಲು ಪ್ರಯತ್ನಿಸಿದ್ದಾರೆ. ಈ ವಿಡಿಯೋ ದ್ವೇಷ ಭಾಷಣದ ಒಂದು ರೂಪವಾಗಿದೆ. ಇದರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಬೇಕು ಮತ್ತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಲು ಯೋಜಿಸಿದ್ದೇವೆ” ಎಂದು ಅಮೀನುಲ್ ಇಸ್ಲಾಂ ತಿಳಿಸಿದ್ದಾರೆ.

ವಿಡಿಯೋಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಬಿಜೆಪಿ ಮುಸ್ಲಿಂ ಮುಕ್ತ ಭಾರತ’ದ ಗುರಿ ಹೊಂದಿದೆ ಎಂದಿದ್ದಾರೆ.

“ಬಿಜೆಪಿ ಇಲ್ಲದಿದ್ದರೆ ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಇರುತ್ತಿತ್ತು ಎಂದು ತೋರಿಸುವ ಅಸಹ್ಯಕರ ಕೃತಕ ಬುದ್ಧಿಮತ್ತೆಯ ವಿಡಿಯೋವನ್ನು ಬಿಜೆಪಿ ಅಸ್ಸಾಂ ಪೋಸ್ಟ್ ಮಾಡಿದೆ. ಅವರು ಕೇವಲ ಓಟಿಗಾಗಿ ಈ ಭಯ ಹುಟ್ಟಿಸುತ್ತಿಲ್ಲ, ಇದು ನಿಜ ರೂಪದಲ್ಲಿ ಅಸಹ್ಯಕರ ಹಿಂದುತ್ವ ಸಿದ್ಧಾಂತವಾಗಿದೆ”ಎಂದು ಓವೈಸಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ಕುರಿತ ಎಐ ವಿಡಿಯೋ ತೆಗೆದು ಹಾಕಲು ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದ್ದನ್ನು ನೆನಪಿಸಿದ ಓವೈಸಿ, “ಪ್ರತಿಯೊಬ್ಬರಿಗೂ ಅವರ ತಾಯಿ ಮೇಲೆ ದೊಡ್ಡ ಗೌರವವಿದೆ. ಅಸ್ಸಾಂ ಬಿಜೆಪಿಯ ಅಸಹ್ಯಕರ ವಿಡಿಯೋಗೂ ಅದೇ ತತ್ವವನ್ನು ಅನುಸರಿಸಬೇಕು. ಮುಸ್ಲಿಂ ನಾಗರಿಕರನ್ನು ಅಪಾಯಕಾರಿ ಎಂದು, ನಿರಂತರವಾಗಿ ದಮನಿಸಬೇಕಾದ ಗುಂಪು ಎಂದು ಚಿತ್ರಿಸುವುದು ಅವಹೇಳನಕಾರಿ ಮಾತ್ರವಲ್ಲ, ನರಮೇಧವೂ ಆಗಿದೆ” ಎಂದು ಓವೈಸಿ ಕಿಡಿಕಾರಿದ್ದಾರೆ.

“ಬಿಜೆಪಿ ಉದ್ದೇಶಪೂರ್ಕವಾಗಿ ಇದನ್ನು ಮಾಡುತ್ತಿದೆ. ಅಸ್ಸಾಂ ಬಿಜೆಪಿ ವಿಡಿಯೋ ಪೋಸ್ಟ್‌ ಮಾಡಿರುವುದು ಹೊಸ ವಿಷಯವೇನಲ್ಲ. ಎಲ್ಲೆಲ್ಲಿ ಚುನಾವಣೆಗಳು ಇರುತ್ತವೋ ಅಂತಹ ರಾಜ್ಯಗಳಲ್ಲಿ ಬಿಜೆಪಿ ಇದನ್ನು ಮಾಡುತ್ತವೆ. ನಿಮಗೆ ನೆನಪಿದ್ದರೆ, ಕರ್ನಾಟಕದಲ್ಲೂ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಇದೇ ರೀತಿ ಮಾಡಿತ್ತು. ಮುಂದೆ ಅಸ್ಸಾಂನಲ್ಲಿ ಚುನಾವಣೆ ಇದೆ. ಬಿಜೆಪಿಯ ಇಂತಹ ನಡೆಗಳು ಮುಸ್ಲಿಮರ ವಿರುದ್ದ ಹಿಂಸಾಚಾರವನ್ನು ಪ್ರಚೋದಿಸುತ್ತದೆ” ಎಂದಿದ್ದಾರೆ.

“ಕೋಮು ದ್ವೇಷವನ್ನು ಹುಟ್ಟುಹಾಕಲು ‘ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ’ ಎಂಬ ಎಐ ವಿಡಿಯೋ ಹಂಚಿಕೊಳ್ಳುವ ಮೂಲಕ ಅಸ್ಸಾಂ ಬಿಜೆಪಿ ಅತ್ಯಂತ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ. ಇದು ಸಾಮಾಜಿಕ ಸಾಮರಸ್ಯದ ಮೇಲಿನ ಉದ್ದೇಶಪೂರ್ವಕ ದಾಳಿಯಾಗಿದೆ. ನಮ್ಮ ಹಂಚಿಕೆಯ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. ನಿಮ್ಮ ವಿಷಕಾರಿ ಅಭಿಯಾನಕ್ಕೆ ಅಸ್ಸಾಂನ ಜನರು ಸರಿಯಾದ ಉತ್ತರವನ್ನು ನೀಡುತ್ತಾರೆ” ಎಂದು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಖಾನ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ವಿಡಿಯೋಗೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಬಿಜೆಪಿ ವಕ್ತಾರ ರೂಪಮ್ ಗೋಸ್ವಾಮಿ, ವಿಡಿಯೋವನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಡಿಟಿವಿ ಜೊತೆ ಮಾತನಾಡಿರುವ ಅವರು, “ಸ್ಥಳೀಯ ಸಮುದಾಯಗಳ ಜೀವನ, ಜೀವನೋಪಾಯ, ಭೂಮಿ ಮತ್ತು ಸಂಸ್ಕೃತಿಗೆ ಬೆದರಿಕೆಯೊಡ್ಡಿರುವ ಜನಸಂಖ್ಯಾ ಬದಲಾವಣೆಯನ್ನು ರಾಜ್ಯವು ಹೇಗೆ ಅನುಭವಿಸಿದೆ ಎಂಬುದರ ಕುರಿತು ಸತ್ಯವನ್ನು ಈ ವಿಡಿಯೋ ಪ್ರತಿಬಿಂಬಿಸುತ್ತದೆ ಎಂದು ಅಸ್ಸಾಂ ಬಿಜೆಪಿ ನಂಬುತ್ತದೆ” ಎಂದಿದ್ದಾರೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...