Homeಮುಖಪುಟಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

- Advertisement -
- Advertisement -

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು ಡಿಲೀಟ್ ಮಾಡಿದೆ.

ಮುಸ್ಲಿಮರ ವಿರುದ್ದ, ವಿಶೇಷವಾಗಿ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರ ವಿರುದ್ದ ದ್ವೇಷ ಕಾರುವ, ಅವರ ಹತ್ಯೆಗೆ ನೇರ ಪ್ರಚೋದನೆ ನೀಡುವ, ಭಾರತ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಈ ವಿಡಿಯೋವನ್ನು ನೈಜ ದೃಶ್ಯ ಮತ್ತು ಕೃತಕ ಬುದ್ಧಿಮತ್ತೆ (ಎಐ) ಚಿತ್ರಗಳ ಮೂಲಕ ಸೃಷ್ಟಿಸಲಾಗಿದೆ ಎಂದು ವರದಿಗಳು ಹೇಳಿವೆ.

ವಿಡಿಯೋದಲ್ಲಿ ಸಿಎಂ ಶರ್ಮಾ ಅವರು ಬಂದೂಕು ಹಿಡಿದು ಶೂಟ್ ಮಾಡಿದ ನೈಜ ದೃಶ್ಯದೊಂದಿಗೆ, ಮುಸ್ಲಿಂ ಸಮುದಾಯದವರಂತೆ ಕಾಣುವ ವ್ಯಕ್ತಿಗಳನ್ನು ಗುರಿಯಾಗಿಸಿ ಗುಂಡು ಹಾರಿಸುವ ಸೃಷ್ಟಿತ ಎಐ ಚಿತ್ರಗಳನ್ನು ಬಳಸಲಾಗಿದೆ.

ಅಸ್ಸಾಂ ಬಿಜೆಪಿ ಮತ್ತು ಸಿಎಂ ರಾಜ್ಯದ ಮುಸ್ಲಿಮರನ್ನು (ವಿಶೇಷವಾಗಿ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರನ್ನು) ಗುರಿಯಾಗಿಸಿಕೊಂಡು ನಡೆಸುತ್ತಿರುವ ದ್ವೇಷ ಅಭಿಯಾನದ ಭಾಗವಾಗಿ ವಿಡಿಯೋ ಸೃಷ್ಟಿಸಲಾಗಿದೆ ಎಂದು ವಿರೋಧ ಪಕ್ಷಗಳು ಮತ್ತು ಮಾನವ ಹಕ್ಕು ಹೋರಾಟಗಾರರು ಆರೋಪಿಸಿದ್ದಾರೆ.

ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಬಿಜೆಪಿ ತನ್ನ ಎಕ್ಸ್ ಖಾತೆಯಿಂದ ವಿಡಿಯೋವನ್ನು ಡಿಲೀಟ್ ಮಾಡಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಸಾಗರಿಕಾ ಘೋಷ್, ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಸೇರಿದಂತೆ ಅನೇಕರು ಇದನ್ನು ಖಂಡಿಸಿ, ವಿಡಿಯೋ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

“ಇದು ನಾಚಿಕೆಗೇಡಿನ ಸಂಗತಿ, ಈ ವಿಡಿಯೋ ಸೃಷ್ಟಿಸಿದವರನ್ನು ತಕ್ಷಣ ಬಂಧಿಸಬೇಕು” ಎಂದು ಸಾಗರಿಕಾ ಘೋಷ್ ಆಗ್ರಹಿಸಿದ್ದಾರೆ.

ವಿಡಿಯೋ ಡಿಲಿಟ್ ಆದ ಬಳಿಕ ಮತ್ತೊಂದು ಪೋಸ್ಟ್ ಹಾಕಿರುವ ಸಾಗರಿಕಾ ಘೋಷ್, “ವಿಡಿಯೋ ಡಿಲಿಟ್ ಮಾಡಿದ್ದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದು ಯುಎಪಿಎ ಅಡಿ ದೊಡ್ಡ ಅಪರಾಧವಾಗಿದೆ. ಅಲ್ಲದೆ, ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್‌ಗಳಾದ 152, 156 ಮತ್ತು 192 ಅಡಿಯಲ್ಲೂ ಅಪರಾಧ. ಆದ್ದರಿಂದ ಈ ಪ್ರಕರಣದಲ್ಲಿ ಕಠಿಣವಾದ ಶಿಕ್ಷೆಯಾಗಬೇಕು” ಎಂದು ಬರೆದುಕೊಂಡಿದ್ದಾರೆ.

ಪತ್ರಕರ್ತೆ ರಾಣಾ ಅಯ್ಯೂಬ್ ಅವರು, “ಈ ವಿಡಿಯೋ ಆಡಳಿತ ವ್ಯವಸ್ಥೆಯ ಉನ್ನತ ಮಟ್ಟದಲ್ಲಿರುವವರ “ನೈತಿಕ ಅಧಃಪತನವನ್ನು” ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ.

“ಇದನ್ನು ಹಂಚಿಕೊಳ್ಳುವುದು ನನಗೆ ಇಷ್ಟವಿಲ್ಲ, ಆದರೆ ಇದು ಉನ್ನತ ಮಟ್ಟದಲ್ಲಿರುವವರ ಕೊಳಕುತನವನ್ನು ಬಹಿರಂಗಪಡಿಸುತ್ತದೆ. ಬಿಜೆಪಿ ಅಸ್ಸಾಂ ಘಟಕ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಒಂದು ಮೀಮ್ ಅಥವಾ ವಿಡಿಯೋ ಹಂಚಿಕೊಂಡಿದೆ. ಅದರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಮರ ಮೇಲೆ ಗುಂಡು ಹಾರಿಸುವಂತೆ (ಪಾಯಿಂಟ್ ಬ್ಲ್ಯಾಂಕ್ ಶಾಟ್) ತೋರಿಸಲಾಗಿದೆ. ಇದೇ ಸಮಯದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಮುಸ್ಲಿಂ ಬಹುಸಂಖ್ಯಾತ ದೇಶವಾದ ಮಲೇಷ್ಯಾದಲ್ಲಿ ಭವ್ಯ ಸ್ವಾಗತ ಪಡೆದುಕೊಂಡು ಮಾತನಾಡುತ್ತಿದ್ದಾರೆ. ಇದು ತುಂಬಾ ತದ್ವಿರುದ್ದ ಮತ್ತು ಕೊಳಕು ದ್ವಿಮುಖ ನಡವಳಿಕೆಯನ್ನು ತೋರಿಸುತ್ತದೆ” ಎಂದು ರಾಣಾ ಅಯ್ಯೂಬ್ ಬರೆದುಕೊಂಡಿದ್ದಾರೆ.

ಅಸ್ಸಾಂ ಬಿಜೆಪಿ ಡಿಲಿಟ್ ಮಾಡಿರುವ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, “ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಪುರುಷರ ಮೇಲೆ ಗುಂಡು ಹಾರಿಸುವಂತೆ ತೋರಿಸುವ ಮತ್ತು ‘ಪಾಯಿಂಟ್ ಬ್ಲ್ಯಾಂಕ್ ಶಾಟ್’ ಎಂಬ ಶೀರ್ಷಿಕೆಯೊಂದಿಗೆ ಇರುವ ವಿಡಿಯೋವನ್ನು ಅಳಿಸಿಹಾಕಿದರೆ ಸಾಕಾಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

“ಇದು ನಿಜವಾಗಿಯೂ ಬಿಜೆಪಿ ಯಾರು ಎಂಬುದನ್ನು ತೋರಿಸುತ್ತದೆ: ದೊಡ್ಡ ಸಂಖ್ಯೆಯಲ್ಲಿ ಕೊಲೆಗಾರರು (ಮಾಸ್ ಮರ್ಡರರ್ಸ್). ಈ ವಿಷ, ದ್ವೇಷ ಮತ್ತು ಹಿಂಸಾಚಾರದ ಜವಾಬ್ದಾರಿ ನಿಮ್ಮ ಮೇಲಿದೆ ಮಿಸ್ಟರ್ ಮೋದಿ. ನ್ಯಾಯಾಲಯಗಳು ಮತ್ತು ಇತರ ಸಂಸ್ಥೆಗಳು ನಿದ್ರೆ ಮಾಡುತ್ತಿವೆಯೇ?” ಎಂದು ಪ್ರಶ್ನಿಸಿದ್ದಾರೆ.

ಅಸ್ಸಾಂ ಬಿಜೆಪಿ ಈ ಹಿಂದೆಯೂ ಮುಸ್ಲಿಮರ ವಿರುದ್ದ ದ್ವೇಷ ಕಾರುವ ವಿಡಿಯೋವನ್ನು ಹಂಚಿಕೊಂಡಿತ್ತು. ಈ ಕುರಿತ ಸುದ್ದಿಯನ್ನು ಕೆಳಗಡೆ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...