Homeಮುಖಪುಟಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

- Advertisement -
- Advertisement -

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು ಡಿಲೀಟ್ ಮಾಡಿದೆ.

ಮುಸ್ಲಿಮರ ವಿರುದ್ದ, ವಿಶೇಷವಾಗಿ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರ ವಿರುದ್ದ ದ್ವೇಷ ಕಾರುವ, ಅವರ ಹತ್ಯೆಗೆ ನೇರ ಪ್ರಚೋದನೆ ನೀಡುವ, ಭಾರತ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಈ ವಿಡಿಯೋವನ್ನು ನೈಜ ದೃಶ್ಯ ಮತ್ತು ಕೃತಕ ಬುದ್ಧಿಮತ್ತೆ (ಎಐ) ಚಿತ್ರಗಳ ಮೂಲಕ ಸೃಷ್ಟಿಸಲಾಗಿದೆ ಎಂದು ವರದಿಗಳು ಹೇಳಿವೆ.

ವಿಡಿಯೋದಲ್ಲಿ ಸಿಎಂ ಶರ್ಮಾ ಅವರು ಬಂದೂಕು ಹಿಡಿದು ಶೂಟ್ ಮಾಡಿದ ನೈಜ ದೃಶ್ಯದೊಂದಿಗೆ, ಮುಸ್ಲಿಂ ಸಮುದಾಯದವರಂತೆ ಕಾಣುವ ವ್ಯಕ್ತಿಗಳನ್ನು ಗುರಿಯಾಗಿಸಿ ಗುಂಡು ಹಾರಿಸುವ ಸೃಷ್ಟಿತ ಎಐ ಚಿತ್ರಗಳನ್ನು ಬಳಸಲಾಗಿದೆ.

ಅಸ್ಸಾಂ ಬಿಜೆಪಿ ಮತ್ತು ಸಿಎಂ ರಾಜ್ಯದ ಮುಸ್ಲಿಮರನ್ನು (ವಿಶೇಷವಾಗಿ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರನ್ನು) ಗುರಿಯಾಗಿಸಿಕೊಂಡು ನಡೆಸುತ್ತಿರುವ ದ್ವೇಷ ಅಭಿಯಾನದ ಭಾಗವಾಗಿ ವಿಡಿಯೋ ಸೃಷ್ಟಿಸಲಾಗಿದೆ ಎಂದು ವಿರೋಧ ಪಕ್ಷಗಳು ಮತ್ತು ಮಾನವ ಹಕ್ಕು ಹೋರಾಟಗಾರರು ಆರೋಪಿಸಿದ್ದಾರೆ.

ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಬಿಜೆಪಿ ತನ್ನ ಎಕ್ಸ್ ಖಾತೆಯಿಂದ ವಿಡಿಯೋವನ್ನು ಡಿಲೀಟ್ ಮಾಡಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಸಾಗರಿಕಾ ಘೋಷ್, ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಸೇರಿದಂತೆ ಅನೇಕರು ಇದನ್ನು ಖಂಡಿಸಿ, ವಿಡಿಯೋ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

“ಇದು ನಾಚಿಕೆಗೇಡಿನ ಸಂಗತಿ, ಈ ವಿಡಿಯೋ ಸೃಷ್ಟಿಸಿದವರನ್ನು ತಕ್ಷಣ ಬಂಧಿಸಬೇಕು” ಎಂದು ಸಾಗರಿಕಾ ಘೋಷ್ ಆಗ್ರಹಿಸಿದ್ದಾರೆ.

ವಿಡಿಯೋ ಡಿಲಿಟ್ ಆದ ಬಳಿಕ ಮತ್ತೊಂದು ಪೋಸ್ಟ್ ಹಾಕಿರುವ ಸಾಗರಿಕಾ ಘೋಷ್, “ವಿಡಿಯೋ ಡಿಲಿಟ್ ಮಾಡಿದ್ದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದು ಯುಎಪಿಎ ಅಡಿ ದೊಡ್ಡ ಅಪರಾಧವಾಗಿದೆ. ಅಲ್ಲದೆ, ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್‌ಗಳಾದ 152, 156 ಮತ್ತು 192 ಅಡಿಯಲ್ಲೂ ಅಪರಾಧ. ಆದ್ದರಿಂದ ಈ ಪ್ರಕರಣದಲ್ಲಿ ಕಠಿಣವಾದ ಶಿಕ್ಷೆಯಾಗಬೇಕು” ಎಂದು ಬರೆದುಕೊಂಡಿದ್ದಾರೆ.

ಪತ್ರಕರ್ತೆ ರಾಣಾ ಅಯ್ಯೂಬ್ ಅವರು, “ಈ ವಿಡಿಯೋ ಆಡಳಿತ ವ್ಯವಸ್ಥೆಯ ಉನ್ನತ ಮಟ್ಟದಲ್ಲಿರುವವರ “ನೈತಿಕ ಅಧಃಪತನವನ್ನು” ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ.

“ಇದನ್ನು ಹಂಚಿಕೊಳ್ಳುವುದು ನನಗೆ ಇಷ್ಟವಿಲ್ಲ, ಆದರೆ ಇದು ಉನ್ನತ ಮಟ್ಟದಲ್ಲಿರುವವರ ಕೊಳಕುತನವನ್ನು ಬಹಿರಂಗಪಡಿಸುತ್ತದೆ. ಬಿಜೆಪಿ ಅಸ್ಸಾಂ ಘಟಕ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಒಂದು ಮೀಮ್ ಅಥವಾ ವಿಡಿಯೋ ಹಂಚಿಕೊಂಡಿದೆ. ಅದರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಮರ ಮೇಲೆ ಗುಂಡು ಹಾರಿಸುವಂತೆ (ಪಾಯಿಂಟ್ ಬ್ಲ್ಯಾಂಕ್ ಶಾಟ್) ತೋರಿಸಲಾಗಿದೆ. ಇದೇ ಸಮಯದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಮುಸ್ಲಿಂ ಬಹುಸಂಖ್ಯಾತ ದೇಶವಾದ ಮಲೇಷ್ಯಾದಲ್ಲಿ ಭವ್ಯ ಸ್ವಾಗತ ಪಡೆದುಕೊಂಡು ಮಾತನಾಡುತ್ತಿದ್ದಾರೆ. ಇದು ತುಂಬಾ ತದ್ವಿರುದ್ದ ಮತ್ತು ಕೊಳಕು ದ್ವಿಮುಖ ನಡವಳಿಕೆಯನ್ನು ತೋರಿಸುತ್ತದೆ” ಎಂದು ರಾಣಾ ಅಯ್ಯೂಬ್ ಬರೆದುಕೊಂಡಿದ್ದಾರೆ.

ಅಸ್ಸಾಂ ಬಿಜೆಪಿ ಡಿಲಿಟ್ ಮಾಡಿರುವ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, “ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಪುರುಷರ ಮೇಲೆ ಗುಂಡು ಹಾರಿಸುವಂತೆ ತೋರಿಸುವ ಮತ್ತು ‘ಪಾಯಿಂಟ್ ಬ್ಲ್ಯಾಂಕ್ ಶಾಟ್’ ಎಂಬ ಶೀರ್ಷಿಕೆಯೊಂದಿಗೆ ಇರುವ ವಿಡಿಯೋವನ್ನು ಅಳಿಸಿಹಾಕಿದರೆ ಸಾಕಾಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

“ಇದು ನಿಜವಾಗಿಯೂ ಬಿಜೆಪಿ ಯಾರು ಎಂಬುದನ್ನು ತೋರಿಸುತ್ತದೆ: ದೊಡ್ಡ ಸಂಖ್ಯೆಯಲ್ಲಿ ಕೊಲೆಗಾರರು (ಮಾಸ್ ಮರ್ಡರರ್ಸ್). ಈ ವಿಷ, ದ್ವೇಷ ಮತ್ತು ಹಿಂಸಾಚಾರದ ಜವಾಬ್ದಾರಿ ನಿಮ್ಮ ಮೇಲಿದೆ ಮಿಸ್ಟರ್ ಮೋದಿ. ನ್ಯಾಯಾಲಯಗಳು ಮತ್ತು ಇತರ ಸಂಸ್ಥೆಗಳು ನಿದ್ರೆ ಮಾಡುತ್ತಿವೆಯೇ?” ಎಂದು ಪ್ರಶ್ನಿಸಿದ್ದಾರೆ.

ಅಸ್ಸಾಂ ಬಿಜೆಪಿ ಈ ಹಿಂದೆಯೂ ಮುಸ್ಲಿಮರ ವಿರುದ್ದ ದ್ವೇಷ ಕಾರುವ ವಿಡಿಯೋವನ್ನು ಹಂಚಿಕೊಂಡಿತ್ತು. ಈ ಕುರಿತ ಸುದ್ದಿಯನ್ನು ಕೆಳಗಡೆ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...