Homeಮುಖಪುಟಖಾಸಗೀಕರಣ ಪರ್ವ: 61.5% ಪಾಲನ್ನು ಮಾರಾಟ ಮಾಡಿದ ಬಿಪಿಸಿಎಲ್‌!

ಖಾಸಗೀಕರಣ ಪರ್ವ: 61.5% ಪಾಲನ್ನು ಮಾರಾಟ ಮಾಡಿದ ಬಿಪಿಸಿಎಲ್‌!

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಯಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಅಸ್ಸಾಂನ ನುಮಾಲಿಗಡ್ ರಿಫೈನರಿ ಲಿಮಿಟೆಡ್‌(ಎನ್ಆರ್‌ಎಲ್)ನ 61.5% ಪಾಲನ್ನು ಮಾರಾಟ ಮಾಡಿದೆ. ಆಯಿಲ್ ಇಂಡಿಯಾ ಲಿಮಿಟೆಡ್ (AIL), ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್(EIL) ಮತ್ತು ಅಸ್ಸಾಂ ಸರ್ಕಾರಕ್ಕೆ ಒಟ್ಟು 9,876 ಕೋಟಿ ರೂ.ಗೆ ಕಂಪೆನಿಯು ತನ್ನ ಪಾಲನ್ನು ಮಾರಾಟ ಮಾಡಿದೆ.

ಇದರಲ್ಲಿ 54.16% ಪಾಲನ್ನು ಆಯಿಲ್ ಇಂಡಿಯಾ ಕಂಪೆನಿ, ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ 4.4% ಹಾಗೂ ಉಳಿದ 3.2% ಪಾಲನ್ನು ಅಸ್ಸಾಂ ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ನುಮಾಲಿಗಡ್‌‌ ರಿಫೈನರಿ ಲಿಮಿಟೆಡ್‌‌ನ ಮಾರಾಟ ಮಾಡುವ ಮೂಲಕ ಭಾರತದ ಎರಡನೇ ಅತಿದೊಡ್ಡ ತೈಲ ಕಂಪನಿಯ ಖಾಸಗೀಕರಣ ಪ್ರಕ್ರಿಯೆ ನಡೆದಿದೆ.

ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆ: ಮೈತ್ರಿಗಳ ಕದನ

ಮಾರಾಟ ಖರೀದಿ ಒಪ್ಪಂದವನ್ನು ಮಾರ್ಚ್ 25, 2021 ರಂದು ನಡೆಸಲಾಗಿದೆ ಎಂದು ಬಿಪಿಸಿಎಲ್ ಹೇಳಿದ್ದು, “ಅಂದು ಒಐಎಲ್ ಮತ್ತು ಇಐಎಲ್‌ಗೆ ಎನ್ಆರ್‌ಎಲ್‌‌‌ನ 43.05 ಕೋಟಿ ರೂ.ಗಳ ಷೇರುಗಳನ್ನು 9,375.96 ಕೋಟಿ ರೂ.ಗಳ ಮಾರಾಟಕ್ಕೆ ಮಾಡಲು ಸಹಿ ಮಾಡಲಾಗಿದೆ” ಎಂದು ತಿಳಿಸಿದೆ.

ಉಳಿದ 2.29 ಕೋಟಿ ಷೇರುಗಳನ್ನು ಅಸ್ಸಾಂ ಸರ್ಕಾರಕ್ಕೆ 499.99 ಕೋಟಿ ರೂ.ಗೆ ವರ್ಗಾಯಿಸಲಾಗಿದೆ.

ಎನ್‌ಆರ್‌ಎಲ್ ಮಂಡಳಿಯಲ್ಲಿ ಪ್ರಸ್ತುತ ಬಿಪಿಸಿಎಲ್ ನಾಮನಿರ್ದೇಶನ ಮಾಡಿದ ನಿರ್ದೇಶಕರು ರಾಜೀನಾಮೆ ನೀಡಲಿದ್ದು, ಈ ಮಾರಾಟದೊಂದಿಗೆ ನಿರ್ದೇಶಕರನ್ನು ನೇಮಿಸುವ ಬಿಪಿಸಿಎಲ್‌ನ ಹಕ್ಕುಗಳು ಇಲ್ಲವಾಗುತ್ತದೆ. ಎನ್‌ಆರ್‌ಎಲ್ ಅಸ್ಸಾಂನಲ್ಲಿ ವಾರ್ಷಿಕ 3 ಮಿಲಿಯನ್ ಟನ್ ತೈಲ ಸಂಸ್ಕರಣಾಗಾರವನ್ನು ನಿರ್ವಹಿಸುತ್ತಿದೆ.

ಎನ್‌ಆರ್‌ಎಲ್ ಮಾರಾಟದ ನಂತರ, ಮುಂಬೈ, ಕೊಚ್ಚಿ (ಕೇರಳ), ಮತ್ತು ಬಿನಾ (ಮಧ್ಯಪ್ರದೇಶ) ದಲ್ಲಿನ ಮೂರು ತೈಲ ಸಂಸ್ಕರಣಾಗಾರಗಳನ್ನೂ ಬಿಪಿಸಿಎಲ್ ಮಾರಾಟ ಮಾಡುತ್ತದೆ.

ಏಪ್ರಿಲ್ (2021-22) ರಿಂದ ಪ್ರಾರಂಭವಾಗುವ ಹಣಕಾಸು ವರ್ಷದ ಮೊದಲಾರ್ಧದ ವೇಳೆಗೆ ಬಿಪಿಸಿಎಲ್ ತನ್ನ ಖಾಸಗೀಕರಣವನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಸೂಚಿಸಿತ್ತು.

ಇದನ್ನೂ ಓದಿ: ಮಹಿಳೆಯರ ದೇಹದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಡಿಎಂಕೆ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...