Homeಮುಖಪುಟಅಸ್ಸಾಂ: ಮಾಜಿ ಶಿಕ್ಷಕನನ್ನು ಬಾಂಗ್ಲಾಕ್ಕೆ ಗಡಿಪಾರು ಮಾಡಿದ್ದ ಬಿಎಸ್ಎಫ್: ಆರೋಪ

ಅಸ್ಸಾಂ: ಮಾಜಿ ಶಿಕ್ಷಕನನ್ನು ಬಾಂಗ್ಲಾಕ್ಕೆ ಗಡಿಪಾರು ಮಾಡಿದ್ದ ಬಿಎಸ್ಎಫ್: ಆರೋಪ

- Advertisement -
- Advertisement -

ಅಸ್ಸಾಂ ಸರ್ಕಾರ ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರ ವಿರುದ್ಧ ಕೈಗೊಂಡ ಕ್ರಮದ ಭಾಗವಾಗಿ, ಮಾಜಿ ಸರ್ಕಾರಿ ಶಾಲಾ ಶಿಕ್ಷಕ ಖೈರುಲ್ ಇಸ್ಲಾಂ ಅವರನ್ನು ಮೇ 23ರಂದು ಗಡಿ ಭದ್ರತಾ ಪಡೆ (ಬಿ.ಎಸ್.ಎಫ್) ಸಿಬ್ಬಂದಿ ಕುರಿಗ್ರಾಮ್‌ನ ಬಾಂಗ್ಲಾದೇಶ ಗಡಿಯಲ್ಲಿ ಭಾರತದ ಪ್ರದೇಶದಿಂದ ಹೊರಗೆ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಂಗ್ಲಾದೇಶದ ಭದ್ರತಾ ಪಡೆಗಳು ಖೈರುಲ್ ಅವರನ್ನು ತಮ್ಮ ಗಡಿಯ ಬಳಿ ಪತ್ತೆ ಮಾಡಿ, ಮತ್ತೆ ಭಾರತಕ್ಕೆ ಗಡಿ ದಾಟುವಂತೆ ಒತ್ತಾಯಿಸಿದ್ದಾರೆ. ಅವರು ಈಗ ರಾಜ್ಯದ ಮೋರಿಗಾಂವ್ ಜಿಲ್ಲೆಯ ತಮ್ಮ ಮನೆಗೆ ಮರಳಿದ್ದಾರೆ. ಜೂನ್ 7ರಂದು ಬಕ್ರಿದ್ ಗೆ ಎರಡು ದಿನಗಳ ಮೊದಲು ಅವರು ಸುರಕ್ಷಿತವಾಗಿ ಮನೆಗೆ ತಲುಪಿರುವ ಕುರಿತು ಅವರ ಕುಟುಂಬ ದೃಢಪಡಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಾಂಗ್ಲಾದೇಶದಿಂದ ಬಂದ “ಅಕ್ರಮ ವಲಸಿಗರ” ಮೇಲಿನ ದಾಳಿ ಭಾರತದಲ್ಲಿ ಹೊಸದಲ್ಲ. ಎರಡು ದೇಶಗಳು 4,096 ಕಿಮೀ (2,545 ಮೈಲುಗಳು) ಉದ್ದದ ಗಡಿಯಿಂದ ವಿಭಜಿಸಲ್ಪಟ್ಟಿವೆ. ಈ ಗಡಿಯನ್ನು ದಾಟಲು ಎರಡು ದೇಶದ ಪ್ರಜೆಗಳಿಗೆ ತುಲನಾತ್ಮಕವಾಗಿ ಸುಲಭಗೊಳಿಸುತ್ತದೆ. ಆದರೂ ಅನೇಕ ಸೂಕ್ಷ್ಮ ಪ್ರದೇಶಗಳನ್ನು ಹೆಚ್ಚು ಕಾವಲು ಮಾಡಲಾಗಿದೆ.

ಜನರನ್ನು ಅವರ ಮನೆಗಳಿಂದ ಹಠಾತ್ತನೆ ಕರೆದೊಯ್ದು ಸರಿಯಾದ ಪ್ರಕ್ರಿಯೆ ಇಲ್ಲದೆ ಬೇರೆ ದೇಶಕ್ಕೆ ಬಲವಂತವಾಗಿ ಕರೆದೊಯ್ಯುವುದು ನಿರಂತರವಾಗಿ ನಡೆಯುತ್ತಿದೆ. ಭಾರತದಲ್ಲಿ ಕಳೆದ ಕೆಲವು ವಾರಗಳಲ್ಲಿ ಈ ಪ್ರಯತ್ನಗಳು ತೀವ್ರಗೊಂಡಿವೆ ಎಂದು ಈ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲರು ಹೇಳುತ್ತಾರೆ.

ಮೇ 27ರಂದು ಕುರಿಗ್ರಾಮ್ ಗಡಿಯ ಬಳಿಯ ಹೊಲದಲ್ಲಿ ನಿಂತಿದ್ದ ಬಾಂಗ್ಲಾದೇಶದ ಪತ್ರಕರ್ತರೊಬ್ಬರು ಪೋಸ್ಟ್ ಮಾಡಿದ ವೀಡಿಯೊದಲ್ಲಿ ಈ ಮಾಜಿ ಶಿಕ್ಷಕ ಖೈರುಲ್ ಕಾಣಿಸಿಕೊಂಡಿದ್ದಾರೆ. ಭಾರತೀಯ ಪೊಲೀಸರು ತಮ್ಮ ಕೈಗಳನ್ನು ಕಟ್ಟಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದರು ಎಂದು ಅವರು ಹೇಳಿದರು.

ನಾನು ಒಬ್ಬ ಶಿಕ್ಷಕ ಮತ್ತು ಅವರು ನನ್ನನ್ನು ಗೌರವಿಸಬೇಕು ಎಂದು ನಾನು ಅಸ್ಸಾಂ ಪೊಲೀಸರಿಗೆ ಹೇಳಿದೆ ಎಂದು ಖೈರುಲ್ ವೀಡಿಯೊದಲ್ಲಿ ಪತ್ರಕರ್ತನಿಗೆ ಹೇಳಿದರು. “ಆದರೆ ಅಸ್ಸಾಂ ಪೊಲೀಸರು ನನ್ನನ್ನು ಕಳ್ಳನಂತೆ ನಡೆಸಿಕೊಂಡರು ಮತ್ತು ನನ್ನನ್ನು ಬಸ್ಸಿನಲ್ಲಿ ಕೂರಿಸಿದರು” ಎಂದು ಕೂಡ ಅವರು ಆರೋಪಿಸಿದರು.

ಖೈರುಲ್ ಡಿಸೆಂಬರ್ ವರೆಗೆ ಸರ್ಕಾರಿ ಶಾಲಾ ಶಿಕ್ಷಕನಾಗಿ ಕೆಲಸ ಮಾಡಿದರು. ಆದಾಗ್ಯೂ 2016ರಲ್ಲಿ ಅಸ್ಸಾಂನ ನ್ಯಾಯಮಂಡಳಿಯು ಅವರನ್ನು ವಿದೇಶಿ ಎಂದು ಘೋಷಿಸಿತು. ಆ ನಿರ್ಧಾರವನ್ನು ನಂತರ 2018ರಲ್ಲಿ ಗುವಾಹಟಿ ಹೈಕೋರ್ಟ್ ಎತ್ತಿಹಿಡಿಯಿತು. ಅವರನ್ನು ಎರಡು ವರ್ಷಗಳ ಕಾಲ ಅಸ್ಸಾಂನ ಮಾಟಿಯಾ ಬಂಧನ ಕೇಂದ್ರದಲ್ಲಿ ಇರಿಸಲಾಗಿತ್ತು. ನಂತರ 2020ರಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಅವರ ಪ್ರಕರಣವು ಈಗ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗಾಗಿ ಕಾಯುತ್ತಿದೆ.

ಮನೆಗೆ ಹಿಂದಿರುಗಿದ ನಂತರ ಸುದ್ದಿವಾಹಿನಿ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಖೈರುಲ್, ಮೊದಲು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಕರೆದೊಯ್ಯಲಾಯಿತು, ನಂತರ ಬಂಧನ ಶಿಬಿರಕ್ಕೆ ಕಳುಹಿಸಲಾಯಿತು ಎಂದು ಹೇಳಿದರು. ಕೆಲವು ದಿನಗಳ ನಂತರ, ಅವರನ್ನು ಬಿಎಸ್‌ಎಫ್ ಕರೆದೊಯ್ದು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಯಾರೂ ಇಲ್ಲದ ಸ್ಥಳದಲ್ಲಿ ಬಿಡಲಾಯಿತು ಎಂದು ಅವರು ಹೇಳಿದ್ದಾರೆ.

ನಾನು ಅಲ್ಲಿ ಎರಡು ದಿನಗಳನ್ನು ಕಳೆದೆ. ನಮಗೆ ನಿದ್ರೆ ಬರಲಿಲ್ಲ. ಹಗಲೋ ರಾತ್ರಿಯೋ ಎಂದು ನಮಗೆ ತಿಳಿಯಲಿಲ್ಲ ಎಂದು ಅವರು ಹೇಳಿದರು. “ನಂತರ ಬಾಂಗ್ಲಾದೇಶ ಗಡಿ ಕಾವಲು ಪಡೆ (ಬಿಜಿಬಿ) ನಮ್ಮನ್ನು ಅವರ ಶಿಬಿರಕ್ಕೆ ಕರೆತಂದಿತು. ಕೆಲವು ದಿನಗಳ ನಂತರ, ಬಿಜಿಬಿ ನಾವು ಏಳು ಜನರನ್ನು ಗಡಿಗೆ ಕರೆದೊಯ್ದು ಭಾರತೀಯ ಪೊಲೀಸರಿಗೆ ಒಪ್ಪಿಸಿತು” ಎಂದು ಅವರು ತಿಳಿಸಿದರು.

ಗಡಿಗೆ ಕರೆದೊಯ್ಯುವ ಬಸ್ ಹತ್ತಲು ನಿರಾಕರಿಸಿದಾಗ ಮಾಟಿಯಾ ಶಿಬಿರದೊಳಗೆ ಅವರನ್ನು ಥಳಿಸಲಾಯಿತು ಎಂದು ಖೈರುಲ್ ಹೇಳಿಕೊಂಡಿದ್ದಾರೆ. ನಾನು ಬಾಂಗ್ಲಾದೇಶಕ್ಕೆ ಏಕೆ ಹೋಗಬೇಕು ಎಂದು ನಾನು ಕೇಳಿದೆ? ನಾನು ಭಾರತೀಯ ಪ್ರಜೆಯಲ್ಲವೇ ಎಂದು ನಾನು ಬಿಎಸ್ ಎಪ್ ಅನ್ನು ಪ್ರಶ್ನಿಸಿದೆ ಎಂದು ಅವರು ತಿಳಿಸಿದ್ದಾರೆ.

ಬಿಎಸ್‌ಎಫ್ ಅವರನ್ನು ಕರೆದೊಯ್ದ ನಂತರ, ಖೈರುಲ್ ಅವರ ಕುಟುಂಬವು ಅವರ ಭಾರತೀಯ ರಾಷ್ಟ್ರೀಯತೆಯ ಪುರಾವೆಗಳನ್ನು ತೋರಿಸುವ ದಾಖಲೆಗಳನ್ನು ಅಸ್ಸಾಂನಲ್ಲಿ ಪೊಲೀಸರಿಗೆ ಸಲ್ಲಿಸಿತು. ಅವರ ಪತ್ನಿ ರೀಟಾ ಖಾನಮ್, ತಮ್ಮ ಪತಿ ಕೆಲವೇ ದಿನಗಳಲ್ಲಿ ಹಿಂತಿರುಗುತ್ತಾರೆ ಎಂದು ತಮಗೆ ತಿಳಿಸಲಾಗಿದೆ ಎಂದು ಹೇಳಿದರು.

ಈಗ ಸ್ವದೇಶಕ್ಕೆ ಹಿಂತಿರುಗಿರುವ ಖೈರುಲ್, ಬೇರೆ ಯಾವುದೇ ಭಾರತೀಯ ನಾಗರಿಕನಿಗೆ ಇಂತಹ ಪರಿಸ್ಥಿತಿ ಬರಬಾರದು ಎಂದು ಆಶಿಸುತ್ತೇನೆ ಎಂದು ಹೇಳಿದರು. “ನಾವು ಬಾಂಗ್ಲಾದೇಶಿಗಳಲ್ಲ, ನಾವು ಭಾರತೀಯರು” ಎಂದು ಅವರು ಹೇಳಿದರು. “ನಮ್ಮಲ್ಲಿ ಎಲ್ಲಾ ದಾಖಲೆಗಳಿವೆ. ಇದು ಅನ್ಯಾಯ. ಒಂದು ದಿನ ನಮಗೆ ನ್ಯಾಯ ಸಿಗುತ್ತದೆ” ಎಂದು ಅವರು ಹೇಳಿದರು.

“ಸರ್ವಶಕ್ತನು ನೋಡುತ್ತಿದ್ದಾನೆ. ಅವನು ನ್ಯಾಯ ಕೊಡುತ್ತಾನೆ” ಎಂದು ಅವರು ಭಾವುಕರಾಗಿ ಹೇಳಿದರು.

ಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...