Homeಮುಖಪುಟಅಸ್ಸಾಂ: ಮಾಜಿ ಶಿಕ್ಷಕನನ್ನು ಬಾಂಗ್ಲಾಕ್ಕೆ ಗಡಿಪಾರು ಮಾಡಿದ್ದ ಬಿಎಸ್ಎಫ್: ಆರೋಪ

ಅಸ್ಸಾಂ: ಮಾಜಿ ಶಿಕ್ಷಕನನ್ನು ಬಾಂಗ್ಲಾಕ್ಕೆ ಗಡಿಪಾರು ಮಾಡಿದ್ದ ಬಿಎಸ್ಎಫ್: ಆರೋಪ

- Advertisement -
- Advertisement -

ಅಸ್ಸಾಂ ಸರ್ಕಾರ ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರ ವಿರುದ್ಧ ಕೈಗೊಂಡ ಕ್ರಮದ ಭಾಗವಾಗಿ, ಮಾಜಿ ಸರ್ಕಾರಿ ಶಾಲಾ ಶಿಕ್ಷಕ ಖೈರುಲ್ ಇಸ್ಲಾಂ ಅವರನ್ನು ಮೇ 23ರಂದು ಗಡಿ ಭದ್ರತಾ ಪಡೆ (ಬಿ.ಎಸ್.ಎಫ್) ಸಿಬ್ಬಂದಿ ಕುರಿಗ್ರಾಮ್‌ನ ಬಾಂಗ್ಲಾದೇಶ ಗಡಿಯಲ್ಲಿ ಭಾರತದ ಪ್ರದೇಶದಿಂದ ಹೊರಗೆ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಂಗ್ಲಾದೇಶದ ಭದ್ರತಾ ಪಡೆಗಳು ಖೈರುಲ್ ಅವರನ್ನು ತಮ್ಮ ಗಡಿಯ ಬಳಿ ಪತ್ತೆ ಮಾಡಿ, ಮತ್ತೆ ಭಾರತಕ್ಕೆ ಗಡಿ ದಾಟುವಂತೆ ಒತ್ತಾಯಿಸಿದ್ದಾರೆ. ಅವರು ಈಗ ರಾಜ್ಯದ ಮೋರಿಗಾಂವ್ ಜಿಲ್ಲೆಯ ತಮ್ಮ ಮನೆಗೆ ಮರಳಿದ್ದಾರೆ. ಜೂನ್ 7ರಂದು ಬಕ್ರಿದ್ ಗೆ ಎರಡು ದಿನಗಳ ಮೊದಲು ಅವರು ಸುರಕ್ಷಿತವಾಗಿ ಮನೆಗೆ ತಲುಪಿರುವ ಕುರಿತು ಅವರ ಕುಟುಂಬ ದೃಢಪಡಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಾಂಗ್ಲಾದೇಶದಿಂದ ಬಂದ “ಅಕ್ರಮ ವಲಸಿಗರ” ಮೇಲಿನ ದಾಳಿ ಭಾರತದಲ್ಲಿ ಹೊಸದಲ್ಲ. ಎರಡು ದೇಶಗಳು 4,096 ಕಿಮೀ (2,545 ಮೈಲುಗಳು) ಉದ್ದದ ಗಡಿಯಿಂದ ವಿಭಜಿಸಲ್ಪಟ್ಟಿವೆ. ಈ ಗಡಿಯನ್ನು ದಾಟಲು ಎರಡು ದೇಶದ ಪ್ರಜೆಗಳಿಗೆ ತುಲನಾತ್ಮಕವಾಗಿ ಸುಲಭಗೊಳಿಸುತ್ತದೆ. ಆದರೂ ಅನೇಕ ಸೂಕ್ಷ್ಮ ಪ್ರದೇಶಗಳನ್ನು ಹೆಚ್ಚು ಕಾವಲು ಮಾಡಲಾಗಿದೆ.

ಜನರನ್ನು ಅವರ ಮನೆಗಳಿಂದ ಹಠಾತ್ತನೆ ಕರೆದೊಯ್ದು ಸರಿಯಾದ ಪ್ರಕ್ರಿಯೆ ಇಲ್ಲದೆ ಬೇರೆ ದೇಶಕ್ಕೆ ಬಲವಂತವಾಗಿ ಕರೆದೊಯ್ಯುವುದು ನಿರಂತರವಾಗಿ ನಡೆಯುತ್ತಿದೆ. ಭಾರತದಲ್ಲಿ ಕಳೆದ ಕೆಲವು ವಾರಗಳಲ್ಲಿ ಈ ಪ್ರಯತ್ನಗಳು ತೀವ್ರಗೊಂಡಿವೆ ಎಂದು ಈ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲರು ಹೇಳುತ್ತಾರೆ.

ಮೇ 27ರಂದು ಕುರಿಗ್ರಾಮ್ ಗಡಿಯ ಬಳಿಯ ಹೊಲದಲ್ಲಿ ನಿಂತಿದ್ದ ಬಾಂಗ್ಲಾದೇಶದ ಪತ್ರಕರ್ತರೊಬ್ಬರು ಪೋಸ್ಟ್ ಮಾಡಿದ ವೀಡಿಯೊದಲ್ಲಿ ಈ ಮಾಜಿ ಶಿಕ್ಷಕ ಖೈರುಲ್ ಕಾಣಿಸಿಕೊಂಡಿದ್ದಾರೆ. ಭಾರತೀಯ ಪೊಲೀಸರು ತಮ್ಮ ಕೈಗಳನ್ನು ಕಟ್ಟಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದರು ಎಂದು ಅವರು ಹೇಳಿದರು.

ನಾನು ಒಬ್ಬ ಶಿಕ್ಷಕ ಮತ್ತು ಅವರು ನನ್ನನ್ನು ಗೌರವಿಸಬೇಕು ಎಂದು ನಾನು ಅಸ್ಸಾಂ ಪೊಲೀಸರಿಗೆ ಹೇಳಿದೆ ಎಂದು ಖೈರುಲ್ ವೀಡಿಯೊದಲ್ಲಿ ಪತ್ರಕರ್ತನಿಗೆ ಹೇಳಿದರು. “ಆದರೆ ಅಸ್ಸಾಂ ಪೊಲೀಸರು ನನ್ನನ್ನು ಕಳ್ಳನಂತೆ ನಡೆಸಿಕೊಂಡರು ಮತ್ತು ನನ್ನನ್ನು ಬಸ್ಸಿನಲ್ಲಿ ಕೂರಿಸಿದರು” ಎಂದು ಕೂಡ ಅವರು ಆರೋಪಿಸಿದರು.

ಖೈರುಲ್ ಡಿಸೆಂಬರ್ ವರೆಗೆ ಸರ್ಕಾರಿ ಶಾಲಾ ಶಿಕ್ಷಕನಾಗಿ ಕೆಲಸ ಮಾಡಿದರು. ಆದಾಗ್ಯೂ 2016ರಲ್ಲಿ ಅಸ್ಸಾಂನ ನ್ಯಾಯಮಂಡಳಿಯು ಅವರನ್ನು ವಿದೇಶಿ ಎಂದು ಘೋಷಿಸಿತು. ಆ ನಿರ್ಧಾರವನ್ನು ನಂತರ 2018ರಲ್ಲಿ ಗುವಾಹಟಿ ಹೈಕೋರ್ಟ್ ಎತ್ತಿಹಿಡಿಯಿತು. ಅವರನ್ನು ಎರಡು ವರ್ಷಗಳ ಕಾಲ ಅಸ್ಸಾಂನ ಮಾಟಿಯಾ ಬಂಧನ ಕೇಂದ್ರದಲ್ಲಿ ಇರಿಸಲಾಗಿತ್ತು. ನಂತರ 2020ರಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಅವರ ಪ್ರಕರಣವು ಈಗ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗಾಗಿ ಕಾಯುತ್ತಿದೆ.

ಮನೆಗೆ ಹಿಂದಿರುಗಿದ ನಂತರ ಸುದ್ದಿವಾಹಿನಿ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಖೈರುಲ್, ಮೊದಲು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಕರೆದೊಯ್ಯಲಾಯಿತು, ನಂತರ ಬಂಧನ ಶಿಬಿರಕ್ಕೆ ಕಳುಹಿಸಲಾಯಿತು ಎಂದು ಹೇಳಿದರು. ಕೆಲವು ದಿನಗಳ ನಂತರ, ಅವರನ್ನು ಬಿಎಸ್‌ಎಫ್ ಕರೆದೊಯ್ದು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಯಾರೂ ಇಲ್ಲದ ಸ್ಥಳದಲ್ಲಿ ಬಿಡಲಾಯಿತು ಎಂದು ಅವರು ಹೇಳಿದ್ದಾರೆ.

ನಾನು ಅಲ್ಲಿ ಎರಡು ದಿನಗಳನ್ನು ಕಳೆದೆ. ನಮಗೆ ನಿದ್ರೆ ಬರಲಿಲ್ಲ. ಹಗಲೋ ರಾತ್ರಿಯೋ ಎಂದು ನಮಗೆ ತಿಳಿಯಲಿಲ್ಲ ಎಂದು ಅವರು ಹೇಳಿದರು. “ನಂತರ ಬಾಂಗ್ಲಾದೇಶ ಗಡಿ ಕಾವಲು ಪಡೆ (ಬಿಜಿಬಿ) ನಮ್ಮನ್ನು ಅವರ ಶಿಬಿರಕ್ಕೆ ಕರೆತಂದಿತು. ಕೆಲವು ದಿನಗಳ ನಂತರ, ಬಿಜಿಬಿ ನಾವು ಏಳು ಜನರನ್ನು ಗಡಿಗೆ ಕರೆದೊಯ್ದು ಭಾರತೀಯ ಪೊಲೀಸರಿಗೆ ಒಪ್ಪಿಸಿತು” ಎಂದು ಅವರು ತಿಳಿಸಿದರು.

ಗಡಿಗೆ ಕರೆದೊಯ್ಯುವ ಬಸ್ ಹತ್ತಲು ನಿರಾಕರಿಸಿದಾಗ ಮಾಟಿಯಾ ಶಿಬಿರದೊಳಗೆ ಅವರನ್ನು ಥಳಿಸಲಾಯಿತು ಎಂದು ಖೈರುಲ್ ಹೇಳಿಕೊಂಡಿದ್ದಾರೆ. ನಾನು ಬಾಂಗ್ಲಾದೇಶಕ್ಕೆ ಏಕೆ ಹೋಗಬೇಕು ಎಂದು ನಾನು ಕೇಳಿದೆ? ನಾನು ಭಾರತೀಯ ಪ್ರಜೆಯಲ್ಲವೇ ಎಂದು ನಾನು ಬಿಎಸ್ ಎಪ್ ಅನ್ನು ಪ್ರಶ್ನಿಸಿದೆ ಎಂದು ಅವರು ತಿಳಿಸಿದ್ದಾರೆ.

ಬಿಎಸ್‌ಎಫ್ ಅವರನ್ನು ಕರೆದೊಯ್ದ ನಂತರ, ಖೈರುಲ್ ಅವರ ಕುಟುಂಬವು ಅವರ ಭಾರತೀಯ ರಾಷ್ಟ್ರೀಯತೆಯ ಪುರಾವೆಗಳನ್ನು ತೋರಿಸುವ ದಾಖಲೆಗಳನ್ನು ಅಸ್ಸಾಂನಲ್ಲಿ ಪೊಲೀಸರಿಗೆ ಸಲ್ಲಿಸಿತು. ಅವರ ಪತ್ನಿ ರೀಟಾ ಖಾನಮ್, ತಮ್ಮ ಪತಿ ಕೆಲವೇ ದಿನಗಳಲ್ಲಿ ಹಿಂತಿರುಗುತ್ತಾರೆ ಎಂದು ತಮಗೆ ತಿಳಿಸಲಾಗಿದೆ ಎಂದು ಹೇಳಿದರು.

ಈಗ ಸ್ವದೇಶಕ್ಕೆ ಹಿಂತಿರುಗಿರುವ ಖೈರುಲ್, ಬೇರೆ ಯಾವುದೇ ಭಾರತೀಯ ನಾಗರಿಕನಿಗೆ ಇಂತಹ ಪರಿಸ್ಥಿತಿ ಬರಬಾರದು ಎಂದು ಆಶಿಸುತ್ತೇನೆ ಎಂದು ಹೇಳಿದರು. “ನಾವು ಬಾಂಗ್ಲಾದೇಶಿಗಳಲ್ಲ, ನಾವು ಭಾರತೀಯರು” ಎಂದು ಅವರು ಹೇಳಿದರು. “ನಮ್ಮಲ್ಲಿ ಎಲ್ಲಾ ದಾಖಲೆಗಳಿವೆ. ಇದು ಅನ್ಯಾಯ. ಒಂದು ದಿನ ನಮಗೆ ನ್ಯಾಯ ಸಿಗುತ್ತದೆ” ಎಂದು ಅವರು ಹೇಳಿದರು.

“ಸರ್ವಶಕ್ತನು ನೋಡುತ್ತಿದ್ದಾನೆ. ಅವನು ನ್ಯಾಯ ಕೊಡುತ್ತಾನೆ” ಎಂದು ಅವರು ಭಾವುಕರಾಗಿ ಹೇಳಿದರು.

ಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...