Homeಮುಖಪುಟಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

- Advertisement -
- Advertisement -

ಬಹುಪತ್ನಿತ್ವ ನಿಷೇಧಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ (ನ.9) ಹೇಳಿದ್ದಾರೆ. ಮಸೂದೆಯಲ್ಲಿ ಗರಿಷ್ಠ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವುದನ್ನು ಪ್ರಸ್ತಾಪಿಸಲಾಗಿದೆ ಎಂದು ವರದಿಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಶರ್ಮಾ, ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆಯನ್ನು ನವೆಂಬರ್ 25ರಂದು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಕರಡು ಶಾಸನವು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ವಿನಾಯಿತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಸಂವಿಧಾನದ ಆರನೇ ಪರಿಚ್ಛೇದದಡಿಯಲ್ಲಿ ಬರುವ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿ, ಕರ್ಬಿ ಆಂಗ್ಲಾಂಗ್ ಸ್ವಾಯತ್ತ ಮಂಡಳಿ ಮತ್ತು ದಿಮಾ ಹಸಾವೊ ಸ್ವಾಯತ್ತ ಮಂಡಳಿಯ ಪ್ರದೇಶಗಳಿಗೆ ಹೊಸ ಕಾನೂನು ಸದ್ಯಕ್ಕೆ ಅನ್ವಯಿಸುವುದಿಲ್ಲ ಎಂದು ಶರ್ಮಾ ಹೇಳಿದ್ದಾರೆ.

ಅಸ್ಸಾಂನ ಮೂವತ್ತೈದು ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳು ಮೇಲೆ ಉಲ್ಲೇಖಿಸಿರುವ ಮೂರು ಮಂಡಳಿಗಳ ಭಾಗವಾಗಿವೆ. ಸಂವಿಧಾನದ ಆರನೇ ಪರಿಚ್ಛೇದ ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿ ನಾಗರಿಕರಿಗೆ ಭೂಮಿಯ ರಕ್ಷಣೆ ಮತ್ತು ನಾಮಮಾತ್ರದ ಸ್ವಾಯತ್ತತೆಯನ್ನು ಖಾತರಿಪಡಿಸುತ್ತದೆ.

ಹೊಸ ಕಾನೂನು ರಾಜ್ಯದ ಎಲ್ಲರಿಗೂ (ಸರ್ವ ವರ್ಗದವರಿಗೂ) ಅನ್ವಯಿಸುತ್ತದೆ. 2005ಕ್ಕಿಂತ ಮೊದಲು ಆರನೇ ಪರಿಚ್ಛೇದದಡಿ ಬರುವ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಮುಸ್ಲಿಮರಿಗೆ ವಿನಾಯಿತಿದೆ ಸಿಎಂ ಹೇಳಿದ್ದಾರೆ.

ಬಹುಪತ್ನಿತ್ವದ ಬಲಿಪಶುಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರವು ನಿಧಿಯನ್ನು ಕೂಡ ರಚಿಸಲಿದೆ. ಯಾವುದೇ ಮಹಿಳೆ ತನ್ನ ಜೀವನದಲ್ಲಿ ಕಷ್ಟಗಳನ್ನು ಎದುರಿಸದಂತೆ ಅಗತ್ಯವಿರುವ ಸಂದರ್ಭಗಳಲ್ಲಿ ಸರ್ಕಾರ ಆರ್ಥಿಕ ಸಹಾಯವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಹುಪತ್ನಿತ್ವ ನಿಷೇಧ ಕಾನೂನು ಜಾರಿಗೆ ತರುವುದಾಗಿ ಸಿಎಂ ಶರ್ಮಾ ಬಹಳ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದರು. ಇದು ರಾಜ್ಯ ಎಲ್ಲಾ ವರ್ಗದವರಿಗೂ ಅನ್ವಯಿಸುತ್ತದೆ ಎಂದರೂ, ಮುಸ್ಲಿಮರನ್ನು ಗುರಿಯಾಗಿಸಿ ಕಾನೂನು ರೂಪಿಸಲಾಗುತ್ತಿದೆ ಎಂಬುವುದರಲ್ಲಿ ಅನುಮಾನವಿಲ್ಲ. ಏಕೆಂದರೆ, ಬಹುಪತ್ನಿತ್ವ ನಿಷೇಧದ ಉದ್ದೇಶವು ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರ ಸಬಲೀಕರಣವಾಗಿದೆ ಎಂದು ಶರ್ಮಾ ಈಗಾಗಲೇ ಹೇಳಿದ್ದಾರೆ.

ಕೆಲ ಸಮುದಾಯ ಮುಖಂಡರು, ಹೋರಾಟಗಾರರು, ಚಿಂತಕರು ಮತ್ತು ಮಹಿಳೆಯರು ಸರ್ಕಾರದ ಹೊಸ ಕಾನೂನನ್ನು ಸ್ವಾಗತಿಸಿದರೂ, ಒಂದು ಸಮುದಾಯವನ್ನು ಅಪರಾಧೀಕರಿಸುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಬಹುಪತ್ನಿತ್ವಕ್ಕೆ ಅವಕಾಶವಿದೆ. 1950ರ ದಶಕದಲ್ಲಿ ಹಿಂದೂ ಸಂಹಿತೆ ಮಸೂದೆಯ ಮೂಲಕ ಹಿಂದೂಗಳಲ್ಲಿ ಬಹುಪತ್ನಿತ್ವವನ್ನು ನಿಷೇಧಿಸಲಾಯಿತು. ಈ ಹಿಂದೂ ಸಂಹಿತೆ ಮಸೂದೆ ಹಿಂದೂ ಧರ್ಮದ ಉತ್ತರಾಧಿಕಾರ, ದತ್ತು, ಮದುವೆ ಮತ್ತು ವಿಚ್ಛೇದನದಂತಹ ವಿಷಯಗಳನ್ನು ನಿಯಂತ್ರಿಸುತ್ತದೆ.

ಬಹುಪತ್ನಿತ್ವವನ್ನು ಅಪರಾಧೀಕರಿಸುವ ಒತ್ತಾಯವನ್ನು ಹಿಂದುತ್ವ ಸಂಘಟನೆಗಳು ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಲು ಸಮರ್ಥನೆಯಾಗಿ ಬಳಸುತ್ತಿವೆ.

ಏಕರೂಪ ನಾಗರಿಕ ಸಂಹಿತೆಯು ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದಂತೆ ಎಲ್ಲಾ ನಾಗರಿಕರಿಗೆ ಒಂದೇ ಕಾನೂನನ್ನು ಅನ್ವಯಿಸಲಿದೆ. ಪ್ರಸ್ತುತ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ತಮ್ಮ ವೈಯಕ್ತಿಕ ವಿಷಯಗಳಿಗೆ ನಿರ್ದಿಷ್ಟ ಕಾನೂನುಗಳನ್ನು ಆಧರಿಸಿವೆ. ಈ ಕಾನೂನುಗಳು ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಆಧರಿಸಿವೆ.

ಏಕರೂಪ ನಾಗರಿಕ ಸಂಹಿತೆ ಪರಿಚಯಿಸುವುದು ಬಿಜೆಪಿಯ ಕಾರ್ಯಸೂಚಿಯಲ್ಲಿ ಬಹಳ ಹಿಂದಿನಿಂದಲೂ ಇದ್ದು, ಹಿಂದುತ್ವ ಪಕ್ಷ ಆಳುವ ಹಲವಾರು ರಾಜ್ಯಗಳಲ್ಲಿ ಅದನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿದೆ.

ಜನವರಿಯಲ್ಲಿ, ಉತ್ತರಾಖಂಡ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿದೆ. ಈ ಮೂಲಕ ಸ್ವಾತಂತ್ರ್ಯದ ನಂತರ ಈ ಕಾನೂನು ಜಾರಿ ಮಾಡಿದ ಮಾಡಿದ ಮೊದಲ ರಾಜ್ಯ ಎಂದೆನೆಸಿಕೊಂಡಿದೆ. 1867ರಲ್ಲಿ ಪೋರ್ಚುಗೀಸರು ಗೋವಾದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಿದರು. ಅದು ಈಗಲೂ ಜಾರಿಯಲ್ಲಿದೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವಾಗ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿತ್ತು. ಮುಸ್ಲಿಂ ಪುರುಷರಿಗೆ ಬಹುಪತ್ನಿತ್ವ, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನವನ್ನು ಪ್ರಾರಂಭಿಸಲು ಮತ್ತು ಜೀವನಾಂಶವನ್ನು ನಿರಾಕರಿಸಲು ಅವಕಾಶ ನೀಡುವ ಮೂಲಕ ಮುಸ್ಲಿಂ ವೈಯಕ್ತಿಕ ಕಾನೂನು ಮಹಿಳೆಯರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ವಾದಿಸಿತ್ತು.

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯನ್ನು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಪಡೆಯಲಾಗಿದೆ. ಇದು ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಬಹುದು ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...