Homeಮುಖಪುಟಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

- Advertisement -
- Advertisement -

ಬಹುಪತ್ನಿತ್ವ ನಿಷೇಧಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ (ನ.9) ಹೇಳಿದ್ದಾರೆ. ಮಸೂದೆಯಲ್ಲಿ ಗರಿಷ್ಠ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವುದನ್ನು ಪ್ರಸ್ತಾಪಿಸಲಾಗಿದೆ ಎಂದು ವರದಿಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಶರ್ಮಾ, ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆಯನ್ನು ನವೆಂಬರ್ 25ರಂದು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಕರಡು ಶಾಸನವು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ವಿನಾಯಿತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಸಂವಿಧಾನದ ಆರನೇ ಪರಿಚ್ಛೇದದಡಿಯಲ್ಲಿ ಬರುವ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿ, ಕರ್ಬಿ ಆಂಗ್ಲಾಂಗ್ ಸ್ವಾಯತ್ತ ಮಂಡಳಿ ಮತ್ತು ದಿಮಾ ಹಸಾವೊ ಸ್ವಾಯತ್ತ ಮಂಡಳಿಯ ಪ್ರದೇಶಗಳಿಗೆ ಹೊಸ ಕಾನೂನು ಸದ್ಯಕ್ಕೆ ಅನ್ವಯಿಸುವುದಿಲ್ಲ ಎಂದು ಶರ್ಮಾ ಹೇಳಿದ್ದಾರೆ.

ಅಸ್ಸಾಂನ ಮೂವತ್ತೈದು ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳು ಮೇಲೆ ಉಲ್ಲೇಖಿಸಿರುವ ಮೂರು ಮಂಡಳಿಗಳ ಭಾಗವಾಗಿವೆ. ಸಂವಿಧಾನದ ಆರನೇ ಪರಿಚ್ಛೇದ ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿ ನಾಗರಿಕರಿಗೆ ಭೂಮಿಯ ರಕ್ಷಣೆ ಮತ್ತು ನಾಮಮಾತ್ರದ ಸ್ವಾಯತ್ತತೆಯನ್ನು ಖಾತರಿಪಡಿಸುತ್ತದೆ.

ಹೊಸ ಕಾನೂನು ರಾಜ್ಯದ ಎಲ್ಲರಿಗೂ (ಸರ್ವ ವರ್ಗದವರಿಗೂ) ಅನ್ವಯಿಸುತ್ತದೆ. 2005ಕ್ಕಿಂತ ಮೊದಲು ಆರನೇ ಪರಿಚ್ಛೇದದಡಿ ಬರುವ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಮುಸ್ಲಿಮರಿಗೆ ವಿನಾಯಿತಿದೆ ಸಿಎಂ ಹೇಳಿದ್ದಾರೆ.

ಬಹುಪತ್ನಿತ್ವದ ಬಲಿಪಶುಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರವು ನಿಧಿಯನ್ನು ಕೂಡ ರಚಿಸಲಿದೆ. ಯಾವುದೇ ಮಹಿಳೆ ತನ್ನ ಜೀವನದಲ್ಲಿ ಕಷ್ಟಗಳನ್ನು ಎದುರಿಸದಂತೆ ಅಗತ್ಯವಿರುವ ಸಂದರ್ಭಗಳಲ್ಲಿ ಸರ್ಕಾರ ಆರ್ಥಿಕ ಸಹಾಯವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಹುಪತ್ನಿತ್ವ ನಿಷೇಧ ಕಾನೂನು ಜಾರಿಗೆ ತರುವುದಾಗಿ ಸಿಎಂ ಶರ್ಮಾ ಬಹಳ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದರು. ಇದು ರಾಜ್ಯ ಎಲ್ಲಾ ವರ್ಗದವರಿಗೂ ಅನ್ವಯಿಸುತ್ತದೆ ಎಂದರೂ, ಮುಸ್ಲಿಮರನ್ನು ಗುರಿಯಾಗಿಸಿ ಕಾನೂನು ರೂಪಿಸಲಾಗುತ್ತಿದೆ ಎಂಬುವುದರಲ್ಲಿ ಅನುಮಾನವಿಲ್ಲ. ಏಕೆಂದರೆ, ಬಹುಪತ್ನಿತ್ವ ನಿಷೇಧದ ಉದ್ದೇಶವು ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರ ಸಬಲೀಕರಣವಾಗಿದೆ ಎಂದು ಶರ್ಮಾ ಈಗಾಗಲೇ ಹೇಳಿದ್ದಾರೆ.

ಕೆಲ ಸಮುದಾಯ ಮುಖಂಡರು, ಹೋರಾಟಗಾರರು, ಚಿಂತಕರು ಮತ್ತು ಮಹಿಳೆಯರು ಸರ್ಕಾರದ ಹೊಸ ಕಾನೂನನ್ನು ಸ್ವಾಗತಿಸಿದರೂ, ಒಂದು ಸಮುದಾಯವನ್ನು ಅಪರಾಧೀಕರಿಸುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಬಹುಪತ್ನಿತ್ವಕ್ಕೆ ಅವಕಾಶವಿದೆ. 1950ರ ದಶಕದಲ್ಲಿ ಹಿಂದೂ ಸಂಹಿತೆ ಮಸೂದೆಯ ಮೂಲಕ ಹಿಂದೂಗಳಲ್ಲಿ ಬಹುಪತ್ನಿತ್ವವನ್ನು ನಿಷೇಧಿಸಲಾಯಿತು. ಈ ಹಿಂದೂ ಸಂಹಿತೆ ಮಸೂದೆ ಹಿಂದೂ ಧರ್ಮದ ಉತ್ತರಾಧಿಕಾರ, ದತ್ತು, ಮದುವೆ ಮತ್ತು ವಿಚ್ಛೇದನದಂತಹ ವಿಷಯಗಳನ್ನು ನಿಯಂತ್ರಿಸುತ್ತದೆ.

ಬಹುಪತ್ನಿತ್ವವನ್ನು ಅಪರಾಧೀಕರಿಸುವ ಒತ್ತಾಯವನ್ನು ಹಿಂದುತ್ವ ಸಂಘಟನೆಗಳು ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಲು ಸಮರ್ಥನೆಯಾಗಿ ಬಳಸುತ್ತಿವೆ.

ಏಕರೂಪ ನಾಗರಿಕ ಸಂಹಿತೆಯು ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದಂತೆ ಎಲ್ಲಾ ನಾಗರಿಕರಿಗೆ ಒಂದೇ ಕಾನೂನನ್ನು ಅನ್ವಯಿಸಲಿದೆ. ಪ್ರಸ್ತುತ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ತಮ್ಮ ವೈಯಕ್ತಿಕ ವಿಷಯಗಳಿಗೆ ನಿರ್ದಿಷ್ಟ ಕಾನೂನುಗಳನ್ನು ಆಧರಿಸಿವೆ. ಈ ಕಾನೂನುಗಳು ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಆಧರಿಸಿವೆ.

ಏಕರೂಪ ನಾಗರಿಕ ಸಂಹಿತೆ ಪರಿಚಯಿಸುವುದು ಬಿಜೆಪಿಯ ಕಾರ್ಯಸೂಚಿಯಲ್ಲಿ ಬಹಳ ಹಿಂದಿನಿಂದಲೂ ಇದ್ದು, ಹಿಂದುತ್ವ ಪಕ್ಷ ಆಳುವ ಹಲವಾರು ರಾಜ್ಯಗಳಲ್ಲಿ ಅದನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿದೆ.

ಜನವರಿಯಲ್ಲಿ, ಉತ್ತರಾಖಂಡ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿದೆ. ಈ ಮೂಲಕ ಸ್ವಾತಂತ್ರ್ಯದ ನಂತರ ಈ ಕಾನೂನು ಜಾರಿ ಮಾಡಿದ ಮಾಡಿದ ಮೊದಲ ರಾಜ್ಯ ಎಂದೆನೆಸಿಕೊಂಡಿದೆ. 1867ರಲ್ಲಿ ಪೋರ್ಚುಗೀಸರು ಗೋವಾದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಿದರು. ಅದು ಈಗಲೂ ಜಾರಿಯಲ್ಲಿದೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವಾಗ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿತ್ತು. ಮುಸ್ಲಿಂ ಪುರುಷರಿಗೆ ಬಹುಪತ್ನಿತ್ವ, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನವನ್ನು ಪ್ರಾರಂಭಿಸಲು ಮತ್ತು ಜೀವನಾಂಶವನ್ನು ನಿರಾಕರಿಸಲು ಅವಕಾಶ ನೀಡುವ ಮೂಲಕ ಮುಸ್ಲಿಂ ವೈಯಕ್ತಿಕ ಕಾನೂನು ಮಹಿಳೆಯರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ವಾದಿಸಿತ್ತು.

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯನ್ನು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಪಡೆಯಲಾಗಿದೆ. ಇದು ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಬಹುದು ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...