Homeಮುಖಪುಟಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

- Advertisement -
- Advertisement -

ಬಹುಪತ್ನಿತ್ವ ನಿಷೇಧಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ (ನ.9) ಹೇಳಿದ್ದಾರೆ. ಮಸೂದೆಯಲ್ಲಿ ಗರಿಷ್ಠ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವುದನ್ನು ಪ್ರಸ್ತಾಪಿಸಲಾಗಿದೆ ಎಂದು ವರದಿಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಶರ್ಮಾ, ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆಯನ್ನು ನವೆಂಬರ್ 25ರಂದು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಕರಡು ಶಾಸನವು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ವಿನಾಯಿತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಸಂವಿಧಾನದ ಆರನೇ ಪರಿಚ್ಛೇದದಡಿಯಲ್ಲಿ ಬರುವ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿ, ಕರ್ಬಿ ಆಂಗ್ಲಾಂಗ್ ಸ್ವಾಯತ್ತ ಮಂಡಳಿ ಮತ್ತು ದಿಮಾ ಹಸಾವೊ ಸ್ವಾಯತ್ತ ಮಂಡಳಿಯ ಪ್ರದೇಶಗಳಿಗೆ ಹೊಸ ಕಾನೂನು ಸದ್ಯಕ್ಕೆ ಅನ್ವಯಿಸುವುದಿಲ್ಲ ಎಂದು ಶರ್ಮಾ ಹೇಳಿದ್ದಾರೆ.

ಅಸ್ಸಾಂನ ಮೂವತ್ತೈದು ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳು ಮೇಲೆ ಉಲ್ಲೇಖಿಸಿರುವ ಮೂರು ಮಂಡಳಿಗಳ ಭಾಗವಾಗಿವೆ. ಸಂವಿಧಾನದ ಆರನೇ ಪರಿಚ್ಛೇದ ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿ ನಾಗರಿಕರಿಗೆ ಭೂಮಿಯ ರಕ್ಷಣೆ ಮತ್ತು ನಾಮಮಾತ್ರದ ಸ್ವಾಯತ್ತತೆಯನ್ನು ಖಾತರಿಪಡಿಸುತ್ತದೆ.

ಹೊಸ ಕಾನೂನು ರಾಜ್ಯದ ಎಲ್ಲರಿಗೂ (ಸರ್ವ ವರ್ಗದವರಿಗೂ) ಅನ್ವಯಿಸುತ್ತದೆ. 2005ಕ್ಕಿಂತ ಮೊದಲು ಆರನೇ ಪರಿಚ್ಛೇದದಡಿ ಬರುವ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಮುಸ್ಲಿಮರಿಗೆ ವಿನಾಯಿತಿದೆ ಸಿಎಂ ಹೇಳಿದ್ದಾರೆ.

ಬಹುಪತ್ನಿತ್ವದ ಬಲಿಪಶುಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರವು ನಿಧಿಯನ್ನು ಕೂಡ ರಚಿಸಲಿದೆ. ಯಾವುದೇ ಮಹಿಳೆ ತನ್ನ ಜೀವನದಲ್ಲಿ ಕಷ್ಟಗಳನ್ನು ಎದುರಿಸದಂತೆ ಅಗತ್ಯವಿರುವ ಸಂದರ್ಭಗಳಲ್ಲಿ ಸರ್ಕಾರ ಆರ್ಥಿಕ ಸಹಾಯವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಹುಪತ್ನಿತ್ವ ನಿಷೇಧ ಕಾನೂನು ಜಾರಿಗೆ ತರುವುದಾಗಿ ಸಿಎಂ ಶರ್ಮಾ ಬಹಳ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದರು. ಇದು ರಾಜ್ಯ ಎಲ್ಲಾ ವರ್ಗದವರಿಗೂ ಅನ್ವಯಿಸುತ್ತದೆ ಎಂದರೂ, ಮುಸ್ಲಿಮರನ್ನು ಗುರಿಯಾಗಿಸಿ ಕಾನೂನು ರೂಪಿಸಲಾಗುತ್ತಿದೆ ಎಂಬುವುದರಲ್ಲಿ ಅನುಮಾನವಿಲ್ಲ. ಏಕೆಂದರೆ, ಬಹುಪತ್ನಿತ್ವ ನಿಷೇಧದ ಉದ್ದೇಶವು ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರ ಸಬಲೀಕರಣವಾಗಿದೆ ಎಂದು ಶರ್ಮಾ ಈಗಾಗಲೇ ಹೇಳಿದ್ದಾರೆ.

ಕೆಲ ಸಮುದಾಯ ಮುಖಂಡರು, ಹೋರಾಟಗಾರರು, ಚಿಂತಕರು ಮತ್ತು ಮಹಿಳೆಯರು ಸರ್ಕಾರದ ಹೊಸ ಕಾನೂನನ್ನು ಸ್ವಾಗತಿಸಿದರೂ, ಒಂದು ಸಮುದಾಯವನ್ನು ಅಪರಾಧೀಕರಿಸುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಬಹುಪತ್ನಿತ್ವಕ್ಕೆ ಅವಕಾಶವಿದೆ. 1950ರ ದಶಕದಲ್ಲಿ ಹಿಂದೂ ಸಂಹಿತೆ ಮಸೂದೆಯ ಮೂಲಕ ಹಿಂದೂಗಳಲ್ಲಿ ಬಹುಪತ್ನಿತ್ವವನ್ನು ನಿಷೇಧಿಸಲಾಯಿತು. ಈ ಹಿಂದೂ ಸಂಹಿತೆ ಮಸೂದೆ ಹಿಂದೂ ಧರ್ಮದ ಉತ್ತರಾಧಿಕಾರ, ದತ್ತು, ಮದುವೆ ಮತ್ತು ವಿಚ್ಛೇದನದಂತಹ ವಿಷಯಗಳನ್ನು ನಿಯಂತ್ರಿಸುತ್ತದೆ.

ಬಹುಪತ್ನಿತ್ವವನ್ನು ಅಪರಾಧೀಕರಿಸುವ ಒತ್ತಾಯವನ್ನು ಹಿಂದುತ್ವ ಸಂಘಟನೆಗಳು ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಲು ಸಮರ್ಥನೆಯಾಗಿ ಬಳಸುತ್ತಿವೆ.

ಏಕರೂಪ ನಾಗರಿಕ ಸಂಹಿತೆಯು ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದಂತೆ ಎಲ್ಲಾ ನಾಗರಿಕರಿಗೆ ಒಂದೇ ಕಾನೂನನ್ನು ಅನ್ವಯಿಸಲಿದೆ. ಪ್ರಸ್ತುತ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ತಮ್ಮ ವೈಯಕ್ತಿಕ ವಿಷಯಗಳಿಗೆ ನಿರ್ದಿಷ್ಟ ಕಾನೂನುಗಳನ್ನು ಆಧರಿಸಿವೆ. ಈ ಕಾನೂನುಗಳು ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಆಧರಿಸಿವೆ.

ಏಕರೂಪ ನಾಗರಿಕ ಸಂಹಿತೆ ಪರಿಚಯಿಸುವುದು ಬಿಜೆಪಿಯ ಕಾರ್ಯಸೂಚಿಯಲ್ಲಿ ಬಹಳ ಹಿಂದಿನಿಂದಲೂ ಇದ್ದು, ಹಿಂದುತ್ವ ಪಕ್ಷ ಆಳುವ ಹಲವಾರು ರಾಜ್ಯಗಳಲ್ಲಿ ಅದನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿದೆ.

ಜನವರಿಯಲ್ಲಿ, ಉತ್ತರಾಖಂಡ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿದೆ. ಈ ಮೂಲಕ ಸ್ವಾತಂತ್ರ್ಯದ ನಂತರ ಈ ಕಾನೂನು ಜಾರಿ ಮಾಡಿದ ಮಾಡಿದ ಮೊದಲ ರಾಜ್ಯ ಎಂದೆನೆಸಿಕೊಂಡಿದೆ. 1867ರಲ್ಲಿ ಪೋರ್ಚುಗೀಸರು ಗೋವಾದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸಿದರು. ಅದು ಈಗಲೂ ಜಾರಿಯಲ್ಲಿದೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವಾಗ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿತ್ತು. ಮುಸ್ಲಿಂ ಪುರುಷರಿಗೆ ಬಹುಪತ್ನಿತ್ವ, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನವನ್ನು ಪ್ರಾರಂಭಿಸಲು ಮತ್ತು ಜೀವನಾಂಶವನ್ನು ನಿರಾಕರಿಸಲು ಅವಕಾಶ ನೀಡುವ ಮೂಲಕ ಮುಸ್ಲಿಂ ವೈಯಕ್ತಿಕ ಕಾನೂನು ಮಹಿಳೆಯರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ವಾದಿಸಿತ್ತು.

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯನ್ನು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಪಡೆಯಲಾಗಿದೆ. ಇದು ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಬಹುದು ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...