Homeಮುಖಪುಟಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

- Advertisement -
- Advertisement -

ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳು ದೇಶಾದ್ಯಂತ ಮುಂದುವರೆತ್ತಿದ್ದರೂ ಸಹ ಬಿಜೆಪಿ “ಜನರ ಧ್ವನಿಯನ್ನು” ಕೇಳುತ್ತಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ. ಸಿಎಎ ವಿರುದ್ಧದ ಪ್ರತಿಭಟನೆಗಳು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾಕಾರರು ಕಾನೂನನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಸರ್ಕಾರ ಜನರ ಮಾತು ಕೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷದ 135ನೇ ಸ್ಥಾಪನಾ ದಿನದ ಅಂಗವಾಗಿ ನಡೆದ ಸೇವ್ ಕಾನ್ಸ್ಟಿಟ್ಯೂಷನ್-ಸೇವ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ “ಬಿಜೆಪಿ ಎಲ್ಲಿಗೆ ಹೋದರೂ ಅದು ದ್ವೇಷವನ್ನು ಹರಡುತ್ತದೆ. ಅಸ್ಸಾಂನಲ್ಲಿ ಯುವಕರು ಪ್ರತಿಭಟಿಸುತ್ತಿದ್ದಾರೆ, ಇತರ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾನಿರತನ್ನು ಏಕೆ ಗುಂಡಿಕ್ಕಿ ಕೊಲ್ಲಬೇಕು? ಜನರ ಧ್ವನಿಯನ್ನು ಕೇಳಲು ಬಿಜೆಪಿ ಬಯಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈಶಾನ್ಯ ಭಾರತದ ಸಂಸ್ಕೃತಿ ಮತ್ತು ಇತಿಹಾಸವನ್ನು ನಿಗ್ರಹಿಸಬಹುದೆಂದು ಬಿಜೆಪಿ ಭಾವಿಸಿದೆ. ಆದರೆ ಅದು ನಿಮ್ಮ ನಾಡಿಮಿಡಿತವನ್ನು ಅರ್ಥಮಾಡಿಕೊಳ್ಳಲಿಲ್ಲ. “ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು ನಾವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಬಿಡುವುದಿಲ್ಲ. ಅಸ್ಸಾಂ ಅನ್ನು ನಾಗ್ಪುರದಿಂದ ಆಳಲು ಸಾಧ್ಯವಿಲ್ಲ. ಅಸ್ಸಾಂ ಅನ್ನು ಅದರ ಜನರು ಮಾತ್ರ ಮುನ್ನಡೆಸುತ್ತಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಸ್ಸಾಂ ಒಪ್ಪಂದದ ಮೂಲ ಉದ್ದೇಶ ಶಾಂತಿ ಸ್ಥಾಪಿಸುವುದು. ಅಂತಹ ಒಪ್ಪಂದವನ್ನು ಛಿದ್ರಗೊಳಿಸಲು ಬಿಡುವುದಿಲ್ಲ. ದ್ವೇಷ ಮತ್ತು ಹಿಂಸೆಯಿಂದ ಅಸ್ಸಾಂ ಎಂದಿಗೂ ಪ್ರಗತಿ ಸಾಧಿಸುವುದಿಲ್ಲ. ಹೀಗಾಗಿ ಪ್ರತಿಯೊಬ್ಬರೂ ಅಸ್ಸಾಂ ಸಂಸ್ಕೃತಿ, ಭಾಷೆ, ಅಸ್ಮಿತೆ ಮತ್ತು ಇತಿಹಾಸದ ಮೇಲೆ ದಾಳಿ ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಹೇಳುತ್ತಿದ್ದಾರೆ. ಅದನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ರಾಹುಲ್‌ ಸಲಹೆ ನೀಡಿದರು.
ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಜನ ಶಾಂತಿಯಿಂದ ಹೇಳಿದರೆ ಕೇಳುತ್ತಾರೆ. ಹಾಗಾಗಿ ಹಿಂಸೆ ಬೇಕಿಲ್ಲ. ಗುಂಡಿನ ದಾಳಿಯೂ ಅಗತ್ಯವಿಲ್ಲ. ಸಾರ್ವಜನಿಕರಿಗೆ ಪ್ರೀತಿ ಬೇಕು. ಪ್ರೀತಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
ಡಿಸೆಂಬರ್ 12ರಂದು ಎನ್ಆರ್ ಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದ 17 ವರ್ಷದ ಬಾಲಕ ಶಾಮ್ ಸ್ಟ್ಯಾಪರ್ ನಿವಾಸಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ದೇಶದ ಆರ್ಥಿಕತೆಯ ಬಗ್ಗೆ ಗಮನ ಸೆಳೆದರು. ನೋಟು ಅಮಾನ್ಯೀಕರಣ, ಜಿಎಸ್ ಟಿ ಜಾರಿ ಮೂಲಕ ಭಾರತದ ಆರ್ಥವ್ಯವಸ್ಥೆಯನ್ನು ಪ್ರಧಾನಿ ಮೋದಿ ನಾಶಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆರ್ಥಿಕತೆ ಭಾರತದ ಶಕ್ತಿ ಎಂದು ಇಡೀ ವಿಶ್ವವೇ ಸಾರಿಹೇಳುತ್ತಿದೆ. ನೋಟು ಅಮಾನ್ಯೀಕರಣ, ಅನುಷ್ಠಾನದ ಮೂಲಕ ಭಾರತಮಾತೆಯ ಶಕ್ತಿಯನ್ನೇ ಹಾಳುಗೆಡವಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೆಲಸ ಭಾರತದ ಜನರನ್ನು ವಿಭಜಿಸುವುದು ಮತ್ತು ದ್ವೇಷವನ್ನು ಹರಡುವುದೇ ಆಗಿದೆ ಎಂದು ಪ್ರಧಾನಿ ವಿರುದ್ಧ ಟೀಕಿಸಿದರು.
ಹೊಸ ಪೌರತ್ವ ಕಾಯ್ದೆಯಿಂದ ಜನರು ಸಂಕಟ ಎದುರಿಸಬೇಕಾಗುತ್ತದೆ. ಎನ್ ಪಿಆರ್. ಎನ್.ಆರ್.ಸಿ ನೋಟು ಅಮಾನ್ಯೀಕರಣದ ಎರಡನೇ ಭಾಗವಾಗಿದೆ. ಬಡವರು ಬಾರತದವರಾಗಿರಬಹುದು ಅಥವಾ ಇಲ್ಲದೇ ಇರಬಹುದು. ಅವರೆಲ್ಲರೂ ದಾಖಲೆಗಳನ್ನು ತೋರಿಸಲೇಬೇಕು. ಆದರೆ ಪ್ರಧಾನಿ ನರೇಂದ್ರ ಮೋದಿಯವರ 15 ಮಂದಿ ಸ್ನೇಹಿತರು ಯಾವುದೇ ದಾಖಲೆಗಳನ್ನು ತೋರಿಸಬೇಕಾಗಿಲ್ಲ. ಯಾಕೆಂದರೆ ಹಣವೆಲ್ಲ 15 ಜನರ ಜೇಬು ಸೇರುತ್ತಿದೆ ಎಂದು ಲೇವಡಿ ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...