Homeಮುಖಪುಟಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

- Advertisement -
- Advertisement -

ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳು ದೇಶಾದ್ಯಂತ ಮುಂದುವರೆತ್ತಿದ್ದರೂ ಸಹ ಬಿಜೆಪಿ “ಜನರ ಧ್ವನಿಯನ್ನು” ಕೇಳುತ್ತಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ. ಸಿಎಎ ವಿರುದ್ಧದ ಪ್ರತಿಭಟನೆಗಳು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾಕಾರರು ಕಾನೂನನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಸರ್ಕಾರ ಜನರ ಮಾತು ಕೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷದ 135ನೇ ಸ್ಥಾಪನಾ ದಿನದ ಅಂಗವಾಗಿ ನಡೆದ ಸೇವ್ ಕಾನ್ಸ್ಟಿಟ್ಯೂಷನ್-ಸೇವ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ “ಬಿಜೆಪಿ ಎಲ್ಲಿಗೆ ಹೋದರೂ ಅದು ದ್ವೇಷವನ್ನು ಹರಡುತ್ತದೆ. ಅಸ್ಸಾಂನಲ್ಲಿ ಯುವಕರು ಪ್ರತಿಭಟಿಸುತ್ತಿದ್ದಾರೆ, ಇತರ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾನಿರತನ್ನು ಏಕೆ ಗುಂಡಿಕ್ಕಿ ಕೊಲ್ಲಬೇಕು? ಜನರ ಧ್ವನಿಯನ್ನು ಕೇಳಲು ಬಿಜೆಪಿ ಬಯಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈಶಾನ್ಯ ಭಾರತದ ಸಂಸ್ಕೃತಿ ಮತ್ತು ಇತಿಹಾಸವನ್ನು ನಿಗ್ರಹಿಸಬಹುದೆಂದು ಬಿಜೆಪಿ ಭಾವಿಸಿದೆ. ಆದರೆ ಅದು ನಿಮ್ಮ ನಾಡಿಮಿಡಿತವನ್ನು ಅರ್ಥಮಾಡಿಕೊಳ್ಳಲಿಲ್ಲ. “ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು ನಾವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಬಿಡುವುದಿಲ್ಲ. ಅಸ್ಸಾಂ ಅನ್ನು ನಾಗ್ಪುರದಿಂದ ಆಳಲು ಸಾಧ್ಯವಿಲ್ಲ. ಅಸ್ಸಾಂ ಅನ್ನು ಅದರ ಜನರು ಮಾತ್ರ ಮುನ್ನಡೆಸುತ್ತಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಸ್ಸಾಂ ಒಪ್ಪಂದದ ಮೂಲ ಉದ್ದೇಶ ಶಾಂತಿ ಸ್ಥಾಪಿಸುವುದು. ಅಂತಹ ಒಪ್ಪಂದವನ್ನು ಛಿದ್ರಗೊಳಿಸಲು ಬಿಡುವುದಿಲ್ಲ. ದ್ವೇಷ ಮತ್ತು ಹಿಂಸೆಯಿಂದ ಅಸ್ಸಾಂ ಎಂದಿಗೂ ಪ್ರಗತಿ ಸಾಧಿಸುವುದಿಲ್ಲ. ಹೀಗಾಗಿ ಪ್ರತಿಯೊಬ್ಬರೂ ಅಸ್ಸಾಂ ಸಂಸ್ಕೃತಿ, ಭಾಷೆ, ಅಸ್ಮಿತೆ ಮತ್ತು ಇತಿಹಾಸದ ಮೇಲೆ ದಾಳಿ ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಹೇಳುತ್ತಿದ್ದಾರೆ. ಅದನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ರಾಹುಲ್‌ ಸಲಹೆ ನೀಡಿದರು.
ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಜನ ಶಾಂತಿಯಿಂದ ಹೇಳಿದರೆ ಕೇಳುತ್ತಾರೆ. ಹಾಗಾಗಿ ಹಿಂಸೆ ಬೇಕಿಲ್ಲ. ಗುಂಡಿನ ದಾಳಿಯೂ ಅಗತ್ಯವಿಲ್ಲ. ಸಾರ್ವಜನಿಕರಿಗೆ ಪ್ರೀತಿ ಬೇಕು. ಪ್ರೀತಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
ಡಿಸೆಂಬರ್ 12ರಂದು ಎನ್ಆರ್ ಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದ 17 ವರ್ಷದ ಬಾಲಕ ಶಾಮ್ ಸ್ಟ್ಯಾಪರ್ ನಿವಾಸಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ದೇಶದ ಆರ್ಥಿಕತೆಯ ಬಗ್ಗೆ ಗಮನ ಸೆಳೆದರು. ನೋಟು ಅಮಾನ್ಯೀಕರಣ, ಜಿಎಸ್ ಟಿ ಜಾರಿ ಮೂಲಕ ಭಾರತದ ಆರ್ಥವ್ಯವಸ್ಥೆಯನ್ನು ಪ್ರಧಾನಿ ಮೋದಿ ನಾಶಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆರ್ಥಿಕತೆ ಭಾರತದ ಶಕ್ತಿ ಎಂದು ಇಡೀ ವಿಶ್ವವೇ ಸಾರಿಹೇಳುತ್ತಿದೆ. ನೋಟು ಅಮಾನ್ಯೀಕರಣ, ಅನುಷ್ಠಾನದ ಮೂಲಕ ಭಾರತಮಾತೆಯ ಶಕ್ತಿಯನ್ನೇ ಹಾಳುಗೆಡವಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೆಲಸ ಭಾರತದ ಜನರನ್ನು ವಿಭಜಿಸುವುದು ಮತ್ತು ದ್ವೇಷವನ್ನು ಹರಡುವುದೇ ಆಗಿದೆ ಎಂದು ಪ್ರಧಾನಿ ವಿರುದ್ಧ ಟೀಕಿಸಿದರು.
ಹೊಸ ಪೌರತ್ವ ಕಾಯ್ದೆಯಿಂದ ಜನರು ಸಂಕಟ ಎದುರಿಸಬೇಕಾಗುತ್ತದೆ. ಎನ್ ಪಿಆರ್. ಎನ್.ಆರ್.ಸಿ ನೋಟು ಅಮಾನ್ಯೀಕರಣದ ಎರಡನೇ ಭಾಗವಾಗಿದೆ. ಬಡವರು ಬಾರತದವರಾಗಿರಬಹುದು ಅಥವಾ ಇಲ್ಲದೇ ಇರಬಹುದು. ಅವರೆಲ್ಲರೂ ದಾಖಲೆಗಳನ್ನು ತೋರಿಸಲೇಬೇಕು. ಆದರೆ ಪ್ರಧಾನಿ ನರೇಂದ್ರ ಮೋದಿಯವರ 15 ಮಂದಿ ಸ್ನೇಹಿತರು ಯಾವುದೇ ದಾಖಲೆಗಳನ್ನು ತೋರಿಸಬೇಕಾಗಿಲ್ಲ. ಯಾಕೆಂದರೆ ಹಣವೆಲ್ಲ 15 ಜನರ ಜೇಬು ಸೇರುತ್ತಿದೆ ಎಂದು ಲೇವಡಿ ಮಾಡಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾನು ಆರ್‌ಎಸ್‌ಎಸ್ ಸದಸ್ಯ, ಕರೆದರೆ ಸಂಸ್ಥೆಗೆ ಹಿಂತಿರುಗಲು ಸಿದ್ಧ..’; ಬೀಳ್ಕೊಡುಗೆ ಸಮಾರಂಭದಲ್ಲಿ ಘೋಷಿಸಿದ ಹೈಕೋರ್ಟ್‌...

0
ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರು, 'ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ' ಎಂದು ಹೇಳಿದ್ದಾರೆ. ನ್ಯಾಯಾಧೀಶರು ಮತ್ತು ಬಾರ್‌ ಕೌನ್ಸಿಲ್‌ ಸದಸ್ಯರ ಸಮ್ಮುಖದಲ್ಲಿ...