Homeಮುಖಪುಟಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

- Advertisement -
- Advertisement -

ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳು ದೇಶಾದ್ಯಂತ ಮುಂದುವರೆತ್ತಿದ್ದರೂ ಸಹ ಬಿಜೆಪಿ “ಜನರ ಧ್ವನಿಯನ್ನು” ಕೇಳುತ್ತಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ. ಸಿಎಎ ವಿರುದ್ಧದ ಪ್ರತಿಭಟನೆಗಳು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾಕಾರರು ಕಾನೂನನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಸರ್ಕಾರ ಜನರ ಮಾತು ಕೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷದ 135ನೇ ಸ್ಥಾಪನಾ ದಿನದ ಅಂಗವಾಗಿ ನಡೆದ ಸೇವ್ ಕಾನ್ಸ್ಟಿಟ್ಯೂಷನ್-ಸೇವ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ “ಬಿಜೆಪಿ ಎಲ್ಲಿಗೆ ಹೋದರೂ ಅದು ದ್ವೇಷವನ್ನು ಹರಡುತ್ತದೆ. ಅಸ್ಸಾಂನಲ್ಲಿ ಯುವಕರು ಪ್ರತಿಭಟಿಸುತ್ತಿದ್ದಾರೆ, ಇತರ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾನಿರತನ್ನು ಏಕೆ ಗುಂಡಿಕ್ಕಿ ಕೊಲ್ಲಬೇಕು? ಜನರ ಧ್ವನಿಯನ್ನು ಕೇಳಲು ಬಿಜೆಪಿ ಬಯಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈಶಾನ್ಯ ಭಾರತದ ಸಂಸ್ಕೃತಿ ಮತ್ತು ಇತಿಹಾಸವನ್ನು ನಿಗ್ರಹಿಸಬಹುದೆಂದು ಬಿಜೆಪಿ ಭಾವಿಸಿದೆ. ಆದರೆ ಅದು ನಿಮ್ಮ ನಾಡಿಮಿಡಿತವನ್ನು ಅರ್ಥಮಾಡಿಕೊಳ್ಳಲಿಲ್ಲ. “ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು ನಾವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಬಿಡುವುದಿಲ್ಲ. ಅಸ್ಸಾಂ ಅನ್ನು ನಾಗ್ಪುರದಿಂದ ಆಳಲು ಸಾಧ್ಯವಿಲ್ಲ. ಅಸ್ಸಾಂ ಅನ್ನು ಅದರ ಜನರು ಮಾತ್ರ ಮುನ್ನಡೆಸುತ್ತಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಸ್ಸಾಂ ಒಪ್ಪಂದದ ಮೂಲ ಉದ್ದೇಶ ಶಾಂತಿ ಸ್ಥಾಪಿಸುವುದು. ಅಂತಹ ಒಪ್ಪಂದವನ್ನು ಛಿದ್ರಗೊಳಿಸಲು ಬಿಡುವುದಿಲ್ಲ. ದ್ವೇಷ ಮತ್ತು ಹಿಂಸೆಯಿಂದ ಅಸ್ಸಾಂ ಎಂದಿಗೂ ಪ್ರಗತಿ ಸಾಧಿಸುವುದಿಲ್ಲ. ಹೀಗಾಗಿ ಪ್ರತಿಯೊಬ್ಬರೂ ಅಸ್ಸಾಂ ಸಂಸ್ಕೃತಿ, ಭಾಷೆ, ಅಸ್ಮಿತೆ ಮತ್ತು ಇತಿಹಾಸದ ಮೇಲೆ ದಾಳಿ ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಹೇಳುತ್ತಿದ್ದಾರೆ. ಅದನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ರಾಹುಲ್‌ ಸಲಹೆ ನೀಡಿದರು.
ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಜನ ಶಾಂತಿಯಿಂದ ಹೇಳಿದರೆ ಕೇಳುತ್ತಾರೆ. ಹಾಗಾಗಿ ಹಿಂಸೆ ಬೇಕಿಲ್ಲ. ಗುಂಡಿನ ದಾಳಿಯೂ ಅಗತ್ಯವಿಲ್ಲ. ಸಾರ್ವಜನಿಕರಿಗೆ ಪ್ರೀತಿ ಬೇಕು. ಪ್ರೀತಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
ಡಿಸೆಂಬರ್ 12ರಂದು ಎನ್ಆರ್ ಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದ 17 ವರ್ಷದ ಬಾಲಕ ಶಾಮ್ ಸ್ಟ್ಯಾಪರ್ ನಿವಾಸಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ದೇಶದ ಆರ್ಥಿಕತೆಯ ಬಗ್ಗೆ ಗಮನ ಸೆಳೆದರು. ನೋಟು ಅಮಾನ್ಯೀಕರಣ, ಜಿಎಸ್ ಟಿ ಜಾರಿ ಮೂಲಕ ಭಾರತದ ಆರ್ಥವ್ಯವಸ್ಥೆಯನ್ನು ಪ್ರಧಾನಿ ಮೋದಿ ನಾಶಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆರ್ಥಿಕತೆ ಭಾರತದ ಶಕ್ತಿ ಎಂದು ಇಡೀ ವಿಶ್ವವೇ ಸಾರಿಹೇಳುತ್ತಿದೆ. ನೋಟು ಅಮಾನ್ಯೀಕರಣ, ಅನುಷ್ಠಾನದ ಮೂಲಕ ಭಾರತಮಾತೆಯ ಶಕ್ತಿಯನ್ನೇ ಹಾಳುಗೆಡವಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೆಲಸ ಭಾರತದ ಜನರನ್ನು ವಿಭಜಿಸುವುದು ಮತ್ತು ದ್ವೇಷವನ್ನು ಹರಡುವುದೇ ಆಗಿದೆ ಎಂದು ಪ್ರಧಾನಿ ವಿರುದ್ಧ ಟೀಕಿಸಿದರು.
ಹೊಸ ಪೌರತ್ವ ಕಾಯ್ದೆಯಿಂದ ಜನರು ಸಂಕಟ ಎದುರಿಸಬೇಕಾಗುತ್ತದೆ. ಎನ್ ಪಿಆರ್. ಎನ್.ಆರ್.ಸಿ ನೋಟು ಅಮಾನ್ಯೀಕರಣದ ಎರಡನೇ ಭಾಗವಾಗಿದೆ. ಬಡವರು ಬಾರತದವರಾಗಿರಬಹುದು ಅಥವಾ ಇಲ್ಲದೇ ಇರಬಹುದು. ಅವರೆಲ್ಲರೂ ದಾಖಲೆಗಳನ್ನು ತೋರಿಸಲೇಬೇಕು. ಆದರೆ ಪ್ರಧಾನಿ ನರೇಂದ್ರ ಮೋದಿಯವರ 15 ಮಂದಿ ಸ್ನೇಹಿತರು ಯಾವುದೇ ದಾಖಲೆಗಳನ್ನು ತೋರಿಸಬೇಕಾಗಿಲ್ಲ. ಯಾಕೆಂದರೆ ಹಣವೆಲ್ಲ 15 ಜನರ ಜೇಬು ಸೇರುತ್ತಿದೆ ಎಂದು ಲೇವಡಿ ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...