Homeಮುಖಪುಟಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

- Advertisement -
- Advertisement -

ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳು ದೇಶಾದ್ಯಂತ ಮುಂದುವರೆತ್ತಿದ್ದರೂ ಸಹ ಬಿಜೆಪಿ “ಜನರ ಧ್ವನಿಯನ್ನು” ಕೇಳುತ್ತಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ. ಸಿಎಎ ವಿರುದ್ಧದ ಪ್ರತಿಭಟನೆಗಳು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾಕಾರರು ಕಾನೂನನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಸರ್ಕಾರ ಜನರ ಮಾತು ಕೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷದ 135ನೇ ಸ್ಥಾಪನಾ ದಿನದ ಅಂಗವಾಗಿ ನಡೆದ ಸೇವ್ ಕಾನ್ಸ್ಟಿಟ್ಯೂಷನ್-ಸೇವ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ “ಬಿಜೆಪಿ ಎಲ್ಲಿಗೆ ಹೋದರೂ ಅದು ದ್ವೇಷವನ್ನು ಹರಡುತ್ತದೆ. ಅಸ್ಸಾಂನಲ್ಲಿ ಯುವಕರು ಪ್ರತಿಭಟಿಸುತ್ತಿದ್ದಾರೆ, ಇತರ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾನಿರತನ್ನು ಏಕೆ ಗುಂಡಿಕ್ಕಿ ಕೊಲ್ಲಬೇಕು? ಜನರ ಧ್ವನಿಯನ್ನು ಕೇಳಲು ಬಿಜೆಪಿ ಬಯಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈಶಾನ್ಯ ಭಾರತದ ಸಂಸ್ಕೃತಿ ಮತ್ತು ಇತಿಹಾಸವನ್ನು ನಿಗ್ರಹಿಸಬಹುದೆಂದು ಬಿಜೆಪಿ ಭಾವಿಸಿದೆ. ಆದರೆ ಅದು ನಿಮ್ಮ ನಾಡಿಮಿಡಿತವನ್ನು ಅರ್ಥಮಾಡಿಕೊಳ್ಳಲಿಲ್ಲ. “ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು ನಾವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಬಿಡುವುದಿಲ್ಲ. ಅಸ್ಸಾಂ ಅನ್ನು ನಾಗ್ಪುರದಿಂದ ಆಳಲು ಸಾಧ್ಯವಿಲ್ಲ. ಅಸ್ಸಾಂ ಅನ್ನು ಅದರ ಜನರು ಮಾತ್ರ ಮುನ್ನಡೆಸುತ್ತಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಸ್ಸಾಂ ಒಪ್ಪಂದದ ಮೂಲ ಉದ್ದೇಶ ಶಾಂತಿ ಸ್ಥಾಪಿಸುವುದು. ಅಂತಹ ಒಪ್ಪಂದವನ್ನು ಛಿದ್ರಗೊಳಿಸಲು ಬಿಡುವುದಿಲ್ಲ. ದ್ವೇಷ ಮತ್ತು ಹಿಂಸೆಯಿಂದ ಅಸ್ಸಾಂ ಎಂದಿಗೂ ಪ್ರಗತಿ ಸಾಧಿಸುವುದಿಲ್ಲ. ಹೀಗಾಗಿ ಪ್ರತಿಯೊಬ್ಬರೂ ಅಸ್ಸಾಂ ಸಂಸ್ಕೃತಿ, ಭಾಷೆ, ಅಸ್ಮಿತೆ ಮತ್ತು ಇತಿಹಾಸದ ಮೇಲೆ ದಾಳಿ ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಹೇಳುತ್ತಿದ್ದಾರೆ. ಅದನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ರಾಹುಲ್‌ ಸಲಹೆ ನೀಡಿದರು.
ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಜನ ಶಾಂತಿಯಿಂದ ಹೇಳಿದರೆ ಕೇಳುತ್ತಾರೆ. ಹಾಗಾಗಿ ಹಿಂಸೆ ಬೇಕಿಲ್ಲ. ಗುಂಡಿನ ದಾಳಿಯೂ ಅಗತ್ಯವಿಲ್ಲ. ಸಾರ್ವಜನಿಕರಿಗೆ ಪ್ರೀತಿ ಬೇಕು. ಪ್ರೀತಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
ಡಿಸೆಂಬರ್ 12ರಂದು ಎನ್ಆರ್ ಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದ 17 ವರ್ಷದ ಬಾಲಕ ಶಾಮ್ ಸ್ಟ್ಯಾಪರ್ ನಿವಾಸಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ದೇಶದ ಆರ್ಥಿಕತೆಯ ಬಗ್ಗೆ ಗಮನ ಸೆಳೆದರು. ನೋಟು ಅಮಾನ್ಯೀಕರಣ, ಜಿಎಸ್ ಟಿ ಜಾರಿ ಮೂಲಕ ಭಾರತದ ಆರ್ಥವ್ಯವಸ್ಥೆಯನ್ನು ಪ್ರಧಾನಿ ಮೋದಿ ನಾಶಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆರ್ಥಿಕತೆ ಭಾರತದ ಶಕ್ತಿ ಎಂದು ಇಡೀ ವಿಶ್ವವೇ ಸಾರಿಹೇಳುತ್ತಿದೆ. ನೋಟು ಅಮಾನ್ಯೀಕರಣ, ಅನುಷ್ಠಾನದ ಮೂಲಕ ಭಾರತಮಾತೆಯ ಶಕ್ತಿಯನ್ನೇ ಹಾಳುಗೆಡವಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೆಲಸ ಭಾರತದ ಜನರನ್ನು ವಿಭಜಿಸುವುದು ಮತ್ತು ದ್ವೇಷವನ್ನು ಹರಡುವುದೇ ಆಗಿದೆ ಎಂದು ಪ್ರಧಾನಿ ವಿರುದ್ಧ ಟೀಕಿಸಿದರು.
ಹೊಸ ಪೌರತ್ವ ಕಾಯ್ದೆಯಿಂದ ಜನರು ಸಂಕಟ ಎದುರಿಸಬೇಕಾಗುತ್ತದೆ. ಎನ್ ಪಿಆರ್. ಎನ್.ಆರ್.ಸಿ ನೋಟು ಅಮಾನ್ಯೀಕರಣದ ಎರಡನೇ ಭಾಗವಾಗಿದೆ. ಬಡವರು ಬಾರತದವರಾಗಿರಬಹುದು ಅಥವಾ ಇಲ್ಲದೇ ಇರಬಹುದು. ಅವರೆಲ್ಲರೂ ದಾಖಲೆಗಳನ್ನು ತೋರಿಸಲೇಬೇಕು. ಆದರೆ ಪ್ರಧಾನಿ ನರೇಂದ್ರ ಮೋದಿಯವರ 15 ಮಂದಿ ಸ್ನೇಹಿತರು ಯಾವುದೇ ದಾಖಲೆಗಳನ್ನು ತೋರಿಸಬೇಕಾಗಿಲ್ಲ. ಯಾಕೆಂದರೆ ಹಣವೆಲ್ಲ 15 ಜನರ ಜೇಬು ಸೇರುತ್ತಿದೆ ಎಂದು ಲೇವಡಿ ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...