Homeಮುಖಪುಟಅಸ್ಸಾಂ | ಅಳಿವಿನಂಚಿನಲ್ಲಿರುವ 'ಹೂಲಾಕ್ ಗಿಬ್ಬನ್' ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

- Advertisement -
- Advertisement -

ಅಸ್ಸಾಂನ ಜೋರ್ಹತ್ ಜಿಲ್ಲೆಯ ‘ಹೊಲ್ಲೊಂಗಪರ್ ಗಿಬ್ಬನ್ ವನ್ಯಜೀವಿ ಅಭಯಾರಣ್ಯ’ದ ಪರಿಸರ ಸೂಕ್ಷ್ಮ ವಲಯದಲ್ಲಿ ವೇದಾಂತ ಗ್ರೂಪ್‌ನ ಕೈರ್ನ್ ತೈಲ ಮತ್ತು ಅನಿಲ ಪರಿಶೋಧನಾ ಕೊರೆಯುವಿಕೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಅನುಮೋದನೆ ನೀಡಿದೆ ಎಂದು ಈಸ್ಟ್‌ಮೋಜೊ ಭಾನುವಾರ (ಜ.12) ವರದಿ ಮಾಡಿದೆ.

ಡಿಸೆಂಬರ್ 21ರಂದು ನಡೆದ ಮಂಡಳಿಯ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

“ರಾಷ್ಟ್ರೀಯ ಹಿತಾಸಕ್ತಿ”ಯ ಆಧಾರದ ಮೇಲೆ ಅಸ್ಸಾಂನ ಅರಣ್ಯ ಇಲಾಖೆಯು ಆಗಸ್ಟ್ 2023 ರಲ್ಲಿ ಯೋಜನೆಗೆ ನಿರಾಪೇಕ್ಷಣ ನೀಡಿತ್ತು ಎಂದು ಪಿಟಿಐ ವರದಿ ಮಾಡಿದೆ.

ಮಾನವ ವಾಸಸ್ಥಳದ ಪ್ರದೇಶಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳಂತಹ ಸಂರಕ್ಷಿತ ಪ್ರದೇಶಗಳ ನಡುವಿನ ಬಫರ್ ವಲಯಗಳು ಅಥವಾ “ಶಾಕ್ ಅಬ್ಸರ್‌ವರ್ಸ್‌’ಗಳನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪರಿಸರ-ಸೂಕ್ಷ್ಮ ವಲಯಗಳು ಎಂದು ಘೋಷಿಸಲಾಗಿದೆ.

ಹೊಲ್ಲೊಂಗಪರ್ ಅಭಯಾರಣ್ಯವು 21 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದ್ದು, ಅದರ ಪರಿಸರ ಸೂಕ್ಷ್ಮ ವಲಯವು 264.9 ಚದರ ಕಿ.ಮೀ.ಗಿಂತಲೂ ಹೆಚ್ಚು ವಿಸ್ತರಿಸಿದೆ. ಡಿಸೋಯ್ ಕಣಿವೆಯ ಮೀಸಲು ಅರಣ್ಯ ಮತ್ತು ನಾಗಾಲ್ಯಾಂಡ್‌ನ ಅರಣ್ಯ ಪ್ರದೇಶಗಳೊಂದಿಗೆ ಇದು ಸಂಪರ್ಕ ಹೊಂದಿದೆ. ಈ ಪ್ರದೇಶವು ಏಳು ಪ್ರೈಮೇಟ್ ಪ್ರಭೇದಗಳಿಗೆ ನೆಲೆಯಾಗಿದೆ, ಇದರಲ್ಲಿ ಭಾರತದ ಏಕೈಕ ಮಂಗವಾದ ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಸೇರಿದೆ.

ಹೊಲ್ಲೊಂಗಪರ್ ಅಭಯಾರಣ್ಯ ಹೊರಗೆ ತೈಲ ಮತ್ತು ಅನಿಲ ಪರಿಶೋಧನೆಗೆ 4.5 ಹೆಕ್ಟೇರ್ ಭೂಮಿ ಬೇಕಾಗುತ್ತದೆ. ಇದರಲ್ಲಿ 1.4 ಹೆಕ್ಟೇರ್ ಬಾವಿ ಮತ್ತು 3 ಹೆಕ್ಟೇರ್ ಪ್ರವೇಶ ರಸ್ತೆ ಸೇರಿವೆ. ಇವು ಸಂರಕ್ಷಿತ ಪ್ರದೇಶದಿಂದ 13 ಕಿ.ಮೀ ದೂರದಲ್ಲಿವೆ.

ನವೆಂಬರ್ 15ರಂದು ಸ್ಥಳ ಪರಿಶೀಲನೆ ನಡೆಸಿದ ನಂತರ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭಾರತೀಯ ವನ್ಯಜೀವಿ ಸಂಸ್ಥೆ ಮತ್ತು ಅಸ್ಸಾಂನ ಅರಣ್ಯ ಇಲಾಖೆಯ ಅಧಿಕಾರಿಗಳು ಹೀಗೆ ತೀರ್ಮಾನಿಸಿದರು : “ಈ ಅಭಯಾರಣ್ಯವು ಹೂಲಾಕ್ ಗಿಬ್ಬನ್‌ನ ಪ್ರಮುಖ ಆವಾಸಸ್ಥಾನವಾಗಿದೆ. ಪರಿಶೋಧನಾ ಕೊರೆಯುವಿಕೆಯು ಹೆಚ್ಚಿನ ಹಾನಿಯನ್ನುಂಟುಮಾಡದಿರಬಹುದು, ಆದರೆ ವಾಣಿಜ್ಯ ಕೊರೆಯುವಿಕೆಯನ್ನು ಅನುಮತಿಸಲಾಗುವುದಿಲ್ಲ.”

ಈ ಯೋಜನೆಯು ಕಟ್ಟುನಿಟ್ಟಾಗಿ ಪರಿಶೋಧನಾತ್ಮಕವಾಗಿದ್ದು, ಹೈಡ್ರೋಕಾರ್ಬನ್ ನಿಕ್ಷೇಪಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದು ವೇದಾಂತ ಗ್ರೂಪ್ ಅಧಿಕಾರಿಗಳಿಗೆ ಭರವಸೆ ನೀಡಿದೆ. ಪರಿಸರ ಸೂಕ್ಷ್ಮ ವಲಯದ ಹೊರಗೆ ಯಾವುದೇ ನಿಕ್ಷೇಪಗಳು ಪತ್ತೆಯಾದರೆ, ಮಾತ್ರ ಹೊರತೆಗೆಯುವಿಕೆಯನ್ನು ಕೈಗೊಳ್ಳಲು ಕಂಪನಿಯು ಬದ್ಧವಾಗಿದೆ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಈ ಅಭಯಾರಣ್ಯವು ಮಾನವ ಚಟುವಟಿಕೆಗಳಿಂದ ಹೆಚ್ಚುವರಿ ಒತ್ತಡಗಳನ್ನು ಎದುರಿಸುತ್ತಿದೆ, ಅದರಲ್ಲಿ ಅದರ ಮೂಲಕ ಹಾದುಹೋಗುವ ರೈಲು ಮಾರ್ಗವೂ ಸೇರಿದೆ. ಈ ಮಾರ್ಗವನ್ನು ವಿದ್ಯುದ್ದೀಕರಿಸುವ ಯೋಜನೆಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಸಹ ಶಿಫಾರಸು ಮಾಡಿದೆ.

‘ಹೊಸ ಕೃಷಿ ಮಾರುಕಟ್ಟೆ ನೀತಿ’ಗೆ ವಿರೋಧ; ಕರಡಿನ ಪ್ರತಿ ಸುಟ್ಟು ಪಂಜಾಬ್ ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...