Homeಮುಖಪುಟಅಸ್ಸಾಂ | ಅಳಿವಿನಂಚಿನಲ್ಲಿರುವ 'ಹೂಲಾಕ್ ಗಿಬ್ಬನ್' ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

- Advertisement -
- Advertisement -

ಅಸ್ಸಾಂನ ಜೋರ್ಹತ್ ಜಿಲ್ಲೆಯ ‘ಹೊಲ್ಲೊಂಗಪರ್ ಗಿಬ್ಬನ್ ವನ್ಯಜೀವಿ ಅಭಯಾರಣ್ಯ’ದ ಪರಿಸರ ಸೂಕ್ಷ್ಮ ವಲಯದಲ್ಲಿ ವೇದಾಂತ ಗ್ರೂಪ್‌ನ ಕೈರ್ನ್ ತೈಲ ಮತ್ತು ಅನಿಲ ಪರಿಶೋಧನಾ ಕೊರೆಯುವಿಕೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಅನುಮೋದನೆ ನೀಡಿದೆ ಎಂದು ಈಸ್ಟ್‌ಮೋಜೊ ಭಾನುವಾರ (ಜ.12) ವರದಿ ಮಾಡಿದೆ.

ಡಿಸೆಂಬರ್ 21ರಂದು ನಡೆದ ಮಂಡಳಿಯ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

“ರಾಷ್ಟ್ರೀಯ ಹಿತಾಸಕ್ತಿ”ಯ ಆಧಾರದ ಮೇಲೆ ಅಸ್ಸಾಂನ ಅರಣ್ಯ ಇಲಾಖೆಯು ಆಗಸ್ಟ್ 2023 ರಲ್ಲಿ ಯೋಜನೆಗೆ ನಿರಾಪೇಕ್ಷಣ ನೀಡಿತ್ತು ಎಂದು ಪಿಟಿಐ ವರದಿ ಮಾಡಿದೆ.

ಮಾನವ ವಾಸಸ್ಥಳದ ಪ್ರದೇಶಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳಂತಹ ಸಂರಕ್ಷಿತ ಪ್ರದೇಶಗಳ ನಡುವಿನ ಬಫರ್ ವಲಯಗಳು ಅಥವಾ “ಶಾಕ್ ಅಬ್ಸರ್‌ವರ್ಸ್‌’ಗಳನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪರಿಸರ-ಸೂಕ್ಷ್ಮ ವಲಯಗಳು ಎಂದು ಘೋಷಿಸಲಾಗಿದೆ.

ಹೊಲ್ಲೊಂಗಪರ್ ಅಭಯಾರಣ್ಯವು 21 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದ್ದು, ಅದರ ಪರಿಸರ ಸೂಕ್ಷ್ಮ ವಲಯವು 264.9 ಚದರ ಕಿ.ಮೀ.ಗಿಂತಲೂ ಹೆಚ್ಚು ವಿಸ್ತರಿಸಿದೆ. ಡಿಸೋಯ್ ಕಣಿವೆಯ ಮೀಸಲು ಅರಣ್ಯ ಮತ್ತು ನಾಗಾಲ್ಯಾಂಡ್‌ನ ಅರಣ್ಯ ಪ್ರದೇಶಗಳೊಂದಿಗೆ ಇದು ಸಂಪರ್ಕ ಹೊಂದಿದೆ. ಈ ಪ್ರದೇಶವು ಏಳು ಪ್ರೈಮೇಟ್ ಪ್ರಭೇದಗಳಿಗೆ ನೆಲೆಯಾಗಿದೆ, ಇದರಲ್ಲಿ ಭಾರತದ ಏಕೈಕ ಮಂಗವಾದ ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಸೇರಿದೆ.

ಹೊಲ್ಲೊಂಗಪರ್ ಅಭಯಾರಣ್ಯ ಹೊರಗೆ ತೈಲ ಮತ್ತು ಅನಿಲ ಪರಿಶೋಧನೆಗೆ 4.5 ಹೆಕ್ಟೇರ್ ಭೂಮಿ ಬೇಕಾಗುತ್ತದೆ. ಇದರಲ್ಲಿ 1.4 ಹೆಕ್ಟೇರ್ ಬಾವಿ ಮತ್ತು 3 ಹೆಕ್ಟೇರ್ ಪ್ರವೇಶ ರಸ್ತೆ ಸೇರಿವೆ. ಇವು ಸಂರಕ್ಷಿತ ಪ್ರದೇಶದಿಂದ 13 ಕಿ.ಮೀ ದೂರದಲ್ಲಿವೆ.

ನವೆಂಬರ್ 15ರಂದು ಸ್ಥಳ ಪರಿಶೀಲನೆ ನಡೆಸಿದ ನಂತರ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭಾರತೀಯ ವನ್ಯಜೀವಿ ಸಂಸ್ಥೆ ಮತ್ತು ಅಸ್ಸಾಂನ ಅರಣ್ಯ ಇಲಾಖೆಯ ಅಧಿಕಾರಿಗಳು ಹೀಗೆ ತೀರ್ಮಾನಿಸಿದರು : “ಈ ಅಭಯಾರಣ್ಯವು ಹೂಲಾಕ್ ಗಿಬ್ಬನ್‌ನ ಪ್ರಮುಖ ಆವಾಸಸ್ಥಾನವಾಗಿದೆ. ಪರಿಶೋಧನಾ ಕೊರೆಯುವಿಕೆಯು ಹೆಚ್ಚಿನ ಹಾನಿಯನ್ನುಂಟುಮಾಡದಿರಬಹುದು, ಆದರೆ ವಾಣಿಜ್ಯ ಕೊರೆಯುವಿಕೆಯನ್ನು ಅನುಮತಿಸಲಾಗುವುದಿಲ್ಲ.”

ಈ ಯೋಜನೆಯು ಕಟ್ಟುನಿಟ್ಟಾಗಿ ಪರಿಶೋಧನಾತ್ಮಕವಾಗಿದ್ದು, ಹೈಡ್ರೋಕಾರ್ಬನ್ ನಿಕ್ಷೇಪಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದು ವೇದಾಂತ ಗ್ರೂಪ್ ಅಧಿಕಾರಿಗಳಿಗೆ ಭರವಸೆ ನೀಡಿದೆ. ಪರಿಸರ ಸೂಕ್ಷ್ಮ ವಲಯದ ಹೊರಗೆ ಯಾವುದೇ ನಿಕ್ಷೇಪಗಳು ಪತ್ತೆಯಾದರೆ, ಮಾತ್ರ ಹೊರತೆಗೆಯುವಿಕೆಯನ್ನು ಕೈಗೊಳ್ಳಲು ಕಂಪನಿಯು ಬದ್ಧವಾಗಿದೆ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಈ ಅಭಯಾರಣ್ಯವು ಮಾನವ ಚಟುವಟಿಕೆಗಳಿಂದ ಹೆಚ್ಚುವರಿ ಒತ್ತಡಗಳನ್ನು ಎದುರಿಸುತ್ತಿದೆ, ಅದರಲ್ಲಿ ಅದರ ಮೂಲಕ ಹಾದುಹೋಗುವ ರೈಲು ಮಾರ್ಗವೂ ಸೇರಿದೆ. ಈ ಮಾರ್ಗವನ್ನು ವಿದ್ಯುದ್ದೀಕರಿಸುವ ಯೋಜನೆಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಸಹ ಶಿಫಾರಸು ಮಾಡಿದೆ.

‘ಹೊಸ ಕೃಷಿ ಮಾರುಕಟ್ಟೆ ನೀತಿ’ಗೆ ವಿರೋಧ; ಕರಡಿನ ಪ್ರತಿ ಸುಟ್ಟು ಪಂಜಾಬ್ ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...