Homeಮುಖಪುಟಅಸ್ಸಾಂ | ಅಳಿವಿನಂಚಿನಲ್ಲಿರುವ 'ಹೂಲಾಕ್ ಗಿಬ್ಬನ್' ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

- Advertisement -
- Advertisement -

ಅಸ್ಸಾಂನ ಜೋರ್ಹತ್ ಜಿಲ್ಲೆಯ ‘ಹೊಲ್ಲೊಂಗಪರ್ ಗಿಬ್ಬನ್ ವನ್ಯಜೀವಿ ಅಭಯಾರಣ್ಯ’ದ ಪರಿಸರ ಸೂಕ್ಷ್ಮ ವಲಯದಲ್ಲಿ ವೇದಾಂತ ಗ್ರೂಪ್‌ನ ಕೈರ್ನ್ ತೈಲ ಮತ್ತು ಅನಿಲ ಪರಿಶೋಧನಾ ಕೊರೆಯುವಿಕೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಅನುಮೋದನೆ ನೀಡಿದೆ ಎಂದು ಈಸ್ಟ್‌ಮೋಜೊ ಭಾನುವಾರ (ಜ.12) ವರದಿ ಮಾಡಿದೆ.

ಡಿಸೆಂಬರ್ 21ರಂದು ನಡೆದ ಮಂಡಳಿಯ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

“ರಾಷ್ಟ್ರೀಯ ಹಿತಾಸಕ್ತಿ”ಯ ಆಧಾರದ ಮೇಲೆ ಅಸ್ಸಾಂನ ಅರಣ್ಯ ಇಲಾಖೆಯು ಆಗಸ್ಟ್ 2023 ರಲ್ಲಿ ಯೋಜನೆಗೆ ನಿರಾಪೇಕ್ಷಣ ನೀಡಿತ್ತು ಎಂದು ಪಿಟಿಐ ವರದಿ ಮಾಡಿದೆ.

ಮಾನವ ವಾಸಸ್ಥಳದ ಪ್ರದೇಶಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳಂತಹ ಸಂರಕ್ಷಿತ ಪ್ರದೇಶಗಳ ನಡುವಿನ ಬಫರ್ ವಲಯಗಳು ಅಥವಾ “ಶಾಕ್ ಅಬ್ಸರ್‌ವರ್ಸ್‌’ಗಳನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪರಿಸರ-ಸೂಕ್ಷ್ಮ ವಲಯಗಳು ಎಂದು ಘೋಷಿಸಲಾಗಿದೆ.

ಹೊಲ್ಲೊಂಗಪರ್ ಅಭಯಾರಣ್ಯವು 21 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದ್ದು, ಅದರ ಪರಿಸರ ಸೂಕ್ಷ್ಮ ವಲಯವು 264.9 ಚದರ ಕಿ.ಮೀ.ಗಿಂತಲೂ ಹೆಚ್ಚು ವಿಸ್ತರಿಸಿದೆ. ಡಿಸೋಯ್ ಕಣಿವೆಯ ಮೀಸಲು ಅರಣ್ಯ ಮತ್ತು ನಾಗಾಲ್ಯಾಂಡ್‌ನ ಅರಣ್ಯ ಪ್ರದೇಶಗಳೊಂದಿಗೆ ಇದು ಸಂಪರ್ಕ ಹೊಂದಿದೆ. ಈ ಪ್ರದೇಶವು ಏಳು ಪ್ರೈಮೇಟ್ ಪ್ರಭೇದಗಳಿಗೆ ನೆಲೆಯಾಗಿದೆ, ಇದರಲ್ಲಿ ಭಾರತದ ಏಕೈಕ ಮಂಗವಾದ ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಸೇರಿದೆ.

ಹೊಲ್ಲೊಂಗಪರ್ ಅಭಯಾರಣ್ಯ ಹೊರಗೆ ತೈಲ ಮತ್ತು ಅನಿಲ ಪರಿಶೋಧನೆಗೆ 4.5 ಹೆಕ್ಟೇರ್ ಭೂಮಿ ಬೇಕಾಗುತ್ತದೆ. ಇದರಲ್ಲಿ 1.4 ಹೆಕ್ಟೇರ್ ಬಾವಿ ಮತ್ತು 3 ಹೆಕ್ಟೇರ್ ಪ್ರವೇಶ ರಸ್ತೆ ಸೇರಿವೆ. ಇವು ಸಂರಕ್ಷಿತ ಪ್ರದೇಶದಿಂದ 13 ಕಿ.ಮೀ ದೂರದಲ್ಲಿವೆ.

ನವೆಂಬರ್ 15ರಂದು ಸ್ಥಳ ಪರಿಶೀಲನೆ ನಡೆಸಿದ ನಂತರ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭಾರತೀಯ ವನ್ಯಜೀವಿ ಸಂಸ್ಥೆ ಮತ್ತು ಅಸ್ಸಾಂನ ಅರಣ್ಯ ಇಲಾಖೆಯ ಅಧಿಕಾರಿಗಳು ಹೀಗೆ ತೀರ್ಮಾನಿಸಿದರು : “ಈ ಅಭಯಾರಣ್ಯವು ಹೂಲಾಕ್ ಗಿಬ್ಬನ್‌ನ ಪ್ರಮುಖ ಆವಾಸಸ್ಥಾನವಾಗಿದೆ. ಪರಿಶೋಧನಾ ಕೊರೆಯುವಿಕೆಯು ಹೆಚ್ಚಿನ ಹಾನಿಯನ್ನುಂಟುಮಾಡದಿರಬಹುದು, ಆದರೆ ವಾಣಿಜ್ಯ ಕೊರೆಯುವಿಕೆಯನ್ನು ಅನುಮತಿಸಲಾಗುವುದಿಲ್ಲ.”

ಈ ಯೋಜನೆಯು ಕಟ್ಟುನಿಟ್ಟಾಗಿ ಪರಿಶೋಧನಾತ್ಮಕವಾಗಿದ್ದು, ಹೈಡ್ರೋಕಾರ್ಬನ್ ನಿಕ್ಷೇಪಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದು ವೇದಾಂತ ಗ್ರೂಪ್ ಅಧಿಕಾರಿಗಳಿಗೆ ಭರವಸೆ ನೀಡಿದೆ. ಪರಿಸರ ಸೂಕ್ಷ್ಮ ವಲಯದ ಹೊರಗೆ ಯಾವುದೇ ನಿಕ್ಷೇಪಗಳು ಪತ್ತೆಯಾದರೆ, ಮಾತ್ರ ಹೊರತೆಗೆಯುವಿಕೆಯನ್ನು ಕೈಗೊಳ್ಳಲು ಕಂಪನಿಯು ಬದ್ಧವಾಗಿದೆ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಈ ಅಭಯಾರಣ್ಯವು ಮಾನವ ಚಟುವಟಿಕೆಗಳಿಂದ ಹೆಚ್ಚುವರಿ ಒತ್ತಡಗಳನ್ನು ಎದುರಿಸುತ್ತಿದೆ, ಅದರಲ್ಲಿ ಅದರ ಮೂಲಕ ಹಾದುಹೋಗುವ ರೈಲು ಮಾರ್ಗವೂ ಸೇರಿದೆ. ಈ ಮಾರ್ಗವನ್ನು ವಿದ್ಯುದ್ದೀಕರಿಸುವ ಯೋಜನೆಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಸಹ ಶಿಫಾರಸು ಮಾಡಿದೆ.

‘ಹೊಸ ಕೃಷಿ ಮಾರುಕಟ್ಟೆ ನೀತಿ’ಗೆ ವಿರೋಧ; ಕರಡಿನ ಪ್ರತಿ ಸುಟ್ಟು ಪಂಜಾಬ್ ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...